ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ತ್ಯಾಗಕ್ಕೂ ಸಿದ್ಧ ಶಾಸಕ ನಾರಾಯಣಗೌಡ.

 ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ.ಅಭಿವೃದ್ಧಿಯೇ ಮೂಲಮಂತ್ರ.ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ತ್ಯಾಗಕ್ಕೂ ಸಿದ್ಧ .ಶಾಸಕ ಸ್ಥಾನ ತಾಲ್ಲೂಕಿನ ಪ್ರಜ್ಞಾವಂತ ನಾಗರೀಕರು, ಜೆಡಿಎಸ್ ಕಾರ್ಯಕರ್ತರು ನೀಡಿದ ಅಭಿಮಾನದ ಕೊಡುಗೆ.ಶಾಸಕ. ನಾರಾಯಣಗೌಡ.

ಕೃಷ್ಣರಾಜಪೇಟೆ: ತಾಲ್ಲೂಕಿನ ಹಿರಳಹಳ್ಳಿ, ಹಾದನೂರು ಮತ್ತು ಮುರುಕನಹಳ್ಳಿ ಗ್ರಾಮಗಳಲ್ಲಿ ಶಾಸಕ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಭೂಮಿ ಪೂಜಾ ಕಾರ್ಯಕ್ರಮ. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದುಡಿಯುತ್ತಿರುವ ನಾನು ತಾಲೂಕನ್ನು ಜಿಲ್ಲೆಯಲ್ಲಿಯೇ ಮಾದರಿಯಾಗಿ ಅಭಿವೃದ್ಧಿಪಡಿಸುವ ಕನಸು ಕಂಡಿದ್ದೇನೆ. ಸರ್ಕಾರವು ಕ್ಷೇತ್ರದ ಅಭಿವೃದ್ಧಿಗೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ನೀಡದಿರುವುದು ಬೇಸರ ತಂದಿದೆ. ಆದರೆ ತಾಲ್ಲೂಕಿನ ಜನತೆಯ ಕಲ್ಯಾಣಕ್ಕೆ ಯಾವುದೇವ ಹೋರಾಟಕ್ಕೆ ಬದ್ಧನಿದ್ದೇನೆ.ಕಾಡಿಬೇಡಿಯಾದರೂ ಅಭಿವೃದ್ಧಿಗೆ ಅನುದಾನ ತರುತ್ತೇನೆ ಎಂದು ಶಾಸಕ ನಾರಾಯಣಗೌಡ ಹೇಳಿದರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಜಿ.ಪಂ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ತಾ.ಪಂ ಸದಸ್ಯ ವಿಜಯಕುಮಾರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಮಸ್ವಾಮಿಗೌಡ ಮತ್ತಿತರರು ಭಾಗವಹಿಸಿದ್ದರು.

 

Share this article

About Author

Madhu
Leave a comment

Write your comments

Visitors Counter

307232
Today
Yesterday
This Week
This Month
Last Month
All days
293
936
1531
293
11219
307232

Your IP: 216.73.216.204
2025-07-01 21:04

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles