ಬ್ಯಾಂಕ್ ವ್ಯವಹಾರದ ಮೇಲೆ ಚುನಾವಣಾ ಆಯೋಗದ ಹದ್ದಿನ ಕಣ್ಣು...! ಹಣ ತೆಗೆಯೋ ಮುನ್ನ ಎಚ್ಚರ.!!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣಕಾಸು ವ್ಯವಹಾರದ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಡಿದೆ.ಹಣ ತೆಗೆಯೋ  ಮುನ್ನ ಎಚ್ಚರ.!

ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರ ಸೂಕ್ಷ್ಮವಾಗಿಸಲು ಆಯೋಗ ನೋಟಿಸ್ ನೀಡಿದೆ. ಈ ಪ್ರಕಾರ ಖಾತೆಯಿಂದ 1 ಲಕ್ಷಕ್ಕಿಂತ ಹೆಚ್ಚು ಹಣವನ್ನ ವಿತ್ ಡ್ರಾ ಮಾಡುವ ಖಾತೆದಾರರ ಮಾಹಿತಿಯನ್ನ ಚುನಾವಣಾ ಸಿಬ್ಬಂದಿ ಪಡೆಯಲಿದ್ದಾರೆ. ಹಾಗೇ 10 ಲಕ್ಷಕ್ಕಿಂತ ಹೆಚ್ಚು ಹಣವನ್ನ ವಾಪಸ್ ಪಡೆದರೆ ತೆರಿಗೆ ಇಲಾಖೆಗೆ ನೇರವಾಗಿ ಮಾಹಿತಿ ಹೋಗುತ್ತದೆ.ಈ ಪ್ರಕಾರ ಮುಂದಿನ ಒಂದುವರೆ ತಿಂಗಳು ಖಾತೆಗಳ ಮೇಲೆ ನಿಗಾ ಇಡಲಾಗುತ್ತದೆ. ಇನ್ನು ಅಭ್ಯರ್ಥಿಗಳ ದೈನಂದಿನ ಖರ್ಚನ್ನ ನೇರವಾಗಿ ಚುನಾವಣಾ ಕ್ಯಾಮಾರಾ ಸಿಬ್ಬಂದಿ ಸೆರೆ ಹಿಡಿದ ದೃಶ್ಯಗಳ ಆಧಾರದಲ್ಲಿ ಆಡಿಟ್ ಮಾಡಲಾಗುತ್ತದೆ. ನಿಗದಿಗಿಂತ ಹೆಚ್ಚು ಖರ್ಚು ಮಾಡಿದರೆ 24 ಗಂಟೆಯೊಳಗೆ ಕಠಿಣ ಕ್ರಮ ವಹಿಸಲಾಗುತ್ತದೆ.ಒಂದು ವೇಳೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಹಣವನ್ನು ಡ್ರಾ ಮಾಡಿದರೆ ಆದಾಯ ಇಲಾಖೆ ಖಾತೆದಾರರನ್ನು ಕರೆಸಿ ವಿಚಾರಣೆ ಮಾಡುತ್ತಾರೆ. ಯಾವ ಖರ್ಚಿಗೆ ಹಣ ಡ್ರಾ ಮಾಡಿದ್ದೀರ, ಯಾವುದಕ್ಕೆ ಎಷ್ಟೆಷ್ಟು ಖರ್ಚು ಮಾಡಿದ್ದೀರಾ? ಎಂದು ಅವರ ಬಳಿ ಸಂಪೂರ್ಣ ಮಾಹಿತಿಯನ್ನು ಪಡೆಯಲಾಗುತ್ತದೆ.

Share this article

About Author

Madhu
Leave a comment

Write your comments

Visitors Counter

220309
Today
Yesterday
This Week
This Month
Last Month
All days
27
274
1926
3414
4244
220309

Your IP: 3.149.230.44
2024-04-19 10:49

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles