Madhu

Madhu

ನಾಯಸಿಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 73 ಸ್ವಾತಂತ್ರ ದಿನವನ್ನು ಸಡಗರ ಸಂಭ್ರಮದಿಂದ ಅಚರಣೆ ಮಾಡಲಾಯಿತು.

ಸಂತೇಬಾಚಹಳ್ಳಿ:ಹೋಬಳಿಯ ನಾಯಸಿಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 73 ಸ್ವಾತಂತ್ರ ದಿನವನ್ನು ಸಡಗರ ಸಂಭ್ರಮದಿಂದ ಅಚರಣೆ ಮಾಡಲಾಯಿತು.ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭಾರತಿ ಶ್ರೀಧರ್ ರವರು ಧ್ವಜಾರೋಹಣ ಮಾಡಿದರು.

 

ಗ್ರಾಮದ ಹಿರಿಯ ಮರಿಲಿಂಗೇಗೌಡರು ಮಾತನಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷ ಕಳೆದಿದೆ ನಮ್ಮ ದೇಶದ ಉನ್ನತಿಗೆ ಮಕ್ಕಳ ದೇಶಪ್ರೆಮವನ್ನು ತಮ್ಮ ಜೀವನದಲ್ಲಿ ಅಳವಡಿಕೆ ಮಾಡಿಕೊಳ್ಳ ಬೇಕು ಎಂದು ತಿಳಿಸಿದರು.

ನಂತರ ಮುಖ್ಯ ಶಿಕ್ಷಕಿ ಮಹಾಲಕ್ಷ್ಮಿ ಮಾತನಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ಸಾವಿರಾರು ಜನ ತಮ್ಮ ಪ್ರಾಣವನ್ನು ಸಮರ್ಪಣೆ ಮಾಡಿದ್ದಾರೆ ಮತ್ತು ಅವರ ಬಲಿದಾನದಿಂದ ಇಂದು ನಾವು 73 ಸ್ವಾತಂತ್ರ್ಯ ದಿನ ಅಚರಣೆ ಮಾಡುತ್ತಿದ್ದವೆ ‌. ಎಂದು ಮಕ್ಕಳಿಗೆ ಸ್ವತಂತ್ರ ಹೊರಟಗಾರ ಬಗ್ಗೆ ತಿಳಿಸಿಕೊಟ್ಟರು.

ಗ್ರಾಮದ ಮಂಜೇಗೌಡ ಪುತ್ರ ಪ್ರಸನ್ನ ಶಾಲಮಕ್ಕಳಿಗೆ ಪುಸ್ತಕ ಮತ್ತು ಪೆನ್ ವಿತರಣೆ ಮಾಡಿದರು.ನಂತರ ಎಲ್ಲಾ ಮಕ್ಕಳಿಗೆ ಸಿಹಿ ತಿನಿಸು ವಿತರಣೆ ಮಾಡಲಾಯಿತು .


 ಕಾರ್ಯಕ್ರಮದಲ್ಲಿ:  ಶಾಲೆ ಸಹ ಶಿಕ್ಷಕಿ ಮಂಜುಳ, ಅಂಗನವಾಡಿ ಶಿಕ್ಷಕಿ ಸುಕನ್ಯಾ, ಮಂಜುಳಮ್ಮ,ಲಕ್ಷ್ಮಮ್ಮ, ಭಾಗ್ಯಮ್ಮ,ಶೊಭ,ಮತ್ತಿತರ ಗ್ರಾಮಸ್ಥರು ಹಾಜರಿದ್ದರು..

ಕುಡಿದು ಕಬ್ಬಿನ ಲಾರಿಯನ್ನು ಚಾಲನೆ ಮಾಡಿ ಎಮ್ಮೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಎಮ್ಮೆ ಸಾವನ್ನಪ್ಪಿದ ಘಟನೆ ಕುಪ್ಪಳ್ಳಿಯಲ್ಲಿ ನಡೆದಿದೆ.

ಮಂಡ್ಯ:  ಕೃಷ್ಣರಾಜಪೇಟೆ ತಾಲೂಕಿನ ಕುಪ್ಪಳ್ಳಿ ಕೆರೆ ಬಳಿ ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ಕಬ್ಬನ್ನು ತುಂಬಿಕೊಂಡು ಹೋಗುತ್ತಿದ್ದು ,ಅತಿಯಾಗಿ ಕಬ್ಬನ್ನು ತುಂಬಿಕೊಂಡು ಮತ್ತು ಮದ್ಯಪಾನ ಮಾಡಿದ್ದರಿಂದ ಈ ಘಟನೆ ನಡೆದಿದೆ ಎಂದು ಅಕ್ಕಪಕ್ಕದ ಸಾರ್ವಜನಿಕರು ತಿಳಿಸಿದ್ದಾರೆ .ಮೂಡ್ನಲ್ಲಿ ಗ್ರಾಮದ ಚಾಲಕನಾದ ನಾಗೇಶ್ ಅಲಿಯಾಸ್ (ಬೆಂಕಿ ) ಎಂದು ತಿಳಿದು ಬಂದಿದೆ .
ಲಾರಿ ಮಾಲೀಕರಾದ ಕುರುಬಳ್ಳಿ ಪ್ರತಾಪ್ ಗೆ ಸೇರಿದ ಲಾರಿ ಎಂದು ಹೇಳಲಾಗುತ್ತಿದೆ .ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ .

ಜೂಜಾಟಕ್ಕೆ ಪತ್ನಿಯನ್ನೇ ಅಡವಿಟ್ಟು ಸೋತ ಪತಿರಾಯ!!  ನಂತರ ನೆಡೆದ ಘಟನೆ ಎನು ಗೊತ್ತಾ...???!!!

ಉತ್ತರ ಪ್ರದೇಶ : ಜೂಜಾಟ ಹಾಗೂ ಮದ್ಯಪಾನಕ್ಕೆ ದಾಸನಾಗಿದ್ದ ವ್ಯಕ್ತಿಯೊಬ್ಬ ಹಣವಿಲ್ಲದಿದ್ದ ಸಮಯದಲ್ಲಿ ಪತ್ನಿಯನ್ನು ಅಡವಿಟ್ಟು ಜೂಜಿನಲ್ಲಿ ಸೋತ ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ಜೌನ್​ಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯ ಬಳಿಕ ಪೊಲೀಸ್​ ಠಾಣೆಗೆ ಹೋಗಿ ದೂರು ನೀಡಿದರೂ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸರು ನಿರಾಕರಿಸಿದ್ದಕ್ಕೆ, ಸಂತ್ರಸ್ತೆ ಕೋರ್ಟ್​ ಮೆಟ್ಟಿಲೇರಿದ್ದಾರೆ. ಕೋರ್ಟ್​ ಖಡಕ್​ ಸೂಚನೆ ನೀಡಿದ ಬಳಿಕ ಜೌನ್​ಪುರ ಜಿಲ್ಲೆಯ ಜಫ್ಫರಾಬಾದ್​ ಠಾಣಾ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.
ಮದ್ಯಪಾನ ವ್ಯಸನಿಯಾಗಿರುವ ಪತಿ ನನ್ನನ್ನು ಜೂಜಾಟದಲ್ಲಿ ಅಡವಿಟ್ಟು ಸೋತು ಬೇರೆಯವರ ಪಾಲು ಮಾಡಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ. ಪತಿಯ ಸ್ನೇಹಿತ ಅರುಣ್​ ಮತ್ತು ಸಂಬಂಧಿ ಅನಿಲ್​ ಮದ್ಯಪಾನ ಮಾಡಲು ಮತ್ತು ಜೂಜಾಟ ಆಡಲು ಆಗಾಗ ಮನೆಗೆ ಬರುತ್ತಿದ್ದರು. ಜೂಜಾಟದಲ್ಲಿ ಸೋತಿದಕ್ಕೆ ಸಾಮೂಹಿಕ ಅತ್ಯಾಚಾರ ಮಾಡಲು ಪತಿಯೇ ಅವಕಾಶ ಮಾಡಿಕೊಟ್ಟಿದ್ದಾಗಿ ಸಂತ್ರಸ್ತೆ ದೂರಿದ್ದಾಳೆ.

ಘಟನೆ ನಡೆದ ಬಳಿಕ ಸಂತ್ರಸ್ತೆ ತನ್ನ ಸೋದರ ಮಾವನ ಮನೆಗೆ ತೆರಳಿದಾಗ ಆಕೆಯನ್ನು ಪತಿ ಹಿಂಬಾಲಿಸಿದ್ದಾನೆ. ನನ್ನದೊಂದು ತಪ್ಪಿನಿಂದ ಈ ರೀತಿಯಾಗಿದೆ. ನನ್ನನ್ನು ಕ್ಷಮಿಸು ಎಂದು ಬೇಡಿಕೊಂಡಿದ್ದಾನೆ. ಬಳಿಕ ಅವನನ್ನು ಕ್ಷಮಿಸಿ ಜತೆಯಲ್ಲಿಯೇ ಕಾರಿನಲ್ಲಿ ಮನೆಗೆ ಹಿಂದಿರುವಾಗ ಮಾರ್ಗ ಮಧ್ಯದಲ್ಲಿ ಕಾರನ್ನು ನಿಲ್ಲಿಸಿ ಮತ್ತೊಮ್ಮೆ ಆಕೆಯ ಮೇಲೆ ಅತ್ಯಾಚಾರ ಎಸಗಲು ಸ್ನೇಹಿತರಿಗೆ ಪತಿ ಅನುವು ಮಾಡಿಕೊಟ್ಟಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾಳೆ.

ಕೋರ್ಟ್​ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಜಫ್ಫರಬಾದ್​ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ..

ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ದಿವಂಗತ ಹೆಚ್.ಎಲ್.ಹನುಮಂತೇಗೌಡರಿಗೆ ನುಡಿನಮನ, ಶ್ರದ್ಧಾಂಜಲಿ .

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ದಿವಂಗತ ಹೆಚ್.ಎಲ್.ಹನುಮಂತೇಗೌಡರಿಗೆ ನುಡಿನಮನ, ಶ್ರದ್ಧಾಂಜಲಿ ಸಮರ್ಪಣೆ.
ಹನುಮಂತೇಗೌಡರು ನಾಯಕತ್ವ ಗುಣಗಳನ್ನು ಹೊಂದಿದ್ದ ಹೃದಯವಂತ ವ್ಯಕ್ತಿಯಾಗಿ ಸದಾ ಸಮಾಜದ ಹಿತವನ್ನೇ ಬಯಸುತ್ತಿದ್ದರು..ಅವರ ಅಕಾಲಿಕ ನಿಧನವು ಇಡೀ ಸಮಾಜಕ್ಕೆ ತುಂಬಲಾರದ ನಷ್ಠವಾಗಿದೆ. ನಾನು ನನ್ನ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಅವರ ಕೊನೆಯಾಸೆಯಂತೆ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಭವನವನ್ನು ನಿರ್ಮಿಸುವ ದಿಕ್ಕಿನಲ್ಲಿ ಕ್ರಿಯಾಶೀಲರಾಗಿ ಹೆಜ್ಜೆ ಹಾಕಬೇಕು. ನಿವೃತ್ತ ನೌಕರರ ಭವನದ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮಾಜಿಸ್ಪೀಕರ್ ಕೃಷ್ಣ ತಿಳಿಸಿದರು...
ಅವರು ಇಂದು ತಾಲ್ಲೂಕಿನ ಗೋವಿಂದೇಗೌಡನಕೊಪ್ಪಲು ಗ್ರಾಮದಲ್ಲಿ ನಡೆದ ಹೆಚ್.ಎಲ್.ಹನುಮಂತೇಗೌಡರ 11ನೇ ದಿನದ ಪುಣ್ಯತಿಥಿಯ ಅಂಗವಾಗಿ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಹನುಮಂತೇಗೌಡರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಮಾತನಾಡಿದರು...ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಸದಾ ಸಮಾಜದ ಒಳಿತಿಗಾಗಿ ಚಿಂತಿಸುತ್ತಿದ್ದ ಹನುಮಂತೇಗೌಡರ ಪರಿಶ್ರಮದ ಫಲವಾಗಿ ಪಟ್ಟಣದಲ್ಲಿ ಶಿಕ್ಷಕರ ಭವನದ ನಿರ್ಮಾಣವಾಗಿದೆ. ಪ್ರಸ್ತುತ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿದ್ದ ಗೌಡರು ನಿವೃತ್ತ ನೌಕರರ ಸಮಸ್ಯೆಗಳ ನಿವಾರಣೆಗಾಗಿ ಸದಾ ಕೆಲಸ ಮಾಡುತ್ತಾ ನಿವೃತ್ತ ನೌಕರರ ಸಭಾ ಭವನದ ನಿರ್ಮಾಣಕ್ಕೆ ಹೆಜ್ಜೆಹಾಕಿ ಪುರಸಭೆಯ ವತಿಯಿಂದ ಸೂಕ್ತ ನಿವೇಶನವನ್ನೂ ಮಂಜೂರು ಮಾಡಿಸಿಕೊಂಡು ಅಡಿಪಾಯ ಕಾಮಗಾರಿಗೆ ಚಾಲನೆ ನೀಡಿದ್ದರು. ಸಂಘಟನಾ ಚತುರರಾಗಿ ರಾಜಕೀಯ ರಂಗದ ಅಜಾತ ಶತ್ರುವಿನಂತಿದ್ದ ಗೌಡರ ಆದರ್ಶ ಗುಣಗಳು, ಏನನ್ನಾದರೂ ಸಾಧಿಸಬೇಕೆಂಬ ಛಲವನ್ನು ಯುವಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದಲಾವಣೆಯ ದಿಕ್ಕಿನತ್ತ ಸಾಗಬೇಕು ಎಂದು ಕೃಷ್ಣ ಕರೆ ನೀಡಿದರು... ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ಸಂಘದ ಅಧ್ಯಕ್ಷ ಎನ್.ಕೆ.ನಂಜಪ್ಪಗೌಡ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಅಂ.ಚಿ.ಸಣ್ಣಸ್ವಾಮಿಗೌಡ, ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳಾದ ಎ.ಎಲ್.ನಂಜಪ್ಪ, ಶ್ರೀಕಂಠೇಗೌಡ, ನಜೀರ್ ಅಹಮದ್, ಎಸ್.ಎಲ್.ರಂಗಸ್ವಾಮಿ, ಶಿವರಾಮ್, ವೆಂಕಟರಮಣಶೆಟ್ಟಿ, ಲಕ್ಷ್ಮಣಗೌಡ, ಗಣೇಶ್ ಗೌಡ, ಚಂದ್ರೇಗೌಡ ಮತ್ತಿತರರು ಹನುಮಂತೇಗೌಡರ ಆದರ್ಶ ಗುಣಗಳು ಹಾಗೂ ಜನಪರವಾದ ಹೋರಾಟವನ್ನು ಕುರಿತು ಮಾತನಾಡಿ ನುಡಿನಮನ ಸಲ್ಲಿಸಿದರು...

 

ನೋ ಹೆಲ್ಮೆಟ್, ನೋ ಪೆಟ್ರೋಲ್- ಸಿಲಿಕಾನ್ ಸಿಟಿಯಲ್ಲಿ ಹೊಸ ರೂಲ್ಸ್..ಸೋಮವಾರದಿಂದಲೇ ಈ ಹೊಸ ನಿಯಮ ಜಾರಿ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೋ ಹೆಲ್ಮೆಟ್, ನೋ ಪೆಟ್ರೋಲ್ ಎಂಬ ಹೊಸ ರೂಲ್ಸ್ ಜಾರಿಗೆ ತರಲು ಸಿದ್ಧತೆ ನಡೆದಿದೆ.ಈ ವಿಚಾರವಾಗಿ ಟ್ರಾಫಿಕ್ ಪೊಲೀಸ್ ಕಮಿಷನರ್, ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಮಾತುಕತೆ ನಡೆಸಿದ್ದಾರೆ. ಶನಿವಾರ ಮತ್ತೊಮ್ಮೆ ಈ ವಿಚಾರವಾಗಿ ಮಾತುಕತೆ ನಡೆಸಿ ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ಸೋಮವಾರದಿಂದಲೇ ಈ ಹೊಸ ನಿಯಮ ಜಾರಿಯಾಗಲಿದೆ ಎಂಬ ಮಾಹಿತಿ  ಲಭ್ಯವಾಗಿದೆ.ಈ ನಿಯಮ ಈಗಾಗಲೇ ಕೇರಳ, ಆಂಧ್ರ ಸೇರಿದಂತೆ ದೇಶದ ವಿವಿಧೆಡೆ ಜಾರಿಯಾಗಿದೆ. ಇದರ ಪ್ರಕಾರ ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಬೇಕು ಎಂದರೆ ಹೆಲ್ಮೆಟ್ ಇರಲೇಬೇಕು. ಒಂದು ವೇಳೆ ನಿಮ್ಮ ಬಳಿ ಹೆಲ್ಮೆಟ್ ಇಲ್ಲ ಎಂದರೆ ಬಂಕ್‍ನವರು ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕುವುದಿಲ್ಲ. ಬೆಂಗಳೂರಲ್ಲಿ ಬೈಕ್ ಅಪಘಾತದಿಂದ ಹೆಚ್ಚುತ್ತಿರುವ ಸಾವು-ನೋವು ತಡೆಗೆ ಈ ಹೊಸ ನಿಯಮವನ್ನು ತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.ಕಳೆದ ವರ್ಷ ಬೈಕ್ ಅಪಘಾತಗಳಲ್ಲಿ ಸುಮಾರು 150 ಮಂದಿ ದುರ್ಮರಣಕ್ಕೀಡಾಗಿದ್ದರು. ದಂಡ ವಿಧಿಸುತ್ತಿದರೂ ಹೆಲ್ಮೆಟ್ ಬಳಸದೇ ವಾಹನ ಚಲಾಯಿಸುವವರ ಸಂಖ್ಯೆ ಕಡಿಮೆಯಾಗದಿದ್ದರಿಂದ, ಈ ನೂತನ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.

  ಗ್ಯಾಸ್ ಟ್ಯಾಂಕರ್ ಪಲ್ಟಿ.ಗ್ಯಾಸ್ ಸೋರಿಕೆ.ವಾಹನಗಳಿಗೆ ಬದಲಿ ರಸ್ತೆ ಮಾರ್ಗ.ಅಕ್ಕಪಕ್ಕದ ಮನೆಗಳಲ್ಲಿ ಬೆಂಕಿ ಉರಿಸದಂತೆ ಪೋಲೀಸರಿಂದ ಮನವಿ..

ಮಂಗಳೂರು: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ರೆಖ್ಯಾ ಗ್ರಾಮದ ಎಂಜಿರ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಗ್ಯಾಸ್ ಸೋರಿಕೆ ಯಾಗುತ್ತಿದ್ದು ವಾಹನ ಸವಾರರಿಗೆ ಬದಲಿ ರಸ್ತೆ ವ್ಯವಸ್ಥೆ ಮಾಡಲಾಗಿದೆ.ಮುಂಜಾಗ್ರತಾ ವಾಗಿ ಅಕ್ಕಪಕ್ಕದ ಮನೆಗಳಲ್ಲಿ ಬೆಂಕಿ ಉರಿಸದಂತೆ ಪೋಲೀಸರಿಂದ ಮನವಿ.ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆ ಬದಲಿ ರಸ್ತೆ ಬಳಸುವಂತೆ ಪೋಲೀಸರಿಂದ ಮನವಿ.

 

ಆಧಾರ್ ಕಾರ್ಡ್ ಮಾಡಿಸಲು ಸಾರ್ವಜನಿಕರು ಪರದಾಟ. ಸುಮ್ಮನೆ ಕೈ ಕಟ್ಟಿ ಕುಳಿತ ಜಿಲ್ಲಾಡಳಿತ.....

ಚನ್ನರಾಯಪಟ್ಟಣ:  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಆಧಾರ್ ಕಾರ್ಡ್ ಮಾಡಿಸಲು ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಇದೆ ದಿನ ನಿತ್ಯ ಸುತ್ತಮುತ್ತಲಿನ ಗ್ರಾಮಿಣ ಪ್ರದೇಶದ ರೈತರು ಶಾಲ ಮಕ್ಕಳು, ಗೃಹಿಣಿಯರು ಬಂದು ಸರತಿ ಸಾಲಿನಲ್ಲಿ ನಿಂತು ಕಾಯುವ ಕೆಲಸವೇ ನೆಡೆಯುತ್ತಿದೆ .

ಬೆಳಗ್ಗೆ 6 ಗಂಟೆಯಿಂದ ಕಾಯುವವರಿಗೆ ದಿನಕ್ಕೆ 25 ಜನಕ್ಕೆ ಮಾತ್ರ ಟೋಕನ್ ನೀಡುತ್ತಿದ್ದು, ಪ್ರತಿದಿನ250 ಜನ ಸಾಲಿನಲ್ಲಿ ನಿಂತು ನಂತರ ನಿರಾಸೆಯಿಂದ ಮನೆಗೆಹೊಗುವ ಪರಿಸ್ಥಿತಿ ಇದೆ .ಇತ್ತ ತಾಲೂಕು ಅಡಳಿತ ಗಮನ ಹರಿಸದೆ ಸುಮ್ಮನೆ ಕೈ ಕಟ್ಟಿ ಕುಳಿತಿದೆ . ಶಾಸಕರನ್ನು ಬೇಟಿ ಮಾಡಿದ ಜನರಿಗೆ ಶಾಸಕರು ಅದಕ್ಕೂ ನನಗೂ ಸಂಬಂಧವಿಲ್ಲ ಅದು ಸರ್ಕಾರಿ ಕಚೇರಿಯಲ್ಲಿ ಕೇಳಿ ಎಂದು ಉತ್ತರಿಸುತ್ತಿದ್ದಾರೆ ಎಂದು ಕೆಂಡಮಂಡಲವಾಗಿದ್ದಾರೆ.

ಇನ್ನೂ ಜಿಲ್ಲ ಅಡಳಿತ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅಧಾರ್ ಕೇಂದ್ರ ಗಳನ್ನು ತೆರೆಯಬೇಕು ಇಲ್ಲ ದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರ ಅಧಿಕಾರಿಗಳಿ ಎಚ್ಚರಿಕೆ ನೀಡಿದ್ದಾರೆ.

ಇನ್ನಾದರೂ ಜಿಲ್ಲಾಡಳಿತ ಕ್ರಮಕೈಗೊಳ್ಳುತ್ತಾ ಕಾದು ನೊಡಬೇಕಿದೆ ...     ಸುದ್ದಿಜಾಲ ನ್ಯೂಸ್ ಹಾಸನ

ಕುಮಾರಸ್ವಾಮಿ ಗಿಫ್ಟ್ ..ಕೈ ಸಾಲ ಮನ್ನಾ ? ಕಾಯ್ದೆಯಲ್ಲಿ ಏನಿದೆ? ಷರತ್ತು ಏನು?

ಏನಿದು ಋಣ ಮುಕ್ತ ಕಾಯ್ದೆ?
ಖಾಸಗಿ ಲೇವಾದೇವಿಗಾರರಿಂದ ಪಡೆದ ಕೈಸಾಲ ಮನ್ನಾ ಮಾಡುವ ಕಾಯ್ದೆ ಇದಾಗಿದ್ದು ನೋಡಲ್ ಅಧಿಕಾರಿಗೆ 90 ದಿನಗಳಲ್ಲಿ ಮಾಹಿತಿ ನೀಡಿದರೆ ಸಾಲ ಕಟ್ಟುವಂತಿಲ್ಲ. ಒಂದು ಕುಟುಂಬಕ್ಕೆ ಒಂದು ಸಾರಿಯಷ್ಟೇ ಸಂಪೂರ್ಣ ಸಾಲಮನ್ನಾ ಸೌಲಭ್ಯ ಸಿಗಲಿದೆ. ಋಣಮುಕ್ತ ಕಾಯ್ದೆಗೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದ್ದು, ನಿನ್ನೆಯಿಂದಲೇ ಜಾರಿಯಾಗಿದೆ. ನಿನ್ನೆಯವರೆಗೆ ಸಾಲ ಪಡೆದವರಿಗೆ ಮಾತ್ರ ಅನ್ವಯವಾಗಲಿದ್ದು ಇವತ್ತಿನಿಂದ ಪಡೆದವರ ಸಾಲ ಮನ್ನಾ ಆಗುವುದಿಲ್ಲ.

ಋಣಮುಕ್ತ ಕಾಯ್ದೆಯ ಷರತ್ತುಗಳೇನು?
ಭೂಮಿ ಇಲ್ಲದ, 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡರೈತರಿಗೆ ಅಥವಾ ವಾರ್ಷಿಕ 1.20 ಲಕ್ಷ ಆದಾಯ ಇರುವವರಿಗೆ ಮಾತ್ರ ಇದು ಅನ್ವಯಿಸುತ್ತದೆ. ಆರ್‍ಬಿಐ ಅಡಿ ಕೆಲಸ ಮಾಡುವ ಹಣಕಾಸು ಸಂಸ್ಥೆಗಳು ಈ ಕಾಯ್ದೆಗೆ ಒಳಪಡುವುದಿಲ್ಲ. ರಿಜಿಸ್ಟರ್ ಫೈನಾನ್ಸ್ ಸಂಸ್ಥೆಗಳಿಗೆ ಇದು ಅನ್ವಯ ಆಗಲ್ಲ (ಉದಾ: ಸಹಕಾರಿ ಸಂಘಗಳು, ಮುತ್ತೂಟ್, ಮಣಪ್ಪುರಂ, ಅಟಿಕಾ, ಅಕ್ಷಯ ಇತ್ಯಾದಿ)

 

 

ಯಾರಿಗೆ ಈ ಕಾಯ್ದೆ ಅನ್ವಯ?
1. ಕೃಷಿ ಅಂದ್ರೆ ರೇಷ್ಮೆ, ತೋಟಗಾರಿಗೆ, ಡೈರಿ ಫಾರಂ ಇತ್ಯಾದಿ
2. ಸಣ್ಣ ಕೃಷಿಕ, ಭೂಮಿ ರಹಿತ ರೈತರು
3. ಬಡವರ್ಗದ ಜನರು
4. ವಾರ್ಷಿಕ ಆದಾಯ 1.20 ಇರುವ ಕುಟುಂಬ
6. ಸಣ್ಣ ರೈತ ಅಂದರೆ 2 ಯೂನಿಟ್ ಹೊಂದಿರುವ ರೈತ
7. ಕಾಯ್ದೆ ಅನ್ವಯ ಒಂದು ಸಾರಿ ಸಾಲಮನ್ನಾ ಅಷ್ಟೇ

2 ಯೂನಿಟ್ ಅಂದ್ರೇನು?
* 2 ಹೆಕ್ಟೇರ್ ಖುಷ್ಕಿ ಜಮೀನು ಹೊಂದಿರುವರು
* 1 ಅಥವಾ 1/4 ಹೆಕ್ಟೇರ್ ಮಳೆ ಆಶ್ರಿತ ಭೂಮಿ
* ಅರ್ಧ ಹೆಕ್ಟೇರ್ ಕಬ್ಬು, ತಂಗು ಮುಂತಾದ ಬೆಳೆ ಬೆಳೆಯುವ ಭೂಮಿ.

ಯೋಜನೆಯ ಲಾಭ ಪಡೆಯುವುದು ಹೇಗೆ?
ನೊಡಲ್ ಆಫೀಸರ್ ಮೂಲಕ ಈ ಪ್ರಕ್ರಿಯೆ ನಡೆಯುತ್ತದೆ. ಪ್ರತಿ ತಾಲೂಕಿಗೆ ಅಸಿಸ್ಟೆಂಟ್ ಕಮೀಷನರ್ ನೊಡಲ್ ಅಧಿಕಾರಿ ಆಗಿರುತ್ತಾರೆ. 90 ದಿನಗಳ ಒಳಗೆ ಸಾಲದ ಮಾಹಿತಿ ದಾಖಲೆ ಸಮೇತ ನೊಡಲ್ ಅಧಿಕಾರಿಗೆ ನೀಡಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಬಳಿಕ ಅಡವಿಟ್ಟ ವಸ್ತು ಬಿಡುಗಡೆಗೆ ಆದೇಶ ನೀಡಲಾಗುತ್ತದೆ.

ನೋಡಲ್ ಆಫೀಸರ್ ತಪ್ಪು ಮಾಡಿದ್ರೆ?
ನೊಡಲ್ ಅಧಿಕಾರಿ ಆದೇಶ ಪಾಲನೆ ಮಾಡದೇ ಇದ್ದರೆ 1 ವರ್ಷ ವಿಸ್ತರಿಸಬಹುದಾದ ಜೈಲು, 1 ಲಕ್ಷ ದಂಡ ವಿಧಿಸಲಾಗುತ್ತದೆ. ನೋಡಲ್ ಅಧಿಕಾರಿ ಆದೇಶವನ್ನು ಜಿಲ್ಲಾಧಿಕಾರಿ 30 ದಿನಗಳಲ್ಲಿ ಮರು ಪರಿಶೀಲಿಸಬಹುದು. ನೋಡಲ್ ಅಧಿಕಾರಿ ಫಲಾನುಭವಿಯ ಎಲ್ಲಾ ದಾಖಲಾತಿಗಳನ್ನು ಕಡ್ಡಾಯವಾಗಿ ಸಂಗ್ರಹ ಮಾಡಬೇಕಾಗುತ್ತದೆ.

ಸಾಲಬಾಧೆ ತಾಳಲಾರದೇ 3 ವರ್ಷದ ಹಿಂದೆ ಮದ್ವೆಯಾಗಿದ್ದ ಜೋಡಿ ನೇಣಿಗೆ ಶರಣು

ಮದ್ದೂರು : ಸಾಲಬಾಧೆ ತಾಳಲಾರದೇ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಮೆಳ್ಳಹಳ್ಳಿ ಗ್ರಾಮದಲ್ಲಿ ನಡೆದಿದೆ.ನಾಗರಾಜು(28) ಮತ್ತು ಮಂಜುಳ(24) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೂರು ವರ್ಷಗಳ ಹಿಂದೆ ನಾಗರಾಜು ಮತ್ತು ಮಂಜುಳ ಮದುವೆಯಾಗಿತ್ತು. ಈ ದಂಪತಿಗೆ ಒಂದು ಗಂಡು ಮಗು ಕೂಡ ಇದೆ. ಆದರೆ ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ.

ದಂಪತಿಗೆ ಸುಮಾರು 1.5 ಲಕ್ಷ ರೂ. ಸಾಲ ಇತ್ತು ಎಂದು ತಿಳಿದು ಬಂದಿದೆ. ಹೀಗಾಗಿ ಸಾಲಗಾರರ ಕಿರುಕುಳದಿಂದ ಬೇಸತ್ತು ನಾಗರಾಜು ಮತ್ತು ಮಂಜುಳ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಡ್ಯ ಲೋಕಸಭಾ ಅಭ್ಯರ್ಥಿ ಸುಮಲತಾ ಅಂಬರೀಶ್ ರವರಿಗೆ ಬಿದ್ದ ಮೊದಲ ಮತವೇ ಅಸಿಂಧು.!!!

ಮಂಡ್ಯ : ಲೋಕ ಅಖಾಡ ಫಲಿತಾಂಶಕ್ಕೂ ಮುನ್ನವೇ ಮಂಡ್ಯದ ಸ್ವತಂತ್ರ ಅಭ್ಯರ್ಥಿ ಸುಮಲತಾಗೆ ಚುನಾವಣಾ ಆಯೋಗ ಸಖತ್ ಶಾಕ್​ ನೀಡಿದೆ. ಹೌದು ಸುಮಲತಾಗೆ ಹಾಕಲಾಗಿದ್ದ ಮೊದಲ ಮತವನ್ನು ರದ್ದುಗೊಳಿಸಿ ಚುನಾವಣಾ ಆಯೋಗ ಆದೇಶಿಸಿದೆ. ಇದರಿಂದ ಸುಮಲತಾಗೆ ತೀವ್ರ ಮುಖಭಂಗವಾದಂತಾಗಿದೆ.

ಸಿಆರ್​ಪಿಎಫ್​ ಯೋಧರೊಬ್ಬರು ಸುಮಲತಾಗೆ ಮತ ಚಲಾಯಿಸಿದ್ದರು. ಬಳಿಕ ಮತ ಚಲಾಯಿಸಿದ ವಿವರಣೆಯನ್ನು ಸಾಮಾಜಿಕ ಜಾಲತಾಣಕ್ಕೆ ವೈರಲ್​ ಮಾಡಿದ್ದರು. ಇದನ್ನು ಶೇರ್​ ಮಾಡಿಕೊಂಡಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಎಲೆಕ್ಷನ್​​ಗೂ ಮುನ್ನವೇ ತನಗೆ ಬಿದ್ದ ಮೊದಲ ಮತ ಎಂದು ಪ್ರಚಾರ ಪಡೆದುಕೊಂಡಿದ್ದರು.

ಇದನ್ನು ಗಮನಿಸಿದ ವಕೀಲ ಕಿರಣಕುಮಾರ್ ಎಂಬುವವರು ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ನೀಡಿದ್ದರು. ಕಿರಣ ಕುಮಾರ್ ದೂರಿನ ಹಿನ್ನೆಲೆಯಲ್ಲಿ ವಿವರಣೆಗಳನ್ನು ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗ ಇದೀಗ ಯೋಧ ಚಲಾಯಿಸಿದ್ದ ಮತವನ್ನು ಅಸಿಂಧುಗೊಳಿಸಿ ಆದೇಶಿಸಿದೆ.

ಮತದಾನ ಗೌಪ್ಯತೆಯ ಕಾನೂನಿನ ಪ್ರಕಾರ ಯೋಧನ ಮತವನ್ನು ಅಸಿಂಧುಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗ ಡಿಸಿಗೆ ಸೂಚನೆ ನೀಡಿದೆ. ಕೇಂದ್ರ ಚುನಾವಣಾ ಆಯೋಗದ ಈ ಆದೇಶದಿಂದ ಸುಮಲತಾಗೆ ಬಿದ್ದ ಮೊದಲ ಮತವೇ ಅಸಿಂಧುವಾದಂತಾಗಿದ್ದು, ಸುಮಲತಾ ತೀವ್ರ ಮುಖಭಂಗಕ್ಕಿಡಾಗಿದ್ದಾರೆ.

Page 1 of 28

Visitors Counter

221999
Today
Yesterday
This Week
This Month
Last Month
All days
36
328
1254
5104
4244
221999

Your IP: 52.14.183.150
2024-04-25 09:19

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles