ನಾಲೆಗಳಲ್ಲಿ ನೀರು ಬಿಟ್ಟರೆ ಸಾಲದು ಅದು ಸರಿಯಾಗಿ ಹರಿಯುತ್ತಿದೆಯೆ ಎಂದು ರಾತ್ರಿ ವೇಳೆ ಗಸ್ತು ಮಾಡಿ ಎಂದ ಸಚಿವರು.
ನಾಲೆಗಳಲ್ಲಿ ನೀರು ಬಿಟ್ಟರೆ ಸಾಲದು ಅದು ಸರಿಯಾಗಿ ಹರಿಯುತ್ತಿದೆಯೆ ಎಂದು ರಾತ್ರಿ ವೇಳೆ ಗಸ್ತು ಮಾಡಬೇಕೆಂದು ಶಾಸಕ ಡಾ.ಕೆ ಅನ್ನದಾನಿ ಅಧಿಕಾರಿಗಳಿಗೆ ಸೂಚಿಸಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗೇಟ್ ಬಳಿ ಇರುವ ಕೆ.ಆರ್.ಎಸ್.ಎಂ ಮತ್ತು ಎಂಐಪಿ ವಿಭಾಗ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಕಚೇರಿಯಲ್ಲಿ ಶಾಸಕ ಡಾ.ಅನ್ನದಾನಿರವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರ ಸಭೆಯಲ್ಲಿ ಮಾತನಾಡಿ, ರಾತ್ರಿಗಸ್ತು ವೇಳೆಯಲ್ಲಿ ಪೊಲೀಸ್ ಸೆಕ್ಯೂರಿಟಿ ಬೇಕಾದರೆ ತೆಗೆದುಕೊಳ್ಳಿ ಎಂದರು. ಇನ್ನೂ ಸತ್ತೇಗಾಲದಿಂದ ಇಗ್ಗಲೂರು ಗ್ರಾಮದವರೆಗೂ 450 ಕೋಟಿ ರೂ ರಾಮನಗರ ಜಿಲ್ಲೆಗೆ ಕುಡಿಯುವ ನೀರು ಯೋಜನೆಯಾಗುತ್ತಿದೆ ಅದಕ್ಕೆ ನಮ್ಮ ತಾಲ್ಲೂಕಿನ ಜನರಿಗೆ ನೀರು ತಲುಪುವ ವ್ಯವಸ್ಥೆಯ ಯೋಜನೆ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಎಲ್ಲಾನಾಲೆಗಳಿಗೂ ಹರಿದು ಈ ಬಾರಿ ರೈತರ ಬೆಳೆಯನ್ನು ಬೆಳೆಯುವುದಕ್ಕೆ ನೀರು ನೀಡಬೇಕು ಅದಲ್ಲದೆ ರೈತರಿಗೂ ಬೆಳೆ ಬೆಳೆಯುವ ಬಗ್ಗೆ ಮನವರಿಕೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆ ಮುಗಿದ ಬಳಿಕ ಆಗಸನಪುರ, ಹುಸ್ಕೂರು ಬಳಿ ನಾಲೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಕಾವೇರಿ ನೀರಾವರಿ ನಿಗಮದ ಇಇ ರಾಮಕೃಷ್ಣ, ಜಿ.ಪಂ ಸದಸ್ಯ ರವಿ, ಸಿದ್ದರಾಜು ಸೇರಿದಂತೆ ಎಲ್ಲಾ ಸಬ್ ಡಿವಿಜನ್ ನ ಇಂಜಿನಿಯರ್ ಗಳು ಹಾಜರಿದ್ದರು.
ಹೇಮಾವತಿ ನಾಲೆ ಯಲ್ಲಿ ಕೊಚ್ಚಿಹೊದ ಮಹಿಳೆ
ಕಾಲು ಜಾರಿ ಹೇಮಾವತಿ ಕಾಲುವೆಯಲ್ಲಿ ಕೊಚ್ಚಿಹೋದ ರೈತ ಮಹಿಳೆ.
ಮಂಡ್ಯ ಜಿಲ್ಲೆಯ ಕೆ.ಅರ್. ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮದ ಶಂಕರೇಗೌಡರ ಪತ್ನಿ ಸುಧಾಮಣಿ (50) ಮೃತ ಮಹಿಳೆ.ಜಮೀನಿನ ಬಳಿ ಕೃಷಿ ಚಟುವಟಿಕೆ ಮುಗಿದ ನಂತರ ಸಮೀಪದಲ್ಲಿ ಇರುವ ಹೇಮಾವತಿ ಕಾಲುವೆಯ ಸೋಪಾನ ಕಟ್ಟೆಯಲ್ಲಿ ಕೈಕಾಲು ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಡಿದ್ದಾರೆ.
ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ತಾಲ್ಲೂಕು ಪಂಚಾಯಿತಿಯ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಸ್.ರಾಜು ಅವಿರೋಧವಾಗಿ ಆಯ್ಕೆ.
ಕೆ.ಆರ್.ಪೇಟೆ ತಾಲ್ಲೂಕು ಪಂಚಾಯಿತಿಯ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಸ್.ರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕು ಪಂಚಾಯಿತಿಯ ಸ್ಥಾಯಿ ಸಮಿತಿಯ ಈ ಹಿಂದಿನ ಅಧ್ಯಕ್ಷರಾಗಿದ್ದ ಎಂ.ಎನ್.ವಿಜಯಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಹೆಚ್.ಎಸ್.ರಾಜು ಅವರು ಅವಿರೋಧವಾಗಿ ಆಯ್ಕೆಯಾದರು.ನಂತರ ನೂತನ ಅಧ್ಯಕ್ಷ ರಾಜು ಅವರು ಮಾತನಾಡಿ ನನ್ನನ್ನು ಗುರುತಿಸಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅದ್ಯಕ್ಷ ಸ್ಥಾನ ನೀಡಿರುವ ಶಾಸಕ ನಾರಾಯಣಗೌಡ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು, ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಟಿ.ಮಂಜು, ಹಾಗೂ ಎಲ್ಲಾ ತಾಲ್ಲೂಕು ಪಂಚಾಯಿತಿ ಸದಸ್ಯರಿಗೂ ಆಬಾರಿಯಾಗಿದ್ದೇನೆ. ನನಗೆ ಸಿಕ್ಕಿರುವ ಅಧಿಕಾರವನ್ನು ಸದುಪಯೋಗ ಪಡಿಸಿಕೊಂಡು ಉತ್ತಮವಾಗಿ ಕೆಲಸ ಮಾಡುವ ಮೂಲಕ ಒಳ್ಳೆಯ ಹೆಸರು ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ ಎಂದು ರಾಜು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಜಾನಕೀರಾಂ, ಇಒ ಚಂದ್ರಮೌಳಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು ಅಭಿನಂದಿಸಿದರು.
ಕೆರೆ ಕಟ್ಟೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆಹಾಕಿಪ್ರತಿಭಟನೆ.
ಕೆರೆ ಕಟ್ಟೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಕಾವೇರಿ ನೀರಾವರಿ ಕೊನೆಭಾಗದ ವ್ಯವಸಾಯಗಾರರ ಹೋರಾಟ ಸಮಿತಿ ವತಿಯಿಂದ ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗ್ರಾಮದ ಕಾವೇರಿ ಬೃಹತ್ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆಹಾಕಿಪ್ರತಿಭಟನೆ .
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನೆಭಾಗಕ್ಕೆ ಮತ್ತು ಕೆರೆ ಕಟ್ಟೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಕಾವೇರಿ ನೀರಾವರಿ ಕೊನೆಭಾಗದ ವ್ಯವಸಾಯಗಾರರ ಹೋರಾಟ ಸಮಿತಿ ವತಿಯಿಂದ ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗ್ರಾಮದ ಕಾವೇರಿ ಬೃಹತ್ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರಗಳ ವಿರುದ್ದ ಘೋಷಣೆ ಕೂಗಿದರು.ಇದೇ ಸಂದರ್ಭದಲ್ಲಿ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಮಾಧು ಮಾತನಾಡಿ, 5ಎ, 6ನಾಲೆಯ ತೂಬಿನಲ್ಲಿ ನೀರೆತ್ತಿ ದುಗ್ಗನಹಳ್ಳಿ ಪಿಕ್ ಅಫ್ ಮೂಲಕ ದಡದಪುರ ,ಬಂಡೂರು, ಗಟ್ಟಿಕೊಪ್ಪಲು,ಸಸಿಯಾಲಪುರ ಕಲ್ಲಾರೇಪುರ ಗ್ರಾಮಗಳ ವ್ಯವಸಾಯಕ್ಕೆನೀರು ಹರಿಸಬೇಕು. ಮಾರೇಹಳ್ಳಿ ,ಮಳವಳ್ಳಿ ,ಗಂಗಾಧರನಕೆರೆಗೆ ನೀರು ತುಂಬಿಸಿ ಆ ಭಾಗದ ಭೂಮಿಗೆ ನೀರು ಪೂರೈಸಬೇಕು, ತಕ್ಷಣ ನೀರು ಕೊಡದಿದ್ದರೆ ತಮ್ಮ ಇಲಾಖೆಯ ಜವಾಬ್ದಾರಿಯಲ್ಲಿ ಭತ್ತದ ಸಸಿ ಬೆಳೆಸಿ ಸೆಪ್ಟೆಂಬರ್ 2 ನೇ ವಾರ ಎಲ್ಲಾ ಬೇಸಾಯಗಾರರಿಗೂ ಸಸಿ ಹಂಚಿಕೆ ಮಾಡಬೇಕು. ಇದಲ್ಲದೆ ಕೆರೆಕಟ್ಟೆ ಕಾಲುವೆ ತೋಳ್ಗಾಲುವೆಗಳಲ್ಲಿ ಬೆಳೆದಿರುವ ಗಿಡಗಳನ್ನು ತೆಗೆಸಿ ಗಲೀಜು ಮತ್ತು ಹೂಳನ್ನು ಎತ್ತಿಸಬೇಕು ಎಂದು ಒತ್ತಾಯಿಸಿದರು. ಹೊಸ ಸರ್ಕಾರ ಬಂದರೂ ರೈತರ ಕಷ್ಟವನ್ನು ನೋಡುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕೂಲಿಕಾರರ ಸಂಘದ ತಾಲ್ಲೂಕು ಅಧ್ಯಕ್ಷ ಶಿವಮಲ್ಲಯ್ಯ, ಬಂಡೂರು ಗ್ರಾಮಪಂಚಾಯಿತಿ ಅಧ್ಯಕ್ಷ ನಾಗರಾಜು, ಬಸವರಾಜು, ಟಿ.ಹೆಚ್ ಆನಂದ್, ಎನ್ ಶಿವಕುಮಾರ್ , ಪಾಪಣ್ಣ, ಸೇರಿದಂತೆ ಮತ್ತಿತ್ತರರು ಇದ್ದರು.
ಆಗಸ್ಟ್ 14ರಂದು ಸಾಮೂಹಿಕ ಸತ್ಯಾಗ್ರಹ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸಿಐಟಿಯು ತಾಲ್ಲೂಕು ಸಂಚಾಲಕಿ ಮಹದೇವಮ್ಮ ಪತ್ರಿಕಾಗೋಷ್ಠಿ.
ದುಡಿಯುವ ಜನರ ಹಕ್ಕುಗಳ ರಕ್ಷಣೆಗಾಗಿ ತಾಲ್ಲೂಕು ತಹಸೀಲ್ದಾರ್ ಕಚೇರಿ ಮುಂದೆ ಆಗಸ್ಟ್ 14ರಂದು ಸಾಮೂಹಿಕ ಸತ್ಯಾಗ್ರಹ ಅಹೋರಾತ್ರಿ ಧರಣಿ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಡಿಯುವ ಜನರ ಹಕ್ಕುಗಳ ರಕ್ಷಣೆಗಾಗಿ ಮಳವಳ್ಳಿ ತಾಲ್ಲೂಕು ತಹಸೀಲ್ದಾರ್ ಕಚೇರಿ ಮುಂದೆ ಆಗಸ್ಟ್ 14ರಂದು ಸಾಮೂಹಿಕ ಸತ್ಯಾಗ್ರಹ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸಿಐಟಿಯು ತಾಲ್ಲೂಕು ಸಂಚಾಲಕಿ ಮಹದೇವಮ್ಮ ತಿಳಿಸಿದರು.ಮಳವಳ್ಳಿ ಪಟ್ಟಣದ ಕೂಲಿಕಾರರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಐಸಿಡಿಎಸ್ ಯೋಜನೆಯಲ್ಲಿ ಶೇ 75 , ಬಿಸಿಯೂಟ ಶೇ 40 ಅನುದಾನ ಕಡಿತ ಮಾಡಿ ನೇರ ನಗದು ಕೊಡುವ ಮತ್ತು ಬಿಸಿಯೂಟದಲ್ಲಿ ಕೇಂದ್ರೀಕೃತ ಅಡುಗೆ ಮನೆಯನ್ನು ತೆರೆಯುವುದನ್ನು ವಿರೋಧಿಸಿ ದೇಶದಲ್ಲಿ ಮತ್ತು ರಾಜ್ಯದಲ್ಲಿ ಐಸಿಡಿಎಸ್ , ಮಧ್ಯಾಹ್ನದ ಬಿಸಿಯೂಟ, ಆರೋಗ್ಯ, ಶಿಕ್ಷಣ, ಮೊದಲಾದ ಯೋಜನೆ ಅಡಿಯಲ್ಲಿ ಲಕ್ಷಾಂತರ ಅಂಗನವಾಡಿ, ಬಿಸಿಯೂಟ,ಆಶಾ ನೌಕರರು ಯಾವುದೇ ಕನಿಷ್ಠ ಕೂಲಿ ಇಲ್ಲದೆ ಕೆಲಸ ಮಾಡುತ್ತಿದ್ದಾರೆಎಂದು ಆರೋಪಿಸಿದರು.ಇದಲ್ಲದೆ ಕೇಂದ್ರ ಸರ್ಕಾರ ವಿರುದ್ದ ಹೋರಾಟ ಮಾಡುತ್ತಿದೆ ಆಗಸ್ಟ್ 14 ರಂದುಸಂಜೆ 6 ಗಂಟೆಗೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟು ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಲಾಗುವುದು ಕಾರ್ಯಕ್ರಮದಲ್ಲಿ ಬುದ್ದಿಜೀವಿಗಳು ,ಸಾಹಿತಿಗಳು, ಕಲಾವಿದರು ಹಾಗೂ ಭಾಷಣಕಾರರಾಗಿ ವೈ.ಎಸ್ ಗುರುಶಾಂತ್ ಆಗಮಿಸಲಿದ್ದಾರೆ. ಇದಲ್ಲದೆ ಧರಣಿಯಲ್ಲಿ ಅನೇಕ ಸಂಘಟನೆಗಳು ಭಾಗವಹಿಸಲಿದೆ ಎಂದರು ಗೋಷ್ಟಿಯಲ್ಲಿ ಕೂಲಿಕಾರರ ಸಂಘದ ಅಧ್ಯಕ್ಷ ಶಿವಮಲ್ಲಯ್ಯ,ಜವರಯ್ಯ ಸೇರಿದಂತೆ ಮತ್ತಿತ್ತರರು ಇದ್ದರು.
ಸಿದ್ದರಾಮಯ್ಯ ಹುಟ್ಟು ಹಬ್ಬದ ಅಂಗವಾಗಿ ಕೆ.ಆರ್.ಪೇಟೆ ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ ಹಂಪಲು ವಿತರಣೆ.
ಮಾಜಿ ಮುಖ್ಯಮಂತ್ರಿ ಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ ಹಂಪಲು ವಿತರಣೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ ಹಂಪಲು ವಿತರಣೆ ಮಾಡಿದರು.ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕೆ.ಬಿ.ಚಂದ್ರಶೇಖರ್ ಅವರು ನಮ್ಮೆಲ್ಲರ ನಾಯಕರರಾದ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಉತ್ತಮ ಆಡಳಿತ ನಡೆಸುವ ಮೂಲಕ ರಾಜ್ಯದ ಜನರ ಕಣ್ಮಣಿಯಾಗಿದ್ದಾರೆ. ಮುಂದೆ ದೇಶದ ಪ್ರಧಾನಿಯಾಗುವ ಅವಕಾಶ ಒದಗಿ ಬರಲಿ . ಶ್ರೀಯುತರಿಗೆ ದೇವರು ಮತ್ತು ಆರೋಗ್ಯ, ಅವಕಾಶಗಳನ್ನು ನೀಡಲಿ ನೂರ್ಕಾಲ ಬಾಳಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ರವೀಂದ್ರ ಬಾಬು, ಕೆಯುಐಡಿಎಫ್ ಸಿ ನಿಗಮದ ಅಧ್ಯಕ್ಷ ಎಂ.ಡಿ.ಕೃಷ್ಣ ಮೂರ್ತಿ, ಜಿ.ಪಂ. ಸದಸ್ಯ ದೇವರಾಜು, ಕಾಂಗ್ರೆಸ್ ಮುಖಂಡರಾದ ಬಿ.ನಾಗೇಂದ್ರಕುಮಾರ್, ಎಸ್.ಅಂಬರೀಷ್, ಕೆ.ಸಿ.ಮಂಜು ನಾಥ್, ಡಿ.ಪ್ರೇಮಕುಮಾರ್, ಎಂ.ಜೆ.ಶಶಿಧರ್, ಶಿವಣ್ಣ, ರಾಜಯ್ಯ, ಕಿರಣ್ ಕುಮಾರ್, ಹೊಸೂರು ನಿಂಗೇಗೌಡ , ಲಕ್ಷ್ಮೀಪುರ ಚಂದ್ರೇಗೌಡ, ಅಗ್ರಹಾರ ಕುಮಾರ್, ಇತರರು ಇದ್ದರು.
ಕರ್ನಾಟಕ ಪ್ರಾಂತ ರೈತ ಸಂಘ.ಜನವಾದಿ ಮಹಿಳಾ. ಸಂಘಟನೆ .ಎಸ್.ಎಫ್.ಐ.ಸಂಘಟನೆ ಗಳಿಂದ ಪ್ರತಿಭಟನೆ
ಸಂವಿಧಾನ ಪ್ರತಿಯನ್ನ ಸುಟ್ಟು ಹಾಕಿದ ಸಂಘಪರಿವಾರದ ನೀಚ ಕೃತ್ಯವನ್ನ ಖಂಡಿಸಿ. ಪ್ರಾಂತ ರೈತ ಸಂಘ.ಜನವಾದಿ ಮಹಿಳಾ ಸಂಘಟನೆ.ಎಸ್.ಎಫ್.ಐ.ನಿಂದ ಪ್ರತಿಭಟನೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಸಂಘಪರಿವಾರದ ನೀಚರು ಮೀಸಲಾತಿ ವಿರೋದಿಗಳು ದೇಶದ ಘನತೆಗೆ ನಮ್ಮ ಸಂವಿಧಾನವು ಒಂದು ಕಾರಣವಾಗಿರುವ ಸಂವಿಧಾನವನ್ನು ಸುಟ್ಟು ಹಾಕಿರುವ ಕ್ರಮವನ್ನು ಖಂಡಿಸಿ.ಮಳವಳ್ಳಿ ಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ.ಜನವಾದಿ ಮಹಿಳಾ. ಸಂಘಟನೆ .ಎಸ್.ಎಫ್.ಐ.ಸಂಘಟನೆ ಗಳಿಂದ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಅದ್ಯಕ್ಷರಾದ ಎನ್ ಎಲ್ ಭರತ್ ರಾಜ್ ಮಾತನಾಡಿ ದೇಶದಲ್ಲಿ ಕೋಮುವಾದಿ .ಪುರೋಹಿತ ಶಾಹಿ ಹಾಗೂ ಮನುವಾದಿಗಳ ಕೊಳಕು ಮನಸ್ಥಿತಿಯ ನೀಚವ್ಯಕ್ತಿಗಳಿಂದ ಸಂವಿಧಾನದತ್ತ ಹಕ್ಕುಗಳನ್ನು ಮೊಟಕುಗೊಳಿಸಿ. ವರ್ಣಾಶ್ರಮ ಪದ್ದತಿಯ ಗುಲಾಮಗಿರಿಯ ವ್ಯವಸ್ಥೆಯನ್ನ ತರಲು ಯತ್ನಿಸುತ್ತಿದ್ದಾರೆ ಅದರ ಭಾಗವಾಗಿ ದೆಹಲಿಯಲ್ಲಿ ಮೀಸಲಾತಿ ವಿರೋದಿ ಹೋರಾಟದಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟು ಅಂಬೇಡ್ಕರ್ ಗೆ ದಿಕ್ಕಾರ ಕೂಗಿ ಈ ದೇಶದ ಘನತೆಗೆ ಮತ್ತು ಜನತೆಗೆ ಅಪಮಾನ ಗೊಳಿಸಿದ್ದಾರೆ ಅದ್ದರಿಂದ ಈ ಮನುಷ್ಯ ವಿರೋದಿ RSS ,Bjp ಯ ದುಷ್ ಕೃತ್ಯವನ್ನು ಪ್ರಜ್ಞಾವಂತರು ಖಂಡಿಸಬೇಕು. ಎಂದರು ಆಹಾರದ ಹಕ್ಕಿನ ಮೇಲೆ ಧಾಳಿ. ಆಯ್ಕೆಯ ಹಕ್ಕು ಅಬಿವ್ಯಕ್ತಿ ಸ್ವಾತಂತ್ರ್ಯ. ದಾರ್ಮಿಕ ಹಕ್ಕು.ಧಾಳಿ ನಡೆಸಿ ದೇಶದ ಸೌಹಾರ್ದ ತೆಯನ್ನು ಹಾಳು ಮಾಡುತ್ತಿದ್ದಾರೆ ಮೋದಿ ಅಧಿಕಾರಕ್ಕೆ ಬಂದ ಮೇಲೆ ಜನತೆಗೆ ರಕ್ಷಣೆ ಸಿಗುತ್ತಿಲ್ಲ ಮೋದಿಯೊಬ್ಬ ಜನ ವಿರೋಧಿ ಎಂದು ಆರೋಪಿಸಿದರು.
ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾದ್ಯಕ್ಷರಾದ ದೇವಿ ಮಾತನಾಡಿ ದೇಶದಲ್ಲಿ ಮಹಿಳೆಯರು. ವಿದ್ಯಾರ್ಥಿಗಳು. ಹಾಗೂ ಮಕ್ಕಳು ಸೇರಿದಂತೆ ವಿಪರೀತ ಅತ್ಯಾಚಾರ. ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ.ರಾಜ್ಯದಲ್ಲಿ ಮಾಲೂರು .ಹಾವೇರಿ. ಬಾಗಲಕೋಟೆ ಮುಂತಾದಡೆ ಇಂತಹ ಘಟನೆಗಳು ನಡೆದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ .ಪ್ರತಿಯೊಬ್ಬ ನಾಗರಿಕನಿಗೆ ರಕ್ಷಣೆ ನೀಡುವುದರ ಬದಲು ಅಳುವ ಸರ್ಕಾರಗಳು ಅಪರಾಧಿಗಳ ರಕ್ಷಣೆಗೆ ನಿಂತಿದ್ದಾರೆ ಇಂತಹ ನೀತಿಗಳ ವಿರೋದಿಸಿ ಕೋಮುವಾದಿ ಸರ್ಕಾರ ವನ್ನ ಕಿತ್ತೆಸದು ಜನತೆಯನ್ನು ರಕ್ಷಿಸಬೇಕೆಂದರು.
ಪ್ರತಿಭಟನೆ ಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಸುಶೀಲಾ ಸನೀತಾ. ಪ್ರಮೀಳಾ. ಪದ್ಮಾ ಪ್ರಾಂತ ರೈತ ಸಂಘದ ಎಂ.ಡಿ.ಶಂಕರ್.ಜಯಲಕ್ಷ್ಮಿ. ಎಸ್ ಎಫ್ ಎಫ್ ನ ನಿವೇದಿತ . ಚಿನ್ಮಯಿ ಪೂಜಾ ಆಶಾ ಸಿ.ಐ.ಟಿ.ಯು ತಿಮ್ಮೇಗೌಡ. ಸಾಹಿತಿಗಳಾದ ಎಂ.ಬಸಪ್ಪ. ವಕೀಲರಾದ ತೇಜಸ್ವಿನಿ ಭಾಗವಹಿಸಿದ್ದರು.
ಯೋಧರಿಗಾಗಿ ರಕ್ತದಾನ ಮಾಡಿ ಎಂದು ಅರಿವಿನ ಜಾಗೃತಿ ಕಾರ್ಯಕ್ರಮ
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಅರಿವಿನ ಜಾಗೃತಿ ಕಾರ್ಯಕ್ರಮ
ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂದೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಅರಿವಿನ ಜಾಗೃತಿ ಕಾರ್ಯಕ್ರಮ ನಡೆಸಿದರು 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರಿಗೆ ಮತ್ತು ಹುತಾತ್ಮ ಯೋಧರು ಹಾಗೂ ಗಡಿ ಕಾಯುತ್ತಿರುವ ಯೋಧರಿಗಾಗಿ ಅರ್ಪಿಸುವ ಬೃಹತ್ ರಕ್ತದಾನ ಹಾಗೂ 71 ಹಣ್ಣಿನಗಿಡ ವಿತರಣ ಕಾರ್ಯಕ್ರಮ ಆಗಸ್ಟ್ 15 ರಂದು ನಡೆಯಲಿದ್ದು ಪ್ರತಿಯೊಬ್ಬರು ಸ್ವಂಪೇರಿತರಾಗಿ ಭಾಗವಹಿಸುವಂತೆ ಅಖಿಲ ಭಾರತ ಜನವಾದಿ ಮಹಿಳೆ ಸಂಘಟನೆ ಜಿಲ್ಲಾಧ್ಯಕ್ಷೆ ದೇವಿ ಕರೆ ನೀಡಿದರು. ಅರಿವಿನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ , ಮಹಿಳೆ ಯರು ರಕ್ತದಾನ ಮಾಡುವ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ತಪ್ಪು ಮಾಹಿತಿಯಾಗಿದ್ದು, ಮಹಿಳೆಯರು ರಕ್ತದಾನ ಮಾಡಿದರೆ ಹೃದಯರೋಗ , ಹಾಗೂ ಎಲ್ಲಾ ಕಾಯಿಲೆಯಿಂದ ದೂರ ಉಳಿಯವುದು ಎಂದರು.ಕಾರ್ಯಕ್ರಮದಲ್ಲಿ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಸುಶೀಲಾ , ಸುನೀತಾ .ಪದ್ಮ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.
ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ನೂತನ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರಿಗೆ ಅಭಿನಂದನಾ ಸಮಾರಂಭ.
ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ವತಿಯಿಂದ ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರಿಗೆ ಅಭಿನಂದನಾ ಸಮಾರಂಭವು ನಡೆಯಿತು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ವತಿಯಿಂದ ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರಿಗೆ ಅಭಿನಂದನಾ ಸಮಾರಂಭವು ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ರಕ್ಷಣೆಗೆ ಕಾಂಗ್ರೆಸ್ ಪಕ್ಷವು ಸದಾ ಸಿದ್ದವಿದೆ. ಕಾರ್ಯಕರ್ತರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಶಕ್ತಿಯನ್ನು ತೋರಿಸಬೇಕು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಕ್ಷದ ಸೋಲಿಗೆ ಎದೆಗುಂದಬಾರದು. ಸಿದ್ದರಾಮಯ್ಯ ಅವರ ಆಡಳಿತ ಅವಧಿಯ ಜನಪ್ರಿಯ ಕೆಲಸಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಪಕ್ಷವನ್ನು ಗಟ್ಟಿಗೊಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನ ಮಾನ ಕೊಡಲು ಪಕ್ಷವು ಸದಾ ಸಿದ್ದವಿದೆ.ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಸ್ಥಿತ್ವವನ್ನು ಎದುರಾಳಿಗಳಿಗೆ ಕಾಂಗ್ರೆಸ್ ಪಕ್ಷ ಇನ್ನೂ ಗಟ್ಟಿಯಾಗಿದೆ ಎಂಬ ಇದೆ ಸಂದೇಶ ನೀಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ನಂತರ ಮಾತನಾಡಿ ರಾಜಕೀಯ ಸನ್ನಿವೇಶ ಹಿನ್ನಲೆ ಕೆಲವೊಮ್ಮೆ ಮಾತಾಡದಂತೆ ಸಂದರ್ಭ ಕೈ ಕಟ್ಟಿ ಹಾಕುತ್ತದೆ.ಜನ ಕಾರ್ಯಕ್ರಮ ಆಧಾರದ ಮೇಲೆ ಮತ ಹಾಕಿದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿತ್ತು.ಆದರೇ ಚುನಾವಣೆ ಸಂದರ್ಭದಲ್ಲಿ ಭಾವನೆ ಸೇರಿದಂತೆ ಹಲವು ಕಾರಣಗಳು ಸೇರಿಕೊಳ್ಳುತ್ತವೆ.ಆದ್ದರಿಂದ ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ ಸೋಲು ಉಣ್ಣಾಬೇಕಾಯಿತು.ಜನಪ್ರಿಯತೆಗೆ ಕಾರ್ಯಕ್ರಮ ತಂದಿದಲ್ಲ, ರೈತರಿಗೆ ಅನುಕೂಲ ಆಗವಂತೆ ಕಾಂಗ್ರೆಸ್ ಸರ್ಕಾರ ಯೋಜನೆ ತಂದಿತ್ತು.ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಏಕೆ ಮತ ಹಾಕಿಲ್ಲ ಎಂದು ಕೇಳಿದ್ರೆ ಅವರ ಬಳಿ ಉತ್ತರವಿಲ್ಲ.ನಮ್ಮವರು ಮುಖ್ಯಮಂತ್ರಿ ಆಗಲೆಂದು ಮತ ಹಾಕಿದ್ದಾರೆ ಅಷ್ಟೇ.ಉದ್ಯೋಗ ಸೃಷ್ಟಿಯಲ್ಲಿ ನಮ್ಮ ರಾಜ್ಯ ನಂ.೧. ಆಗಿತ್ತು.ನಾವು ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡಿದ್ದೀವಿ. ಯಾರನ್ನ ಬಿಟ್ಟಿದ್ದೀವಿ ಹೇಳಿ.ನಾವು ತಪ್ಪು ಮಾಡಿದೋ, ಜನರಿಗೆ ನಾವು ಸರಿಯಾಗಿ ಹೇಳಕ್ಕಾಗಿಲ್ಲ.ನಮ್ಮ ಸರ್ಕಾರದಲ್ಲಿ ಹಲವು ಜಿಲ್ಲೆಗಳಲ್ಲಿ ನಮ್ಮ ಕಾರ್ಯಕರ್ತರು ಕೆಲಸ ಮಾಡಿಲ್ಲ.ಅದರಲ್ಲೊಂದು ಮಂಡ್ಯ ಜಿಲ್ಲೆಯ ಕಾರ್ಯಕರ್ತರ ಕೆಲಸ ಮಾಡಿಲ್ಲ.ಅದಕ್ಕೆ ಯಾರು ಕಾರಣ ಅಂತಾ ಹೇಳಲ್ಲ. ಇಲ್ಲಿ ಪತ್ರಿಕೆಯವರಿದ್ದಾರೆ. ಅದನ್ನೇ ಹೆಡ್ ಲೈನ್ ಬರಿತ್ತಾರೆ. ಈಗ ಬೇಡ.ನಾವು ಕಾರ್ಯಕರ್ತರ ಕೆಲಸ ಮಾಡಿದ್ರೆ ಇಂತಹ ಪಲಿತಾಂಶ ಬರುತ್ತಿರಲಿಲ್ಲ.ಮುಂದೆ ಬರುವ ಸ್ಥಳೀಯ, ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ.ನಿಜವಾದ ಮುಖಂಡರಿಗೆ ಜಿಲ್ಲೆಯಲ್ಲಿ ಒಳ್ಳೆಯ ಅವಕಾಶ ಸಿಕ್ಕಿದೆ.
ಯುವ ಕಾರ್ಯಕರ್ತರನ್ನು ಹುಟ್ಟು ಹಾಕಿ ಕೆಲಸ ಮಾಡಿ ಪಕ್ಷ ಕಟ್ಟಬೇಕು.ಯಾರು ಜನರಿಗೆ ಸೇವೆ ಮಾಡಬೇಕು ಎನ್ನುವ ಮನಸ್ಸಿದವರಿಗೆ ಸ್ಥಾನಮಾನ ಕೊಡಿ, ಆಗ ಪಕ್ಷ ಉಳಿಯುತ್ತೆ ನನಗೆ ನಂಬಿಕೆಯಿದೆ ಜಿಲ್ಲೆಯಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತೆ.ಈ ಸರ್ಕಾರದಲ್ಲಿ ಸಮಸ್ಯೆ ಬಂದೆ ಬರುತ್ತೆ.ಆಗ ನಮ್ಮ ಕಾರ್ಯಕರ್ತರ ಪರ ಪಕ್ಷ ನಿಂತೇ ನಿಲುತ್ತೆ.ಯಾರು ಹೆದರುವ ಅವಶ್ಯಕತೆಯಿಲ್ಲ.ನಮ್ಮ ಪಕ್ಷಕ್ಕೆ ನೋವಿದೆ. ೮೦ ಸೀಟು ಇದ್ರು ಅಧಿಕಾರ ಬಿಟ್ಟಿದ್ದೇವೆ.ಕೋಮುವಾದಿ ಪಕ್ಷ ಬಿಜೆಪಿ ಅನ್ನು ದೂರ ಇಡುವ ಸಲುವಾಗಿ.ರಾಹುಲ್ ಗಾಂಧಿ ನೇರವಾಗಿ ಮೋದಿಯನ್ನು ಸಂಸತಲ್ಲಿ ಅಟ್ಯಾಕ್ ಮಾಡಿದ್ದರು ಅವರು ಸ್ಪಷ್ಟಿಕರಣ ಇದುವರೆಗೂ ಕೊಟ್ಟಿಲ್ಲ.ಎರಡು ಜರ್ನಲಿಷ್ಟನ್ನು ಕೆಲಸದಿಂದ ತೆಗಸಿದ್ರೂ.ಎನ್ ಡಿ ಟಿವಿ ವಿರುದ್ದ ಈಡಿ ಕೇಸ್ ಹಾಕಿಸಿದ್ರೂ.ಮೋದಿ ಸ್ನೇಹಿತ ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಹೋಗಿದ್ದಾರೆ.ಸಿಎಂ ಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಸಹಕಾರ ನೀಡಿದೆ.ಅದರ ಜತಗೆ ಪಕ್ಷವನ್ನು ಕಟ್ಟಬೇಕಿದೆ.ದೇಶದ ಕಟ್ಟುವ ಸಲುವಾಗಿ ಪಕ್ಷ ಉಳಿಯಬೇಕಿದೆ.ನಾವು ಸೋತಿದ್ದೇವೆ ಒಪ್ಪೊಣ, ಜನಾದೇಶಕ್ಕೆ ಬೆಲೆ ಕೊಡೊಣ. ಮತ್ತೇ ಜನರ ಬಳಿ ಹೋಗಿ ಕಾಂಗ್ರೆಸ್ ಬಗ್ಗೆ ಹೇಳೋಣ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು ,ಮಾಜಿ ಸಚಿವ ಚಲುವರಾಯಸ್ವಾಮಿ, ಮಾಜಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಬಿ.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಂಪಂಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ತಾಲ್ಲೂಕು ಕಾಂಗ್ರೆಸ್ ಉಸ್ತುವಾರಿ ಬಲರಾಂ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಗಣಿಗ ರವಿಕುಮಾರ್, ಎಂ.ಡಿ.ಕೃಷ್ಣಮೂರ್ತಿ, ಕೆರೆಗೋಡು ಸೋಮಶೇಖರ್, ನಾಗೇಂದ್ರಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕೋಡಿಮಾರನಹಳ್ಳಿ ದೇವರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ಸ್ವಾಮಿನಾಯಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ರವೀಂದ್ರ ಬಾಬು, ಕಿರಣ್ ಕುಮಾರ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಗದ್ದೆಗೆ ಇಳಿದು ನಾಟಿ ಮಾಡಿದ, ನಾಡಿನ ಮುಖ್ಯ ಮಂತ್ರಿ ಹೆಚ್ ,ಡಿ ಕುಮಾರಸ್ವಾಮಿ
ಸೀತಾಪುರ ಗ್ರಾಮದಲ್ಲಿ ರೈತರ ಜೊತೆಗೂಡಿ ಭತ್ತದ ಗದ್ದೆಯಲ್ಲಿ ನಾಟಿಮಾಡಿದ ನಾಡಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.
ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ರೈತರ ಜೊತೆಗೂಡಿ ನಾಟಿಮಾಡಿದ ನಾಡಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಂತರ ಮಾತನಾಡಿ ನಾಟಿ ಕಾರ್ಯ ಮಾಡಿರುವುದು ನನ್ನ ಜೀವನದ ಸಾರ್ಥಕತೆ ಹಾಗೂ ಪುಣ್ಯ ಎಂದರು.ನಂತರ ಇನ್ನೊಂದು ವಾರದಲ್ಲಿ ರೈತರ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲವನ್ನು ಸಹ ಮನ್ನಾ ಮಾಡಲಾಗುವುದು. ಮುಂದಿನ ತಿಂಗಳಿನಿಂದ ರಾಜ್ಯದ 30 ಜಿಲ್ಲೆಗೂ ಭೇಟಿ ಕೊಡುತ್ತೇನೆ. ತಿಂಗಳಲ್ಲಿ ಒಂದು ದಿನ ರೈತರ ಜೊತೆ ಕೃಷಿ ಚಟುವಟಿಕೆಯಲ್ಲಿ ಭಾಗಯಾಗ್ತೀನಿ ಎಂದ ಅವರು ಯಾರು ಆತ್ಮಹತ್ಯೆಗೆ ಶರಣಾಗಬೇಡಿ, ನಿಮ್ಮ ಜೊತೆ ನಾವಿದ್ದೇವೆ .ಗೌರಿಗಣೇಶ ಹಬ್ಬದಷ್ಟರಲ್ಲಿ ರೈತರಿಗೆ ಒಳ್ಳೆಯ ಕಾರ್ಯಕ್ರಮ ಕೊಡುತ್ತೇನೆ,ಎಂದು ಭರವಸೆ ನೀಡಿದರು. ರಾಜ್ಯದ ಆರುವರೆ ಕೋಟಿ ಜನರಿಗೂ ಒಳ್ಳೆಯ ಕಾರ್ಯಕ್ರಮ ಕೊಡುತ್ತೇನೆ. ನಾನು ಯಾರನ್ನು ಮೆಚ್ವಿಸುವುದಿಲ್ಲ, ಹೃದಯದಿಂದ ಕಾರ್ಯಕ್ರಮ ಕೊಡುತ್ತೇನೆ ಎಂದರು.
ನಂತರ ಬಿಜೆಪಿಯ ಈಶ್ವರಪ್ಪ ಹೇಳಿಕೆಗೆ ಸಿಎಂ ತಿರುಗೇಟು ನೀಡಿ,ನಾಟಿ ಕಾರ್ಯವನ್ನು ಮಾಡಿ ಸಿಎಂ ಡ್ರಾಮಾ ಮಾಡ್ತಿದ್ದಾರೆಂದು ಹೇಳಿದ್ದಾರೆ ಆದರೆ ನಾನು ನಾಟಕ ಮಾಡಲು ಇಲ್ಲಿಗೆ ಬಂದಿಲ್ಲ, ಡ್ರಾಮಾ ಮಾಡಲು ಬಂದಿಲ್ಲ ಎಂದರು. ಮಂಡ್ಯದಲ್ಲಿ ಪುಣ್ಯತ್ಮರು 7 ಕ್ಕೆ 7 ಗೆಲ್ಲಿಸಿದ್ದೀರಿ.ನಿಮ್ಮ ಋಣ ನನ್ನ ಮೇಲಿದೆ, ನಿಮಗಾಗಿ ವಿಧಾನಸೌಧದ ಬಾಗಿಲು ಯಾವಾಗಲು ತೆರೆದಿರುತ್ತದೆ ನಾನು ಒಂದು ಪ್ರಾಂತ್ಯಕ್ಕೆ ಸಿಎಂ ಅಲ್ಲ 30 ಜಿಲ್ಲೆಯ ರೈತರನ್ನ ಉಳಿಸುವುದು ನನ್ನ ಕರ್ತವ್ಯ ನನಗೆ ಸಮಯ ಕೊಡಿ ನಿಮ್ಮನ್ನ ಉಳಿಸುತ್ತೇನೆ. ನಾನು ಹೆದರೋದು, ಗೌರವ ಕೊಡೋದು ನಿಮಗೆ ಮಾತ್ರ, ಬೇರ್ಯಾರಿಗೂ ಇಲ್ಲ, ನನಗೆ ಬೆಂಬಲಕೊಟ್ಟ ಮಾಧ್ಯಮದವರಿಗೆ ನನ್ನ ಕೃತಜ್ಞತೆ ಎಂದರು.ನಾನು ನಿಮ್ಮ ಸಹೋದರ, ನನಗೆ ಅವಕಾಶ ಕೊಡಿ ಎಂದರು. ಕಾರ್ಯಕ್ರಮದಲ್ಲಿ ಸಚಿವರು,ಶಾಸಕರು ಹಾಗೂ ನೂರಾರು ರೈತರು ಹಾಜರಿದ್ದರು.