ಅಕ್ಕಿಹೆಬ್ಬಾಳು ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಸಮಗ್ರ ಕೃಷಿ ಅಭಿಯಾನ
ಅಕ್ಕಿಹೆಬ್ಬಾಳು ಹೋಬಳಿಯ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಸಮಗ್ರ ಕೃಷಿ ಅಭಿಯಾನ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ನಡೆದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಲ್.ದೇವರಾಜು ಚಾಲನೆ ನೀಡಿದರು.ಬಳಿಕ ಮಾತನಾಡಿದ ದೇವರಾಜು ಅವರು ರೈತರು ತಮ್ಮ ಭೂಮಿಯ ಮಣ್ಣನ್ನು ತಪ್ಪದೇ ಪರೀಕ್ಷೆ ಮಾಡಿಸಿ ಕೊಳ್ಳಬೇಕು. ಮಣ್ಣಿನ ಗುಣಕ್ಕೆ ತಕ್ಕಂತೆ ಬೆಳೆಗಳನ್ನು ಭಿತ್ತನೆ ಮಾಡಬೇಕು. ರಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕು. ಸಾವಯವ ಬೇಸಾಯ ಮಾಡುವ ಮೂಲಕ ಮಣ್ಣಿನ ಆರೋಗ್ಯವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ಹೋಗಿ ರೈತರಿಗೆ ಮಾಹಿತಿ ನೀಡಬೇಕು ಎಂದು ದೇವರಾಜು ಸಲಹೆ ನೀಡಿದರು.
ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ನಿಂಗೇಗೌಡ, ವಿನೂತಸುರೇಶ ಸತ್ಯಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ, ಉಪಾಧ್ಯಕ್ಷ ಎ.ಜೆ.ಕುಮಾರ್, ಕೃಷಿ ವಿಜ್ಞಾನಿಗಳಾದ ಡಾ.ಪ್ರವೀಣ್, ಡಾ.ಶ್ರೀನಿವಾಸ್ ಶೆಟ್ಟಿ, ಕೃಷಿಕ ಸಮಾಜದ ನಿರ್ದೇಶಕರಾದ ಎ.ಆರ್.ರಘು, ರಾಮಸ್ವಾಮಿ, ಲಕ್ಷ್ಮೇಗೌಡ, ಪ್ರಗತಿಪರ ರೈತರಾದ ನಾಗರಾಜು, ತಿಮ್ಮೇಗೌಡ, ಕೃಷಿ ಅಧಿಕಾರಿಗಳಾದ ಆನಂದ್ ಕುಮಾರ್, ಶ್ರೀಧರ್, ನಾಗರಾಜು, ಮಾನಸ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜೆ.ಸಿ.ಬಿ ಯಂತ್ರದ ಮೇಲೆ ಬಂಡೆ ಕುಸಿದು ವ್ಯಕ್ತಿ ಸಾವು
ದೇವರಹಿಪ್ಪರಗಿ ಬಳಿ ಜೆ.ಸಿ.ಬಿ ಯಂತ್ರದ ಮೇಲೆ ಬಂಡೆ ಕುಸಿದು ವ್ಯಕ್ತಿ ಸಾವು
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಬಳಿ ಇರುವ ಪಡಗಾನೂರ ಗ್ರಾಮದ ವ್ಯಾಪ್ತಿಯ ಬಳಿ ಗಣಿಯಲ್ಲಿ ಕಲ್ಲು ತೆಗೆಯುವ ಸಂದರ್ಭದಲ್ಲಿ ಬಂಡೆಯೊಂದು ಉರುಳಿ ಜೆ ಸಿ ಬಿ ಯಂತ್ರದ ಮೇಲೆ ಬಿದ್ದು ಕಾರ್ಮಿಕ ಸ್ಥಳದಲ್ಲಿಯೇ ಸಾವು.ಕಲ್ಲು ತೆಗೆಯುವ ಸಂದರ್ಭದಲ್ಲಿ ಪಕ್ಕದಲ್ಲಿ ಇದ್ದ ದೊಡ್ಡ ಬಂಡೆಯೊಂದು ಕುಸಿದ ಪರಿಣಾಮವಾಗಿ ಯಂತ್ರ ಸಂಪೂರ್ಣ ನುಜ್ಜುಗುಜ್ಜಾಗಿದೆ .ಚಾಲಕ ಯಂತ್ರ ದಲ್ಲೇ ಸಿಕ್ಕಿ ಜಾರ್ಖಂಡ್ ರಾಜ್ಯದ ಹಜಾರಿಭಾಗ ಜಿಲ್ಲೆಯ ಕೆಂದವಾಡಿ ಗ್ರಾಮದ ಚೇತಲಾಲ ಶನಿಛರ ಮಾತೋ (24) ಎಂಬ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ದೇವರಹಿಪ್ಪರಗಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ರಾಜಕೀಯ ನಿವೃತ್ತಿ ಘೋಷಿಸಿದ ಕಾಗೋಡು ತಿಮ್ಮಪ್ಪ
ವಯಸ್ಸಾದ ಕಾರಣ ರಾಜಕೀಯ ನಿವೃತ್ತಿ ಘೋಷಣೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ
ಬೆಂಗಳೂರು : ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಜುಲೈ 31ರಂದು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮಂಗಳವಾರದಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕೀಯ ಇಷ್ಟು ವರ್ಷ ಹೋರಾಟ ಮಾಡಿ ಸಾಕಾಗಿದೆ. ಹಾಗೂ ಈಗ ನನಗೆ ವಯಸ್ಸಾಗಿದೆ. ಇನ್ಮುಂದೆ ಹೋರಾಟ ಮಾಡಲು ಸಾಧ್ಯವಿಲ್ಲ ಹಾಗಾಗಿ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಶ್ರವಣಬೆಳಗೊಳ ಹೆಸರಿಗೆ ಮಾತ್ರವೇ ಪ್ಲಾಸ್ಟಿಕ್ ಮುಕ್ತ ಎಲ್ಲಿ ನೊಡಿದ್ದರು ಬರಿ ಕಸ ಮತ್ತು ಪ್ಲಾಸ್ಟಿಕ್ ತ್ಯಾಜ್ಯ
ಕಾಮಗಾರಿಗಳ ಬಿಲ್ ಪಾವತಿಸಲು ಆಗ್ರಹಿಸಿ ರೈತಸಂಘ ಕಾರ್ಯಕರ್ತರಿಂದ ಪ್ರತಿಭಟನೆ.
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಪ್ರತಿಭಟನೆ.
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ತಾಲ್ಲೂಕು ಕಛೇರಿ ಬಳಿ ಪ್ರತಿಭಟನೆ..
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲ್ಲೂಕು ಕಛೇರಿ ಬಳಿ ಪ್ರತಿಭಟನೆ ಮಾಡಲಾಯಿತು.ಅಧಿಕಾರಿಗಳು ರೈತರಿಗೆ ಮತ್ತು ಜನಸಾಮಾನ್ಯರಿಗೆ ಕೆಲಸಮಾಡಿ ಕೊಡಲು ಉಡಾಪೆ ಉತ್ತರ ನೀಡಿ ನಿರ್ಲಕ್ಷ್ಯ ಮಾಡುತ್ತಾರೆ.ಮತ್ತು ತಾಲ್ಲೂಕು ಅಪೀಸ್ ಬಳಿ ಕುಡಿಯುವ ನೀರಿನ ಮತ್ತು ಶೌಚಾಲಯ ದ ವ್ಯವಸ್ಥೆ ಇಲ್ಲಾ.ಯಾವಾಗಲೂ ಅಧಿಕಾರಿಗಳು ಪಟ್ಟಣದಲ್ಲಿ ಇದ್ದು ರೈತರು ದಿನನಿತ್ಯ ಅವರನ್ನು ಭೇಟಿಯಾಗಲು ಹರಸಾಹಸ ಪಡಬೇಕಿದೆ.ಗ್ರಾಮಲೆಕ್ಕಿಗರು ಮತ್ತು ರಾಜ್ಯ ಸ್ವಾನಿರಿಕ್ಷರು ಯಾವಾಗಲೂ ಸ್ಥಳೀಯ ಕಛೇರಿ ಬಿಟ್ಟು ಪಟ್ಟಣದಲ್ಲಿ ಇರುತ್ತಾರೆ.
ಹೆಸರಿಗೆ ಮಾತ್ರವೇ ಸೀಮಿತ ಸಕಾಲ ಎಲ್ಲಾ ಕೆಲಸಕ್ಕೆ ಬೇಕು ಹಣದ ಬಲ.ಅರ್ ಟಿ ಸಿ ಪಡೆಯಲು ಬೆಳ್ಳಿಗೆ ಬಂದರೆ ಸಂಜೆಯಾಗುತ್ತೆ ,ಭೂಮಾಪನ ಇಲಾಖೆಯಲ್ಲಿ ಕೆಲಸ ಮಾಡಿಸಲು ಹರಸಾಹಸ ಪಡಬೇಕು .ಆಹಾರ ಮತ್ತು ಚುನಾವಣಾ ಆಫೀಸ್ಗಳಲ್ಲಿ ಇರುವ ಕಂಪ್ಯೂಟರ್ ಆಪರೇಟರ್ ಗಳು ಕರೆಂಟ್ ಇಲ್ಲಾ ,ಸರ್ವರ್ ಇಲ್ಲಾ ಎಂದು ರೈತರಿಗೆ ಮತ್ತು ಜನಸಾಮಾನ್ಯರಿಗೆ ಅವಾಜ್ ಹಾಕುತ್ತಾರೆ ಎಂದು ಆರೋಪಿಸಿದರು.
ಈ ಕೂಡಲೆ ಮೇಲ್ಕಂಡ ವಿಷಯಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು..
ಪ್ರತಿಭಟನೆಯಲ್ಲಿ ಕರವೇ ತಾಲೂಕು ಅಧ್ಯಕ್ಷ ವೇಣು, ಉಪಾಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಟೆಂಪೋ ಶ್ರೀನಿವಾಸ್,ಮುಖಂಡರಾದ ಭರತ್,ಚಿಕ್ಕೋನಹಳ್ಳಿ ಚೇತನ್ ಸೇರಿದಂತೆ ಹಲವರಿದ್ದರು.