ಮಳವಳ್ಳಿ: ರಾಜ್ಯದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುತ್ತಿರುವ ಹಿನ್ನಲೆಯಲ್ಲಿ

ಮಳವಳ್ಳಿ: ರಾಜ್ಯದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುತ್ತಿರುವ ಹಿನ್ನಲೆಯಲ್ಲಿ ಮಳವಳ್ಳಿ ತಾಲ್ಲೂಕಿನ ಮತದಾರರು ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ತಹಸೀಲ್ದಾರ್ ಚಂದ್ರಮೌಳಿ ತಿಳಿಸಿದರು.

ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿಕಚೇರಿ ಮುಂಭಾಗದಲ್ಲಿ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮದ ಅರಿವು ಜಾಥ ವನ್ನು ಚಾಲನೆ ನೀಡಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ಕೈ ಬಿಟ್ಟಿದ್ದು, ಅಥವಾ ಹೊಸದಾಗಿ ಸೇರ್ಪಡೆ, ತಿದ್ದುಪಡಿಗಳು ಇದ್ದರೆ ಅದನ್ನು ಪರಿಶೀಲನೆಗೆ ಅರ್ಜಿಯನ್ನು ಸಲ್ಲಿಸಲು ಒಂದು ತಿಂಗಳ ಕಾಲ ಕಾಲಾವಕಾಶವಿದ್ದು, ಇದಲ್ಲದೆ ಬಿಎಲ್ ಓ ಗಳು ಮನೆಮನೆಗೂ ಬೇಟಿ ನೀಡಲಿದ್ದು ಆ ಸಂದರ್ಭದಲ್ಲಿ ಮತದಾರರ ಪರಿಷ್ಕರಣೆ ನಡೆಯಲಿದ್ದು ಇದಕ್ಕೆ ತಾಲ್ಲೂಕಿನ ಎಲ್ಲಾ ಮತದಾರರು ಸಹಕಾರ ನೀಡಬೇಕೆಂದು ಮನವಿ ಮಾಡಿದರು . ಬಳಿಕ ಪಟ್ಟಣದ ಪ್ರಮುಖಬೀದಿಗಳಲ್ಲಿ ಮತದಾರ ಪರಿಷ್ಕರಣೆ ಬಗ್ಗೆ ಭೀತಿಪತ್ರ ಪ್ರದರ್ಶನ ನಡೆಸಿ ಜಾಥ ನಡೆಸಲಾಯಿತು.

ಇನ್ನೂ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಸತೀಸ್, ಶಿರಸ್ತೇದಾರ್ ಚನ್ನ ವೀರಭದ್ರಯ್ಯ,ಕುಮಾರ್, ಪುರಸಭೆ ಮುಖ್ಯಾಧಿಕಾರಿ ಗಂಗಾಧರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಸೇರಿದಂತೆ ತಾಲ್ಲೂಕಿನ ಗ್ರಾಮಲೆಕ್ಕಿಗರು, ರಾಜಸ್ಥ ನಿರೀಕ್ಷಕರು, ಪಿಡಿಒ, ಶಿಕ್ಷಕರವೃಂದ, ಪುರಸಭೆ ನೌಕರರು, ತಾಲ್ಲೂಕು ಕಚೇರಿಯ ಸಿಬ್ಬಂದಿಗಳು ಸೇರಿದಂತೆ ಮತ್ತಿತ್ತರರು ಇದ್ದರು.

Share this article

About Author

Super User
Leave a comment

Write your comments

Visitors Counter

222956
Today
Yesterday
This Week
This Month
Last Month
All days
138
163
301
6061
4244
222956

Your IP: 3.145.60.166
2024-04-29 08:04

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles