ಕೆ.ಆರ್.ಪೇಟೆ ತಾಲೂಕಿನ ಕ್ಯಾತನಹಳ್ಳಿ ರಸ್ತೆಯ ತಿರುವಿನಲ್ಲಿ ಗೂಡ್ಸ್ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಪರಿಣಾಮ ಪ್ರಯಾಣಿಸುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ನಾಗಮಂಗಲ ಟೌನಿನ ಅಮ್ಜಾದ್ ಖಾನ್(43) ಮೃತಪಟ್ಟ ವ್ಯಕ್ತಿ.
ಅಮ್ಜಾದ್ ಸೇರಿದಂತೆ ಮೂವರು ಮಡಕೆ ಕ್ಯಾತನಹಳ್ಳಿ ಗ್ರಾಮದ ಮಾವಿನ ತೋಟಕ್ಕೆ ಔಷಧಿ ಸಿಂಪರಣೆ ಮಾಡಲು ಕ್ಯಾತನಹಳ್ಳಿ ಮುಖ್ಯರಸ್ತೆಯ ಕೆರೆಯ ಏರಿಯ ತಿರುವಿನಲ್ಲಿ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಹೊಡೆದ ಪರಿಣಾಮ ಪ್ರಯಾಣಿಸುತ್ತಿದ್ದ ಅಮ್ಜಾದ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಸೇರಿದಂತೆ ಉಳಿದ ಮೂವರು ಪ್ರಯಾಣಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಮೃತ ದೇಹ ಪಟ್ಟಣದ ಸಕರ್ಾರಿ ಆಸ್ಪತ್ರೆಗೆ ರವಾನಿಸಲಾಗಿದೆ.