ಸಾಮೂಹಿಕ ಅನ್ನಸಂತರ್ಪಣೆ..ಸಾವಿರಾರು ಜನರು ಭಾಗಿ... ಕೃಷ್ಣರಾಜಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ಶ್ರೀರೇಣುಕಾ ಎಲ್ಲಮ್ಮದೇವಿ ದೇವಸ್ಥಾನದಲ್ಲಿ 12ನೇ ವರ್ಷದ ಪೂಜಾ ಮಹೋತ್ಸವ, ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮಗಳು ಸಡಗರ ಸಂಭ್ರಮದಿಂದ ನಡೆದವು...ಆರ್ಯ ಈಡಿಗ ಸಮಾಜದ ತಾಲೂಕು ಅಧ್ಯಕ್ಷ ಡಾ.ಸ್ವಾಮಿ, ಪ್ರಧಾನ ಕಾರ್ಯದರ್ಶಿ ಅನಂತು ಮುಖಂಡರಾದ ರಾಮಸ್ವಾಮಿ, ಚಿನಕುರಳಿ ನಾಗರಾಜು, ಪ್ರಕಾಶ,ನಂಜುಂಡ, ಮಂಜುನಾಥ್ ಮತ್ತಿತರರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು... ರಾಜ್ಯಪ್ರಶಸ್ತಿ ಪುರಸ್ಕೃತ ಜನಪದ ಗಾಯಕ ತಿಪಟೂರು ತಾಲೂಕಿನ ಬುಜಗೂರಿನ ಚೌಡಿಕೆ ಎಲ್ಲಯ್ಯ ಮತ್ತು ತಂಡದವರಿಂದ ದೇವಿಗೆ ಪ್ರಿಯವಾದ ಚೌಡಿಕೆ ಗೀತಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಾವಿರಾರು ಭಕ್ತಾಧಿಗಳು 12ನೇ ವರ್ಷದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಮೂಹಿಕ ಅನ್ನ ಸಂತರ್ಪಣೆಯಲ್ಲಿ ಪ್ರಸಾದ ಸ್ವೀಕರಿಸಿ ಎಲ್ಲಮ್ಮ ದೇವಿಯ ಕೃಪೆಗೆ ಪಾತ್ರರಾದರು...
Last modified on 08/03/2019