Print this page

ಲಕ್ಷ್ಮೀಪುರ ಗ್ರಾಮ ಪಂಚಾಯಿತಿಯ ಹೊಸ ಕಟ್ಟಡಕ್ಕಾಗಿ ಸದ್ಯಸರಿಂದ ಸಭೆಯಲ್ಲಿ ಆಗ್ರಹ.

 ಲಕ್ಷ್ಮೀಪುರ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಾಮಾನ್ಯ ಸಭೆ.ಹೊಸ ಕಟ್ಟಡ ಕ್ಕಾಗಿ ಸದಸ್ಯರು ಹಾಗೂ ಸಾರ್ವಜನಿಕರಿಂದ ಆಗ್ರಹ.

ಕೃಷ್ಣರಾಜಪೇಟೆ ತಾಲ್ಲೂಕಿನ‌ ಕಿಕ್ಕೇರಿ ಹೋಬಳಿಯ ಈ ಲಕ್ಷ್ಮೀಪುರ ಗ್ರಾಮ ಪಂಚಾಯಿತಿಗೆ ತೊಳಸಿ, ಮಾದಿಹಳ್ಳಿ, ಬಸವನಹಳ್ಳಿ, ಬೂವನಹಳ್ಳಿ ಮರಿನಹೊಸರು, ಊಗಿನಹಳ್ಳಿ, ಬಸವನಹಳ್ಳಿ ಗಂಗೇನಹಳ್ಳಿ, ವಡರಳ್ಳಿ, ಇನ್ನೂ ಅಲವು ಗ್ರಾಮಗಳು ಸೇರುತ್ತವೆ. ಗ್ರಾಮ ಪಂಚಾಯತಿಯಲ್ಲಿ ಒಟ್ಟು 16 ಸದಸ್ಯರು ಇದ್ದು  ಇಂದು ನಿಗದಿಯಾದ ಸಾಮಾನ್ಯ ಸಭೆಯಲ್ಲಿ ಕೂರಲು ಜಾಗವಿಲ್ಲದೆ ನಿಂತು ಸಭೆಯಲ್ಲಿ ಪಾಲ್ಗೊಂಡ ಸದಸ್ಯರು ಮಾತನಾಡಿ ಸಭೆಯಲ್ಲಿ ಕೂರಲು ಜಾಗವಿಲ್ಲದೆ ನಿಂತು ಸಭೆ ನೆಡೆಸುವ ಸಂದರ್ಭ ಎದುರಾಗಿದೆ.ಕೂಡಲೇ ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಎಂದು  ಪಂಚಾಯಿತಿ ಅಭಿವೃದ್ದಿ ಅಧಿಕಾರಿಗೆ ಮನವಿ ಮಾಡಿದರು.ಸಭೆಗೆ ಬಂದಿದ್ದಾ ಗ್ರಾಮಸ್ಥರು ಸದಸ್ಯರಿಗೆ ಜಾಗವಿಲ್ಲ ಇನ್ಯ ಸಾಮಾನ್ಯ ಜನಕ್ಕೆ ಜಾಗವಿನ್ನೆಲ್ಲಿ ಎಂಬ ಮಾತು ಕೇಳಿಬಂತು.

 

Share this article

About Author

Madhu