ತಾಲ್ಲೂಕು ಕಾರ್ಯನಿರತ ಪತ್ರಕರ್ತರು ಮತ್ತು ಪ್ರೆಸ್ ಕ್ಲಬ್ ವತಿಯಿಂದ ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರ ದಾಳಿಗೆ ಬಲಿಯಾದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ .
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರು ಮತ್ತು ಪ್ರೆಸ್ ಕ್ಲಬ್ ವತಿಯಿಂದ ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರ ದಾಳಿಗೆ ಬಲಿಯಾದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಿಸಿ. ನಂತರ ತಹಶೀಲ್ದಾರ್ ಕಛೇರಿಗೆ ತೆರಳಿ ದೇಶದ್ರೋಹಿಗಳಾದ ಉಗ್ರರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪತಹಶೀಲ್ದಾರ್ಮ ಹದೇವೇಗೌಡ, ಪತ್ರಕರ್ತರಾದ ಮಾಕವಳ್ಳಿರವಿ, ಸಿಂಕಸುರೇಶ್, ಕೆ.ಆರ್.ನೀಲಕಂಠ, ಹೆಚ್.ಬಿ.ಮಂಜುನಾಥ್, ಹೊಸಹೊಳಲು ರಾಜೇಶ್, ಸಯ್ಯದ್ ಖಲೀಲ್ ಸೇರಿದಂತೆ ರೈತಮುಖಂಡರು, ಪ್ರಗತಿಪರ ಚಿಂತಕರು ಉಪಸ್ಥಿತರಿದ್ದರು.