ಖಾಸಗಿ ಶಾಲೆಗಳ ಹಗಲು ದರೋಡೆ ಖಂಡಿಸಿ ಪ್ರತಿಭಟನೆ.

ಖಾಸಗಿ ಶಾಲೆಗಳು ನಿಗದಿತ ಶುಲ್ಕ ಕ್ಕಿಂತ ಹೆಚ್ಚು ಶುಲ್ಕವನ್ನು ವರ್ಷಪೂರ್ತಿ ವಸೂಲಿ ಮಾಡುತ್ತಿದ್ದಾರೆ. ಶೀಘ್ರವೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಮತ್ತು ತಾಲ್ಲೂಕು ಜಯಕರ್ನಾಟಕ  ಸಂಘಟನೆ ವತಿಯಿಂದ ಪ್ರತಿಭಟನೆ. 

ಮಳವಳ್ಳಿ: ಪಟ್ಟಣದಲ್ಲಿ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಯೋಗಣ್ಣ ನೇತೃತ್ವದಲ್ಲಿ ಖಾಸಗಿ ಶಾಲೆಗಳು ನಿಗದಿತ ಶುಲ್ಕ ಕ್ಕಿಂತ ಹೆಚ್ಚು ಶುಲ್ಕವನ್ನು ವರ್ಷಪೂರ್ತಿ ವಸೂಲಿ ಮಾಡುತ್ತಿದ್ದಾರೆ ಎಂದು ಜಿಲ್ಲಾ ಮತ್ತು ತಾಲ್ಲೂಕು ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಖಾಸಗಿ ಶಾಲೆಗಳು ವಿರುದ್ಧ ಘೋಷಣೆ ಕೂಗುತ್ತ ತಾಲ್ಲೂಕು  ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ತೆರಳಿ  ಕ್ಷೇತ್ರಾ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ನಂತರ ಯೋಗಣ್ಣ ಮಾತನಾಡಿ ಮಳವಳ್ಳಿ ತಾಲ್ಲೂಕಿನ ಎಲ್ಲಾ ಖಾಸಗಿ ಶಾಲೆಗಳಲ್ಲಿ  10 ತಿಂಗಳ ಶಾಲೆ ನಡೆದರೂ ವರ್ಷಪೂರ್ತಿವಿಡಿ ಹಣವನ್ನೂ ವಸೂಲಿ ಮಾಡುತ್ತಿದ್ದು ಜೊತೆಗೆ  ಶುಲ್ಕ ವಸೂಲಿ ಬಗ್ಗೆ ಪೋಷಕರಿಗೆ ಯಾವುದೇ  ಮಾಹಿತಿ ನೀಡದೆ ಪ್ರತಿ ತಿಂಗಳ  ನಿರ್ದಿಷ್ಟ ಶುಲ್ಕದ ಮಾಹಿತಿ ನೀಡದೆ ಸುಲಿಗೆ ಮಾಡುತ್ತಿದ್ದಾರೆ.ಎಂದು ಆರೋಪಿಸಿದರು. ಮನವಿ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ ಶಿವಲಿಂಗಯ್ಯ ಮಾತನಾಡಿ , ನಿಮ್ಮ ಮನವಿಯಲ್ಲಿರುವ ದೂರುಗಳನ್ನು  ಪರಿಶೀಲನೆ ನಡೆಸಿ  ಮುಂದಿನ ಶೈಕ್ಷಣಿಕ ವರ್ಷದಿಂದ. ಖಾಸಗಿ ಶಾಲೆಗಳಿಗೆ ಈ ಕೂಡಲೇ ನೋಟಿಸ್ ನೀಡುವುದಾಗಿ ಜೊತೆಗೆ  ಖಾಸಗಿ ಶಾಲೆಗಳ ಮುಖ್ಯ ಶಿಕ್ಷಕರ ಸಭೆ ಕರೆದು  ತಿಳಿಸಲಾಗುವುದು, ಮುಂದಿನ ವರ್ಷದಿಂದ ಪೋಷಕರಿಗೆ ಹೊರೆ ಆಗದಂತೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.

ನಂತರ  ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರಕ್ಕೆ ಜಯಕರ್ನಾಟಕ ಸಂಘಟನೆ  ಸಭೆಯನ್ನು ಕರೆದು ನೂತನ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಅನುಮತಿ ಪತ್ರಗಳನ್ನು ಜಿಲ್ಲಾಧ್ಯಕ್ಷ ಯೋಗಣ್ಣ ರವರು ನೀಡಿದರು. ಈ ಸಂದರ್ಭದಲ್ಲಿ  ತಾಲ್ಲೂಕು ಜಯಕರ್ನಾಟಕ ಸಂಘಟನೆ ಅಧ್ಯಕ್ಷ  ರಮೇಶ್,ತಾಲ್ಲೂಕು ಕಾರ್ಯಾದ್ಯಕ್ಷ ತೇಜೆಂದ್ರಕುಮಾರ್ ,ಜಿಲ್ಲಾ ಉಪಾಧ್ಯಕ್ಷ  ನಾಗೇಶ್, ಕಲ್ಲೇಶ್,ಜಯಶಂಕರೇಗೌಡ,  ಸೇರಿದಂತೆ ಮತ್ತಿತ್ತರು ಇದ್ದರು.

 

Share this article

About Author

Madhu
Leave a comment

Write your comments

Visitors Counter

224388
Today
Yesterday
This Week
This Month
Last Month
All days
35
372
1733
789
6704
224388

Your IP: 3.16.147.124
2024-05-03 06:27

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles