ಅಖಿಲ ಭಾರತ ವೀರಶೈವ ಮಹಾಸಭಾ ಮಳವಳ್ಳಿ ತಾಲ್ಲೂಕು ನೂತನ ಅಧ್ಯಕ್ಷರಾಗಿ ಕುಂದೂರುಮೂರ್ತಿ ಆಯ್ಕೆ.

ಮಳವಳ್ಳಿ ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಮಳವಳ್ಳಿ ತಾಲ್ಲೂಕು ಅಧ್ಯಕ್ಷರಾಗಿ ಕುಂದೂರುಮೂರ್ತಿರವರು  115    ಮತಗಳ ಅಂತರದಿಂದ ಗೆಲ್ಲುವ ಸಾಧಿಸಿದ್ದಾರೆ. 

 ಮಳವಳ್ಳಿ: ರಾಜ್ಯದ ಅಖಿಲಭಾರತ ವೀರಶೈವ ಮಹಾಸಭಾ ರಾಜ್ಯ ಸಮಿತಿಯೂ ತಾಲ್ಲೂಕು ಮಟ್ಟದ  ಅಧ್ಯಕ್ಷರು ಹಾಗೂ 20 ಕಾರ್ಯನಿರ್ವಾಹಕ ಸದಸ್ಯರ ಆಯ್ಕೆಗಾಗಿ  ಚುನಾವಣೆಯನ್ನು ಫೆಬ್ರವರಿ 10 ರಂದು ನಿಗಧಿ ಮಾಡಿದ್ದರು. ಈ ಹಿನ್ನಲೆಯಲ್ಲಿ   ಕಾರ್ಯನಿರ್ವಾಹಕ ಸದಸ್ಯರು ಅವಿರೋಧವಾಗಿ ಹೋಬಳಿವಾರು 20 ಸದಸ್ಯರನ್ನು ಆಯ್ಕೆ ಮಾಡಲಾಯಿತು  ಅಧ್ಯಕ್ಷರ ಆಯ್ಕೆಯಲ್ಲಿ  ಒಮ್ಮತ ಬಾರದ ಕಾರಣ. ಇಬ್ಬರ ನಡುವೆ ಸ್ಪರ್ಧೆ ಏರ್ಪಟ್ಟಿತು. ಈ ಚುನಾವಣೆಯೂ  ವೀರಶೈವ ಜನಾಂಗದ ಚುನಾವಣೆಯಾದರೂ ಕಾಂಗ್ರೆಸ್  ಹಾಗೂ ಜೆಡಿಎಸ್ ಪಕ್ಷ ವಾಗಿ ಮಾರ್ಪಾಡಾಗಿ ಸ್ಪರ್ದೆ ನಡೆಯಿತು  ಕಾಂಗ್ರೆಸ್‌ ಬೆಂಬಲಿತರಾಗಿ ಕುಂದೂರು ಮೂರ್ತಿ ಹಾಗೂ ಜೆಡಿಎಸ್ ಬೆಂಬಲಿತರಾಗಿ ಚಿಕ್ಕಮೂಲಗೂಡು ಪುಟ್ಟಬುದ್ದಿ ರವರು ಸ್ಪರ್ಧೆ ನಡೆಯಿತು.  ಅಂತೆಯೇ ಇಂದು ನಿಗಧಿಯಂತೆ ಚುನಾವಣೆ ನಡೆಯಿತು  ಒಟ್ಟು 875 ಸದಸ್ಯರಿದ್ದು ಬೆಳಿಗ್ಗೆ 8 ಗಂಟೆಯಿಂದಲೇ  ವಿಧಾನಸಭಾ ಚುನಾವಣಾ ರೀತಿ ಈ ಚುನಾವಣೆ ಬಿರುಸಿನಿಂದ  ಸರದಿ ಸಾಲಿನಲ್ಲಿ ನಿಂತು  ಸದಸ್ಯರು ಅದರಲ್ಲೂ ಬಿಜಿಪುರ ಹೊರಮಠದ ಚಂದ್ರಶೇಖರಸ್ವಾಮಿಜೀ, ಹಾಗೂ ಸರಗೂರು ಮಠದ ಶ್ರೀಬಸವರಾಜೇಂದ್ರಸ್ವಾಮಿಗಳ ಸಹ  ಮತದಾನ ಮಾಡಿದರು.ಕೊನೆಯಲ್ಲಿ 875 ಮತ ಗಳ ಪೈಕಿ  670 ಮಂದಿ ಮತ ಚಲಾಯಿಸಿದ್ದರು ಅದರಲ್ಲಿ 11 ಮತ ತಿರಸ್ಕಾರವಾಗಿದ್ದು ಉಳಿದ 659 ಮತಗಳಲ್ಲಿ  387 ಮತಗಳನ್ನು ಕುಂದೂರು ಮೂರ್ತಿ ಪಡೆದರೆ  ಚಿಕ್ಕಮೂಲಗೂಡು ಪುಟ್ಟಬುದ್ದಿ 272 ಮತಗಳನ್ನುಪಡೆದಿದ್ದು  ಕುಂದೂರುಮೂರ್ತಿ ರವರು 115 ಮತಗಳ ಅಂತರದಿಂದ ಗೆಲವು ಸಾಧಿಸಿದರು.ಗೆಲುವು ಸಾಧಿಸಿದ ಕುಂದೂರು ಮೂರ್ತಿಗೆ  ವೀರಶೈವ ಮುಖಂಡರುಗಳು  ಇದೇ ಸಂದರ್ಭದಲ್ಲಿ  ಅಭಿನಂದಿಸಿದರು.

Share this article

About Author

Madhu
Leave a comment

Write your comments

Visitors Counter

228203
Today
Yesterday
This Week
This Month
Last Month
All days
9
168
957
4604
6704
228203

Your IP: 3.129.92.57
2024-05-16 02:36

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles