Print this page

ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ.ಶಾಸಕ ನಾರಾಯಣಗೌಡ

ಶಿಕ್ಷಣ ಜ್ಞಾನದ ಬೆಳಕಿನ ಶಕ್ತಿ ಶಿಕ್ಷಣಕ್ಕೆ ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ಶಕ್ತಿಯಿದೆ.ಕ್ಷೇತ್ರದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತು.ಶಾಸಕ ಡಾ.ನಾರಾಯಣಗೌಡ.

ಕೃಷ್ಣರಾಜಪೇಟೆ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲ ಡಾ.ಕೆ.ಕಾಳೇಗೌಡ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ನೂತನವಾಗಿ ನಿರ್ಮಿಸಿರುವ ಒಂದೂವರೆ ಕೋಟಿ ರೂ ವೆಚ್ಚದ ಹೈಟೆಕ್ ಶಾಲಾ ಕಟ್ಟಡವನ್ನು ಲೋಕಾರ್ಪಣೆ ಮಾಡಿ ನಂತರ ಕಾಲೇಜಿನ ವಾರ್ಷಿಕ ವಿಶೇಷ ಸಂಚಿಕೆ ಮಲ್ಲಿಗೆಸಿರಿ ಬಿಡುಗಡೆ ಮಾಡಿದ ಶಾಸಕ ನಾರಾಯಣಗೌಡರು. ನಂತರ ಮಾತನಾಡಿ ಗ್ರಾಮೀಣ ಪ್ರದೇಶದ ಮಕ್ಕಳು ಕಡ್ಡಾಯವಾಗಿ ವಿದ್ಯಾವಂತರಾಗಬೇಕು.ಶಿಕ್ಷಣಕ್ಕೆ ಸಾಮಾಜಿಕ ಅಸಮಾನತೆಗಳನ್ನು ಹೊಡೆದೋಡಿಸಿ ಸಮಾನತೆಯ ಸಮಾಜ ನಿರ್ಮಾಣ ಮಾಡುವ ಶಕ್ತಿಯಿಂದ. ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ. ಕ್ಷೇತ್ರದ ಶಾಸಕನಾಗಿ ತಾಲೂಕಿನಲ್ಲಿ ಗುಣಾತ್ಮಕ ಶಿಕ್ಷಣದ ಅನುಷ್ಠಾನಕ್ಕೆ ಒತ್ತು ನೀಡಿದ್ದೇನೆ. ಮಕ್ಕಳು ಶ್ರದ್ಧೆ ಹಾಗೂ ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ ಗುರಿಸಾಧನೆಯತ್ತ ಹೆಜ್ಜೆ ಹಾಕಬೇಕು ಎಂದು.ಶಾಸಕ ನಾರಾಯಣಗೌಡ ಕರೆ ನೀಡಿದರು.

ಜಿಲ್ಲಾ ಪಂಚಾಯತ ಎಂಜಿನಿಯರ್ ಉಪವಿಭಾಗದ ಎಇಇ ಬಸವರಾಜು, ಪ್ರಥಮದರ್ಜೆ ಗುತ್ತಿಗೆದಾರ ಅರಳಕುಪ್ಪೆ ಮೋಹನ್, ಜಿ.ಪಂ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಾ.ಎಸ್.ಕೃಷ್ಣಮೂರ್ತಿ, ಸದಸ್ಯರಾದ ಡಾ.ಕೆ.ಎಸ್.ರಾಜೇಶ್, ಅಗ್ರಹಾರಬಾಚಹಳ್ಳಿ ನಾಗೇಶ್, ಕಾಲೇಜಿನ ಹಿರಿಯ ಉಪನ್ಯಾಸಕರಾದ ಕರೀಗೌಡ, ಮಧುಕರ್, ಅನುರಾಧ, ಚಂದ್ರಶೇಖರ್, ಸತ್ಯನಾರಾಯಣ, ಗ್ರಂಥಪಾಲಕ ಶಂಭೂ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.


 

 

Share this article

About Author

Madhu