ಸಾಲಬಾಧೆ ತಾಳಲಾರದೇ ದಂಪತಿ ನೇಣಿಗೆ ಶರಣು.!!

ಸಾಲಬಾಧೆ ತಾಳಲಾರದೇ 3 ವರ್ಷದ ಹಿಂದೆ ಮದ್ವೆಯಾಗಿದ್ದ ಜೋಡಿ ನೇಣಿಗೆ ಶರಣು

ಮದ್ದೂರು : ಸಾಲಬಾಧೆ ತಾಳಲಾರದೇ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಮೆಳ್ಳಹಳ್ಳಿ ಗ್ರಾಮದಲ್ಲಿ ನಡೆದಿದೆ.ನಾಗರಾಜು(28) ಮತ್ತು ಮಂಜುಳ(24) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೂರು ವರ್ಷಗಳ ಹಿಂದೆ ನಾಗರಾಜು ಮತ್ತು ಮಂಜುಳ ಮದುವೆಯಾಗಿತ್ತು. ಈ ದಂಪತಿಗೆ ಒಂದು ಗಂಡು ಮಗು ಕೂಡ ಇದೆ. ಆದರೆ ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ.

ದಂಪತಿಗೆ ಸುಮಾರು 1.5 ಲಕ್ಷ ರೂ. ಸಾಲ ಇತ್ತು ಎಂದು ತಿಳಿದು ಬಂದಿದೆ. ಹೀಗಾಗಿ ಸಾಲಗಾರರ ಕಿರುಕುಳದಿಂದ ಬೇಸತ್ತು ನಾಗರಾಜು ಮತ್ತು ಮಂಜುಳ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this article

About Author

Madhu
Leave a comment

Write your comments

Visitors Counter

221981
Today
Yesterday
This Week
This Month
Last Month
All days
18
328
1236
5086
4244
221981

Your IP: 3.133.119.66
2024-04-25 06:05

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles