ಮೇಲುಕೋಟೆ ಚಲುವನಾರಾಯಣ ಸ್ವಾಮಿಗೆ ಪೂಜೆ ಸಲ್ಲಿಸಿ ಸುಮಲತಾ ಅಂಬರೀಶ್ ಅಬ್ಬರದ ಪ್ರಚಾರ.
ಹೌದು, ಪಾಂಡವಪುರ ತಾಲೂಕಿನ ಮೇಲುಕೋಟೆಗೆ ತಮ್ಮ ಬೆಂಬಲಿಗರ ಜೊತೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಸುತ್ತಮುತ್ತಲ ಗ್ರಾಮಗಳಲ್ಲಿ ಪ್ರಚಾರ ಮಾಡಿದರು. ತೆರೆದ ವಾಹನದಲ್ಲಿ ರೋಡ್ ಶೋ ಮಾಡಿದ ಸುಮಲತಾ, ಮೇಲುಕೋಟೆ ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂಚಾರ ಮಾಡಿದರು. ಇದೇ ಸಂದರ್ಭದಲ್ಲಿ ಮೇಲುಕೋಟೆ ಗ್ರಾಮಸ್ಥರು ಸುಮಲತಾ ಅಂಬರೀಶ್ಗೆ ಗೌರವ ಪೂರ್ವಕವಾಗಿ ಸನ್ಮಾನ ಮಾಡಿದರು.ನಂತರ ಮಾತನಾಡಿದ ಅವರು, ಸ್ಪರ್ಧೆಯ ದಿನಾಂಕವನ್ನು ಮಾರ್ಚ್ 18ರಂದು ಹೇಳುತ್ತೇನೆ. ಕೈ ಪಕ್ಷ ನನಗೆ ಮೋಸ ಮಾಡ್ತಿಲ್ಲ, ಪಕ್ಷಕ್ಕೆ ಮೋಸ ಆಗ್ತಿದೆ. ಕಾರ್ಯಕರ್ತರಿಗೆ ಮೋಸ ಆಗ್ತಿದೆ ಎಂದರು. ನಾನು ಎಂದು ಕೈ ಮುಖಂಡರು ಇಲ್ಲದಿದ್ರು ಒಂಟಿ ಅಲ್ಲ. ನನ್ನ ಜೊತೆ ಜನ ಇದ್ದಾರೆ. ಅಂಬಿ ಸಂಪಾದನೆ ಮಾಡಿದ ಈ ಜನರನ್ನು ನಂಬಿಕೊಂಡು ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದರು.