Print this page

ಮಳವಳ್ಳಿತಾಲ್ಲೂಕಿನಲ್ಲಿ ಬಸವಜಯಂತಿಯನ್ನು ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.

ಮಳವಳ್ಳಿತಾಲ್ಲೂಕಿನ ವಿವಿದ ಗ್ರಾಮಗಳಲ್ಲಿ ಬಸವಜಯಂತಿಯನ್ನು ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.

ಮಳವಳ್ಳಿ: ಕಾಯಕಯೋಗಿ ಕ್ರಾಂತಿಕಾರ ಜಗಜ್ಯೋತಿ ಶ್ರೀ ಬಸವೇಶ್ವರ ರವರ ಜಯಂತಿ ಕಾರ್ಯಕ್ರಮ ಹಲವು ಸಂಘಟನೆ ಗಳು , ವೀರಶೈವ ಲಿಂಗಾಯತ ಸಮುದಾಯದವರು ಸೇರಿದಂತೆ  ಮಳವಳ್ಳಿತಾಲ್ಲೂಕಿನ ವಿವಿದ ಗ್ರಾಮಗಳಲ್ಲಿ ಬಸವಜಯಂತಿಯನ್ನು ಅದ್ದೂರಿ ಹಾಗೂ ವಿಜೃಂಭಣೆಯಿಂದ. ಆಚರಣೆ ಮಾಡಲಾಯಿತು. ಮಳವಳ್ಳಿ ಪಟ್ಟಣದ ಆದರ್ಶ ಕಾನ್ವೆಂಟ್ ರಸ್ತೆಯಲ್ಲಿರುವ ಶ್ರೀಬಸವೇಶ್ವರ ವೃತ್ತದಲ್ಲಿ ಬಸವಣ್ಣರವರ ಭಾವಚಿತ್ರ ವಿಟ್ಟು ಪೂಜೆ ಸಲ್ಲಿಸಿ ನಂತರ  ಗಿಡಗಳನ್ನು ವಿತರಣೆ ಮೂಲಕ ಸಾಲುಮರನಾಗರಾಜು ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೀರಶೈವ ಮುಖಂಡರು , ಮಾಜಿ ಪುರಸಭೆ ಸದಸ್ಯರು ಸೇರಿದಂತೆ ಹಲವರು ಇದ್ದರು.

ಇನ್ನೂ ಶ್ರೀ ಬಸವೇಶ್ವರ ಎಜುಕೇಶನ್ ಅಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ತಮ್ಕ ಕಚೇರಿಯಲ್ಲಿ ಬಸವಣ್ಣರವರ ಭಾವಚಿತ್ರಕ್ಕೆ ಹಾರ ಹಾಕಿ ಪೂಜೆ ಸಲ್ಲಿಸುವ ಮೂಲಕ ಬಸವ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ನಂಜುಂಡಸ್ವಾಮಿ. ಉಪಾಧ್ಯಕ್ಷ ಲೋಕೇಶ್ , ಕಾರ್ಯದರ್ಶಿ ರಾಜೇಶ್ , ಖಜಾಂಚಿ ಮಹೇಶ್, ನಾಗೇಂದ್ರ ಸೇರಿದಂತೆ ಮತ್ತಿತ್ತರರು ಇದ್ದರು ಇನ್ನೂ ತಾಲ್ಲೂಕು ವೀರಶೈವ ಯುವ ಬಳಗದವತಿಯಿಂದ. ಬಸವಣ್ಣರವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಅಚರಿಸಲಾಯಿತು.

Share this article

About Author

Madhu

Media