Print this page

ನಾನು ಗೆದ್ದಾಗಿದೆ ಅಧಿಕೃತವಾಗಿ ಘೋಷಣೆಯಾಗಬೇಕಷ್ಟೇ...ನಿಖಿಲ್ ಕುಮಾರಸ್ವಾಮಿ

 ಚುನಾವಣೆಯಲ್ಲಿ ನಾನು ಗೆದ್ದಾಗಿದೆ. ನನಗೆ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ.ನನ್ನ ಜನರು ಮತ್ತು ಕಾರ್ಯಕರ್ತರ ಮೇಲೆ ನನಗೆ ವಿಶ್ವಾಸವಿದೆ.ಕನಿಷ್ಠ 2ಲಕ್ಷ ಮತಗಳ ಅಂತರದಲ್ಲಿ ನಾನು ಗೆದ್ದಾಗಿದೆ.ಅಧಿಕೃತವಾಗಿ ಘೋಷಣೆಯಾಗಬೇಕಷ್ಟೇ ನಿಖಿಲ್ ವಿಶ್ವಾಸ.

ಕೆ.ಆರ್.ಪೇಟೆ: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕೆ.ಆರ್.ಪೇಟೆ ಪುರಸಭೆ ಚುನಾವಣೆಯ ಆಕಾಂಕ್ಷಿಗಳ ಸಮಾಲೋಚನಾ ಸಭೆಯಲ್ಲಿ ಭಾಗಿ.ಮಂಡ್ಯದಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ನಿಖಿಲ್.ಚಲುವರಾಯಸ್ವಾಮಿ ಹಿರಿಯರಿದ್ದಾರೆ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ನಾನು.ಅವರು ಮೈತ್ರಿಧರ್ಮ ಪಾಲಿಸಿದ್ದಾರೆ ಎನ್ನುವ ವಿಶ್ವಾಸವಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದಂತೆ ಕನಿಷ್ಠ 2ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ನಿಖಿಲ್...ಮಂಡ್ಯದಲ್ಲಿ ಬಾಡಿಗೆ ಮನೆ ಮಾಡಲ್ಲ.ಸ್ವಂತ ತೋಟ, ಮನೆ ಮಾಡ್ತೀನಿ.ಹುಡುಕಾಟದಲ್ಲಿದ್ದೇನೆ.ತೋಟ ಕೊಂಡ ನಂತರ ಸ್ವಂತ ಮನೆಯ ಕೆಲಸ ಆರಂಬಿಸುತ್ತೇನೆ.ಸೋಲು ಗೆಲುವನ್ನು ಸಮಾನಾಗಿ ಸ್ವೀಕರಿಸುತ್ತೇನೆ. ನನ್ನ ಗೆಲುವು ನಿಶ್ಚಿತವಾಗಿದೆ. ಉರಿ ಬಿಸಿಲಿನಲ್ಲಿಯೂ ನನ್ನ ಗೆಲುವಿಗಾಗಿ ದುಡಿದ ಕಾರ್ಯಕರ್ತರಿಗೆ ಋಣಿಯಾಗಿರುತ್ತೇನೆ.ಅವರಿಗೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ನಿಖಿಲ್ ಹೇಳಿದರು.ಶಾಸಕ ನಾರಾಯಣಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಉದಯಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Share this article

About Author

Madhu