ಸಾಲದ ಬಾಧೆ ತಾಳಲಾರದೆ ಕೆ.ಆರ್.ಪೇಟೆ ತಾಲೂಕಿನ ಮಾಂಬಳ್ಳಿ ಗ್ರಾಮದ ರೈತ

ಸಾಲದ ಬಾಧೆ ತಾಳಲಾರದೆ ಕೆ.ಆರ್.ಪೇಟೆ ತಾಲೂಕಿನ ಮಾಂಬಳ್ಳಿ ಗ್ರಾಮದ ರೈತ ಪ್ರಸನ್ನ ಪಟ್ಟಣದ ಎಪಿಎಂಸಿ ಆವರಣದಲ್ಲಿ ವಿಷಕುಡಿದು ಸಾವಿಗೆ ಶರಣು..

. ಕೃಷ್ಣರಾಜಪೇಟೆ ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಕುಮಾರ ಅವರ ಪುತ್ರ ಪ್ರಸನ್ನ(26)ಸಾಲದ ಬಾಧೆಯನ್ನು ತಾಳಲಾರದೆ ಕೆ.ಆರ್.ಪೇಟೆ ಪಟ್ಟಣದ ಎಪಿಎಂಸಿ ಆವರಣದ ಬಯಲಿನಲ್ಲಿ ನಿನ್ನೆ ತಡರಾತ್ರಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ... ಇಂದು ಬೆಳಿಗ್ಗೆ ಎಳನೀರು ವ್ಯಾಪಾರಿಗಳು ಎಪಿಎಂಸಿ ಕಾಂಪೌಂಡ್ ಒಳಗೆ ಮೃತ ದೇಹವನ್ನು ಗಮನಿಸಿ ಪೋಲಿಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಮೃತ ದೇಹವನ್ನು ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಎರಡು ಎಕರೆ ಕೃಷಿ ಭೂಮಿಯನ್ನು ಹೊಂದಿರುವ ಪ್ರಸನ್ನ ಕಬ್ಬನ್ನು ಬೆಳೆದಿದ್ದರು. ಮಾಂಬಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಎರಡು ಲಕ್ಷರೂ ಸಾಲ ಸೇರಿದಂತೆ ಎರಡು ಲಕ್ಷರೂ ಕೈ ಸಾಲವನ್ನು ಮಾಡಿದ್ದರು ಎನ್ನಲಾಗಿದೆ...ಸಾಲಗಾರರ ಕಾಟವು ಹೆಚ್ಚಾದ ಹಿನ್ನೆಲೆಯಲ್ಲಿ ಮನನೊಂದಿದ್ದ ಪ್ರಸನ್ನ ಕಷ್ಠಪಟ್ಟು ಬೆಳೆದಿದ್ದ ಕಬ್ಬಿನ ಬೆಳೆಯು ಒಣಗುತ್ತಿರುವ ಹಿನ್ನೆಲೆಯಲ್ಲಿ ಮನನೊಂದ ಪ್ರಸನ್ನ ವಿಷಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...ತಹಶೀಲ್ದಾರ್ ಎಂ.ಶಿವಮೂರ್ತಿ ಮತ್ತು ಮಾಜಿಶಾಸಕ ಡಾ.ಕೆ.ಬಿ.ಚಂದ್ರಶೇಖರ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಮೃತ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದರು...

Last modified on 08/03/2019

Share this article

About Author

Super User
Leave a comment

Write your comments

Visitors Counter

225022
Today
Yesterday
This Week
This Month
Last Month
All days
49
239
288
1423
6704
225022

Your IP: 18.117.182.179
2024-05-06 03:37

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles