ಮಂಡ್ಯದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

ಮಂಡ್ಯ: ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು

ಸ್ಥಳದಲ್ಲೇ ಸಾವಿಗೀಡಾದ ಘಟನೆ ಮದ್ದೂರು ತಾಲೂಕು ಗೆಜ್ಜಲಗೆರೆಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.ಮಂಡ್ಯದಲ್ಲಿ ಭೀಕರ ಅಪಘಾತಮೈಸೂರು ಕಡೆಗೆ ತೆರಳುತ್ತಿದ್ದ ಮಾರುತಿ ರಿಟ್ಜ್ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಮತ್ತೊಂದು ಪಥಕ್ಕೆ ಬಿದ್ದ ಪರಿಣಾಮ ಎದುರು ಬಂದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ರವಿ (31), ರವಿ ಪತ್ನಿ ಮಂಜುಳಾ (28) ಪುತ್ರ ಸಾಗರ್ (8) ಹಾಗೂ ಪುತ್ರಿ ಸುಕನ್ಯಾ (6) ಸಾವಿಗೀಡಾಗಿದ್ದಾರೆ.ಬೆಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಸ್ಥಳಕ್ಕೆ ಮದ್ದೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.ರವಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ಕೇಬಲ್ ಏಜೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಊರಿಗೆ ಬರುವಾಗ ಘಟನೆ ಸಂಭವಿಸಿದೆ.

Share this article

About Author

Super User
Leave a comment

Write your comments

Visitors Counter

289818
Today
Yesterday
This Week
This Month
Last Month
All days
74
166
1350
9260
3051
289818

Your IP: 3.147.46.129
2025-05-22 05:24

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles