ಗುಂಡಣ್ಣ ಲಲಿತಮ್ಮ ದಂಪತಿಗಳ ಕೊಲೆ ಆರೋಪಿ ಬಂಧನ...

ರಾಯಸಮುದ್ರ ಗ್ರಾಮದಲ್ಲಿ ಗುಂಡೇಗೌಡ ಲಲಿತಮ್ಮ ದಂಪತಿಗಳ   ಜೋಡಿಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ...  ಕೃಷ್ಣರಾಜಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ಗುಂಡಣ್ಣ ಲಲಿತಮ್ಮ ದಂಪತಿಗಳನ್ನು ಹತ್ಯೆಮಾಡಿ ತಲೆಮರೆಸಿಕೊಂಡಿದ್ದ ಪಕ್ಕದ ಮನೆಯ ವಾಸಿಯೇ ಆದ ಬೋರೇಗೌಡರ ಮಗ ಯೋಗೇಶನನ್ನು ಕೆ.ಆರ್.ಪೇಟೆ ಪೋಲಿಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲೆಗೆ ಮತ್ತು ಮುಖಕ್ಕೆ ಹೊಡೆದು ಹತ್ಯೆಮಾಡಿರುವುದಾಗಿ ಯೋಗೇಶ ಒಪ್ಪಿಕೊಂಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದರು‌. ಜೋಡಿಕೊಲೆ ಹತ್ಯೆ ಆರೋಪಿಯನ್ನು ಎಎಸ್ ಪಿ ಬಲರಾಮೇಗೌಡ, ಡಿವೈಎಸ್ ಪಿ ವಿಶ್ವನಾಥ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್, ಅಪರಾಧ ಪತ್ತೆ ಸಿಬ್ಬಂಧಿಗಳಾದ ಹೆಚ್.ಪ್ರಕಾಶ್, ಬಿ.ಎಸ್.ಚಂದ್ರಶೇಖರ್, ಬಸವರಾಜು, ಪ್ರಶಾಂತಕುಮಾರ್, ರಘು, ಗುರುಪ್ರಸಾದ್, ಚಾಲಕರಾದ ಮಂಜುನಾಥ ಮತ್ತು ವಾಸು ಭಾಗವಹಿಸಿದ್ದರು. ಜೋಡಿಕೊಲೆ ಆರೋಪಿಯನ್ನು ಪತ್ತೆಹಚ್ಚಿದ ಕೆ.ಆರ್.ಪೇಟೆ ಪೋಲಿಸರ ತಂಡವನ್ನು ಎಸ್ ಪಿ ಶಿವಪ್ರಕಾಶ್ ದೇವರಾಜ್ ಅಭಿನಂದಿಸಿದ್ದಾರೆ...

Share this article

About Author

Super User
Leave a comment

Write your comments

Visitors Counter

222596
Today
Yesterday
This Week
This Month
Last Month
All days
74
308
1851
5701
4244
222596

Your IP: 18.188.152.162
2024-04-27 15:58

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles