ಮಂಡ್ಯ
ಕೆ.ಆರ್.ಪೇಟೆ ತಾಲ್ಲೂಕಿನ ಗೊರವಿ ಗ್ರಾಮದಲ್ಲಿ ನೆನ್ನೆ ದಾಳಿಮಾಡಿದ ಚಿರತೆ ಇಂದು ಸಹ ಅದೆ ಹಸುವನ್ನು ಎಳೆದುಕೊಂಡು ಹೋಗಿ ತಿಂದ ಘಟನೆ ನೆಡದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಗೊರವಿ ಗ್ರಾಮದಲ್ಲಿ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಹಸುವನ್ನು ತಿಂದ ಘಟನೆ ನೆನ್ನೆ ನಡೆದಿತ್ತು. ಅದರೆ ರಾತ್ರಿ ಕೂಡಾ ಚಿರತೆ ಅಲ್ಲೆ ಇದ್ದ ಹಸುವಿನ ದೇಹವನ್ನು ಸ್ವಲ್ಪ ದೂರ ಎಳೆದುಕೊಂಡು ಹೋಗಿ ನಂತರ ತಿಂದಿದೆ.
ನೆನ್ನೆ ಸಂಜೆ ವರೆಗೂ ಅಲ್ಲೆ ಕಾದುಕುಳಿತ್ತಿದ್ದ ಗ್ರಾಮಸ್ಥರು ಅರಣ್ಯದಿಕಾರಿಗಳು ಬಾರದ ಹಿನ್ನೆಲೆ ಮನೆಗೆ ತೆರಳಿದರು. ನಂತರ ಬೆಳ್ಳಿಗೆ ನೋಡಿದರೆ ಮತ್ತೆ ಚಿರತೆ ಹಸುವಿನ ದೇಹವನ್ನು ಸ್ವಲ್ಪ ದೂರ ಎಳೆದುಕೊಂಡು ಹೊಗಿ ನಂತರ ಕತ್ತಿನ ಭಾಗವನ್ನು ತಿಂದು ಹಾಕಿದೆ ಇದರಿಂದ ಗ್ರಾಮಸ್ಥರಲ್ಲಿ ಮತ್ತಷ್ಟು ಭಯ ಮನೆಮಾಡಿದೆ.
ಕೇವಲ ಬಂದು ನೋಡಿಕೊಂಡು ಹೊದ ಅಧಿಕಾರಿಗಳು ಚಿರತೆ ಹಿಡಿಯುವ ಯಾವುದೇ ಬೋನ್ ಕೂಡಾ ಅಳವಡಿಸಿಲ್ಲ ಕೇಳಿದರೆ ನಾಳೆ ಅಳವಡಿಸುತ್ತೆವೆ ಎಂದು ಉತ್ತರ ನೀಡುತ್ತಾರೆ.ಅದರೆ ಇಂದು ಹಸುವಿಗೆ ಹಾದ ಪರಿಸ್ಥಿತಿ ನಾಳೆ ಯಾರಾದರೂ ಗ್ರಾಮಸ್ಥರ ಅಥವಾ ಮಕ್ಕಳ ಮೇಲೆ ಚಿರತೆ ಅಲ್ಲೆ ಮಾಡಿದ್ದಾರೆ ಎನು ಗತಿ ಎಂದು ಗ್ರಾಮಸ್ಥರ ಭಯ ವ್ಯಕ್ತಪಡಿಸಿದ್ದಾರೆ.
ಕೂಡಲೆ ಚಿರತೆಯನ್ನು ಸೆರೆಹಿಡಿಯದಿದ್ದರೆ ತಾಲ್ಲೂಕಿನ ಅರಣ್ಯ ಇಲಾಖೆಯ ಕಛೇರಿಗೆ ಮುತ್ತಿಗೆ ಹಾಕುತ್ತವೆ ಎಂದು ಅಧಿಕಾರಿಗಳು ಮೇಲೆ ಅಕ್ರೊಸ ವ್ಯಕ್ತಪಡಿಸಿದ್ದಾರೆ.ಅಧಿಕಾರಿಗಳು ಇತ್ತ ಗಮನಹರಿಸುತ್ತಾರಾ ಕಾದು ನೋಡಬೇಕಿದೆ.
ಕೃಷಿ ಅಭಿಯಾನ ಅನುಷ್ಠಾನ ಸಮಿತಿ ಹಾಗೂ ಕೃಷಿ ಇಲಾಖೆ ವತಿಯಿಂದ ಸಮಗ್ರ ಕೃಷಿ ಅಭಿಯಾನ 2018 ಸಂಚಾರಿ ಮಾಹಿತಿಕೃಷಿರಥಕ್ಕೆ ಶಾಸಕ ಡಾ.ಕೆ ಅನ್ನದಾನಿ ಚಾಲನೆ ನೀಡಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಸಂಚಾರಿ ಮಾಹಿತಿ ಕೃಷಿರಥಕ್ಕೆ ಶಾಸಕ ಡಾ.ಕೆ ಅನ್ನದಾನಿ ಚಾಲನೆ ನೀಡಿ ನಂತರ ಮಾತನಾಡಿ, ರೈತರು ಬೆಳೆಯುವ ಬೆಳೆಗೆ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ ಅವರು, ಮುಖ್ಯಮಂತ್ರಿ ಕುಮಾರಣ್ಣ ರವರು ರೈತರ ಬಗ್ಗೆ ಅಪಾರ ಕಾಳಜಿವಿದ್ದು, ರೈತರಿಗಾಗಿ ಹಲವು ಯೋಜನೆಗಳನ್ನು ತರಲು ಹೊರಟಿದ್ದಾರೆ. ಈಗಾಗಲೇ ಕೃಷಿ ಬಗ್ಗೆ ರೈತರಿಗೆ ಸಂಪೂರ್ಣ ಮಾಹಿತಿ ತಲುಪಬೇಕು ಈ ನಿಟ್ಟಿನಲ್ಲಿ ರಥವನ್ನು ಗ್ರಾಮಗಳಿಗೆ ಬೇಟಿ ಕೃಷಿ ಸಂಬಂಧಿಸಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಅರಿವು ಮೂಡಿಸಲಾಗುವುದು ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳುವಂತೆ ತಿಳಿಸಿದರು.
ನಂತರ ಮಕ್ಕಳು ಕಳಸ ಹೊತ್ತು ಮೆರವಣಿಗೆ ಹಾಗೂ ಪೂಜಾ ಕುಣಿತದೊಂದಿಗೆ ಮೆರವಣಿಗೆ ನಡೆಸಲಾಯಿತು ಇದು ಪಟ್ಟಣದ ಮೂಲಕ ಬುಗತಹಳ್ಳಿ,ಟಿ ಕಾಗೇಪುರ, ನೆಲಮಾಕನಹಳ್ಳಿ, ನೆಲ್ಲೂರು ಮೂಲಕ ಮಾರೇಹಳ್ಳಿ, ವಾಸ್ತವ್ಯ ಹೂಡಲಿದೆ. ಈ ಬಾರಿ ಕಸಭಾ ರೈತರಿಗೆ ಎರಡು ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆ 8 ರಂದು ಎಪಿಎಂಸಿ ಆವರಣ ಹೋಬಳಿ ಮಟ್ಟದ ವೇದಿಕೆ ಕಾರ್ಯಕ್ರಮ ಮತ್ತು ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಸಲಾಗುವುದು ತಾಲ್ಲೂಕಿನ ಎಲ್ಲಾ ರೈತರು ಆಗಮಿಸುವಂತೆ ಶಾಸಕರು ಮನವಿಮಾಡಿಕೊಂಡರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್. ಎನ್ ವಿಶ್ವಾಸ್, ಸದಸ್ಯ ನಟೇಶ್, ಜಿ.ಪಂ ಸದಸ್ಯ ಹಾಗೂ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ರವಿ, ತಹಸೀಲ್ದಾರ್ ದಿನೇಶ್ ಚಂದ್, ತಾಲ್ಲೂಕು ಪಂಚಾಯಿತಿ ಇಒ ಸತೀಶ್ ,ಕೃಷಿ ಸಹಾಯ ನಿರ್ದೇಶಕ ಪರಮೇಶ್, ಅಧಿಕಾರಿ ರಮೇಶ್, ಸೇರಿದಂತೆ ಮತ್ತಿತ್ತರರು ಇದ್ದರು.
ಸಮಾಜ ಸೇವಕ ಹೆಚ್ ಬಿ ಮಂಜುನಾಥ್ ಮತ್ತು ಜಯ ಕರ್ನಾಟಕ, ಅಟೊ ಚಾಲಕರು ಮತ್ತು ಇನ್ನಿತರ ಸಂಘಟನೆಗಳಿಂದ ಪ್ರತಿಭಟನೆ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಶತಮಾನದ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸಮಾಜ ಸೇವಕ ಹೆಚ್ ಬಿ ಮಂಜುನಾಥ್ ಮತ್ತು ಜಯ ಕರ್ನಾಟಕ, ಅಟೊ ಚಾಲಕರು ಮತ್ತು ಇನ್ನಿತರ ಸಂಘಟನೆ ಮತ್ತು ಸಂಘಟನೆಗಳಿಂದ ಪ್ರತಿಭಟನೆ .ಒಂದೇ ಕಾಮಗಾರಿ ಎರಡು ಕಡೆಗಳಿಂದ ಹಣ ಬಿಡುಗಡೆ ಮಾಡಿರುವ ಆರೋಪ.ಮಕ್ಕಳ ಪೋಷಕರಿಂದ ಸಹ ಹಣ ವಸೂಲಿ ಮಾಡಿರುವ ಆರೋಪ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿ ಹಣ ದುರುಪಯೋಗ ಮಾಡಿದ್ದಾರೆ ಎಂದು ಆರೋಪ.ಒಟ್ಟು ಐದು ಲಕ್ಷದ ಐವತ್ತು ಸಾವಿರ ರೂಪಾಯಿ ದುರ್ಬಳಕೆ ಮಾಡಿಕೊಂಡದ್ದಾರೆ ಎಂದು ಸಮಾಜ ಸೇವಕ ಹೆಚ್ ಬಿ ಮಂಜುನಾಥ್ ನೇರವಾಗಿ ಆರೋಪ ಮಾಡಿದರು.ಅವರ ಏಕಾಂಗಿಯಾದ ಹೋರಾಟಕ್ಕೆ ಜಯ ಕರ್ನಾಟಕ, ಅಟೊ ಚಾಲಕರು ಮತ್ತು ಇನ್ನಿತರ ಸಂಘಟನೆಗಳು ಬೆಂಬಲ ನೀಡಿವೆ.ಅಕ್ರಮವಾಗಿ ಹಣ ದುರುಪಯೋಗ ಮಾಡಿಕೊಂಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಾಂತಿಯುತ ದರಣಿ ಮಾಡಿದರು.ಅ ವ್ಯಕ್ತಿ ಗಳ ಮೇಲೆ ಕ್ರಮಜರುಗಿಸತ್ತಾರ ಕಾದು ನೋಡಬೇಕಿದೆ.
ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಿಲ್ಲದ ಚಿರತೆದಾಳಿ ಹಸುವನ್ನು ತಿಂದ ಚಿರತೆ...
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಗೊರವಿಯಲ್ಲಿ ಘಟನೆ.ಗೊರವಿ ಗ್ರಾಮದ ಹರಿಗೌಡರ ಮಗ ಬಲರಾಮೇಗೌಡರಿಗೇ ಸೇರಿದ ಹಸುವನ್ನು ತಿಂದು ಹಾಕಿರುವ ಚಿರತೆ.ಇವರು ತೋಟದ ಮನೆಯಲ್ಲಿ ವಾಸಮಾಡುತ್ತಿದ್ದು ಹಸುವನ್ನು ಹೊರಭಾಗದಲ್ಲಿ ಕಟ್ಟಿಹಾಕ್ಕಿದ್ದರು.ರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಚಿರತೆ ಕೂಗುವ ದ್ವನಿ ಕೇಳಿ ಭಯಬೀತರಾಗಿ ಮಲಗಿದ್ದಾರೆ. ಬೆಳ್ಳಿಗೆ ನೋಡಿದರೆ ಹಸುವನ್ನು ತಿಂದು ಹಾಕಿರುವ ಚಿರತೆ ,ರಾತ್ರಿ ಮನೆಯಿಂದ ಹಸುವನ್ನು ಎಳೆದ್ಯೊದಿರುವ ಚಿರತೆ ಜಮೀನಿನ ಪಕ್ಕದಲ್ಲಿ ಹಸುವನ್ನು ತಿಂದು ಹಾಕಿದೆ.
ಗ್ರಾಮಸ್ಥರಲ್ಲಿ ಭಯದವಾತವರಣ ಚಿರತೆಯನ್ನು ಸೇರೆ ಹೀಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಇನ್ನೂ ಸ್ಥಳಕ್ಕೆ ಭೇಟಿ ನೀಡದ ಅರಣ್ಯಧಿಕಾರಿಗಳು.ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಂಡೂರು ಗ್ರಾಮಪಂಚಾಯಿತಿ ಹಾಗೂ ನರೇಗಾ ಕೂಲಿಗಾರರ ತಂಡ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ
ಮಂಡ್ಯ ಜಿಲ್ಲೆಯ ಮಳವಳ್ಳಿಯ ಬಂಡೂರು ಗ್ರಾಮಪಂಚಾಯಿತಿ ಹಾಗೂ ನರೇಗಾ ಕೂಲಿಗಾರರ ತಂಡ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಮಳವಳ್ಳಿ ತಾಲ್ಲೂಕಿನ ಬಂಡೂರು ಗ್ರಾಮ ಹಾಗೂ ಗಟ್ಟಿಕೊಪ್ಪಲು ಗ್ರಾಮದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಬಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ. ನಾಗರಾಜು ಉದ್ಘಾಟಿಸಿದರು ನಂತರ ಪಿಡಿಒ ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯ ಗಳನ್ನು ಪ್ರತಿಯೊಬ್ಬರು ಕಟ್ಟಿಸಿಕೊಳ್ಳುವಂತೆ ತಿಳಿಸಿದ ಅವರು ಗ್ರಾಮದ ಪ್ರತಿಯೊಬ್ಬರು ಮನೆ ಮುಂದೆ ಸ್ವಚ್ಚತೆ ಮಾಡಿಕೊಳ್ಳಬೇಕು ಎಂದರು.
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಹಲವು ಕೂಲಿ ಕೆಲಸಗಳನ್ನು ಮಾಡಿದರೆ ಹಣವನ್ನು ನೀಡುತ್ತೇವೆ ಎಂದರು.ಕಾರ್ಯಕ್ರಮ ದಲ್ಲಿ ಕೂಲಿಕಾರರ ಸಂಘದ ಅಧ್ಯಕ್ಷ ಶಿವಮಲ್ಲಯ್ಯ, ಮಹದೇವಮ್ಮ. ಸೇರಿದಂತೆ ಮತ್ತಿತ್ತರರು ಇದ್ದರು.
ಮಳವಳ್ಳಿ ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಹೊಂಬೇಗೌಡ(65) ಮಂಜಮ್ಮ(55) ಸಾವಿನಲ್ಲೂ ಒಂದಾದ ದಂಪತಿಗಳು
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಅಪರೂಪದ ಒಂದು ಘಟನೆ ನೆಡೆದಿದೆ. ಏನೆಂದರೆ ಪ್ರೀತಿಸುವ ಪ್ರೇಮಿಗಳ ಕೆಲವೊಮ್ಮೆ ಒಟ್ಟಾಗಿ ಮರಣಹೊಂದಿದ ಪ್ರಕರಣಗಳನ್ನು ನೊಡಿರುತ್ತೆವೆ .ಅದರೆ ಇಲ್ಲಿ ತಮ್ಮ ಜೀವನದಲ್ಲಿ ಕಷ್ಟ ಸುಖ ಗಳಲ್ಲಿ ಜೊತೆಯಾಗಿ ಬಾಳಿದ ಆದರ್ಶದಂಪತಿಗಳು ಸಾವಿನ್ನಲು ಸಹ ಜೊತೆಯಾಗಿದ್ದಾರೆ.
ಮಳವಳ್ಳಿ ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಹೊಂಬೇಗೌಡ(65) ಮಂಜಮ್ಮ(55) ಸಾವಿನಲ್ಲೂ ಒಂದಾದ ದಂಪತಿಗಳು
ಗ್ರಾಮದ ಹೊಂಬೇಗೌಡ(65) ಮಂಜಮ್ಮ(55) ಸಾವಿನಲ್ಲೂ ಒಂದಾದ ದಂಪತಿಗಳು.ಕಳೆದ ರಾತ್ರಿ 1 ಗಂಟೆ ಸಮಯದಲ್ಲಿ ಹೊಂಬೇಗೌಡ ರವರಿಗೆ ಹೊಟ್ಟೆನೋವು ಕಾಣಿಸಿಕೊಂಡು ತಕ್ಷಣ ಹೊಂಬೇಗೌಡರನ್ನ ಮಳವಳ್ಳಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಕುಟುಂಬದವರು, ಈ ವೇಳೆ ಬಾಯಾರಿಕೆಯಿಂದ ನೀರು ಕೇಳಿದ ಹೊಂಬೇಗೌಡರವರಿಗೆ ಪತ್ನಿಮಂಜಮ್ಮ ನೀರು ಕುಡಿಸಿದತಕ್ಷಣ ಪ್ರಾಣ ಪಕ್ಷಿ ಹಾರಿಹೋಗಿದ್ದು, , ಇದನ್ನು ನೋಡಿದ ಆತನ ಪತ್ನಿ ಮಂಜಮ್ಮ ಸಹ ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇಸಾವನ್ನಪ್ಪಿದಾಳೆ.
ಈ ವೇಳೆ ಮಾರ್ಗ ಮಧ್ಯದಲ್ಲೇ ಹೊಂಬೇಗೌಡ ಸಾವು. ಪತಿ ಸತ್ತ ಐದೇ ನಿಮಿಷದಲ್ಲಿ ಪತ್ನಿ ಮಂಜಮ್ಮನೂ ಸಾವು.ಆದರ್ಶ ದಂಪತಿಗಳ ಸಾವಿನಿಂದ ಕಣ್ಣೀರು ಹಾಕುತ್ತಿರುವ ಕುಟುಂಬ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ನಡೆದ ಘಟನೆ
ಮದುವೆ ಅನ್ನುವ ಋಣಾನುಬಂಧ ಎನ್ನುತ್ತಾರೆ ಅದು ಎಷ್ಟು ಸತ್ಯವೋ ಗೊತ್ತಿಲ್ಲ ಆದರೆ ಸಾವಿನಲ್ಲೂ ಒಂದಾದ ದಂಪತಿಗಳ ಆತ್ಮಕ್ಕೆ ಶಾಂತಿಯನ್ನು ಅ ಭಗವಂತ ಕರುಣಿಸಲಿ .
ಕೃಷ್ಣರಾಜಪೇಟೆ ಪಟ್ಟಣದಲ್ಲಿ ನೇಕಾರ ತೊಗಟವೀರ ಕುಲಬಾಂಧವರಿಂದ 8ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ವಿಜೃಂಭಣೆಯಿಂದ ತಾಯಿ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವ ನಡೆಯಿತು.ಶ್ರೀ ದೇವಿರಮ್ಮಣ್ಣಿ ಕೆರೆಯಿಂದ ಗಂಗಾಪೂಜೆ ಮಾಡಿ ನಂತರ ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಆರಂಭವಾದ ಕರಗ ಉತ್ಸವ. ಜಾನಪದ ಕಲಾ ಜನಪದ ವೈಭವ ದೊಂದಿಗೆ,ಡೊಳ್ಳು ಕುಣಿತ, ಪೂಜಾ ಮತ್ತು ಪಟ ಕುಣಿತ, ದೇವರಗುಡ್ಡರ ಆಕರ್ಷಕ ನೃತ್ಯದೊಂದಿಗೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ಸಾಗಿದ ಮೆರವಣಿಗೆಯು ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಪಕ್ಕದ ರಾಮಮಂದಿರದ ಬಳಿ ಅಂತ್ಯಗೊಂಡಿತು.
ನೇಕಾರ ತೊಗಟವೀರ ಸಮಾಜದ ಜಿಲ್ಲಾಧ್ಯಕ್ಷ ಹಂಸರಮೇಶ್, ರಾಜ್ಯ ತೊಗಟವೀರ ಸಂಘದ ನಿರ್ದೇಶಕ ಕೆ.ಜೆ.ರಾಜಶೇಖರ್, ರಾಜ್ಯ ಯುವಘಟಕದ ಅಧ್ಯಕ್ಷ ಗಜಪಡೆ ಶ್ರೀಧರ್, ಪುರಸಭೆ ಸದಸ್ಯ ಕೆ.ಆರ್.ಹೇಮಂತ್ ಕುಮಾರ್, ತಾ.ಪಂ ಸದಸ್ಯ ರಾಜಾಹುಲಿ ದಿನೇಶ್, ಮುಖಂಡರಾದ ಕೆ.ಆರ್.ಪುಟ್ಟಸ್ವಾಮಿ, ಎಸ್.ಜೆ.ಕುಮಾರಸ್ವಾಮಿ, ಹೊನ್ನಾವರ ಚಂದ್ರಶೇಖರ್, ಕೈಗೋನಹಳ್ಳಿ ಈರಪ್ಪ, ಮಾಸ್ಟರ್ ರಾಮಕೃಷ್ಣ, ಸೇರಿದಂತೆ ಸಾವಿರಾರು ಜನರು ಕರಗ ಮಹೋತ್ಸವದಲ್ಲಿ ಭಾಗವಹಿಸಿದ್ದರು.