ರಾಷ್ಟೀಯ

ವರುಣನ ಕೋಪವು ಕೇರಳದಲ್ಲಿ 76 ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು ಸುಮಾರು 2.87 ಲಕ್ಷ ಜನರು ರಾಜ್ಯದಾದ್ಯಂತ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಇನ್ನೂ ಐವತ್ತೆಂಟು ಜನರು ಕಾಣೆಯಾಗಿದ್ದಾರೆ, ಅವರಲ್ಲಿ 50 ಮಂದಿ ಮಲಪ್ಪುರಂನಲ್ಲಿದ್ದಾರೆ,

ಆಗಸ್ಟ್ 8 ರಿಂದ ಕೇರಳದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 76 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಪ್ರವಾಹದಿಂದ ಇದುವರೆಗೆ 42 ಜನರು ಸಾವನ್ನಪ್ಪಿದ್ದಾರೆ

'ಪ್ರವಾಹ ಪೀಡಿತ ರಾಜ್ಯಗಳನ್ನು ಬೆಂಬಲಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಯನಾಡಿನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು.

“ಇದು ವಯನಾಡಕ್ಕೆ ಮಾತ್ರವಲ್ಲ, ಕೇರಳ ಮತ್ತು ಇತರ ಕೆಲವು ದಕ್ಷಿಣ ರಾಜ್ಯಗಳಿಗೂ ಒಂದು ದುರಂತ. ಕೇಂದ್ರ ಸರ್ಕಾರವು ಈ ರಾಜ್ಯಗಳ ಜನರನ್ನು ಗಮನ ಹರಿಸಬೇಕು ಮತ್ತು ಪರಿಹಾರ ಬೆಂಬಲಿಸಬೇಕು ಎಂದು ನಾನು ಭಾವಿಸುತ್ತೇನೆ, ”ಎಂದು ಅವರು ಹೇಳಿದರು.


ಕರ್ನಾಟಕ ಸಿಎಂ ಬಿ.ಎಸ್.ಯಡಿಯುರಪ್ಪ ದಕ್ಷಿಣ ಕನ್ನಡದ ಬೆಲ್ತಂಗಡಿ ಭೇಟಿ ನೀಡಿ ಅಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.

"ಜಿಲ್ಲೆಯ ಪ್ರವಾಹದಲ್ಲಿ ಐದು ಸೇತುವೆಗಳು ಮತ್ತು 300 ಮನೆಗಳು ಹಾನಿಗೊಳಗಾದ ಅಥವಾ ಸಂಪೂರ್ಣವಾಗಿ ನಾಶವಾಗಿವೆ. ಈ ಕುಟುಂಬಗಳಿಗೆ ತಲಾ 5 ಲಕ್ಷ ರೂ. ತುರ್ತು ಪರಿಹಾರವಾಗಿ ಸಂತ್ರಸ್ತರಿಗೆ 10,000 ರೂ. ವಿತರಿಸಲಾಗುವುದು ”ಎಂದು ಅವರು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು.

ಕರ್ನಾಟಕದ ಬೆಳಗಾವಿಯಲ್ಲಿ ಪ್ರವಾಹ ಪೀಡಿತ ರಾಯ್ ಭಾಗ್ ತಾಲ್ಲೂಕಿನ ಮನೆಯ ಛಾಾವಣಿಯಲ್ಲಿ ಮೊಸಳೆಯನ್ನು ಗುರುತಿಸಲಾಗಿದೆ.

ಕರ್ನಾಟಕ ಪ್ರವಾಹದಲ್ಲಿ ಸೋಮವಾರ ಸಾವನ್ನಪ್ಪಿದವರ ಸಂಖ್ಯೆ 42 ಕ್ಕೆ ಏರಿದೆ. ಕನಿಷ್ಠ 12 ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು ಈವರೆಗೆ ಸುಮಾರು 5.8 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.

ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರ ಬಲವಾದ ನೀರಿನ ಪ್ರವಾಹದಿಂದಾಗಿ ದೋಣಿ ಡಿಕ್ಕಿ ಹೊಡೆದ ಪರಿಣಾಮ ಪ್ರವಾಹ ರಕ್ಷಣಾ ತಂಡದ ಕನಿಷ್ಠ ನಾಲ್ವರು ಸದಸ್ಯರು ಕೊಚ್ಚಿಹೋಗಿದ್ದು, ಓರ್ವ ಸದಸ್ಯನನ್ನು ರಕ್ಷಿಸಲಾಗಿದೆ. ಹೆಲಿಕಾಪ್ಟರ್ ಅನ್ನು ಬಳಸಿ ಅವರನ್ನು ಉಳಿಸುವ ಪ್ರಯತ್ನಗಳು ನಡೆಯುತ್ತಿವೆ.

ಕಾರವಾರ ಬಳಿಯ ಭೂಕುಸಿತದಿಂದಾಗಿ ಕರ್ನಾಟಕದ ಎಲ್ಲಾ ಕೊಂಕಣ ರೈಲ್ವೆಯ ರೈಲುಗಳನ್ನು ರದ್ದು ಮಾಡಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಸೊಹ್ರಾಬುದ್ದೀನ್ ಪ್ರಕರಣ: ಎಲ್ಲಾ 38 ಆರೋಪಿ ಪೊಲೀಸರ ಖುಲಾಸೆ, ಆದೇಶವನ್ನು ಪ್ರಶ್ನಿಸಿ ‘ಸ್ಟೇಜ್’ ಎನ್‌ಕೌಂಟರ್ ಪ್ರಕರಣದ ಸಾಕ್ಷಿ ಮುಂಬೈ ಹೈಕೋರ್ಟ್‌ಗೆ ಮೊರೆ. ಎಚ್‌ಸಿ ಆದೇಶ ಮೀಸಲು.

ಮುಂಬೈ: ಗುಜರಾತ್ ಮತ್ತು ರಾಜಸ್ಥಾನದ ಎಲ್ಲಾ 38 ಆರೋಪಿ ಪೊಲೀಸರನ್ನು ಖುಲಾಸೆಗೊಳಿಸುವುದನ್ನು ಪ್ರಶ್ನಿಸಿ ಕೋರಿ ಸೊಹ್ರಾಬುದ್ದೀನ್ ಶೇಖ್, ಅವರ ಪತ್ನಿ ಕಸುವರ್ ಬಿ ಮತ್ತು ಸಹವರ್ತಿ ತುಳಸಿರಾಮ್ ಪ್ರಜಾಪತಿ ಅವರ ‘ಸ್ಟೇಜ್’ ಎನ್‌ಕೌಂಟರ್ ಪ್ರಕರಣದ ಸಾಕ್ಷಿ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಕೆಳ ನ್ಯಾಯಾಲಯದ ಅಂತಿಮ ತೀರ್ಪನ್ನು ಸಾಕ್ಷಿ ‘ನ್ಯಾಯದ ಅಪಹಾಸ್ಯ’ ಎಂದು ಹೆಸರಿಸಿದ್ದಾರೆ.

ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ಕೌಂಟರ್ನ ಎಲ್ಲಾ ಸ್ಮರಣೆಯನ್ನು ಮುಚ್ಚಿಹಾಕುವ ಪ್ರಯತ್ನಗಳ ಹೊರತಾಗಿಯೂ, ವಿಚಾರಣೆಗಳು ಮುಂದುವರೆದಿದ್ದರೂ, ಈ ಪ್ರಕರಣವು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಇತರರೊಂದಿಗೆ ಕಾಡುತ್ತಲೇ ಇರುತ್ತದೆ. ಮುಂಬೈನ ವಿಶೇಷ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ನ್ಯಾಯಾಲಯದ ಮುಂದೆ ಇತ್ತೀಚಿನ ನಿಕ್ಷೇಪಗಳು - ಅಮಿತ್ ಶಾ ಮತ್ತು ಸೊಹ್ರಾಬುದ್ದೀನ್ ನಕಲಿ ಎನ್ಕೌಂಟರ್ ನಡುವಿನ ಸಂಬಂಧವನ್ನು ಮತ್ತೊಮ್ಮೆ ಸ್ಥಾಪಿಸಿದೆ.

ಆಗಸ್ಟ್ 6 ರಿಂದ ಅಯೋಧ್ಯೆ ವಿಚಾರಣೆ: ಸಿಜೆಐ ಗೊಗೊಯ್ ನವೆಂಬರ್‌ನಲ್ಲಿ ನಿವೃತ್ತಿಯಾಗುವುದರೊಂದಿಗೆ, ವಿವಾದದ ಆರಂಭಿಕ ಪರಿಹಾರಕ್ಕೆ ಹೆಚ್ಚಿನ ಅವಕಾಶಗಳು

ಜೂಜಾಟಕ್ಕೆ ಪತ್ನಿಯನ್ನೇ ಅಡವಿಟ್ಟು ಸೋತ ಪತಿರಾಯ!!  ನಂತರ ನೆಡೆದ ಘಟನೆ ಎನು ಗೊತ್ತಾ...???!!!

ಉತ್ತರ ಪ್ರದೇಶ : ಜೂಜಾಟ ಹಾಗೂ ಮದ್ಯಪಾನಕ್ಕೆ ದಾಸನಾಗಿದ್ದ ವ್ಯಕ್ತಿಯೊಬ್ಬ ಹಣವಿಲ್ಲದಿದ್ದ ಸಮಯದಲ್ಲಿ ಪತ್ನಿಯನ್ನು ಅಡವಿಟ್ಟು ಜೂಜಿನಲ್ಲಿ ಸೋತ ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ಜೌನ್​ಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯ ಬಳಿಕ ಪೊಲೀಸ್​ ಠಾಣೆಗೆ ಹೋಗಿ ದೂರು ನೀಡಿದರೂ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸರು ನಿರಾಕರಿಸಿದ್ದಕ್ಕೆ, ಸಂತ್ರಸ್ತೆ ಕೋರ್ಟ್​ ಮೆಟ್ಟಿಲೇರಿದ್ದಾರೆ. ಕೋರ್ಟ್​ ಖಡಕ್​ ಸೂಚನೆ ನೀಡಿದ ಬಳಿಕ ಜೌನ್​ಪುರ ಜಿಲ್ಲೆಯ ಜಫ್ಫರಾಬಾದ್​ ಠಾಣಾ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.
ಮದ್ಯಪಾನ ವ್ಯಸನಿಯಾಗಿರುವ ಪತಿ ನನ್ನನ್ನು ಜೂಜಾಟದಲ್ಲಿ ಅಡವಿಟ್ಟು ಸೋತು ಬೇರೆಯವರ ಪಾಲು ಮಾಡಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ. ಪತಿಯ ಸ್ನೇಹಿತ ಅರುಣ್​ ಮತ್ತು ಸಂಬಂಧಿ ಅನಿಲ್​ ಮದ್ಯಪಾನ ಮಾಡಲು ಮತ್ತು ಜೂಜಾಟ ಆಡಲು ಆಗಾಗ ಮನೆಗೆ ಬರುತ್ತಿದ್ದರು. ಜೂಜಾಟದಲ್ಲಿ ಸೋತಿದಕ್ಕೆ ಸಾಮೂಹಿಕ ಅತ್ಯಾಚಾರ ಮಾಡಲು ಪತಿಯೇ ಅವಕಾಶ ಮಾಡಿಕೊಟ್ಟಿದ್ದಾಗಿ ಸಂತ್ರಸ್ತೆ ದೂರಿದ್ದಾಳೆ.

ಘಟನೆ ನಡೆದ ಬಳಿಕ ಸಂತ್ರಸ್ತೆ ತನ್ನ ಸೋದರ ಮಾವನ ಮನೆಗೆ ತೆರಳಿದಾಗ ಆಕೆಯನ್ನು ಪತಿ ಹಿಂಬಾಲಿಸಿದ್ದಾನೆ. ನನ್ನದೊಂದು ತಪ್ಪಿನಿಂದ ಈ ರೀತಿಯಾಗಿದೆ. ನನ್ನನ್ನು ಕ್ಷಮಿಸು ಎಂದು ಬೇಡಿಕೊಂಡಿದ್ದಾನೆ. ಬಳಿಕ ಅವನನ್ನು ಕ್ಷಮಿಸಿ ಜತೆಯಲ್ಲಿಯೇ ಕಾರಿನಲ್ಲಿ ಮನೆಗೆ ಹಿಂದಿರುವಾಗ ಮಾರ್ಗ ಮಧ್ಯದಲ್ಲಿ ಕಾರನ್ನು ನಿಲ್ಲಿಸಿ ಮತ್ತೊಮ್ಮೆ ಆಕೆಯ ಮೇಲೆ ಅತ್ಯಾಚಾರ ಎಸಗಲು ಸ್ನೇಹಿತರಿಗೆ ಪತಿ ಅನುವು ಮಾಡಿಕೊಟ್ಟಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾಳೆ.

ಕೋರ್ಟ್​ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಜಫ್ಫರಬಾದ್​ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ..

ಪರಿಸರ ಸಂರಕ್ಷಣೆಗೆ ನೀಡಿರುವ ಕೊಡುಗೆಗೆ ಮಾನ್ಯತೆ ನೀಡಿ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್, ಪರ್ವತಾರೋಹಿ ಬಚೇಂದ್ರಿ ಪಾಲ್, ಜಾನಪದ ಗಾಯಕಿ ತೀಜನ್ ಬಾಯಿ, ಪರಿಸರಪ್ರೇಮಿ, ಕರ್ನಾಟಕದ ಸಾಲು ಮರದ ತಿಮ್ಮಕ್ಕ ಸೇರಿದಂತೆ 54 ಗಣ್ಯರಿಗೆ 2019ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಧಾನ ಮಾಡಿದ್ದಾರೆ. ಈ ಹಿಂದೆ ಮಾರ್ಚ್ 11ರಂದು ವಿವಿಧ ಕ್ಷೇತ್ರದಲ್ಲಿ ಸಾಧಿಸಿದ 56 ಗಣ್ಯರಿಗೆ ಪದ್ಮ ಪ್ರಶಸ್ತಿ ನೀಡಿ ರಾಷ್ಟ್ರಪತಿಗಳು ಗೌರವಿಸಿದ್ದರು. ಸಮಾಜ ಸೇವೆ ಮಾಡಿದಂತಹ ಶ್ರೀಮತಿ ಸಾಲುಮರದ ತಿಮ್ಮಕ್ಕರವರಿಗೆ ರಾಷ್ಟ್ರಪತಿ ಪದ್ಮಶ್ರೀ ಪುರಸ್ಕಾರವನ್ನು ಪ್ರದಾನ ಮಾಡಿದ್ದಾರೆ.

107 ನೇ ವಯಸ್ಸಿನ ಕರ್ನಾಟಕದ ಶ್ರೀಮತಿ ತಿಮ್ಮಕ್ಕರವರು ಒಬ್ಬ ಪರಿಸರವಾದಿ ಹಾಗೂ ತನ್ನ ಹಳ್ಳಿಯಾದ ಹುಲಿಕಲ್‍ನಿಂದ ಕುದೂರುವರೆಗಿನ 4 ಕಿ.ಮೀ ಹೆದ್ದಾರಿಯ ಉದ್ದಗಲಕ್ಕೂ ಆಲದ ಮರಗಳನ್ನು ನೆಟ್ಟು ಹೆಸರುವಾಸಿಯಾಗಿದ್ದಾರೆ.ಪರಿಸರದ ಮೇಲೆ ತಮಗಿರುವ ಪ್ರೀತಿಯಿಂದ ರಸ್ತೆ ಬದಿಗಳಲ್ಲಿ ಮರಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ನೀರುಣಿಸಿ ಪೋಷಿಸಿ ತಿಮ್ಮಕ್ಕನವರು ವೃಕ್ಷಮಾತೆಯಾದವರು. ಸಾಲುಮರದ ತಿಮ್ಮಕ್ಕ ಮೂಲಕ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನವರು. ಮಕ್ಕಳು ಇಲ್ಲವೆನ್ನುವ ಕಾರಣಕ್ಕೆ ರಸ್ತೆ ಬದಿಯ ಆಲದ ಮರಗಳನ್ನೇ ತಮ್ಮ ಮಕ್ಕಳೆಂದು ಭಾವಿಸಿ ಬೆಳೆಸಿ, ಪೋಷಿಸಿ ಪರಿಸರ ಉಳಿಸಿ ಎಂದು ಸಾರಿದ ವೃಕ್ಷಮಾತೆ. ಇದೇ ಕಾರಣಕ್ಕೆ ಅವರು ಸಾಲುಮರದ ತಿಮ್ಮಕ್ಕ ಎಂದು ಖ್ಯಾತಿ ಪಡೆದಿದ್ದಾರೆ.ಆದ್ರೆ ಇಳಿಯ ವಯಸಿನಲ್ಲೂ ತಿಮ್ಮಕ್ಕ ಅವರು ಮಾತ್ರ ಪರಿಸರ ರಕ್ಷಣೆ, ಕಾಳಜಿಯನ್ನು ಮರೆತಿಲ್ಲ. ಸ್ವಾರ್ಥವಿಲ್ಲದೆ ಪರಿಸರಕ್ಕಾಗಿ ಸೇವೆ ಸಲ್ಲಿಸಿದ ತಿಮ್ಮಕ್ಕ ಅವರ ಕಾರ್ಯವನ್ನು ಮೆಚ್ಚಿ ಈಗಾಗಲೇ ಹಲವು ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿಗಳು ಲಭಿಸಿದೆ. ಬಿಬಿಸಿ 2016 ರಲ್ಲಿ ಜಗತ್ತಿನ ಅತಿ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಕೂಡ ಸಾಲು ಮರದ ತಿಮ್ಮಕ್ಕ ಅವರು ಸ್ಥಾನ ಪಡೆದಿದ್ದಾರೆ.

 
 

 

ಒಂದೇ ಒಂದು ಲೋಕಸಭೆ ಕ್ಷೇತ್ರದಲ್ಲಿ ಹಲವು ಹಂತಗಳಲ್ಲಿ ಮತದಾನ ,ಇತಿಹಾಸದಲ್ಲಿ ಇದೇ ಮೊದಲು!

ನವದೆಹಲಿ: ಸಾಮಾನ್ಯವಾಗಿ ಯಾವುದೇ ಒಂದು ರಾಜ್ಯದಲ್ಲಿ ಹಲವು ಹಂತಗಳಲ್ಲಿ ಮತದಾನ ನಡೆಯುತ್ತದೆ. ಆದರೆ, ಒಂದೇ ಒಂದು ಲೋಕಸಭೆ ಕ್ಷೇತ್ರದಲ್ಲಿ ಹಲವು ಹಂತಗಳಲ್ಲಿ ಮತದಾನ ನಡೆಯುವುದನ್ನು ನಾವು ಕೇಳಿರಲು ಸಾಧ್ಯವೇ ಇಲ್ಲ. ಭಾರತೀಯ ಚುನಾವಣಾ ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ಒಂದು ಘಟನೆಗೆ ಈ ಲೋಕಸಭೆ ಚುನಾವಣೆ ಸಾಕ್ಷಿಯಾಗಲಿದೆ.

ಭದ್ರತೆಯ ಕಾರಣದಿಂದಾಗಿ ಅತ್ಯಂತ ಸೂಕ್ಷ್ಮ ಲೋಕಸಭೆ ಕ್ಷೇತ್ರವಾಗಿರುವ ಅನಂತನಾಗ್​ ಕ್ಷೇತ್ರದಲ್ಲಿ ಮೂರು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಸಲಾಗುತ್ತಿದೆ. ಇಲ್ಲಿ ಚುನಾವಣೆ ನಡೆಸುವುದು ಎಷ್ಟು ಸವಾಲಿನ ಕೆಲಸ ಎಂಬುದನ್ನು ನೀವು ಊಹಿಸಬಹುದು. ಇದೇ ಕಾರಣದಿಂದಾಗಿಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್​ ಅರೋರಾ ತಿಳಿಸಿದ್ದಾರೆ.

ಅನಂತನಾಗ್​ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 16 ವಿಧಾನಸಭೆ ಕ್ಷೇತ್ರಗಳಿದ್ದು, ಅನಂತನಾಗ್​, ಶೋಪಿಯಾನ್​, ಕುಲ್ಗಾಮ್​ ಮತ್ತು ಪುಲ್ವಾಮಾ ಜಿಲ್ಲೆಗಳನ್ನು ಒಳಗೊಂಡಿದೆ. ಈ ಜಿಲ್ಲೆಗಳಲ್ಲಿ ಪ್ರತ್ಯೇಕತಾವಾದಿಗಳ ಚಟುವಟಿಕೆ ಹೆಚ್ಚಿದೆ. ಜತೆಗೆ ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ಸಿಆರ್​ಪಿಎಫ್​ ಯೋಧರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅನಂತನಾಗ್​ ಲೋಕಸಭೆ ಕ್ಷೇತ್ರದಲ್ಲಿ ಏಪ್ರಿಲ್​ 23, ಏಪ್ರಿಲ್​ 29 ಮತ್ತು ಮೇ 6 ರಂದು ಮತದಾನ ನಡೆಯಲಿದೆ.

ಇದನ್ನು ಹೊರತುಪಡಿಸಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಜಮ್ಮು ಕ್ಷೇತ್ರಗಳಲ್ಲಿ ಏಪ್ರಿಲ್​ 11 ರಂದು, ಶ್ರೀನಗರ ಮತ್ತು ಉಧಮ್​ಪುರ ಕ್ಷೇತ್ರಗಳಲ್ಲಿ ಏಪ್ರಿಲ್​ 18 ರಂದು ಮತ್ತು ಲಡಾಕ್​ ಕ್ಷೇತ್ರದಲ್ಲಿ ಮೇ 6 ರಂದು ಮತದಾನ ನಡೆಯಲಿದೆ.ಭಾನುವಾರ ಸಂಜೆ ಸುನಿಲ್​ ಅರೋರಾ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್​ ಲೋಕಸಭೆ ಕ್ಷೇತ್ರದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಘೋಷಿಸಿದ್ದರು. 

 
 

17 ನೇ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟಣೆ.

ಒಟ್ಟು 07 ಹಂತಗಳಲ್ಲಿ ಚುನಾವಣೆ

ಮೊದಲನೇ ಹಂತದ ಮತದಾನ 11ನೇ ಎಪ್ರಿಲ್

ಕೊನೆಯ ಹಂತದ ಮತದಾನ 19ನೇ ಮೇ

ಕರ್ನಾಟಕದಲ್ಲಿ 2ನೇ ಹಂತದಲ್ಲಿ ಚುನಾವಣೆ

ಕರ್ನಾಟಕದಲ್ಲಿ ಮತದಾನದ ದಿನಾಂಕ :18/04/2019

ಚುನಾವಣೆ ಫಲಿತಾಂಶ ಪ್ರಕಟಣೆ ದಿನಾಂಕ : 23/05/2019

ಚುನಾವಣೆ ನೀತಿ ಸಂಹಿತೆ ದಿನಾಂಕ : 10/03/2019 ರಿಂದ ದಿನಾಂಕ :27/05/2019ರವರೆಗೆ ಜಾರಿಯಲ್ಲಿ ಇರುತ್ತದೆ.

Page 1 of 2

Visitors Counter

220502
Today
Yesterday
This Week
This Month
Last Month
All days
69
151
2119
3607
4244
220502

Your IP: 18.188.108.54
2024-04-20 07:07

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles