ರಾಷ್ಟೀಯ

ಹಿಮಾಚಲ ಪ್ರದೇಶದಲ್ಲಿ ಹಿಮಪಾತ – ಓರ್ವ ಯೋಧ ಹುತಾತ್ಮ, 5 ಮಂದಿ ಕಣ್ಮರೆ

ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಉಗ್ರರ ಕೃತ್ಯ  ದಾಳಿಯಲ್ಲಿ 45 ಮಂದಿ ಗಾಯಗೊಂಡಿದ್ದು, 18 ಯೋಧರ ಸ್ಥಿತಿ ಗಂಭೀರ .78 ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯೋಧರು 100 ಮೀಟರ್ ದೂರಕ್ಕೆ ಹಾರಿತು ದೇಹ!

ಕೃತ್ಯ ನಡೆದಿದ್ದು ಹೇಗೆ?

ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‌ಪಿಎಫ್‌ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 42 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದಾರೆ.

ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ ಸೈನಿಕರ ದೇಹದ ಭಾಗಗಳು ಹೈವೇಯ 100 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಸ್ಫೋಟಕಗೊಂಡ ಬಳಿಕ ಉಳಿದ ಬಸ್ಸುಗಳು ನಿಂತ ಮೇಲೆ ಅವುಗಳ ಮೇಲೂ ಉಗ್ರರು ದಾಳಿ ನಡೆಸಿದ್ದಾರೆ. ಪೂರ್ವನಿಯೋಜಿತ ಕೃತ್ಯವಾಗಿದ್ದರಿಂದ ಸೈನಿಕರ ವಾಹನವನ್ನು ಉಗ್ರರು ಹಿಂಬಾಲಿಸಿಕೊಂಡು ಬಂದಿದ್ದಾರೆ. ಆತ್ಮಾಹುತಿ ದಾಳಿಕೋರ ಬಸ್ಸಿಗೆ ಕಾರನ್ನು ಡಿಕ್ಕಿ ಹೊಡೆದ ಬಳಿಕ ಉಳಿದ ಬಸ್ಸುಗಳು ನಿಂತ ಕೂಡಲೇ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಉಗ್ರರ ಈ ದಾಳಿಗೆ ಸಾಕ್ಷ್ಯ ಎಂಬಂತೆ ಬಸ್ಸಿನ ಹಿಂಭಾಗದಲ್ಲಿ ಬುಲೆಟ್ ಗುರುತು ಬಿದ್ದಿದೆ. ವಿಪರೀತ ಮಂಜು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಶ್ರೀನಗರ ಹೆದ್ದಾರಿ ಕಳೆದ ಎರಡು ದಿನಗಳಿಂದ ಮುಚ್ಚಲ್ಪಟ್ಟಿತ್ತು.

ಜಮ್ಮು ಕಾಶ್ಮೀರದ ಉರಿ ಸೇನಾ ನೆಲೆಯ ಮೇಲೆ 2016ರ ಸೆಪ್ಟೆಂಬರ್ 18ರಂದು ನಾಲ್ವರು ಉಗ್ರರು ದಾಳಿ ನಡೆಸಿ 18 ಮಂದಿ ಯೋಧರನ್ನು ಹತ್ಯೆ ಮಾಡಿದ್ದರು. ಭಾರತೀಯ ಸೇನೆ ಸಮವಸ್ತ್ರ ಧರಿಸಿ ಅಕ್ರಮವಾಗಿ ಒಳ ನುಗ್ಗಿದ್ದ ಈ ಪಾಪಿಗಳು ಯೋಧರು ಮಲಗಿದ್ದಾಗ ದಾಳಿ ನಡೆಸಿ ಕೃತ್ಯ ಎಸಗಿದ್ದರು. ಇಲ್ಲಿಯವರೆಗೆ ದೇಶದ ಇತಿಹಾಸಲ್ಲಿ ಅತಿ ದೊಡ್ಡ ದಾಳಿ ಎಂಬ ಕುಖ್ಯಾತಿ ಗಳಿಸಿತ್ತು. ಈಗ ಇದಕ್ಕಿಂತಲೂ ಅತಿ ದೊಡ್ಡ ದಾಳಿ ನಡೆದಿದ್ದು ಉಗ್ರರ ಪಾಪಿ ಕೃತ್ಯಕ್ಕೆ ಅಮಾಯಕ 42ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ.

ತಮಿಳುನಾಡಿನ ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಇನ್ನಿಲ್ಲ

ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ವೈದ್ಯರು ಸೋಮವಾರವೇ 24 ಗಂಟೆಗಳ ಕಾಲ ಯಾವ ಭರವಸೆಗಳನ್ನು ನೀಡೋದಕ್ಕೆ ಸಾಧ್ಯವಿಲ್ಲ. ಕ್ಷಣ ಕ್ಷಣಕ್ಕೂ ಕರುನಾನಿಧಿ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಸ್ಪಷ್ಟಪಡಿಸಿತ್ತು.

ಕಾವೇರಿ ಆಸ್ಪತ್ರೆಯ ಮುಂದೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಪೊಲೀಸ್ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದು, ಆಸ್ಪತ್ರೆಯ ಸುತ್ತಮುತ್ತ 1,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

ಕಾರ್ಗಿಲ್ ಯುದ್ಧ ಹೀರೊಗಳು.... ದೇಶಕ್ಕಾಗಿ ನಿಮ್ಮ ಪ್ರಾಣಾರ್ಪಣ – ಇದೋ ನಿಮಗೆ ನಮ್ಮ ಅಶ್ರು ತರ್ಪಣ

ಇಂದು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಂಪುಟ ಸಭೆ ನಡೆಸಿತ್ತು. ಆ ಸಭೆಯಲ್ಲಿ

Page 2 of 2

Visitors Counter

222511
Today
Yesterday
This Week
This Month
Last Month
All days
297
251
1766
5616
4244
222511

Your IP: 52.15.59.163
2024-04-26 20:44

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles