ಹಾಸನದ ದಶಕದ ರಾಜಕೀಯ ದ್ವೇಷ ಕೊನೆಯಾಗುತ್ತಾ.! ರೇವಣ್ಣ ವಿರುದ್ಧ ಕಾಂಗ್ರೆಸ್ಸಿಗರ ‘ಆಣೆ ಅಸ್ತ್ರ.
ಹಾಸನ : ಹಾಸನದ ರಾಜಕಾರಣದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ರಾಜಿ ಸಂಧಾನದ ಮಾತುಕತೆಗೆ ಕುಳಿತುಕೊಳ್ಳಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಸಂಧಾನ ನಡೆಯುತ್ತಿದ್ದು, ಹಳೆಯ ದ್ವೇಷ ಮರೆತು ಜೆಡಿಎಸ್ ಬೆಂಬಲಿಸುವಂತೆ ಮನವೊಲಿಸಲು ಮುಂದಾಗಿದ್ದಾರೆ.
ಸಚಿವ ಹೆಚ್.ಡಿ.ರೇವಣ್ಣರ ಸಮ್ಮುಖದಲ್ಲಿ ಜೆಡಿಎಸ್ ನಾಯಕರಿಂದ ಕಾಂಗ್ರೆಸ್ ಮುಖಂಡರುಗಳಿಗೆ, ಕಾರ್ಯಕರ್ತರಿಗೆ ಏನೆಲ್ಲಾ ಸಮಸ್ಯೆ ಆಗುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ. ಈ ವೇಳೆ ವಿಪರೀತ ದೇವರನ್ನು ನಂಬುವ ರೇವಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಂದೆ ಯಾವುದೇ ತೊಂದರೆ ಕೊಡಲ್ಲ ಅಂತ ಸಚಿವರು ಆಣೆ ಪ್ರಮಾಣ ಮಾಡಲಿ ಎಂದು ಒತ್ತಾಯಿಸಲು ಕೈ ಪಡೆ ಸಜ್ಜುಗೊಂಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇತ್ತ ದೋಸ್ತಿಗಳು ಕೈ ಕೊಟ್ಟರೆ ಮಗನ ಗೆಲುವು ಕಷ್ಟ ಎಂದು ಭಾವಿಸಿದ ರೇವಣ್ಣ ಸಿದ್ದರಾಮಯ್ಯ ನಿವಾಸದಲ್ಲಿ ಇಂದು ರಾಜೀ ಪಂಚಾಯ್ತಿಗೆ ಹಾಜರಾಗಲು ಒಪ್ಪಿದ್ದಾರೆ. ಕೇವಲ ಬಾಯಿ ಮಾತಿಗೆ ಹಾಸನದ ದಶಕದ ರಾಜಕೀಯ ದ್ವೇಷ ಕೊನೆಯಾಗುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.