ರಾಜ್ಯಸುದ್ದಿ

Rate this item
(0 votes)

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಅರಿವಿನ ಜಾಗೃತಿ ಕಾರ್ಯಕ್ರಮ

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂದೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಅರಿವಿನ ಜಾಗೃತಿ ಕಾರ್ಯಕ್ರಮ ನಡೆಸಿದರು 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ  ಸ್ವಾತಂತ್ರ್ಯ ಹೋರಾಟಗಾರಿಗೆ ಮತ್ತು ಹುತಾತ್ಮ ಯೋಧರು ಹಾಗೂ ಗಡಿ ಕಾಯುತ್ತಿರುವ ಯೋಧರಿಗಾಗಿ ಅರ್ಪಿಸುವ ಬೃಹತ್ ರಕ್ತದಾನ ಹಾಗೂ 71 ಹಣ್ಣಿನಗಿಡ ವಿತರಣ ಕಾರ್ಯಕ್ರಮ ಆಗಸ್ಟ್ 15 ರಂದು ನಡೆಯಲಿದ್ದು ಪ್ರತಿಯೊಬ್ಬರು ಸ್ವಂಪೇರಿತರಾಗಿ ಭಾಗವಹಿಸುವಂತೆ  ಅಖಿಲ ಭಾರತ ಜನವಾದಿ ಮಹಿಳೆ ಸಂಘಟನೆ ಜಿಲ್ಲಾಧ್ಯಕ್ಷೆ ದೇವಿ  ಕರೆ ನೀಡಿದರು. ಅರಿವಿನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ , ಮಹಿಳೆ ಯರು  ರಕ್ತದಾನ ಮಾಡುವ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ತಪ್ಪು ಮಾಹಿತಿಯಾಗಿದ್ದು, ಮಹಿಳೆಯರು ರಕ್ತದಾನ ಮಾಡಿದರೆ ಹೃದಯರೋಗ , ಹಾಗೂ ಎಲ್ಲಾ ಕಾಯಿಲೆಯಿಂದ ದೂರ ಉಳಿಯವುದು ಎಂದರು.ಕಾರ್ಯಕ್ರಮದಲ್ಲಿ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಸುಶೀಲಾ , ಸುನೀತಾ .ಪದ್ಮ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

Rate this item
(0 votes)

ಕಚೇರಿಗೆ ಅಲೆಸುವ ಅಧಿಕಾರಿಗಳಿಗೆ ಸಾರ್ವಜನಿಕರ ಕಷ್ಟ ಏನು ಎಂದು ತಿಳಿಸಲು ಶಾಸಕ ಡಾ.ಕೆ ಅನ್ಬದಾನಿ ಗ್ರಾಮ ವಾಸ್ತವ್ಯ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ದಲಿತ ಜಯರಾಜುಮನೆಯಲ್ಲಿ ವಾಸ್ತವ್ಯ ಹೂಡಿದಿದ್ದ ಶಾಸಕ ಡಾ.ಕೆ ಅನ್ಬದಾನಿ. ಇದೆ ಸಂದರ್ಭದಲ್ಲಿ ಪತ್ರಕರ್ತರ ಜೊತೆ ಮಾತನಾಡಿ ಸಾರ್ವಜನಿಕರನ್ನು ಕಚೇರಿಗೆ ಅಲೆಸುವ ಅಧಿಕಾರಿಗಳಿಗೆ ಸಾರ್ವಜನಿಕರ ಕಷ್ಟ ಏನು ಎಂದು ತಿಳಿಸಲು  ಗ್ರಾಮ ವಾಸ್ತವ್ಯ ಹೂಡುತ್ತಿದ್ದೇನೆ ಎಂದು ಶಾಸಕ ಡಾ.ಕೆ ಅನ್ಬದಾನಿ ತಿಳಿಸಿದರು.          ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಜಯರಾಜು ಎಂಬ ದಲಿತರ ಮನೆಯೊಂದರಲ್ಲಿ ವಾಸ್ತವ್ಯ , ಮಾಜಿ ಸಚಿವ ಬಿ ಸೋಮಶೇಖರ್ ರವರ ಗ್ರಾಮವೂ ಸಹ ಆಗಿದ್ದು, ಈ ಗ್ರಾಮ ಅಭಿವೃದ್ಧಿ ಯಾಗದ ಕಾರಣ ಈ ಗ್ರಾಮದಲ್ಲಿ ವಾಸ್ತವ್ಯ ಹೂಡುತ್ತಿರುವುದಾಗಿ ತಿಳಿಸಿದರು. ಸಾರ್ವಜನಿಕರನ್ನು ಅಧಿಕಾರಿಗಳು ಕಚೇರಿಯಲ್ಲಿ ಉಡಾಫೆ ರೀತಿಯಲ್ಲಿ ಕಾಣುತ್ತಾರೆ ಜನರ ಕಷ್ಟ ಅಧಿಕಾರಿಗಳಿಗೆ ಅರ್ಥವಾಗಲಿ  ಅನ್ನುವುದಕೋಸ್ಕರ  ಅಧಿಕಾರಿಗಳ ಜೊತೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲು ಸೂಚಿಸಿದ್ದೇನೆ. ಈ ಗ್ರಾಮದಲ್ಲಿ ಸಾಕಷ್ಟು ಸಮಸ್ಯೆ ಇದೆ ಅದನ್ನು ಶೀಘ್ರವೇ ಬಗೆಹರಿಸುತ್ತೇನೆ ಎಂದರು.

  ಅಧಿಕಾರಗಳನ್ನು ಬೆಳಗಾವಿ ವರ್ಗಾವಣೆ ಮಾಡುವುದಾಗಿ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ ,ಹೌದು ಸಾರ್ವಜನಿಕರ ಕೆಲಸ ಮಾಡದವರಿಗೆ ಇಲ್ಲಿ ಜಾಗವಿಲ್ಲ ಅವರನ್ನು ದೂರದ ಊರಿಗೆ ವರ್ಗಾವಣೆ ಮಾಡಿದಾಗ ಅವರಿಗೂ ಕಷ್ಟ ಅರ್ಥವಾಗುತ್ತದೆ. ಅದಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ ಎಂದರು. ಇನ್ನೂ ಪಿಡಿಒಗಳ ಸಭೆಯಲ್ಲೂ ನರೇಗಾ ಯೋಜನೆಯಡಿ ಸಾಕಷ್ಟು ಕಾರ್ಯಕ್ರಮವಿದೆ ಅದನ್ನು ಬಳಸಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು . ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

Last modified on 10/08/2018
Rate this item
(0 votes)

ವಿಜಯಬ್ಯಾಂಕ್ ಬ್ಯಾಂಕ್ ಅಧಿಕಾರಿಗಳ ವಿರುದ್ದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಕ್ಯಾತನಹಳ್ಳಿ ಗ್ರಾಮದ ಬಡವರು ಉಪಕಸುಬು ಮಾಡಲು ಮತ್ತು ಆರ್ಥಿಕವಾಗಿ ಅಭಿವೃದ್ಧಿ ಆಗಲು ಬಡತನ ,ನಿರುದ್ಯೋಗ ದಿಂದ  ಹೊರಬರಲು ಆರ್ ಬಿ ಐ  ನಿರ್ದೇಶನದಂತೆ ಭದ್ರತಾ ರಹಿತ ಸಾಲ ಕೊಡಲು ಒತ್ತಾಯಿಸಿ  ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ  ಗ್ರಾಮಸ್ಥರು ವತಿಯಿಂದ  ಮಳವಳ್ಳಿ ತಾಲ್ಲೂಕಿನ ಕುಂದೂರು ಗ್ರಾಮದ ವಿಜಯಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು.

ಬ್ಯಾಂಕ್ ಅಧಿಕಾರಿಗಳ ವಿರುದ್ದ ಘೋಷಣೆ ಕೂಗುತ್ತಾ ಬ್ಯಾಂಕ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು ಈ ಸಂದರ್ಭದಲ್ಲಿ  ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಮಾದು ಮಾತನಾಡಿ, ಕ್ಯಾತನಹಳ್ಳಿ  ಗ್ರಾಮ ಅತಿ ಹಿಂದುಳಿದಿದ್ದು ಪರಿಶಿಷ್ಟ ಜಾತಿ, ಪಂಗಡ, ಮತ್ತು ಹಿಂದುಳಿದ ಜಾತಿಯ ಜನರೇ ಹೆಚ್ಚಿರುವ ಈ ಗ್ರಾಮದಲ್ಲಿ ಭೂಹೀನರು ಹೆಚ್ಚಿದ್ದು, ಜೀವನೋಪಾಯಕ್ಕೆ ಊರೂರು ಅಲೆಯುವುದು ಸರ್ವೆ ಸಾಮಾನ್ಯವಾಗಿದೆ. ಆದರೆ ಕೇಂದ್ರ ಸರ್ಕಾರದ ಬಡತನ ವನ್ನು ಹೋಗಲಾಡಿಸಿ ಸ್ವಾವಲಂಬನೆ ಜೀವನ ನಡೆಸಬೇಕೆಂಬ ತೀರ್ಮಾನ ಜಾರಿಯಾಗಿದೆ.

ನಿರುದ್ಯೋಗ, ಬಡತನದಿಂದ ಜನರು ತೊಂದರೆಗೆ ಸಿಲುಕಿಕೊಂಡಿದ್ದು,  ಇವರಿಗೆ ಈವರೆಗೂ ಯಾವುದೇ ಸೌಲಭ್ಯಗಳು ಸಿಗದೆ ಕಷ್ಟದಲ್ಲಿ ಸಿಕ್ಕಿಕೊಂಡಿದ್ದಾರೆ. ಮತ್ತು ತಮ್ಮ ಬ್ಯಾಂಕಿನಿಂದ  ಯಾವುದೇ ಸಾಲ ಸೌಲಭ್ಯಗಳು ಸಿಕ್ಕಿಲ್ಲ ಆದ್ದರಿಂದ ಆರ್.ಬಿ ಐ ತೀರ್ಮಾನದ ಬಡತನವನ್ನು ತೊಡೆದು ಹಾಕಲು ಗ್ರಾಮೀಣ ಕೂಲಿಕಾರರಿಗೆ ಒಂದು ಲಕ್ಷ ರೂ ಗಳವರೆಗೆ ಸಾಲ ಕೊಡಬೇಕೆಂಬ ನಿರ್ದೇಶನವಿದ್ದರೂ ಅದು ಜಾರಿಯಾಗಿಲ್ಲ ಮುದ್ರ ಮತ್ತು ಇತರ ಯೋಜನೆಗಳು ಮರೀಚಿಕೆಯಾಗಿದೆ ಆದುದ್ದರಿಂದ  61 ಕೂಲಿಕಾರರ ಕುಟುಂಬ ಗಳಿಗೆ ಅವರು ಮೇಕೆ, ಕುರಿ, ಕೋಳಿ, ಹಸು,ಎಮ್ಮೆ ಸಾಕಲು ವ್ಯಾಪಾರ ನಡೆಸಿ ಜೀವನ ಸಾಗಿಸಲು ಪ್ರತಿಕುಟುಂಬಕ್ಕೆ ಕನಿಷ್ಷ 60 ಸಾವಿರದಿಂದ ಒಂದುಲಕ್ಷ ರೂ ಗಳವರೆಗೂ ಸಾಲ ಕೊಡಬೇಕೆಂದು ಒತ್ತಾಯಿಸಿದರು. ಇದಲ್ಲದೆ ಗ್ರಾಮೀಣದ ಜನರಿಗೆ ಬ್ಯಾಂಕ್ ಸಾಲ ಸೌಲಭ್ಯ ದ ಬಗ್ಗೆ ಅರಿವಿನ ಕಾರ್ಯಕ್ರಮ  ಮೂಡಿಸುವಂತೆ ಒತ್ತಾಯಿಸಿದರು.

ಪ್ರತಿಭಟನಾಕಾರರು  ಬ್ಯಾಂಕ್ ಮ್ಯಾನೇಜರ್ ಓಂಕಾರ್ ಹೆಗ್ಗಡೆ ರವರಿಗೆ ಮನವಿ ಸಲ್ಲಿಸಿದ್ದರು ಪ್ರತಿಭಟನೆಯಲ್ಲಿ   ಜಿಲ್ಲಾ ಪ್ರದಾನ ಕಾರ್ಯದರ್ಶಿ ಹನುಮೇಶ್, ತಾಲ್ಲೂಕು ಅಧ್ಯಕ್ಷ ಶಿವಮಲ್ಲಯ್ಯ,  , ಪಾಪಣ್ಣ, ಕ್ಯಾತನಹಳ್ಳಿ ಮಹದೇವಯ್ಯ, ಮಾದೇಶ ,ಆನಂದ ಸೇರಿದಂತೆ ಮತ್ತಿತ್ತರರು ಇದ್ದರು.

Rate this item
(0 votes)

 ಶಾಸಕ ಡಾ.ಕೆ ಅನ್ನದಾನಿ ರವರು ಮಾಜಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ರವರ ವಿರುದ್ದ ಅವಹೇಳನ ಹೇಳಿಕೆ ಮಾಡುತ್ತಿರುವುದು ಸರಿಯಲ್ಲ ಮಳವಳ್ಳಿ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು ಹಾಗೂ ಪುಟ್ಟರಾಮು ನೇತೃತ್ವದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪುಟ್ಟರಾಮು ಮಾತನಾಡಿ, ಶಾಸಕ ಅನ್ನದಾನಿ ಅವರು ಸಮ್ಮಿಶ್ರ ಸರ್ಕಾರದಲ್ಲಿದ್ದರೂ  ಸಭೆ ಸಮಾರಂಭಗಳಲ್ಲಿ  ಕುಮಾರಸ್ವಾಮಿ ಸರ್ಕಾರ ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ತಾಕೀತು ಮಾಡಿದರು. 

ನರೇಂದ್ರಸ್ವಾಮಿರವರು ಶಾಸಕರಾಗಿ, ಸಚಿವರಾಗಿ ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದಾರೆ ಎಂದು ಕ್ಷೇತ್ರದ ಜನತೆಗೆ ಗೊತ್ತಿದೆ. ಆದರೆ ಅವರ ಬಗ್ಗೆ ಹಿಟ್ಟರ್ ಆಡಳಿತ , ದುರಂಹಕಾರಿ ಎಂದು ಸಭೆಗಳಿಗೆ ಹೇಳಿಕೆ ನೀಡಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು.ಒಂದು ವೇಳೆ ಇದೇ ಮುಂದುವರೆದರೆ ಮುಂದಿನ ದಿನಗಳಲ್ಲಿ  ಹೋರಾಟ ನಡೆಸಬೇಕಾಗುತ್ತದೆ. ನಮ್ಮ ನಾಯಕರಾದ ನರೇಂದ್ರಸ್ವಾಮಿರವರು ಕ್ಷೇತ್ರದ ಸಾಧನೆಯನ್ನು ತಾಲ್ಲೂಕಿನ ಜನತೆ ಮೆಚ್ಚಿದ್ದು ಒಂದು ವೇಳೆ  ಶಾಸಕ ಅನ್ನದಾನಿರವರನ್ನು ಮಪರು ಪರೀಕ್ಷೆ ಗೆ ಒಳಪಡಿಸಿದರೆ ಅವರು ನರೇಂದ್ರಸ್ವಾಮಿರವರ ಸಾದನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಎಂದು ನನ್ನ ಅನಿಸಿಕೆ ಎಂದರು.

ಕೆಆರ್ ಎಸ್ ನಲ್ಲಿ 74 ಅಡಿ ಇದ್ದಾಗ ನಾಲೆಗೆ ನೀರು ನೀಡುವಂತೆ  ಈ ಹಿಂದೆ  ಮಾನ್ಯ  ಅನ್ನದಾನಿರವರು  ಪತ್ರಿಭಟನೆ ನಡೆಸಿದ್ದರು ಈಗ ಕೆಆರ್ ಎಸ್ ಭರ್ತಿಯಾಗಿ  ಹೊಳೆ ಹರಿಯುತ್ತಿದ್ದರೂ ಇದುವರೆಗೂ ನಾಲೆ ಗಳಿಗೆ ನೀರು ಬಿಟ್ಟಿಲ್ಲ, ಈಗಾಗಲೇ ಪಕ್ಕದ ತಾಲ್ಲೂಕಿನಲ್ಲಿ  ಪೈರು ಹಾಕಿದ್ದಾರೆ. ಆದರೆ  ನಮ್ಮ ತಾಲ್ಲೂಕು ಕೊನೆಭಾಗವಾಗಿದ್ದು ಇನ್ನೂ ಪೈರು ಹಾಕುವುದಕ್ಕೂ ನೀರು ಬಿಟ್ಟಿಲ್ಲ ಇದೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

        ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ   ಆರ್. ಎನ್ ವಿಶ್ವಾಸ್ , ಉಪಾಧ್ಯಕ್ಷ ನಾದು, ಜಿ.ಪಂ ಸದಸ್ಯರಾದ ಸುಜಾತಪುಟ್ಟು, ಹನುಮಂತ, ಚಂದ್ರಕುಮಾರ ಸೇರಿದಂತೆ ಮತ್ತಿತ್ತರರು ಇದ್ದರು

Rate this item
(0 votes)

ಎರಡು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸಾವನ್ನಪ್ಪಿದ್ದು ನಾಲ್ವರಿಗೆ ಗಾಯ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗೌಡಗೆರೆ ಕ್ರಾಸ್ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸಾವನ್ನಪ್ಪಿದ್ದು ನಾಲ್ವರಿಗೆ ಗಾಯಗೊಂಡ ಘಟನೆ ಗೌಡಗೆರೆ ಕ್ರಾಸ್ ಬಳಿ ನಡೆದಿದೆ. ತಾಲ್ಲೂಕಿನ ಕೆಂಬೂತಗೆರೆ ಗ್ರಾಮದ ದಿನೇಶ್  (35) ಮೃತಪಟ್ಟ ದುದೈವಿ, ಸಂತೋಷ,ವಿನೋದ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ವತ್ರೆಗೆ ಸೇರಿಸಲಾಗಿದೆ. ಕಳೆದ ರಾತ್ರಿ ಒಂದು ಬೈಕ್ ನಲ್ಲಿ ಇಬ್ಬರು ಇನ್ನೊಂದು ಬೈಕ್ ನಲ್ಲಿ ಮೂವರು ಬರುತ್ತಿದ್ದು,  ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ದಿನೇಶ್ ರಸ್ತೆ ಬದಿಯಲ್ಲಿರುವ ಕೆರೆಗೆ ಹಾರಿದ್ದು ತಲೆಗೆ ಪೆಟ್ಟು ಬಿದ್ದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಉಳಿದವರಿಗೆ ತೀವ್ರಗಾಯಗೊಂಡಿದ್ದು,  ಮಳವಳ್ಳಿ ಸಾರ್ವಜನಿಕ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ವತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.  ಈ ಸಂಬಂಧ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲುಮಾಡಿಕೊಂಡಿದ್ದಾರೆ.

Rate this item
(0 votes)

ಸಂತೆಬಾಚಹಳ್ಳಿಯಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಶೀರ್ಷಿಕೆಯಡಿ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಸಂತೆಬಾಚಹಳ್ಳಿಯಲ್ಲಿ ಕೃಷಿ ಇಲಾಖೆ ಹಾಗೂ ಕೃಷಿ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹಾಲಿನ ಡೈರಿ ಮುಂಭಾಗ ಹಮ್ಮಿಕೊಳ್ಳಲಾಗಿತ್ತು. ಇ ಕಾರ್ಯಕ್ರಮದ ಉದ್ದೇಶ ಸಮಗ್ರ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸಿ ರೈತರ ಉತ್ಪಾದನೆ ಹೆಚ್ಚಿಸಲು ತಾಂತ್ರಿಕ ತೆಗಳ ಬಗ್ಗೆ ರೈತರಿಗೆ ಮನವರಿಕೆ ಮಾಡುವುದು.ಮತ್ತು ಕೃಷಿ ವಸ್ತುಗಳ ಪ್ರದರ್ಶನ ಮತ್ತು ವಿಜ್ಞಾನಿ ಗಳೊಂದಿಗೆ ನೇರವಾಗಿ ರೈತರ ಸಂವಾದ ಹಾಗೂ ರೈತರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು.

ಕೃಷಿ ಉಪಕರಣಗಳ ವಸ್ತು ಪ್ರದರ್ಶನವನ್ನು ಸಹ ಏರ್ಪಡಿಸಿ ರೈತರಿಗೆ ಉಪಕರಣಗಳ ಬಗ್ಗೆ ಮಾಹಿತಿಯನ್ನು ಸಹ ಒದಗಿಸಲಾಯಿತು.

 

ಕಾರ್ಯಕ್ರಮದಲ್ಲಿ ತಾ.ಪಂ.ಸದಸ್ಯ ದಿನೇಶ್ (ರಾಜಹುಲಿ) ,ಗ್ರಾ.ಪಂ.ಉಪಾಧ್ಯಕ್ಷರಾದ ದೇವರಾಜ್ ,ಪಿಎಸಿಎಸ್ ಅಧ್ಯಕ್ಷರು ಮಣಿಯಮ್ಮ ,ಎ.ಎಸ್.ರಮೇಶ್ ,ಹೆಚ್.ಜೆ.ನಾರಾಯಣ್, ಜೆ.ಎನ್ ನಾರಾಯಣ ಗೌಡ, ಸಹಾಯಕ ಕೃಷಿ ನಿರ್ದೇಶಕರಾದ ಟಿ.ಎಸ್ .ಮಂಜುನಾಥ್ ,ಕಾ.ಅಧಿಕಾರಿ ಶ್ರೀಧರ, ಸತೀಶ್ ಜಿ .ಎಸ್ ,ಸತೀಶ್ ಚಂದ್ರ ,ಮಾನಸ ಎಂ ,ಅನಂದಕುಮಾರ್, ಜಯಶಂಕರ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

 

Rate this item
(0 votes)

ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಜೈಲ್ ಭರೋ ಚಳುವಳಿ ಕಾರ್ಯಕ್ರಮ 

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಜನವಾದಿ ಮಹಿಳೆ ಸಂಘಟನೆ ಮತ್ತು ವಿವಿದ ಸಂಘಟನೆಗಳ ವತಿಯಿಂದ ಮಳವಳ್ಳಿಪಟ್ಟಣದ  ತಾಲ್ಲೂಕು ಕಚೇರಿ ಮುಂದೆ  ಜೈಲ್ ಭರೋ ಚಳುವಳಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.  ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಮುಂಭಾಗದಿಂದ ಹೊರಟಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ  ಪ್ರಮುಖ ಬೀದಿಗಳ ಮೂಲಕ ಸಾಗಿ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಅವರನ್ನು ತಡೆದರು ನಂತರ ಪೊಲೀಸರಿಗೂ ಪ್ರತಿಭಟನಾಕಾರರು ದಿಕ್ಕಾರ ಕೂಗಿದರು. ಇದೆ ಸಂದರ್ಭದಲ್ಲಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ದೇವಿ , ಮೋದಿರವರು ನಮ್ಮ ತೆರಿಗೆ ಪಡೆದ ಹಣದಲ್ಲಿ ವಿದೇಶ ಸುತ್ತಿ ಮೋಜು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ಕಚೇರಿಗೆ ಪ್ರತಿ ಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದರು.ಪೊಲೀಸರು ನೂರಾರು ಪ್ರತಿಭಟನೆಕಾರರನ್ನು ಬಂಧಿಸಿದರು. ಪ್ರತಿಭಟನೆಯಲ್ಲಿ  ಕರ್ನಾಟಕ  ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಎಲ್ ಭರತ್ ರಾಜ್, ಸಿಐಟಿಯು ಜಿಲ್ಲಾ ಧ್ಯಕ್ಷ ಜಿ.ರಾಮಕೃಷ್ಣ, ಸುಶೀಲ, ಸುನೀತಾ, ತಿಮ್ಮೇಗೌಡ, ಬಸವರಾಜು,  ನೂರಾರು  ಕೂಲಿಕಾರರು ಸೇರಿದಂತೆ ಮತ್ತಿತ್ತರರು ಇದ್ದರು.

Rate this item
(0 votes)

ಮಾಕವಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ರವಿಕುಮಾರ್ ಎಂ ಸಿ ಯವರು ಅವಿರೊದವಾಗಿ ಆಯ್ಕೆ

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲ್ಲೂಕಿನ ಮಾಕವಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ರವಿಕುಮಾರ್ ಎಂ ಸಿ ಯವರು ಅವಿರೊದವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಕೃಷ್ಣ ಮೂರ್ತಿ ಆಯ್ಕೆಯಾದರು ಒಟ್ಟು ಹನ್ನೊಂದು  ಸದ್ಯಸರಲ್ಲಿ ಯಾರು ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ ಕಾರಣ ರವಿ ಕುಮಾರ್ ರವರು ಅವಿರೊದವಾಗಿ ಆಯ್ಕೆಯಾದರು.ಕೆಆರ್ ಪೇಟೆ ತಾಲ್ಲೂಕಿನ ವಿಜಯವಾಣಿ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿರುವ ರವಿ ಕುಮಾರ್ ಎಂ.ಸಿ.ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಗ್ರಾಮಸ್ಥರು ಅಭಿನಂದಿಸಿದರು.ಪಟೇಲ್ ದೇವೇಗೌಡ,ಎಂ ಅರ್ ಮಂಜಣ್ಣ, ನಾಗೇಂದ್ರ, ದ್ಯಾವರಸಣ್ಣ ಮತ್ತು ಯುವ ನಾಯಕ ಮನು ಮತ್ತಿತರರು ಹಾಜರಿದ್ದರು.

Page 32 of 41

Visitors Counter

224981
Today
Yesterday
This Week
This Month
Last Month
All days
8
239
247
1382
6704
224981

Your IP: 18.116.51.117
2024-05-06 00:32

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles