ರಾಜ್ಯಸುದ್ದಿ
ಸಂತೇಬಾಚಹಳ್ಳಿ : ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂತೇಬಾಚಹಳ್ಳಿಯಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.
ಮಸೀದಿ ಆವರಣದಿಂದ ಸಾಮೂಹಿಕ ಮೆರವಣೆಗೆ ಹೊರಟ ಮುಸಲ್ಮಾನ್ ಬಾಂಧವರು ಸರ್ಕಾರಿ ಪದವಿ ಪೂರ್ವ ಕಾಲೇಜು ಎದುರು ಇರುವ ಈದ್ಗಾ ಮೈಧಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಪರಸ್ಪರ ಬಕ್ರೀದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.
ಜಲಾ ಪ್ರವಾಹದಿಂದ ನಲುಗುತ್ತಿರುವ ನಾಡಿನ ಜನರನ್ನು ರಕ್ಷಿಸಬೇಕು. ಮುಂದೆ ಯಾವುದೇ ಅನಾಹುತ ಸಂಭವಿಸದಿರಲೆಂದು ಅಲ್ಲಾನಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಮುಸಲ್ಮಾನ್ ಬಾಂಧವರು ಬಕ್ರೀದ್ ಶುಭಾಶಯ ಕೋರಿದರು.
ರಾಯಸಮುದ್ರ ಗ್ರಾಮದಲ್ಲಿ ಗುಂಡೇಗೌಡ ಲಲಿತಮ್ಮ ದಂಪತಿಗಳ ಜೋಡಿಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ... ಕೃಷ್ಣರಾಜಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ಗುಂಡಣ್ಣ ಲಲಿತಮ್ಮ ದಂಪತಿಗಳನ್ನು ಹತ್ಯೆಮಾಡಿ ತಲೆಮರೆಸಿಕೊಂಡಿದ್ದ ಪಕ್ಕದ ಮನೆಯ ವಾಸಿಯೇ ಆದ ಬೋರೇಗೌಡರ ಮಗ ಯೋಗೇಶನನ್ನು ಕೆ.ಆರ್.ಪೇಟೆ ಪೋಲಿಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲೆಗೆ ಮತ್ತು ಮುಖಕ್ಕೆ ಹೊಡೆದು ಹತ್ಯೆಮಾಡಿರುವುದಾಗಿ ಯೋಗೇಶ ಒಪ್ಪಿಕೊಂಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದರು. ಜೋಡಿಕೊಲೆ ಹತ್ಯೆ ಆರೋಪಿಯನ್ನು ಎಎಸ್ ಪಿ ಬಲರಾಮೇಗೌಡ, ಡಿವೈಎಸ್ ಪಿ ವಿಶ್ವನಾಥ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್, ಅಪರಾಧ ಪತ್ತೆ ಸಿಬ್ಬಂಧಿಗಳಾದ ಹೆಚ್.ಪ್ರಕಾಶ್, ಬಿ.ಎಸ್.ಚಂದ್ರಶೇಖರ್, ಬಸವರಾಜು, ಪ್ರಶಾಂತಕುಮಾರ್, ರಘು, ಗುರುಪ್ರಸಾದ್, ಚಾಲಕರಾದ ಮಂಜುನಾಥ ಮತ್ತು ವಾಸು ಭಾಗವಹಿಸಿದ್ದರು. ಜೋಡಿಕೊಲೆ ಆರೋಪಿಯನ್ನು ಪತ್ತೆಹಚ್ಚಿದ ಕೆ.ಆರ್.ಪೇಟೆ ಪೋಲಿಸರ ತಂಡವನ್ನು ಎಸ್ ಪಿ ಶಿವಪ್ರಕಾಶ್ ದೇವರಾಜ್ ಅಭಿನಂದಿಸಿದ್ದಾರೆ...
ಕೃಷ್ಣರಾಜಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿರುವ ಗುಂಡೇಗೌಡ ಲಲಿತಮ್ಮ ದಂಪತಿಗಳ ಕೊಲೆ ಪ್ರಕರಣದಲ್ಲಿ ಪಕ್ಕದ ಮನೆಯವನಾದ ಒಬ್ಬರಾದ ಯೋಗೇಶ್ ಅವರಿಂದ ಮಾತ್ರ ಈ ಜೋಡಿಕೊಲೆ ನಡೆದಿಲ್ಲ ಯೋಗೇಶ್ ಅವರೊಂದಿಗೆ ಹಲವಾರು ಜನರು ಈ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ಶಂಕೆ ಹಾಗೂ ಅನುಮಾನವಿದ್ದು ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆಯನ್ನು ನಡೆಸಿ ತಪ್ಪಿತಸ್ಥರೆಲ್ಲರಿಗೂ ಶಿಕ್ಷೆಯನ್ನು ವಿಧಿಸಬೇಕು ಎಂದು ಇಂದು ಗ್ರಾಮಕ್ಕೆ ಭೇಟಿ ನೀಡಿದ್ದ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್ ಅವರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿ ಕೆಲಕಾಲ ದಿಗ್ಬಂಧನ ವಿಧಿಸಿ ಆಕ್ರೋಶ ವ್ಯಕ್ತಪಡಿಸಿದರು... ಯೋಗೇಶ್ ಒಬ್ಬ ಅಮಾಯಕನಾಗಿದ್ದು ಈತನೊಬ್ಬನೇ ವಯಕ್ತಿಕ ದ್ವೇಷದಿಂದ ಕೊಲೆ ಮಾಡಿದ್ದಾನೆ ಎಂದರೆ ನಂಬಲು ಸಾಧ್ಯವಿಲ್ಲ..ಕೊಲೆಯಾಗಿರುವ ದಂಪತಿಗಳ ಬಳಿಯಿದ್ದ ಒಡವೆಗಳು ಮತ್ತು ಹಣವೂ ಕಾಣುತ್ತಿಲ್ಲ. ಆದ್ದರಿಂದ ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಪ್ರತಿಭಟನೆ ನಡೆಸಲು ಮುಂದಾದಾಗ ಜಿಲ್ಲಾ ಪಂಚಾಯತಿ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು ಗ್ರಾಮಸ್ಥರನ್ನು ಸಮಾಧಾನಪಡಿಸಿ ಹದಿನೈದು ದಿನಗಳಲ್ಲಿ ಜೋಡಿಕೊಲೆ ಪ್ರಕರಣದ ಸಂಪೂರ್ಣ ವಿವರವನ್ನು ನೀಡುತ್ತಾರೆ, ಸಹಕರಿಸಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಗ್ರಾಮಸ್ಥರು ಕೈಬಿಟ್ಟರು...
ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸಧ್ಯದಲ್ಲಿಯೇ ನಡೆಯಲಿರುವ ಉಪಚುನಾವಣೆಯಲ್ಲಿ ಬಿಎಸ್ ಪಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಹೋರಾಟ ನೀಡಲಾಗುವುದು... ದೇಶದ ಅತೀ ದೊಡ್ಡ 3ನೇ ಪಕ್ಷವಾಗಿರುವ ಬಿ.ಎಸ್.ಪಿ ಅಭ್ಯರ್ಥಿಯನ್ನು ತಾಲ್ಲೂಕಿನ ಪ್ರಜ್ಞಾವಂತ ಮತದಾರರು ಗೆಲ್ಲಿಸಿ ಆಶೀರ್ವದಿಸಬೇಕು ಎಂದು ರಾಜ್ಯ ಬಿಎಸ್ ಪಿ ಪ್ರಧಾನ ಕಾರ್ಯದರ್ಶಿ ಡಾ.ಕೃಷ್ಣಮೂರ್ತಿ ಮನವಿ ಮಾಡಿದರು...ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಪಿ ಪಕ್ಷವು ಜೆಡಿಎಸ್ ಪಕ್ಷದೊಂದಿಗೆ ಸ್ಥಾನ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್ ಪಕ್ಷಕ್ಕೆ ಅಕ್ಕ ಮಾಯಾವತಿ ಅವರು ಬೆಂಬಲಿಸಿದ್ದರು. ಬದಲಾಗಿರುವ ರಾಜಕಾರಣದಿಂದಾಗಿ ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ ಎಲ್ಲಾ 17ಸ್ಥಾನಗಳಲ್ಲಿಯೂ ಬಿಎಸ್ ಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಹೋರಾಟ ನೀಡಲಾಗುವುದು ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ನಡೆಯುವುದು ಶತಸಿದ್ಧವಾಗಿರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಸಂಘಟನೆಯ ಕಡೆಗೆ ಗಮನಹರಿಸಿ ಆನೆಯ ಗುರುತಿಗೆ ಭರ್ಜರಿ ಗೆಲುವು ತಂದುಕೊಡಬೇಕು ಎಂದು ಕೃಷ್ಣಮೂರ್ತಿ ಕರೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಬಿಎಸ್ ಪಿ ಮುಖಂಡರಾದ ಹರಿಹರಪುರ ಶಿವಕುಮಾರ್, ಚಿಕ್ಕಗಾಡಿಗನಹಳ್ಳಿ ಚೆಲುವರಾಜು, ಬಸ್ತಿ ಪ್ರದೀಪ ಮತ್ತಿತರರು ಉಪಸ್ಥಿತರಿದ್ದರು....
ಸಾಲದ ಬಾಧೆ ತಾಳಲಾರದೆ ಕೆ.ಆರ್.ಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ಹೊರವಲಯದ ತೋಟಗಾರಿಕೆ ಫಾರಂ ಬಳಿ ಪ್ರಗತಿಪರ ರೈತ ಎಂ.ಆರ್.ಯೋಗೇಶ್ (45)ನೇಣಿಗೆ ಶರಣು... ಕೃಷ್ಣರಾಜಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ರಾಮೇಗೌಡರ ಪುತ್ರನಾದ ಯೋಗೇಶ್ ಕೃಷಿ ಚಟುವಟಿಕೆಗಳಿಗೆ ಹಾಗೂ ತಮ್ಮ ಮಗಳ ಮದುವೆಗೆ 10ಲಕ್ಷರೂಪಾಯಿಗಳಿಗೂ ಹೆಚ್ಚಿನ ಸಾಲ ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಮುಂಜಾನೆ ಎದ್ದು ಜಮೀನಿಗೆ ಹೋದಾಗ ಮನನೊಂದಿದ್ದ ಯೋಗೇಶ್ ಅಲ್ಲಿಯೇ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಗ್ರಾಮಾಂತರ ಠಾಣೆಯ ಪೋಲಿಸರಿಗೆ ಗ್ರಾಮದ ಮುಖಂಡ ಸುದ್ಧಿಯನ್ನು ಮುಟ್ಟಿಸಿದ್ದು ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಸ್ಥಳಕ್ಜೆ ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ... ಮೃತರ ಬಂಧುಗಳ ಆಕ್ರಂಧನವು ಮುಗಿಲು ಮುಟ್ಟಿದೆ....
ಡೆಂಗ್ಯೂ ಜ್ವರಕ್ಕೆ ಅಗಸರಹಳ್ಳಿ ಗ್ರಾಮದ ಶಾಲಾ ಬಾಲಕಿ ಸಾವು, ಮತ್ತೊಬ್ಬ ಬಾಲಕಿ ತೀವ್ರ ಅಸ್ವಸ್ಥ... ಬಲಿ....ಅಗಸರಹಳ್ಳಿ ಗ್ರಾಮದ ರವಿಕುಮಾರ್ ರಾಣಿ ದಂಪತಿಗಳ ಪುತ್ರಿ ಕೆ.ಆರ್.ಪೇಟೆ ಪಟ್ಟಣದ ಪ್ರಿಯದರ್ಶಿನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಾವತಿ(7) ಮೃತ ದುರ್ದೈವಿಯಾಗಿದ್ದಾರೆ... ಈಕೆಯ ಸಹೋದರಿ ಪ್ರೇರಣ(5)ಕೂಡ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಎಸ್ ಎಸ್ ಆಸ್ಪತ್ರೆಯಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹೇಮಾವತಿ ಮತ್ತು ಪ್ರೇರಣಾ ಸಹೋದರಿಯರು ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯಲ್ಲಿ ಸ್ಥಳಾಂತರಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಹೇಮಾವತಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರೆ ಈಕೆಯ ಸಹೋದರಿ ತೀವ್ರವಾಗಿ ಅಸ್ವಸ್ಥರಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಅಗಸರಹಳ್ಳಿ ಗ್ರಾಮದಲ್ಲಿ ಆತಂಕವು ಮನೆ ಮಾಡಿದೆ..
ಮಳವಳ್ಳಿ: ಬೆನುಮನಹಳ್ಳಿ ಕುಮಾರ್ ಹತ್ಯೆ ಮಸುವ ಮುನ್ನವೇ ಮತ್ತೆ ಪುಂಡರ ಅಟ್ಟಹಾಸ ಮರುಕಳಿಸಿದ್ದು ಹಾಡುಹಗಲೇ ನಾಲ್ವರು ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬನ್ನು ಲಾಂಗ್ ನಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ. ಹಲಗೂರು ಗ್ರಾಮದಲ್ಲಿ ನಡೆದಿದೆ
ರಾಮನಗರಜಿಲ್ಲೆಯ ಕನಕಪುರ ತಾಲ್ಲೂಕು ದಾಳಿಂಬ ಗ್ರಾಮ ರಾಮು (30) ಕೊಲೆಯಾದ ವ್ಯಕ್ತಿ
ಹಲಗೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬಿಕೆ ಪ್ರಾವಿಷನ್ ವ್ಯಾಪಾರ ಮಾಡುತ್ತಿದ್ದ ಎನ್ನಲಾಗಿದೆ
ಕಳೆದ ಮೂರು ದಿನಗಳ ಹಿಂದೆ ಬಾರ್ ಯೊಂದರಲ್ಲಿ ಬೆನುಮನಹಳ್ಳಿ ಕುಮಾರ್ ಹತ್ಯೆಯ ಆರೋಪಿ ಕೀರ್ತಿ ಹಾಗೂ ಮೃತ ರಾಮು ನಡುವೆ ಜಗಳವಾಗಿ ಕೀರ್ತಿ ಮೇಲೆ ನಡೆಸಿದ್ದು, ಕೀರ್ತಿ ಆಸ್ವತ್ರೆಗೆ ಸೇರಿದ್ದು ಅಸ್ವತ್ರೆಯಲ್ಲೇ ಆಸ್ಪತ್ರೆಯಲ್ಲಿ ಸ್ಕೆಚ್ ಹಾಕಿ ಪ್ರಮೋದ ಹಾಗೂ ಸ್ನೇಹಿತರು ಸೇರಿ ಮುಖಕ್ಕೆ ಬಟ್ಟೆಕಟ್ಟಿಕೊಂಡು, ಬೆಳಿಗ್ಗೆ 9 ಗಂಟೆಯ ಸಮಯದಲ್ಲಿ ಬಿ.ಕೆ ಪ್ರಾವಿಜನ್ ಸ್ಟೋರ್ ನ ಒಳಕ್ಕೆ ಲಾಂಗ್ ನೊಂದಿಗೆ ಅಂಗಡಿಯಲ್ಲಿದ್ದ ರಾಮು ವಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದರು ಎನ್ನಲಾಗಿದೆ
ಬೆಂಗಳೂರಿನಿಂದ ಬಂದು ನಾಲ್ವರು ದುಷ್ಕರ್ಮಿಗಳ ಮರಣಾತಿಂಕ ಹಲ್ಲೆ ನಡೆಸಿದ್ದು ಮಳವಳ್ಳಿ ಸಾರ್ವಜನಿಕ ಆಸ್ವತ್ರೆಗೆ ಸಾಗಿಸುವ ಮಧ್ಯೆ ಮಾರ್ಗದಲ್ಲಿ ಸಾವನ್ನಿಪ್ಪಿದ್ದ ಎನ್ನಲಾಗಿದೆ. ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ವತ್ರೆಯ ಶವಗಾರದಲ್ಲಿ ಹಿಡಲಾಗಿದೆ
ಹಲಗೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ
ಪಟ್ಟಣದ ಪುರಸಭಾ ಮುಖ್ಯ ಅಧಿಕಾರಿಯಾದ ಸತೀಶ್ ಕುಮಾರ್ ಅವರ ನೇತೃತ್ವದಲ್ಲಿ ಅಂಗಡಿಗಳು ಮೇಲೆ ದಾಳಿ 220 ಕೆಜಿಗೂ ಹೆಚ್ಚು ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ ..
ನಂತರ ಮಾತನಾಡಿದ ಸತೀಶ್ ಕುಮಾರ್ ಅವರು ಬೆಳಿಗ್ಗೆ ಎರಡು ಅಂಗಡಿಯ ಮೇಲೆ ದಾಳಿ ಮಾಡಿದ್ದೇವೆ . ಪರಿಸರ ಹಾಳಾಗುತ್ತಿದ್ದು ದಿನನಿತ್ಯ ಪ್ಲಾಸ್ಟಿಕನ್ನು ಬಳಕೆಯಿಂದ ಹಲವಾರು ಕಾಯಿಲೆಗಳು ಬರುತ್ತಿದ್ದು , ದಿನೇ ದಿನೆ ಮಳೆ ಬರುತ್ತಿದ್ದು ಪ್ಲಾಸ್ಟಿಕ್ ಬಳಕೆಯಿಂದ ಮಲೇರಿಯಾ ಕಾಯಿಲೆಗಳು ಉಂಟಾಗುತ್ತದೆ , ಪರಿಸರ ಸಮೃದ್ಧಿ ಅಧಿಕಾರಿಯಾದ ರಕ್ಷಿತ್, ಆರೋಗ್ಯ ನಿರೀಕ್ಷಕರಾದ ನರಸಿಂಹಯ್ಯ H.R, ಹಾಗೂ ಪುರಸಭ ಸಿಬ್ಬಂದಿಗಳ ಸಮ್ಮುಖದಲ್ಲಿ ಆಲೆ ಕಳೆದ ಎರಡು ದಿನಗಳಿಂದಲೂ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದೇವೆ ಪೊಲೀಸ್ ಅಧಿಕಾರಿಗಳ ಸಹಾಯದಿಂದ ಸಮುದಾಯ ಭವನದ ಮೇಲೆ ದಾಳಿ ಮಾಡಿ ದಂಡ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.ಈ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಬೇಕಾಗುತ್ತದೆ ಎಂದು ಮನವಿಯನ್ನು ಮಾಡಿದರು