ರಾಜ್ಯಸುದ್ದಿ
ಕೆ.ಆರ್.ಪೇಟೆ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ... ವಿದ್ಯಾರ್ಥಿಗಳೊಂದಿಗೆ ನೃತ್ಯಕ್ಕೆ ಹೆಜ್ಜೆ ಹಾಕಿದ ಪ್ರಾಧ್ಯಾಪಕರು.. ಮುಗಿಲು ಮುಟ್ಟಿದ ವಿದ್ಯಾರ್ಥಿನಿಯರ ಸಂಭ್ರಮ...
ಕೃಷ್ಣರಾಜಪೇಟೆ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ರಾಷ್ಟ್ರೀಯ ಸೇವಾಯೋಜನೆ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ...ಗುರುನಮನ ಸಲ್ಲಿಸಿದ ವಿದ್ಯಾರ್ಥಿಗಳು... ವಿದ್ಯಾರ್ಥಿಗಳೊಂದಿಗೆ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ಶಿಕ್ಷಕರು..ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಧ್ಯಾಪಕರಿಗೆ ಬಹುಮಾನಗಳನ್ನು ವಿತರಿಸಿದ ವಿದ್ಯಾರ್ಥಿಗಳು ಅರ್ಥಪೂರ್ಣ ಶಿಕ್ಷಕರ ದಿನಾಚರಣೆ...ಆರೋಗ್ಯವಂತ ಸಮಾಜದ ನಿರ್ಮಾಣ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ನಿರ್ಣಾಯಕವಾಗಿದೆ...ಕನ್ನಡ ಪ್ರಾಧ್ಯಾಪಕ ಸಂಪತ್ ಕುಮಾರನ್ ಅಭಿಮತ...ಶಿಕ್ಷಕರು ಸಮಾಜದ ಪರಿವರ್ತಕರಾಗಿದ್ದಾರೆ..ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಕಂಡು ಹೆಮ್ಮೆಪಡುವ ಶಿಕ್ಷಕರು...ವಿದ್ಯಾರ್ಥಿಗಳು ಸರ್ವಶ್ರೇಷ್ಠ ಸಾಧನೆ ಮಾಡಿ ಗುರುಕಾಣಿಕೆ ನೀಡಲು ಸಂಪತ್ ಕುಮಾರನ್ ಮನವಿ...ಕಾಲೇಜಿನ ಪ್ರಾಂಶುಪಾಲ ಡಾ.ಸಿ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು... ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಟಿ.ಎಂ.ದೇವರಾಜು, ಡಾ.ಜಿ.ಪಿ.ಗಾಯಿತ್ರಮ್ಮ, ನಂಜುಂಡಯ್ಯ, ಮಂಜುನಾಥ, ಶಿವಕುಮಾರ್, ಡಾ.ಪ್ರಮೋಧಿನಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಕೆ.ಆರ್.ನೀಲಕಂಠ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿ...ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ರಂಜಿಸಿದ ವಿದ್ಯಾರ್ಥಿನಿಯರು….
ಪ್ರಜಾಪ್ರಭುತ್ವದಲ್ಲಿ ಕಾನೂನು ಎಲ್ಲಾರಿಗೂ ಒಂದೆ ನಳೀನ್ ಕುಮಾರ್
ಹಾಸನ: ಪ್ರಜಾಪ್ರಭುತ್ವದಲ್ಲಿ ಕಾನೂನು ಎಂಬುದು ಎಲ್ಲಾರಿಗೂ ಒಂದೆ ಎಂದು ಡಿ.ಕೆ. ಶಿವಕುಮಾರ್ ಬಂಧನದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ತಿಳಿಸಿದರು.
ನಗರದ ಎಂ.ಜಿ. ರಸ್ತೆ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರೂ ಕಾನೂನಡಿ ಶಿಕ್ಷೆ ಆಗಲೇಬೇಕು. ಆ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ರವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಸೂಕ್ತ ದಾಖಲೆ ನೀಡಿದ್ದರೇ ನಿರ್ದೋಷಿ ಆಗಬೇಕಾಗಿತ್ತು. ಯಾವ ದಾಖಲೆ ನೀಡದ ಕಾರಣ ಪೊಲೀಸರು ಬಂಧಿಸಿದ್ದಾರೆ ಎಂದರು. ಬೀದಿಗೆ ಬಂದು ಕಲ್ಲು ಎಸೆಯುವುದು, ಬೆಂಕಿ ಹಾಕುವುದು ಇದು ಯಾವ ಮಾರ್ಗವಾಗಿದೆ ಎಂದು ಪ್ರಶ್ನಿಸಿದರು. ಶಿವಕುಮಾರ್ ವಿರುದ್ಧ ಎರಡು ವರ್ಷಗಳ ಹಿಂದೆ ಪ್ರಕರಣವನ್ನು ದಾಖಲು ಮಾಡಲಾಗಿದೆ ವರತು ಇದು ಹೊಸ ಪ್ರಕರಣವಲ್ಲ. ಇಲ್ಲಿವರೆಗೂ ಕೆಳಿದ ದಾಖಲೆ ಕೊಡದ ಕಾರಣ ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಯಾವ ಕಾರಣಕ್ಕೂ ಏಕಾಏಕಿ ಬಂಧಿಸಲು ಮುಂದಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಪಕ್ಷಕ್ಕೂ ಈ ವಿಚಾರದಲ್ಲಿ ಯಾವ ಸಂಬಂಧವಿರುವುದಿಲ್ಲ. ಕಾರ್ಯಕರ್ತರು ಬಿಜೆಪಿ ಸಂಘಟನೆಗೆ ಮುಂದಾಗಿ ಸಂಘಟಿಸುವಂತೆ ಕರೆ ಕೊಟ್ಟರು.
ಈಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀಲೆ ಅಣ್ಣಪ್ಪ, ಶಾಸಕ ಪ್ರೀತಮ್ ಜೆ. ಗೌಡ, ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್, ಎ. ಮಂಜು, ಹೆಚ್.ಎಂ. ವಿಶ್ವನಾಥ್, ಬಸವರಾಜು ಇತರರು ಪಾಲ್ಗೊಂಡಿದ
ಪುತ್ತೂರು: ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿಯ ಭರ್ಭರ ಹತ್ಯೆ: ಸಂಪ್ಯ ಪೋಲೀಸ್ ಠಾಣೆಯ ಎದುರಿನ ಗಣೇಶೋತ್ಸವ ಪೆಂಡಲ್ ನಲ್ಲಿ ದುರ್ಘಟನೆ ಪುತ್ತೂರು ಸೆ.4: ಪುತ್ತೂರು ತಾಲೂಕಿನ ಗ್ರಾಮಾಂತರ ಪೋಲೀಸ್ ಠಾಣೆಯಾದ ಸಂಪ್ಯ ಪೋಲೀಸ್ ಠಾಣೆಯ ಎದುರಿನ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಭರ್ಭರ ಹತ್ಯೆ ನಡೆದಿದೆ. ಕೊಲೆಯಾದವರನ್ನು ಪುತ್ತೂರು ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ. ಸೆ.3 ರಂದು ಮಧ್ಯರಾತ್ರಿ ಅಂದಾಜು 12 ಗಂಟೆಯ ಸುಮಾರಿಗೆ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಕಾರ್ತಿಕ್ ಮೇರ್ಲರ ಎದೆಗೆ ಚೂರಿ ಹಾಕಿದ್ದರೆ. ಕೊಲೆಗೆ ಈ ಹಿಂದಿನ ವೈಷಮ್ಯವೇ ಕಾರಣ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂದಿಸಿದ್ದು, ಪೋಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಪಿ ಲಕ್ಷ್ಮೀ ಪ್ರಸಾದ್ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಇಡಿ ಕುಣಿಕೆಯಿಂದ ಹೊರ ಬರ್ತಾರೆ... ಅವರ ಮೇಲಿರುವ ಆರೋಪಗಳಿಂದ ಮುಕ್ತರಾಗಿ ಸಧ್ಯವೇ ಹೊರ ಬರ್ತಾರೆ..
.ಡಿ.ಕೆ.ಶಿವಕುಮಾರ್ ನನ್ನ ಆತ್ಮೀಯ ಸ್ನೇಹಿತರು..ಅವರಿಗೆ ಶುಭವಾಗಲಿ ಎಂದು ದಯಾಮಯನಾದ ಭಗವಂತನನ್ನು ಪ್ರಾರ್ಥಿಸುತ್ತೇನೆ...ಅನರ್ಹ ಶಾಸಕ ಡಾ.ನಾರಾಯಣಗೌಡ ವಿಶ್ವಾಸ...ಎಲ್ಲವೂ ಒಳ್ಳೇದಾಗ್ತದೆ...ಶಿವಕುಮಾರ್ ಹವಾಲಾ ಹಣ ಪ್ರಕರಣದಿಂದ ಮುಕ್ತರಾಗ್ತಾರೆ...
ಡಿಕೆಶಿ ಬಂಧನ ವಿರೋಧಿಸಿ ಕೆ.ಆರ್.ಪೇಟೆಯಲ್ಲಿ ಮೈತ್ರಿಪಕ್ಷಗಳ ಮುಖಂಡರಿಂದ ರಸ್ತೆ ತಡೆ..ಟಯರ್ ಸುಟ್ಟು ಆಕ್ರೋಶ...ರಾಜಕೀಯ ದುರುದ್ಧೇಶದ ಮೊಕದ್ದಮೆ ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್....
ಕರ್ನಾಟಕ ರಾಜ್ಯದ ಮಾಜಿಸಚಿವ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಕೇಂದ್ರದ ಆದಾಯ ತೆರಿಗೆ ಇಲಾಖೆಯು ಹವಾಲಾ ಹಣ ಪ್ರಕರಣದಲ್ಲಿ ದುರುದ್ದೇಶಪೂರ್ವಕವಾಗಿ ಬಂಧಿಸಿ ತನಿಖೆಗೆ ಸಹಕಾರ ನೀಡಲಿಲ್ಲವೆಂದು ಸುಳ್ಳು ದೂರನ್ನು ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು... ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿದ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಟಯರ್ ಗಳನ್ನು ಸುಟ್ಟು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಷಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು... ಕೇಂದ್ರ ಸರ್ಕಾರವು ಕೂಡಲೇ ಇಡಿ ಇಲಾಖೆಗೆ ನಿರ್ದೇಶನ ನೀಡಿ ಡಿ.ಕೆ.ಶಿವಕುಮಾರ್ ಅವರನ್ನು ಬಿಡುಗಡೆಗೊಳಿಸಿ ರಾಜಕೀಯ ದುರುದ್ಧೇಶದಿಂದ ದಾಖಲಿಸಿರುವ ಪ್ರಕರಣವನ್ನು ಕೈಬಿಡಬೇಕು ಎಂದು ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿ.ಪಂ ಉಪಾಧ್ಯಕ್ಷೆ ಗಾಯತ್ರಿ, ಮಾಜಿಶಾಸಕ ಬಿ.ಪ್ರಕಾಶ್, ಜಿ.ಪಂ ಸದಸ್ಯರಾದ ಹೆಚ್.ಟಿ.ಮಂಜು, ಬಿ.ಎಲ್.ದೇವರಾಜು, ರಾಮದಾಸು, ಮಾಜಿ ಜಿ.ಪಂ ಸದಸ್ಯರಾದ ಬೇಲದಕೆರೆ ಪಾಪೇಗೌಡ, ಬಿ.ನಾಗೇಂದ್ರಕುಮಾರ್, ವಿ.ಮಂಜೇಗೌಡ, ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ರವೀಂದ್ರಬಾಬು, ಮುಖಂಡರಾದ ಹರಳಹಳ್ಳಿ ವಿಶ್ವನಾಥ, ಪ್ರೇಮಕುಮಾರ್, ಕೆ.ಬಿ.ಮಹೇಶ್ ಮತ್ತಿತರರು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿ...
ಮಳವಳ್ಳಿ: ವಿದ್ಯುತ್ ತಂತಿ ತಗಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ ಘಟನೆ ಮಳವಳ್ಳಿತಾಲ್ಲೂಕಿನ ಕಂಸಾಗರ ಗ್ರಾಮದಲ್ಲಿ ನಡೆದಿದೆ
ಮಳವಳ್ಳಿ ತಾಲ್ಲೂಕಿನ ಕಂಸಾಗರ ಗ್ರಾಮದ ಹಾಡ್ಲಿ ಗ್ರಾಮ ಪಂಚಾಯಿತಿ ವಾಟರ್ ಮೆನ್ ಆಗಿ ಕೆಲಸಮಾಡುತ್ತಿದ ಸಿದ್ದರಾಜು(48)ಎಂಬವರು ಮೃತಪಟ್ಟ ದುದೈವಿ
ಇಂದುಬೆಳಗ್ಗೆ ನಿತ್ಯ ಕರ್ಮ ಗಳನ್ನು ಮಾಡಲೆಂದು ಜಮೀನಿನ ಬಳಿ ಬಂದಾಗ ವಿದ್ಯುತ್ ತಂತಿ ತಗಲಿ ಸ್ಥಳದಲ್ಲಿ ಸಾವುನಪ್ಪಿದ್ದಾನೆ.
ದುರಂತವೆಂದರೆ ಮೃತ ನ ತಾಯಿ ಕೆಂಪಮ್ಮನವರ ಉತ್ತರಕ್ರಿಯ ಅಧಿಕಾರಿ ಕಾರ್ಯವು ಇಂದೂ ನಡೆಯುತ್ತಿದೆ ಆದರಿಂದ ಇಂದು ಬೆಳಗ್ಗೆ ಜನಗಳನ್ನು ಅಡಿಗೆ ಮನೆ ಹತ್ತಿರ ಬರುವಂತೆ ತಿಳಿಸಿ ಬಯಲು ಶೌಚಾಲಯ ಎಂದು ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಈ ವಿಚಾರವಾಗಿ ಜಿಲ್ಲಾ ಪಂಚಾಯತ್ ಸದಸ್ಯ ರವಿ ಮಾತನಾಡಿ ಚೆಸ್ಕಾಂ ಅಧಿಕಾರಿಗಳಿಗೆ ಗ್ರಾಮದಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳು ತುಂಡಾಗಿ ಎಂದು ತಿಳಿಸಿದರು ಇದುವರೆಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಅವರ ನಿರ್ಲಕ್ಷ್ಯತೆಯಿಂದ ಈ ಒಂದು ಘಟನೆ ನಡೆದಿದೆ ಆದುದರಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದ್ದಾರೆ
ಈ ಸಂಬಂದ ಹಲಗೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕೃಷ್ಣರಾಜಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಮಕ್ಕಳ ಬೈಸಿಕಲ್ ವಿತರಣಾ ಕಾರ್ಯಕ್ರಮ...ಮಕ್ಕಳ ಸುಪ್ತ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ.. ಮಕ್ಕಳು ತಮ್ಮಲ್ಲಿ ಸುಪ್ತವಾಗಿರುವ ಕಲಾ ಚಟುವಟಿಕೆಗಳನ್ನು ಶ್ರದ್ಧಾ ಭಕ್ತಿಯಿಂದ ಕಲಿತು ಪ್ರದರ್ಶನ ಮಾಡಿ ಸಾಧನೆ ಮಾಡಬೇಕು ಎಂದು ಕರೆ ನೀಡಿದ ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಗಾಯತ್ರಿರೇವಣ್ಣ...ಕಾರ್ಯಕ್ರಮದಲ್ಲಿ ಬಿಇಓ ರೇವಣ್ಣ, ತಾ.ಪಂ ಸ್ಥಾಯಿಸಮಿತಿ ಅಧ್ಯಕ್ಷ ರಾಜು, ಜಿ.ಪಂ ಸದಸ್ಯರಾದ ಬಿ.ಎಲ್.ದೇವರಾಜು, ಮುಖ್ಯಶಿಕ್ಷಕ ಅನಂತು, ಗೋವಿಂದರಾಜು, ಪಿ.ಜೆ.ಕುಮಾರ್, ಎಸ್.ಕೆ.ರವಿಕುಮಾರ್, ಕ್ಷೇತ್ರಸಮನ್ವಯಾಧಿಕಾರಿ ಲಿಂಗರಾಜು ಸೇರಿದಂತೆ ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು...