ರಾಜ್ಯಸುದ್ದಿ
ಮಾನವನಾಗಿ ಹುಟ್ಟಿದ ಮೇಲೆ ಏನಾದರೂ ಸಾಧಿಸಬೇಕು ಅದಕ್ಕಾಗಿ ವಿದ್ಯಾಭ್ಯಾಸ ವನ್ನು ಪ್ರತಿಯೊಬ್ಬರು ಮಾಡುವಂತೆ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಹಾಗೂ ಡಾ.ಲೋಹಿಯಾ ರಾಮಮನೋಹರ ವಿಚಾರ ವೇದಿಕೆಯ ಸಂಸ್ಥಾಪಕ ಡಾ.ದಡದಪುರ ಶಿವಣ್ಣ ತಿಳಿಸಿದರು.
ಮಳವಳ್ಳಿ: ತಾಲ್ಲೂಕಿನ ದಡದಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 75 ವರ್ಷದ ವಜ್ರ ಮಹೋತ್ಸವ ಹಾಗೂ 4 ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ವನ್ನು ಡಾ.ದಡದಪುರ ಶಿವಣ್ಣ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೂ ಇಂಗ್ಲಿಷ್ ಭಾಷೆಯನ್ನು ಕಲಿಯಬೇಕಾಗಿದೆ. ಹಳ್ಳಿಗಾಡು ಅಭಿವೃದ್ಧಿ ಯಾದರೆ ಮಾತ್ರ ದೇಶ ಪ್ರಗತಿಯಾಗುತ್ತದೆ. ಎಂದ ಅವರು ತಾನು ಓದಿದ ಶಾಲೆಯ ಸಮಾರಂಭದಲ್ಲೇ ನಾನು ಸತ್ತ ಮೇಲೆ ನನ್ನ ಸರ್ವಾಂಗ ದೇಹವನ್ನು ಧಾನ ಮಾಡುವುದಾಗಿ ಘೋಷಣೆ ಮಾಡಿದ್ದು ಅದಲ್ಲದೆ ಶಾಲಾ ವತಿಯಿಂದ ಮಾಡುವ ಸನ್ಮಾನ ವನ್ನು ಮಾಡಿಸಿಕೊಳ್ಳದೆ ಅದನ್ನು ತನ್ನ ತಾಯಿಗೆ ಸ್ವತಃ ಅವರ ಕೈಯಲ್ಲಿ ಸನ್ಮಾನಮಾಡಿ ಕಾಲಿಗೆ ನಮಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರದರು. ಇನ್ನೂ ಶಾಲಾ ಅಭಿವೃದ್ಧಿಗೆ ನನ್ನ ಕೈಲಾದ ಅಳಿಲು ಸೇವೆ ಮಾಡುವುದಾಗಿ ಜೊತೆ ಗ್ರಾಮದ ಅಭಿವೃದ್ಧಿ ಗೂ ಸಹಕಾರ ನೀಡುವುದಾಗಿ ತಿಳಿಸಿದರು ಈ ಶಾಲೆಯಲ್ಲಿ ಓದಿದ್ದಂತಹ ಹಾಗೂ ನನ್ನಂತಹ ವಿದ್ಯಾರ್ಥಿಗಳು ಬಹಳ ಮಂದಿ ಇದ್ದಾರೆ ಅವರು ಸಾಕಷ್ಟು ಆರ್ಥಿಕವಾಗಿ ಪ್ರಗತಿ ಕಂಡಿದ್ದಾರೆ ಅವರು ಸಹ ಹಳ್ಳಿಗಾಡಿನ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುವಂತಹ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ ಅವರು ನಾನು ಹಾಗೂ ಒಬ್ಬ ಉನ್ನತ ಅಧಿಕಾರಿ ಸೇರಿ ಬೆಂಗಳೂರಿನಲ್ಲಿ ಐಎಎಸ್ ಹಾಗೂ ಕೆಎ ಎಸ್ ತರಬೇತಿ ಪ್ರಾರಂಭ ಮಾಡಿದ್ದೇವೆ ಇದರಿಂದ ಪ್ರತಿಯೊಬ್ಬರು ಉನ್ನತ ಅಧಿಕಾರಿಯಾಗಲಿ ಎನ್ನುವುದೇ ನಮ್ಮ ಉದ್ದೇಶ ಎಂದರು ಇನ್ನೂ ಕಾರ್ಯಕ್ರಮ ದಲ್ಲಿ ಶಾಲಾ ಪ್ರಗತಿಗೆ ಕಾರಣ ಶಾಲಾ ಶಿಕ್ಷಕರಿಗೆ ದಡದಪುರಶಿವಣ್ಣರವರು ಸನ್ಮಾನಿಸಿ ಗೌರವ ಸೂಚಿಸಿದರು ಇನ್ನೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿ ಹಾಗೂ ತಾ.ಪಂ ಮಾಜಿ ಚಿಕ್ಕಲಿಂಗಯ್ಯ, ಮರೀಗೌಡ, ಬಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಸರ್ಕಾರಿ ಶಾಲಾ ಶಿಕ್ಷಕರಸಂಘದ ನಿರ್ದೇಶಕ ರುಗಳು ಸೇರಿದಂತೆ ಅನೇಕ ಅನೇಕ ಗಣ್ಯರು ಉಪಸ್ಥಿತರಿದ್ದರು
ರಾಜ್ಯ ಲೋಕ ಶಿಕ್ಷಣ ನಿರ್ದೇಶನಾಲಯದ ಆದೇಶದ ಮೇರೆಗೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲ್ಲೂಕು ಲೋಕ ಶಿಕ್ಷಣ ಸಮಿತಿಯ ವತಿಯಿಂದ ಗ್ರಾಮ ಲೋಕ ಶಿಕ್ಷಣ ಸಮಿತಿ ಬೀರವಳ್ಳಿ. ಅಕ್ಕಿಹೆಬ್ಬಾಳು. ಆಲಂಬಾಡಿ ಕಾವಲ್ ಶೀಳನೆರೆ ಗ್ರಾ.ಪಂ ಹಂತದಲ್ಲಿ ಬೋಧಕರ ತರಬೇತಿ ಕಾರ್ಯಕ್ರಮ ನಡೆಯಿತು.
ಕೆ.ಆರ್.ಪೇಟೆ: ಕಾರ್ಯಕ್ರಮ ಉದ್ಘಾಟನೆ ಮಾಡಿ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ಸಂಯೋಜಕ ಮರುವನಹಳ್ಳಿ ಬಸವರಾಜು ನಮ್ಮ ತಾಲ್ಲೂಕಿನಲ್ಲಿ 2011ರ ಜನಗಣತಿಯಂತೆ 27829 ಜನ ಅನಕ್ಷರಸ್ಥರು ಇದ್ದು , ಇದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತದೆ ಆದ್ದರಿಂದ ಎಲ್ಲಾ ಬೋಧಕರು ತಮ್ಮ ತಮ್ಮ ವ್ಯಾಪ್ತಿಯ ಅನಕ್ಷರಸ್ಥರ ಬಾಳಿಗೆ ಅಕ್ಷರ ಕಲಿಸುವುದರ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ನಿಮ್ಮ ಶಕ್ತಿ ಮೀರಿ ಪ್ರಯತ್ನಿಸಬೇಕು ಆ ಮೂಲಕ ಸಂಪೂರ್ಣ ಸಾಕ್ಷರತೆಯ ಪಂಚಾಯತಿಯನ್ನಾಗಿ ಘೋಷಣೆ ಮಾಡಲು ಕಟಿಬದ್ದರಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಡಾ.ಅಂ.ಚಿ.ಸಣ್ಣಸ್ವಾಮಿಗೌಡ ಮಾತನಾಡಿ ನಿಮಗೆ ಗುರುಗಳ ಗುರುಮಾತೆಯ ಸ್ಥಾನ ನೀಡಲಾಗಿದ್ದು ಅನಕ್ಷರಸ್ಥರ ಮನವೊಲಿಸಿ ಅವರ ಬಿಡುವಿನ ವೇಳೆಯಲ್ಲಿ ಅವರಿಗೆ ಕಲಿಸುವುದರ ಮೂಲಕ ಹೆಬ್ಬೆಟ್ಟಿನ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಬೇಕು ತಾವುಗಳು ಯಾವುದೇ ಪ್ರತಿಫಲಾಕ್ಷೆ ಇಲ್ಲದೇ ಸ್ವಯಂ ಸೇವಕರಾಗಿಅಕ್ಷರ ಕಲಿಸುವ ಗುರುತರ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಪುಣ್ಯದ ಕೆಲಸ ಮಾಡಬೇಕು. ಇದೇ ನೀವು ಉತ್ತಮ ಸಮಾಜಕ್ಕೆ ನೀಡುವ ಕೊಡುಗೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಿಡಿಓಗಳಾದ ಬೀರವಳ್ಳಿ ಅರವಿಂದ್.ಅಕ್ಕಿಹೆಬ್ಬಾಳು ಪಿಡಿಓ.ರವಿಕುಮಾರ್. ಆಲಂಬಾಡಿ ಪಿಡಿಓ ರವಿ. ಪ್ರೇರಕರಾದ ರವಿಕುಮಾರ್. ಕಾವ್ಯ. ತೇಜಸ್ವಿನಿ.ಆಶಾ.ಹೇಮಾ.ಭಾರತಿ.ಸಿ.ಆರ್.ಪಿ.ಲೋಕೇಶ್. ಮುಖ್ಯಶಿಕ್ಷಕರಾದ ಗೋವಿಂದರಾಜು.ಕುಮಾರಸ್ವಾಮಿ. ರವಿ.ಸಂಪನ್ಮೂಲ ಶಿಕ್ಷಕರಾದ ಜಿ.ಎಸ್.ಮಂಜು.ಜೆ.ವಿ.ರಾಮಚಂದ್ರ.ರಾಘವೇಂದ್ರ. ಹೆಚ್.ಎಸ್.ನಾರಾಯಣ. ರಾಜೇಶ್ ಎಸ್.ಬಿ. ಹಾಗೂ ಬೋಧಕರು ಗಳು ಹಾಜರಿದ್ದರು.
ಬೇರೆಯವರ ಹೆಗಲು ಇದು, ಎಷ್ಟು ದಿನ ಅಂತ ದೆಹಲಿಗೆ ಹೋಗಲಿ...
ಮೈತ್ರಿ ಧರ್ಮ ಅಂತ ಮೊಮ್ಮಕ್ಕಳನ್ನು ತರುವುದಾದರೆ ನಮ್ಮ ಸಮ್ಮತಿ ಇಲ್ಲ
ಆದರೆ ಜೆಡಿಎಸ್ನವರು ವಚನ ಕೊಟ್ರೆ ಸಾಕೇ. ಕಾಂಗ್ರೆಸ್ ಕೂಡ ಇದಕ್ಕೆ ಸಮ್ಮತಿ ಸೂಚಿಸಬೇಕು. ಯಾಕಂದ್ರೆ ಇದು ಮೈತ್ರಿ ಸರ್ಕಾರ. ಆದರೆ ಕೆಲವರಿಗೆ ಮೈತ್ರಿ ಸರ್ಕಾರದ ಕೆಲವು ನಿರ್ಣಯಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಾಜಿ ಸಚಿವ ಎ.ಮಂಜು, ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧೆ ಮಾಡಿದರೆ ನಮ್ಮ ಪಕ್ಷದಿಂದ ಒಮ್ಮತವಿದೆ. ಅದನ್ನು ಬಿಟ್ಟು ಮೈತ್ರಿ ಸರ್ಕಾರ ಎಂಬ ಕಾರಣಕ್ಕೆ ಮೊಮ್ಮಕ್ಕಳನ್ನ ಚುನಾವಣೆಯಲ್ಲಿ ಗೆಲ್ಲಿಸುವುದಾದರೆ ನಮ್ಮ ಸಹಮತವಿಲ್ಲ ಎಂದು ಮೊದಲಿನಿಂದಲೂ ಕೂಡ ವಿರೋಧಿಸುತ್ತಲೇ ಬಂದಿದ್ದಾರೆ. ಈಗಲೂ ವಿರೋಧಿಸುತ್ತಿದ್ದಾರೆ.ಈ ನಡುವೆ ಕಾಂಗ್ರೆಸ್ನ ಮತ್ತೊಬ್ಬ ಮಾಜಿ ಸಚಿವ ಬಿ.ಶಿವರಾಂ ಕೂಡ, ನಾವು ಅಪ್ಪಟ ಜೆಡಿಎಸ್ ವಿರೋಧಿಗಳು. ಹೈಕಮಾಂಡ್ ನಿರ್ಧಾರದಂತೆ ಚುನಾವಣೆಯಲ್ಲಿ ನಾವು ಕೆಲಸ ಮಾಡುತ್ತೇವೆ. ಆದರೆ ಮೊಮ್ಮಕ್ಕಳನ್ನು ಚುನಾವಣೆಯಲ್ಲಿ ನಿಲ್ಲಿಸಿದರೆ, ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ನನಗೂ ಇಲ್ಲ. ನಮ್ಮ ಕಾರ್ಯಕರ್ತರಿಗೂ ಇಲ್ಲ ಎಂದು ನೇರವಾಗಿಯೇ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ರು.
ಎ.ಮಂಜು ಸೆಳೆಯಲು ಬಿಜೆಪಿ ಪ್ರೀತಂಗೌಡರ ನಾನಾ ಕಸರತ್ತು...
ಇವೆಲ್ಲದರ ನಡುವೆ ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ, ಎ.ಮಂಜುರನ್ನ ಬಿಜೆಪಿಗೆ ಸೆಳೆಯುವ ಕಸರತ್ತು ನಡೆಸುತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಈ ಬಾರಿ ಮೈತ್ರಿ ಅಭ್ಯರ್ಥಿಯನ್ನಾಗಿ ಪ್ರಜ್ವಲ್ ರೇವಣ್ಣರನ್ನ ನಿಲ್ಲಿಸುವುದು ಬಹುತೇಕ ಖಚಿತವಾಗಿರುವುದರಿಂದ ಕಾಂಗ್ರೆಸ್ ಪಕ್ಷದ ಎ.ಮಂಜು ಎದುರಾಳಿಯಾಗಿ ನಿಲ್ಲಲು ಸಮರ್ಥ ಅಭ್ಯರ್ಥಿ ಎಂದು ಬಿಜೆಪಿಗೆ ತಿಳಿದಿದೆ. ಹೀಗಾಗಿ ಬಿಜೆಪಿ ನಾಯಕರು ಮಂಜುರನ್ನ ಪಕ್ಷಕ್ಕೆ ಹೇಗಾದರೂ ಮಾಡಿ ಕರೆತರಲೇಬೇಕೆಂದು ಹಲವು ಬಿಜೆಪಿ ನಾಯಕರ ಜೊತೆ ಮಾತುಕತೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಜ್ವಲ್ ನಿಂತ್ರೆ ಬಿಜೆಪಿಗೆ ಹೋಗ್ತೀನಿ...
ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಬಹಿರಂಗವಾಗಿಯೇ ನಾನು ಬಿಜೆಪಿಯವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದವರಿಗೆ ಮಂಜು ಶಾಕ್ ಕೊಟ್ಟಿದ್ದಾರೆ. ದೇವೇಗೌಡರನ್ನು ಬಿಟ್ಟು ಪ್ರಜ್ವಲ್ ನಿಂತರೆ, ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ತಳಮಟ್ಟಕ್ಕೆ ಹೋಗುತ್ತದೆ. ಹೀಗಾಗಿ ಪಕ್ಷ ಸಂಘಟನೆ ಮಾಡುವುದು ತುಂಬಾ ಕಷ್ಟವಾಗುತ್ತದೆ ಎಂಬುದನ್ನು ಅರಿತ ಎ.ಮಂಜು, ಪಕ್ಷ ತೊರೆದು ಬಿಜೆಪಿಗೆ ಹೋಗುವ ಪ್ಲಾನ್ ಕೂಡ ಮಾಡಿದ್ದಾರೆ.ಇನ್ನು ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೂಡ ಎ.ಮಂಜು ದೇವೇಗೌಡರಿಗೆ ಪ್ರಬಲ ಪ್ರತಿಸ್ಪರ್ಧಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ದೇವೇಗೌಡರ ಗೆಲುವಿನ ಅಂತರವನ್ನು ಒಂದು ಲಕ್ಷಕ್ಕಿಳಿಸಿ ಪರಭಾವಗೊಂಡಿದ್ದರು. ಈ ಬಾರಿ ಕುಟುಂಬ ರಾಜಕಾರಣದ ವಿಷಯವನ್ನು ಆಧಾರವಾಗಿಟ್ಟುಕೊಂಡು ಬಿಜೆಪಿಗೆ ಹೋಗಿ ಸಂಸದರಾಗುವ ಪಣ ತೊಟ್ಟಿರುವುದು ಅಷ್ಟೇ ಸತ್ಯ. ಆದರೆ ಎ.ಮಂಜುರವರ ಮುಂದಿನ ದಾರಿ ಏನೆಂಬುದು ಒಂದೆರಡು ದಿನಗಳಲ್ಲಿ ಗೊತ್ತಾಗಲಿದ್ದು, ಅಲ್ಲಿಯತನಕ ಕಾದು ನೋಡಬೇಕಿದೆ.
ತಾಲೂಕಿನ ಸಾಸಲು ಪುಣ್ಯಕ್ಣೇತ್ರದಿಂದ ಮಂಡ್ಯ ಲೋಕಸಭಾ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಂದ ಪ್ರಚಾರ ಆರಂಭ.ಶ್ರೀ ಶಂಭುಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಮತಯಾಚಿಸಿ ರಣಕಹಳೆ ಮೊಳಗಿಸಲಿರುವ ನಿಖಿಲ್ ಕುಮಾರಸ್ವಾಮಿ....