ರಾಯಚೂರು:ಗುರುಮಿಠಕಲ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಇಂದು ಮಧ್ಯಾಹ್ನ ರಾಯಚೂರು ಎಸ್ಪಿ ಅವರಿಗೆ ದೂರು ನೀಡಿ ಬಳಿಕ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಬಿ.ಎಸ್ ಯಡಿಯೂರಪ್ಪ ಎ-1 ಆರೋಪಿಯಾಗಿದ್ದು, ನಂತರದಲ್ಲಿ ಶಿವನಗೌಡ ನಾಯಕ್, ಪ್ರೀತಂಗೌಡ, ಪತ್ರಕರ್ತ ಮರಂಕಲ್ ಕ್ರಮವಾಗಿ ಆರೋಪಿಗಳಾಗಿದ್ದಾರೆ.ಭ್ರಷ್ಟಾಚಾರ ನಿಗ್ರಹ ಕಾಯ್ದೆ 19/2019 ಕಲಂ 8 ಮತ್ತು 12. ಭ್ರಷ್ಟಾಚಾರ ತಡೆಗಟ್ಟುವ ತಿದ್ದುಪಡಿ ಅಧಿನಿಯಮ 2018 ಮತ್ತು 120(ಬಿ), ಐಪಿಸಿ 506 ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿದೆ. ಆಡಿಯೋ ಸಿಡಿ ದಾಖಲೆಯೊಂದಿಗೆ ಶರಣಗೌಡ ಪ್ರಕರಣ ದಾಖಲಿಸಿದ್ದಾರೆ. ಶಿವನಗೌಡ ನಾಯಕ್ ಅವರು ಫೆ.07 ರಂದು ಮೊಬೈಲ್ ಕರೆಮಾಡಿ ದೇವದುರ್ಗ ಪ್ರವಾಸಿ ಮಂದಿರಕ್ಕೆ ಕರೆಯಿಸಿ ಯಡಿಯೂರಪ್ಪರನ್ನ ಭೇಟಿ ಮಾಡಿಸಿದ್ದರು. ತಮ್ಮ ತಂದೆಗೆ ರಾಜೀನಾಮೆ ಕೊಡಲು ಒಪ್ಪಿಸು ಎಂದು 10 ಕೋಟಿ ರೂ. ಮುಂಗಡ ಹಣದ ಆಮಿಷದೊಂದಿಗೆ ಒತ್ತಾಯಿಸಿದ್ದರು ಎಂದು ಆಡಿಯೋ ತುಣುಕಿನಲ್ಲಿದ್ದ ಸಂಭಾಷಣೆಯನ್ನ ದೂರಿನಲ್ಲಿ ಶರಣಗೌಡ ವಿವರಿಸಿದ್ದಾರೆ. ಅಲ್ಲದೇ ಈ ದುಷ್ಕೃತ್ಯ ಮಾಡುವುದಿಲ್ಲ ಎಂದಾಗ ನಮ್ಮ ತಂದೆಯ ರಾಜಕೀಯ ಜೀವನ ಮುಗಿಸಿಬಿಡುತ್ತೇವೆ ಎಂದು ಹೆದರಿಸಿದರು. ಕಾರಣ ಮೇಲ್ಕಂಡವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪ್ರಕರಣವನ್ನ ದಾಖಲು ಮಾಡಲಾಗಿದೆ ಎಂದು ಶರಣಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇತ್ತೀಚಿಗಿನ ಸುದ್ದಿಗಳು
- 27/09/2019 in ಹಾಸನ
- 10/09/2019 in ಮಂಡ್ಯ
- 10/09/2019 in ಹಾಸನ
- 10/09/2019 in ಹಾಸನ
- 09/09/2019 in ರಾಜ್ಯಸುದ್ದಿ
- 09/09/2019 in ಮಂಡ್ಯ
- 04/09/2019 in ರಾಜ್ಯಸುದ್ದಿ
- 04/09/2019 in ರಾಜ್ಯಸುದ್ದಿ
- 04/09/2019 in ಮಂಡ್ಯ
- 03/09/2019 in ರಾಜ್ಯಸುದ್ದಿ
- 03/09/2019 in ರಾಜ್ಯಸುದ್ದಿ
- 03/09/2019 in ರಾಜ್ಯಸುದ್ದಿ
- 03/09/2019 in ಮಂಡ್ಯ
- 03/09/2019 in ಮಂಡ್ಯ
- 03/09/2019 in ಮಂಡ್ಯ
ಸುದ್ದಿಜಾಲ
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಮಂಗನ ಹೊಸಹಳ್ಳಿ ಗ್ರಾಮದ ಕೃಷ್ಣ (30) ಯುವಕ ಆತ್ಮಹತ್ಯೆ.
ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಮಂಗನ ಹೊಸಹಳ್ಳಿ ಗ್ರಾಮದ ಕೃಷ್ಣ (30) ಎಂಬಾತ ಕುಟುಂಬದ ಕಲಹದ ಹಿನ್ನೆಲೆ ತನ್ನ ಜಮೀನಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಡೆದಿದೆ.ಗಂಡ ಹೆಂಡಿತಿ ಜಗಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದ ಗ್ರಾಮಸ್ಥರು ಹೇಳುತ್ತಿದ್ದು.ಆತ್ಮಹತ್ಯೆಗೆ ನಿಕರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಿಕ್ಕೇರಿ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ್ ಅವರು ಭೇಟಿ ನೀಡಿ ಮುಂದಿನ ತನಿಖೆ ಕೈಕೊಂಡಿದ್ದಾರೆ.
ಕೆ.ಆರ್.ಪೇಟೆ ತಾಲ್ಲೂಕಿನ ಪುರಾಣಪ್ರಸಿದ್ಧ ಶರಣಶ್ರದ್ಧಾಕೇಂದ್ರ ಕಾಪನಹಳ್ಳಿ ಗವಿಮಠದ ಪೀಠಾಧಿಪತಿಗಳಾಗಿ ಮಠದ ಅರ್ಚಕರಿಗೆ ಧೀಕ್ಷೆ ನೀಡಿ ಖಾವಿಬಟ್ಟೆ ಹಾಕಿಸಿ ಪೀಠಕ್ಕೆ ಕೂರಿಸಿದ ಕೆಂಗೇರಿಯ ಬಂಡೆಮಠದ ಶ್ರೀಗಳು.ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿಗಳೆಂದು ಹೊಸದಾಗಿ ನಾಮಕರಣ .
ಕೆ.ಆರ್.ಪೇಟೆ: ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಶರಣ ಶ್ರದ್ಧಾಕೇಂದ್ರವಾದ ಕಾಪನಹಳ್ಳಿ ಗವಿಮಠದ ನೂತನ ಪೀಠಾಧಿಪತಿಗಳಾಗಿ ಶ್ರೀ.ಸ್ವತಂತ್ರ ಚನ್ನವೀರ ಸ್ವಾಮೀಜಿಗಳ ನೇಮಕ.ಶ್ರೀಮಠದ ವ್ಯಾಪ್ತಿಯ ಒಂಭತ್ತು ಹಳ್ಳಿಗಳ ಸದ್ಭಕ್ತರ ಸಮ್ಮುಖದಲ್ಲಿ ಕೆಂಗೇರಿಯ ಬಂಡೆಮಠದ ಶ್ರೀಗಳಿಂದ ಸ್ವಾಮೀಜಿಗಳಾಗಿ ಧೀಕ್ಷೆ ಸ್ವೀಕರಿಸಿದ ಗವಿಮಠದ ಅರ್ಚಕ ಚನ್ನವೀರಯ್ಯ.ಅರ್ಚಕ ಚನ್ನವೀರಯ್ಯ ಅವರನ್ನು ಶ್ರೀ ಸ್ವತಂತ್ರ ಚನ್ನವೀರಸ್ವಾಮಿಗಳಾಗಿ ಬದಲಾದ ನಾಮಕರಣ.ಗವಿಮಠದ ಸೇವಕನಾಗಿ ನಿಷ್ಠೆಯಿಂದ ಶ್ರೀಮಠವನ್ನು ಮುನ್ನಡೆಸುತ್ತೇನೆ. ಕಳೆದ ಮೂರು ನಾಲ್ಕು ವರ್ಷಗಳಿಂದ ಖಾಲಿ ಉಳಿದಿದ್ದ ಶ್ರೀಮಠದ ಪೀಠಾಧಿಪತಿಗಳ ಸ್ಥಾನ.ಹಾರನಹಳ್ಳಿ ಕೋಡಿಮಠದ ಶಾಖಾಮಠವೆಂದು ಕೆ.ಆರ್.ಪೇಟೆ ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿರುವ ಕೋಡಿಶ್ರೀಗಳು.ಗವಿಮಠದ ಸದ್ಭಕ್ತರು ಹಾಗೂ ಸ್ವತಂತ್ರ ಸಿದ್ಧಲಿಂಗೇಶ್ವರರ ಪ್ರೇರಣೆಯಂತೆ ಗವಿಮಠದ ಶ್ರೀಗಳಾಗಿ ಅಧಿಕಾರ ಸ್ವೀಕರಿಸಿದ್ದೇನೆ. ನಾನು ವೇದ, ಮಂತ್ರ ಸಂಸ್ಕೃತಾಭ್ಯಾಸ ಮಾಡಿಲ್ಲ.ಆದರೆ ಕಳೆದ 18ವರ್ಷಗಳಿಂದ ಶ್ರೀಮಠದಲ್ಲಿ ಅರ್ಚಕನಾಗಿ ಕೆಲಸ ಮಾಡಿದ ಅನುಭವವಿದೆ. ಶ್ರೀ ಮಠದ ಅಭಿವೃದ್ಧಿಯೇ ನನ್ನ ಮೂಲಮಂತ್ರವಾಗಿದೆ. ಗವಿಮಠವನ್ನೇ ಜನತೆ ಹಾಗೂ ಭಕ್ತರ ಮನೆಬಾಗಿಲಿಗೆ ಕೊಂಡೊಯ್ದು ಬಿಕ್ಷೆಬೇಡಿಕೊಂಡು ಜೋಳಿಗೆಯಲ್ಲಿ ಬಂದ ಹಣದಿಂದ ಶ್ರೀಮಠವನ್ನು ಮುನ್ನಡೆಸುತ್ತೇನೆ. ಕಾಪನಹಳ್ಳಿ ಗವಿಮಠದಲ್ಲಿ ಕೇವಲ ಸಾಮಾನ್ಯ ಅರ್ಚಕನಾಗಿದ್ದ ನಾನು ಮಠದ ಸ್ವಾಮೀಜಿಯಾಗುತ್ತೇನೆಂದು ಕನಸು ಮನಸಿನಲ್ಲಿಯೂ ಎಣಿಸಿರಲಿಲ್ಲ.ಎಲ್ಲಾ ಸಿದ್ಧಲಿಂಗಪ್ಪನ ಇಚ್ಛೆ.ಹೊಸವಿವಾದ ಹುಟ್ಟು ಹಾಕಿದ ಗವಿಮಠದ ಉತ್ತರಾಧಿಕಾರಿ ನೇಮಕ.ಈ ಹಿಂದೆ ಮಠದ ಪೀಠಾಧ್ಯಕ್ಷರಾಗಿದ್ದ ದಿವಂಗತ ಶ್ರೀ ಚಂದ್ರಶೇಖರ ಸ್ವಾಮೀಜಿಗಳ ಸಹೋದರ ಬಸವರಾಜಸ್ವಾಮಿಗಳಿಂದ ನಡೆದ ಪೀಠಾಧಿಪತಿ ನೇಮಕ.ಸ್ಥಳೀಯಚಮುಖಂಡರ ಬೆಂಬಲ ಹಾಗೂ ಮನದಾಸೆಯನ್ನು ಪುರಸ್ಕರಿಸಿ ಅರ್ಚಕ ಚನ್ನವೀರಯ್ಯ ಅವರನ್ನೇ ಸ್ವಾಮೀಜಿಗಳಾಗಿ ಧೀಕ್ಷೆ ನೀಡಿ ಖಾವಿಬಟ್ಟೆ ಹಾಕಿಸಿ ಹೊಸದಾಗಿ ಶ್ರೀ ಸ್ವತಂತ್ರ ಚನ್ನವೀರಸ್ವಾಮೀಜಿಗಳೆಂದು ನಾಮಕರಣ ಮಾಡಿ ಪೀಠಾಧಿಪತಿ ಸ್ಥಾನದಲ್ಲಿ ಕೂರಿಸಿದ ಕೆಂಗೇರಿಯ ಬಂಡೆಮಠದ ಶ್ರೀಗಳು. ಗವಿಮಠದ ಸದ್ಭಕ್ತರಲ್ಲಿ ಬುಗಿಲೆದ್ದ ಭಿನ್ನಮತ.ಕೋಡಿಮಠದ ಶ್ರೀಗಳ ನಡೆ ಇನ್ನೂ ನಿಗೂಢ.
ನಡೆದಾಡುವ ದೇವರು , ಕರ್ನಾಟಕ ರತ್ನ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ.ಶಿವಕುಮಾರಸ್ವಾಮಿಜೀರವರ ಪುಣ್ಯಸ್ಮರಣೆಯನ್ನು ಸರ್ವಜನಾಂಗ ಸೇರಿ ಇದೇ ಫೆ 19 ರಂದು ಮಳವಳ್ಳಿ ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು
ಮಳವಳ್ಳಿ: ಮಳವಳ್ಳಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ. ಕುಂದೂರು ಮೂರ್ತಿ ರವರ ಅಧ್ಯಕ್ಷತೆಯಲ್ಲಿ ಶ್ರೀ ಗಳ ಪುಣ್ಯಸ್ಮರಣೆ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಯಜಮಾನ ವೆಂಕಟಪ್ಪರವರು ಮಾತನಾಡಿ ವೀರಶೈವ ಜನಾಂಗದವರು ಎಲ್ಲಾ ಸಮಾಜವನ್ನು ಒಗ್ಗೂಡಿಸಲು ಮುಂದಾಗಿರುವುದು ಸಂತಸದ ವಿಷಯ ನಾವೆಲ್ಲರೂ ಎಂದಿಗೂ ಜೊತೆಯಾಗಿ ಪಟ್ಟಣ ಹಾಗೂ ತಾಲ್ಲೂಕು ಅಭಿವೃದ್ಧಿ ಮಾಡೋಣ ಎಂದರು. ಇನ್ನೂ ಹಿರಿಯ ಮುಖಂಡ ಎಂ.ಹೆಚ್ ಕೆಂಪಯ್ಯ ಮಾತನಾಡಿ , ವೀರಶೈವ ಜನಾಂಗದವರು ಎಲ್ಲಾ ಜನಾಂಗದ ಜೊತೆಗೂಡಿ ಶ್ರೀ ಗಳ ಪುಣ್ಯಸ್ಮರಣೆ ಮಾಡೋಣ ಎಂದರು ವೀರಶೈವ ಅಭಿವೃದ್ಧಿ ದೃಷ್ಟಿಯಿಂದ ರಾಜಕೀಯ ಬಿಡುವಂತೆ ಮುಖಂಡರನ್ನು ಮನವಿ ಮಾಡಿದರು ಶ್ರೀಗಳ ನೆನಪು ಮಾಡುವ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುತ್ತವೆ ಎಂದರು. ಕಾರ್ಯಕ್ರಮಕ್ಕೆ ಸರ್ವಧರ್ಮದ ಜನಾಂಗದ ಸ್ವಾಮೀಜಿ , ಹಿಂದೂ .ಮುಸ್ಲಿಂ , ಕೈಸ್ತ ಧರ್ಮದ ಮುಖಂಡರು ಕರೆಯುವಂತೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ತಾ.ಪಂ ಉಪಾಧ್ಯಕ್ಷ ಮಾಧು, ವೀರಶೈವ ನೌಕರರ ಸಂಘದ ಅಧ್ಯಕ್ಷ ಗಂಗಾಧರ್, ಕುಂದೂರು ಪ್ರಕಾಶ, ಪುರಸಭೆ ಸದಸ್ಯರಾದ ಚಿಕ್ಕರಾಜು, ನಾಗೇಶ್, ಸೇರಿದಂತೆ ಮತ್ತಿತ್ತರು ಇದ್ದರು.
ಶಾಸಕ ನಾರಾಯಣಗೌಡರು ಜೆಡಿಎಸ್ ಪಕ್ಷದ ಶಿಸ್ತಿನ ಸಿಪಾಯಿ.ಅವರನ್ನು ಆಪರೇಷನ್ ಕಮಲ ಮಾಡಲು ಯಡಿಯೂರಪ್ಪ ಅವರಿಂದ ಸಾಧ್ಯವಿಲ್ಲ.ಯಡಿಯೂರಪ್ಪ ಮತ್ತೆ ಸಿಎಂ ಆಗಲು ಹಗಲುಗನಸು ಕಾಣುತ್ತಿದ್ದಾರೆ ಎಪಿಎಂಸಿ ಮಾಜಿಅಧ್ಯಕ್ಷ ಕೆ.ಎನ್.ಕೃಷ್ಣ ಆಕ್ರೋಶ.
ಕೆ.ಆರ್.ಪೇಟೆ : ಕೃಷ್ಣರಾಜಪೇಟೆ ಶಾಸಕ ಡಾ.ನಾರಾಯಣಗೌಡ ಜೆಡಿಎಸ್ ಪಕ್ಷದ ಶಿಸ್ತಿನ ಸಿಪಾಯಿ.ಅವರು ಅನಾರೋಗ್ಯದಿಂದಾಗಿ ಸದನಕ್ಕೆ ಹಾಜರಾಗಿಲ್ಲ.ಬಿಜೆಪಿ ಮುಖಂಡರು ಅಪಪ್ರಚಾರ ಮಾಡುತ್ತಿರುವಂತೆ ಆಪರೇಷನ್ ಕಮಲಕ್ಕೆ ಒಳಗಾಗಿಲ್ಲ.ಬಿಜೆಪಿ ಮುಖಂಡರು ಶಾಸಕ ನಾರಾಯಣಗೌಡರ ವಿರುದ್ಧ ಅಪಪ್ರಚಾರ ಮಾಡಿದರೆ ತಕ್ಕ ಪಾಠವನ್ನು ಕಲಿಸಬೇಕಾಗುತ್ತದೆ ಎಚ್ಚರಿಕೆ. ತಂದೆ-ತಾಯಿಗಳನ್ನು ಕಳೆದುಕೊಂಡಿರುವ ಶಾಸಕ ನಾರಾಯಣಗೌಡರು ಮಾಜಿಪ್ರಧಾನಿ ದೇವೇಗೌಡರು ಮತ್ತು ಚನ್ನಮ್ಮ ಅವರನ್ನು ತಂದೆತಾಯಿಗಳ ರೂಪದಲ್ಲಿ ಕಾಣುತ್ತಿದ್ದಾರೆ ಎಂದು ಕೃಷ್ಣ ತಿಳಿಸಿದರು. ಕೆ.ಆರ್.ಪೇಟೆ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು ಅಪಪ್ರಚಾರಗಳಿಗೆ ಕಿವಿಗೊಡದೇ ಜೆಡಿಎಸ್ ಪಕ್ಷದ ಬಲವರ್ಧನೆ ಹಾಗೂ ಸಂಘಟನೆಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ನಾಗರಾಜೇಗೌಡ ನಿರ್ದೇಶಕರಾದ ಲೋಕೇಶ್, ಐನೋರಹಳ್ಳಿ ಮಲ್ಲೇಶ್ ಉಪಸ್ಥಿತರಿದ್ದರು.
ಆಪರೇಷನ್ ಕಮಲ ಆಡಿಯೋ ಪ್ರಕರಣ ಹಿನ್ನೆಲೆ ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್, ಪ್ರೀತಂಗೌಡ ಮತ್ತು ಮರಂಕಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪುರಾಣ ಪ್ರಸಿದ್ಧ ಪೂಣ್ಯಕ್ಷೇತ್ರ ಗೋವುಗಳ ರಕ್ಷಕ ಭೃಗುಮಹರ್ಷಿಗಳ ತಪೋಭೂಮಿ ಹೇಮಗಿರಿ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನಡೆಯಿತು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಪೂಣ್ಯಕ್ಷೇತ್ರ ಗೋವುಗಳ ರಕ್ಷಕ ಭೃಗುಮಹರ್ಷಿಗಳ ತಪೋಭೂಮಿ ಹೇಮಗಿರಿ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಯವರ ರಥೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು. ರಾಜ್ಯಾದ್ಯಂತ ಭಕ್ತರು ಆಗಮಿಸಿದರು.ರಥೋತ್ಸವದ ಅಂಗವಾಗಿ ಶ್ರೀ ಕಲ್ಯಾಣವೆಂಕಟರಮಣಸ್ವಾಮಿ ಗೆ ಬೆಳಿಗ್ಗೆಯಿಂದಲೇ ಗಂಧದ ನೈವೇಧ್ಯ, ಹಾಲಿನ ಅಭಿಷೇಕ, ಅರಿಸಿನ ಕುಂಕುಮ ಅಭಿಷೇಕ ಸೇರಿದಂತೆ ಹಲವು ವಿಷೇಶ ಅಭಿಷೇಕಗಳನ್ನು ಮಾಡಿ ಹೋಮ ಹವನಗಳನ್ನು ನೆರವೇರಿದವು. ರಥೋತ್ಸವದ ಹಿನ್ನಲೆ ರಥವನ್ನು ವಿವಿಧ ಫಲಪುಷ್ಪಲಂಕಾರ, ತಳಿರು ತೋರಣಗಳಿಂದ ಅಲಂಕರಿಸಿಲಾಗಿತ್ತು.ಶಾಸಕ ನಾರಾಯಣಗೌಡ ಅವರ ಗೈರುಹಾಜರಿಯಲ್ಲಿ, ಶ್ರೀ ರಥದಲ್ಲಿ ವಿರಾಜಮಾನರಾಗಿ ಅಲಂಕೃತವಾಗಿದ್ದ ಶ್ರೀ ಕಲ್ಯಾಣವೆಂಕಟರಮಣಸ್ವಾಮಿಯ ಉತ್ಸವ ಮೂರ್ತಿಗೆ ಸಾಂಪ್ರದಾಯಿಕ ವಿಶೇಷ ಪೂಜೆ ಸಲ್ಲಿಸಿ ತಹಶೀಲ್ದಾರ್ ಎಂ.ಶಿವಮೂರ್ತಿ ದಂಪತಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ದೇವಸ್ಥಾನದಿಂದ ಚಾಲನೆಗೊಂಡ ರಥೋತ್ಸವ ರಥ ಬೀದಿಯಲ್ಲಿ ಸಂಚರಿಸಿತು. ಸಹಸ್ರಾರು ಸಂಖ್ಯೆಯಲ್ಲಿ ನೆರದಿದ್ದ ಭಕ್ತರು ಹಣ್ಣು, ಜವನ ಎಸೆದು ದೇವರ ಕೃಪೆಗೆ ಪಾತ್ರರಾದರು.ಉಘೇ ಗೋವಿಂದ... ಉಘೇ ವೆಂಕಟರಮಣ...ಉಘೇ ಗೋವಿಂದ ಎಂಬ ಜಯಘೋಷಗಳು ಮುಗಿಲು ಮುಟ್ಟಿದ್ದವು.ನಂತರ ಮಧ್ಯಾಹ್ನ 4 ಗಂಟೆಗೆ ಎರಡನೇ ಬಾರಿಗೆ ರಥವನ್ನು ನೆರದಿದ್ದ ಭಕ್ತರು ಎಳೆದರು. ನಂತರ ರಥವು ಉತ್ಸವ ಮೂತರ್ಿಯೊಂದಿಗೆ ಸುಸೂತ್ರವಾಗಿ ಸ್ವಸ್ಥಾನಕ್ಕೆ ಮರುಳಿತು.ನೆರದಿದ್ದ ಸಾವಿರಾರು ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ದೇವರಲ್ಲಿ ಹರಕೆ ಮತ್ತಿತರ ಬೇಡಿಕೆಗಳ ಈಡೇರಿಕೆಗಾಗಿ ಮೊರೆಯಿಟ್ಟರು.ದಾಂಪತ್ಯ ಜೀವನಕ್ಕೆ ಕಾಲಿರಿಸಿದ ದಂಪತಿಗಳು ರಥೋತ್ಸವಕ್ಕೆ ಆಗಮಿಸಿ ತೇರಿಗೆ ಹಣ್ಣು ದವನ ಎಸೆಯುವ ಮೂಲಕ ಭಕ್ತಿ ಮೆರೆದರು. ಹೇಮಗಿರಿಯಲ್ಲಿ ನಡೆಯುವ ರಥೋತ್ಸವದಲ್ಲಿ ನವ ದಂಪತಿಗಳು ಪಾಲ್ಗೋಂಡು ಹಣ್ಣು ದವನ ಎಸೆಯುವುದು ವಾಡಿಕೆ. ಹಾಗೇ ಮಾಡಿದರೇ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇಲ್ಲಿಯ ಜನರದ್ದು.
ಜಿಲ್ಲಾ ಪಂಚಾಯತಿ ಸದಸ್ಯ ರಾಮದಾಸು, ಸಮಾಜಸೇವಕರಾದ ಕೆ.ಎಸ್.ರಾಮೇಗೌಡ, ಶಬರಿಬುಕ್ ಹೌಸ್ ಮಾಲೀಕ ಕೆ.ವಿ.ರಾಮೇಗೌಡ, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ರಾಜಶ್ವನಿರೀಕ್ಷಕಿ ಚಂದ್ರಕಲಾ ಪ್ರಕಾಶ್, ಪ್ರಧಾನ ಅರ್ಚಕ ರಾಮಭಟ್ಟ, ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ್, ಆನಂದೇಗೌಡ, , ಕೋರಮಂಡಲ್ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ರವಿರೆಡ್ಡಿ, ಬಂಡಿಹೊಳೆ ಗ್ರಾಮಪಂಚಾಯಿತಿ ಅಧ್ಯಕ್ಷೆ ಮಹದೇವಮ್ಮ, ಮಾಜಿಅಧ್ಯಕ್ಷ ಶೇಷಾಧ್ರಿ,ಕಾಯಿ ಮಂಜೇಗೌಡ ಸೇರಿದಂತೆ ಸೇರಿದಂತೆ ಹಲವು ಮುಖಂಡರ ಪೂಜೆಯಲ್ಲಿ ಪಾಳ್ಗೊಂಡಿದ್ದರು.
ಜಾತ್ರೆಯಲ್ಲಿ ತಮ್ಮ ಅತ್ಯುತ್ತಮವಾದ ರಾಸುಗಳೊಂದಿಗೆ ಆಗಮಿಸಿ ದನಗಳ ಜಾತ್ರೆಯ ಸೌಂದರ್ಯವು ಇಮ್ಮಡಿಗೊಳ್ಳುವಂತೆ ಮಾಡಿದ್ದ ರಾಸುಗಳ ಮಾಲೀಕರಿಗೆ ಕೋರಮಂಡಲ್ ಸಕ್ಕರೆ ಕಾರ್ಖಾನೆಯ ಪ್ರಾಯೋಜಕತ್ವದಲ್ಲಿ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ವಿತರಿಸಲಾಯಿತು.
ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸವಿತ ಸಮಾಜಮಹರ್ಷಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಮಳವಳ್ಳಿ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ಆಡಳಿತ ವತಿಯಿಂದ ಸವಿತ ಸಮಾಜಮಹರ್ಷಿ ಜಯಂತಿಯನ್ನು ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ತಹಸೀಲ್ದಾರ್ ಚಂದ್ರಮೌಳಿ ಉದ್ಘಾಟಿಸಿ, ನಂತರ ಮಾತನಾಡಿ ಸರ್ಕಾರವು ಎಲ್ಲಾ ಜನಾಂಗವನ್ನು ಸಮಾನವಾಗಿ ಕಾಣುವ ದೃಷ್ಟಿಯಿಂದ ಸವಿತ ಸಮಾಜದ ಮಹರ್ಷಿ ಜಯಂತಿ ಯನ್ನು ಆಚರಿಸಲಾಗುತ್ತಿದೆ. ಮಹರ್ಷಿಗಳ ಆದರ್ಶವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಹೋಗಬೇಕು ಎಂದರು. ಚುನಾವಣೆ ಹತ್ತಿರ ಬರುತ್ತಿದ್ದು ಅದಕ್ಕಾಗಿ ಈ ಬಾರಿ ಸರಳವಾಗಿ ಆಚರಣೆ ಮಾಡುತ್ತಿದ್ದೇವೆ. ಮುಂದಿನ ವರ್ಷ ನಿಮ್ಮ ಸಹಕಾರದಿಂದ ಅದ್ದೂರಿಯಾಗಿ ಆಚರಣೆ ಮಾಡೋಣ ಎಂದರು. ಸವಿತ ಸಮಾಜದವರು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮ ದಲ್ಲಿ ಸವಿತ ಸಮಾಜ ತಾಲ್ಲೂಕು ಅಧ್ಯಕ್ಷ ರಮೇಶ , ಕುನ್ನಯ್ಯ, ಸುಬ್ಬಣ್ಣ ಸೇರಿದಂತೆ ಸವಿತ ಸಮಾಜ ಮುಖಂಡರು ಉಪಸ್ಥಿತಿ ದ್ದರು.
ಕೋರಮಂಡಲ್ ಸಕ್ಕರೆ ಕಾರ್ಖಾನೆಯ ನೌಕರರ ವಿವಿಧ- ಉದ್ದೇಶ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ವಿ.ಜೆ.ರವಿ, ಉಪಾಧ್ಯಕ್ಷರಾಗಿ ಎಚ್.ಎಮ್ ಶಿವರಾಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೆ.ಆರ್.ಪೇಟೆ: ತಾಲೂಕಿನ ಕೋರಮಂಡಲ್ ಸಕ್ಕರೆ ಕಾರ್ಖಾನೆಯ ನೌಕರರ ವಿವಿಧ- ಉದ್ದೇಶ ಸಹಕಾರ ಸಂಘಧ ಈ ಹಿಂದಿನ ಆಡಳಿತ ಮಂಡಳಿ ಅಧಿಕಾರಾವಧಿ ಮುಗಿದ ಬಳಿಕ ನೂತನ ಆಡಳಿತ ಮಂಡಳಿಗೆ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ನಿರ್ದೇಶಕರನ್ನು ಕೂಡ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾರ್ಖಾನೆಯ ಉಪಾಧ್ಯಕ್ಷರಾಗಿರುವ ವಿ.ಜೆ ರವಿ ಅಧ್ಯಕ್ಷ ಸ್ಥಾನಕ್ಕೆ, ಮುಖ್ಯ ಇಂಜಿನಿಯರ್ ಎಚ್.ಎಮ್ ಶಿವರಾಮ್ ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ವಿ.ಜೆ.ರವಿ ಅವರನ್ನು ಅಧ್ಯಕ್ಷರಾಗಿ, ಎಚ್.ಎಮ್ ಶಿವರಾಮ್ ರನ್ನು ಉಪಾಧ್ಯಕ್ಷರನ್ನಾಗಿ ಚುನಾವಣಾಧಿಕಾರಿ ಘೋಷಿಸಿದ್ದಾರೆ.ನಿರ್ದೇಶಕರಾದ ಕಬ್ಬು ವಿಭಾಗದ ಮುಖ್ಯಸ್ಥ ಬಾಬುರಾಜು, ಕಬ್ಬು ಸಾಗಾಣಿಕೆ ವಾಹನಗಳ ನಿಯಂತ್ರಣಾಧಿಕಾರಿ ಮಾಕವಳ್ಳಿ ಪುಟ್ಟೇಗೌಡ, ಎಚ್.ಆರ್.ಮಂಜುನಾಥ್, ಕೆಮಿಷ್ಟ್ ನಾಗರಾಜು ಸೇರಿದಂತೆ ಎಲ್ಲಾ ನಿರ್ದೇಶಕರು , ಕಾರ್ಖಾನೆಯ ನೌಕರರ ವರ್ಗ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.