ಇತ್ತೀಚಿಗಿನ ಸುದ್ದಿಗಳು
- 27/09/2019 in ಹಾಸನ
- 10/09/2019 in ಮಂಡ್ಯ
- 10/09/2019 in ಹಾಸನ
- 10/09/2019 in ಹಾಸನ
- 09/09/2019 in ರಾಜ್ಯಸುದ್ದಿ
- 09/09/2019 in ಮಂಡ್ಯ
- 04/09/2019 in ರಾಜ್ಯಸುದ್ದಿ
- 04/09/2019 in ರಾಜ್ಯಸುದ್ದಿ
- 04/09/2019 in ಮಂಡ್ಯ
- 03/09/2019 in ರಾಜ್ಯಸುದ್ದಿ
- 03/09/2019 in ರಾಜ್ಯಸುದ್ದಿ
- 03/09/2019 in ರಾಜ್ಯಸುದ್ದಿ
- 03/09/2019 in ಮಂಡ್ಯ
- 03/09/2019 in ಮಂಡ್ಯ
- 03/09/2019 in ಮಂಡ್ಯ
ಸುದ್ದಿಜಾಲ
ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ಸಾಲಭಾದೆ ತಾಳಲಾರದೆ ರೈತ ಕುಟುಂಬ ಆತ್ಮಹತ್ಯೆಗೆ ಶರಣು.ಗ್ರಾಮದ ನಂದೀಶ್ ೩೭ ವರ್ಷ ಮತ್ತು ಹೆಂಡತಿ ಕೋಮಲ ೩೩ ವರ್ಷ. ಮಗ ಮನೋಜ್ ೧೩ ಮಗಳು ಚಂದನ ೧೫ ವರ್ಷ. ಮೂಲತ ಗ್ರಾಮದ ಹೊರಭಾಗದ ಸ್ವಂತ ಜಮೀನಿನಲ್ಲಿ ಮನೆ ನಿರ್ಮಿಸಿ ಅಲ್ಲೇ ವಾಸವಾಗಿದ್ದು, ರಾತ್ರಿ ನಂದೀಶ್ ಮಾಂಸಾಹಾರದಲ್ಲಿ ವಿಷ ಬೆರಸಿ ಎಲ್ಲಾರೂ ಸೇವಿಸಿದಾರೆ ಎಂದು ತಿಳಿದು ಬಂದಿದೆ.ಆಹಾರ ಸೇವಿಸಿದ ಮೇಲೆ ಹೊಟ್ಟೆ ನೋವು ತಾಳಲಾರದೆ ಮನೆಯಿಂದ ಆಚೆ ಬಂದು ನರಳಡಿ ಜೀವ ಬಿಟ್ಟಿದಾರೆ ಎಂದು ತಿಳಿದು ಬಂದಿದೆ.
ನಂದೀಶ್ ಲೇವಾದೇವಿದಾರರ ಬಳಿ ಸೇರಿ ಇತರ ಖಾಸಗಿ ಕಂಪನಿಯಲ್ಲಿ ಸಾಲ ಮಾಡಿ ಹಿಂತಿರುಗಿಸದ ಹಿನ್ನೇಲೆ ಆತ್ಮಹತ್ಯೆ ಮಾಡಿಕೊಂಡಿದಾರೆ ಎಂದು ಹೇಳಲಾಗುತ್ತಿದೆ.ಮುಖ್ಯಮಂತ್ರಿಗಳ ಜನತಾದರ್ಶನದಲ್ಲಿ ಸಾಲಗಾರರಿಂದ ಮುಕ್ತಿ ದೊರಕಿಸಿಕೊಡುವಂತೆ ನಂದೀಶ್ ಮನವಿ ಮಾಡಿದ್ರು.ಬಳಿಕ ಸಿಎಂ ಈ ಸಂಬಂಧ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ನಂತರ ಡಿಸಿ ತಹಸೀಲ್ದಾರ್ ಗೆ ಸೂಕ್ತ ಗಮನಹರಿಸುವಂತೆ ನಿರ್ದೇಶನ ನೀಡಿದ್ದರು. ನಂದೀಶ್ ೧ ಎಕರೆ ಮಾರಾಟ ಮಾಡಿ ಅಲ್ಪಸ್ವಲ್ಪ ಸಾಲ ತೀರಿಸಿದ್ದರು.ಉಳಿದ ಸಾಲಕ್ಕಾಗಿ ಲೇವಾದೇವಿದಾರರಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಇಷ್ಟಾದರೂ ಪರಿಹಾರ ಸಿಗದ ಕಾರಣ ನಂದೀಶ್ ಕುಟುಂಬ ಊರಿನ ಹೊರಗಡೆ ಮಾಂಸಾಹಾರದಲ್ಲಿ ವಿಷ ಮಿಶ್ರಣ ಮಾಡಿ ಸೇವಿಸಿ ಆತ್ಮಹತ್ಯೆಗೆ ಶರಣು. ಗ್ರಾಮದಲ್ಲಿ ಆವರಿಸಿದ ಸೂತಕದ ಛಾಯೆ.ಇನ್ನು ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ವೈದ್ಯ ಅಯುತ್ತು ನಕಲಿ ಶಿಕ್ಷಕ ಅಯುತ್ತು ಇವಾಗ ನಕಲಿ ಲಾಯರ್ ಕಥೆ! ನೀವು ನಕಲು ದಾಖಲೆ ಸೃಷ್ಟಿ ಮಾಡೊ ವಕೀಲರನ್ನು ನೊಡಿರತ್ತಿರಾ ಅದರೆ ಇಲ್ಲಿ ಬರಿ ದಾಖಲೆಗಳು ಮಾತ್ರವಲ್ಲ ವಕೀಲ ನೇ ನಕಲಿ !!!!
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ವಕೀಲರೊಬ್ಬರ ಕಥೆ ಇದು ಮಡವಿನಕೋಡಿ ಗ್ರಾಮದ ಗ್ರಾ.ಪಂ.ನಿವೃತ್ತ ಕಾರ್ಯದರ್ಶಿ ಚಂದ್ರಶೇಖರ್ ಮಗ ಎಂ.ಸಿ. ಪ್ರವೀಣ್ ಕುಮಾರ್ ನಕಲಿ ವಕೀಲ ಅಂತಿಮ ವರ್ಷದ ಪರೀಕ್ಷೆ ಬರೆಯದೆ ಅಂಕಪಟ್ಟಿ ಪಡೆದಿರುವ ಆರೋಪ ಮೈಸೂರು ವಿವಿಯಿಂದ ನಕಲಿ ಪದವಿ ದಾಖಲೆ ವಿತರಣೆ ಮಾಡಲಾಗಿದೆ. ನಕಲಿ ಪದವಿ ಪಡೆದು ತಾಲೂಕಿನ ನ್ಯಾಯಾಲಯದಲ್ಲಿ ವಕೀಲಗಿರಿ ನಡೆಸುತ್ತಿದ್ದರು.ಇವರ ಸಹದ್ಯೋಗಿ ವಕೀಲರಗಳೇ ನಕಲಿ ಪದವಿ ಬಯಲಿಗೆಳೆದಿದ್ದಾರೆ. ಇವರು ೧೯೯೮ ರಲ್ಲಿ ಕಾನೂನು ಪದವಿಗೆ ಸೇರ್ಪಡೆಗೊಂಡಿದ್ದಾರೆ. ನಂತರದಲ್ಲಿ ೨೦೧೫ ರಲ್ಲಿ ಕಾನೂನು ಪದವಿ ಮುಗಿದಿದೆ ಎಂದು ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದಾರೆ ಎಂದು ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ರಾಜೇಶ್ ಆರೋಪಿಸಿದ್ದಾರೆ.ಇವರ ಕಾನೂನು ಪದವಿ ದಾಖಲೆಗಳನ್ನೂ ರಾಜೇಶ್ ನೇತೃತ್ವದಲ್ಲಿ ಹಲವು ವಕೀಲರು ಕಾಲೇಜು ಮತ್ತು ವಿಶ್ವವಿದ್ಯಾನಿಲಯದಲ್ಲಿ ಪಡೆದು ನಂತರ ಇವರು ನಕಲಿ ಕಾನೂನು ಪದವಿ ಅಂಕಪಟ್ಟಿಗಳು ಎಂದು ತಿಳಿದು ಬಂದಿದೆ.
ಇವರ ಮೇಲೆ ಇನ್ನೊಂದು ಆರೋಪ ಸಹ ಇದೆ ನಕಲಿ ದಾಖಲೆ ಜೊತೆಗೆ ಎಸ್.ಸಿ.ಜಾತಿ ಸುಳ್ಳು ದೃಢಿಕರಣ ಪತ್ರ ಪಡೆದಿರುವ ವಕೀಲ ಮೂಲತಃ ಒಕ್ಕಲಿಗ ಜಾತಿಗ ಸೇರಿದ ಇವರು, ಕಾನೂನು ಪದವಿಗೆ ಸೇರಲು ಸುಳ್ಳು ಜಾತಿ ದೃಡಿಕರಣ ಪತ್ರ ನೀಡಿ ದಾಖಲಾಗಿದ್ದಾರೆ ಎಂದು ವಕೀಲ ಜಿ.ಜೆ.ಲೋಕೇಶ್ ಆರೋಪಿಸಿದ್ದಾರೆ. ಈ ಸಂಬಂಧ ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ೪೨೦ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.ನ್ಯಾಯ ಎಲ್ಲಿದೆ ನ್ಯಾಯ ಕೂಡಿಸುವ ವಕೀಲರೇ ನಕಲಿ ಇನ್ನೂ ನ್ಯಾಯದ ಕಥೆ ದೇವರೆ ಗತಿ....
ಅಪಘಾತ ದಿಂದ ಸಾವನ್ನಪ್ಪಿದ ಗುತ್ತಿಗೆದಾರ ಶ್ರೀನಿವಾಸ್ ರವರ ಪತ್ನಿ ಸವಿತಾ ರವರಿಗೆ ಗುತ್ತಿಗೆದಾರರ ಸಂಘದ ಕೇಂದ್ರ ಕರ್ಯಾಕಾರಿಣಿ ಸಮಿತಿ ಸದಸ್ಯರಾದ ಕೆಂಪರಾಜು.ಎನ್ ಮಳವಳ್ಳಿ ರವರು ಪರಿಹಾರದ ಚೆಕ್ ವಿತರಣೆ ಮಾಡಿದರು
ನಾಗಮಂಗಲ : ಶ್ರೀ ರಾಮಕೃಷ್ಣ ಎಲೆಕ್ಟ್ರಿಕಲ್ಸ್ ನ N R ಶ್ರೀನಿವಾಸ್ ವಾಹನ ಅಪಘಾತದಿಂದ ಮೃತಪಟ್ಟಿದ್ದರು ಇವರ ಕುಟುಂಬಕ್ಕೆ ವಿದ್ಯುತ್ ಗುತ್ತಿಗೆದಾರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ಸದ್ಯಸರಾದ ಕೆಂಪರಾಜು .ಎನ್ ಮಳವಳ್ಳಿ ರವರು ಪರಿಹಾರದ ಚೆಕ್ ವಿತರಣೆ ಮಾಡಿದರು.N R ಶ್ರೀನಿವಾಸ್ ರವರ ಮರಣ ಪರಿಹಾರ ಚೆಕ್ ನ್ನು ಅವರ ಪತ್ನಿಯಾದ H.K ಸವಿತಾ ರವರಿಗೆ ನಾಗಮಂಗಲದ ಅವರ ಮನೆಯೆಲ್ಲೇ ಕೆಂದ್ರ ಸಮಿತಿಯ ಸದಸ್ಯರಾದ ಸಂಪತ್ ಕುಮಾರ್ ಸಲಹಾಸಮಿತಿ ಸದಸ್ಯರಾದ ದೇವಿಪ್ರಸಾದ್ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಎ.ಎನ್ ಹಾಗೂ ಮಂಡ್ಯ ಜಿಲ್ಲೆಯ ಪದಾಧಿಕಾರಿಗಳು ಮತ್ತು ನಾಗಮಂಗಲ ತಾಲ್ಲೂಕಿನ ಗುತ್ತಿಗೆದಾರರ ಸಮ್ಮುಖದಲ್ಲಿ ಕೆಂಪರಾಜ .ಎನ್ ಮಳವಳ್ಳಿ ರವರು ಪರಿಹಾರದ ಚೆಕ್ ಅನ್ನು ಅವರ ಪತ್ನಿ ಸವಿತಾ ರವರಿಗೆ ವಿತರಣೆ ಮಾಡಿದರು.
ಕೆ.ಆರ್.ಪೇಟೆ ತಾಲ್ಲೂಕಿನ ತೆರ್ನೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಸ ಅಧ್ಯಕ್ಷರಾಗಿ ಎ.ಎಸ್.ಕಲ್ಪನಾ ಬಾಲು ಅವಿರೋಧವಾಗಿ ಆಯ್ಕೆಯಾದರು.
ಕೃಷ್ಣರಾಜಪೇಟೆ ತಾಲ್ಲೂಕಿನ ತೆರ್ನೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಸ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎ.ಎಸ್.ಕಲ್ಪನಾ ಬಾಲು ಅವಿರೋಧವಾಗಿ ಆಯ್ಕೆಯಾದರು ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಎನ್.ಎಲ್.ರವಿ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು .ಅಧ್ಯಕ್ಷ ಸ್ಥಾನಕ್ಕೆ ಕಲ್ಪನ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಯ ನಾಮಪತ್ರ ಸಲ್ಲಿಸಿದ್ದರು. ಇವರಿಬ್ಬರನ್ನು ಹೊರತುಪಡಿಸಿದರೆ ಇನ್ನೂ ಉಳಿದಂತೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ರವಿ ಅವಿರೋಧ ಅಯ್ಕೆಯನ್ನು ಪ್ರಕಟಿಸಿದರು. ಚುನಾವಣೆಯಲ್ಲಿ ಆಡಳಿತ ಮಂಡಳಿ ಕಾರ್ಯದರ್ಶಿ ಜ್ಯೋತಿ, ನಿರ್ದೇಶಕರಾದ ಲತಾ, ರತ್ನಮ್ಮ, ಪವಿತ್ರ, ಲಕ್ಷ್ಮಮ್ಮ, ಮಮತ, ಸಾವಿತ್ರಮ್ಮ, ಸುಶೀಲಮ್ಮ, ಪದ್ಮಮ್ಮ ಮತ್ತು ವೇದಾವತಿ ಭಾಗವಹಿಸಿದ್ದರು.
ಆಲದ ಮರದಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಹೊನ್ನಾವರ ಸಿ.ಅರ್.ಪಿ ಅಣ್ಣಪ್ಪಸ್ವಾಮಿ (೩೬) ಶವ ಪತ್ತೆ .
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಮಾಳಗೂರು ಬಸ್ಸು ನಿಲ್ದಾಣದ ಸಮೀಪವಿರುವ ಆಲದ ಮರದಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಅಣ್ಣಪ್ಪಸ್ವಾಮಿ (೩೬) ಶವ ಪತ್ತೆ ಯಾಗಿದೆ .ಇವರು ಹೊನ್ನಾವರ ಸಿ.ಅರ್.ಪಿ.ಯಾಗಿ ಕಾರ್ಯ ನಿರ್ವಹಿಸುತ್ತಿದ್ದ. ಇವರು ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಕಂಬದಹಳ್ಳಿ ಗ್ರಾಮದ ನಂಜೇಗೌಡ ಮಾಯಮ್ಮರ ಮಗ ಮತ್ತು ಇವರಿಗೆ ವಿವಾಹ ವಾಗಿದ್ದು ಇವರ ಪತ್ನಿ ಮಧು ಕುಮಾರಿ ಸಹ ಹೊಸಕೊಪ್ಪಲು ಶಾಲೆ ಶಿಕ್ಷಕಿ ಇವರಿಗೆ ಒಂದು ಗಂಡು ಮಗು (೩) ಸಹ ಇದ್ದು ,ಇವರ ತಮ್ಮ ಸಹ ಅರಣ್ಯದಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿದ ಅಧಿಕಾರಿಗಳು ಇನ್ನೂ ಅತ್ಮಾಹತ್ಯೆಗೆ ನಿಕರವಾದ ಕಾರಣ ತಿಳಿದು ಬಂದಿಲ್ಲಾ ಇವರ ದ್ವಿಚಕ್ರ ವಾಹನ KA51 S 754 ಸಹ ಅಲ್ಲೆ ಇದ್ದು ಪೊಲೀಸ್ ಅಧಿಕಾರಿಗಳು ತನಿಖೆ ನೆಡಸುತ್ತಿದ್ದಾರೆ.
ವಳಗೆರೆಮೆಣಸ ಗ್ರಾಮದಲ್ಲಿ ಗೃಹಿಣಿಯೊಬ್ಬರು ಕ್ರಿಮಿನಾಶಕ ವಿಷದ ಮಾತ್ರೆಯನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದ್ದೆ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಗೃಹಿಣಿಯೊಬ್ಬರು ಕ್ರಿಮಿನಾಶಕ ವಿಷದ ಮಾತ್ರೆಯನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದ್ದೆ ಮೃತಪಟ್ಟಿದ್ದಾರೆ.ಗ್ರಾಮದ ಲೋಕೇಶ್ ಎಂಬುವರ ಪತ್ನಿ ಹರ್ಷಿತಾ (22) ವಿಷದ ಕಾಳು ನುಂಗಿ ಆತ್ಮಹತ್ಯೆಗೆ ಶರಣಾದವರು.ಲೋಕೇಶ್ನಿಗೆ ತಾಲೂಕಿನ ಮರಡಹಳ್ಳಿ ಗ್ರಾಮದಿಂದ ಹರ್ಷಿತಾರನ್ನು ಕಳೆದ ಮೂರು ವರ್ಷದ ಹಿಂದೆ ವಿವಾಹ ಮಾಡಿಕೊಟ್ಟಿದ್ದರು. ದಂಪತಿಗೆ 1 ವರ್ಷದ ಹೆಣ್ಣುಮಗು ಕೂಡ ಇತ್ತು.ಹರ್ಷಿತಾ ಭಾನುವಾರ ಗಣೇಶನ ಹಬ್ಬಕ್ಕೆ ಬಟ್ಟೆ ತರಲು ಪಟ್ಟಣಕ್ಕೆ ಬಂದಿದ್ದರು. ಬಟ್ಟೆ ತೆಗೆದುಕೊಂಡು, ಜತೆಯಲ್ಲಿ ಕಾಳಿನ ಮಾತ್ರೆಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಸಂಜೆ ಮಾತ್ರೆಯನ್ನು ನುಂಗಿ, ನೀರನ್ನು ಕುಡಿದ ಮೇಲೆ. ಆರೋಗ್ಯದಲ್ಲಿ ಕೊಂಚ ಬದಲಾವಣೆ ಆದಾಗ ವಿಷ ತೆಗೆದುಕೊಂಡಿರುವ ವಿಷಯವನ್ನು ಮನೆಯವರಿಗೆ ತಿಳಿಸಿದ್ದಾರೆ. ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಚಿಕಿತ್ಸೆ ನೀಡಿ, ಹೆಚ್ಚುವರಿ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಕೊಲಂಬಿಯಾ ಏಷಿಯಾ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಸ್ವಲ್ಪ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬದ ಸದಸ್ಯರಿಗೆ ನೀಡಿದೆ. ಹೆಣ್ಣು ಮಗುವಿನ ಹೆಸರಿಗೆ 2 ಲಕ್ಷ ಹಣವನ್ನು ಬ್ಯಾಂಕಿನಲ್ಲಿ ಠೇವಣಿ ಹಿಡುವುದು. ಅರ್ಧ ಎಕರೆ ತೋಟವನ್ನು ಮಗುವಿಗೆ ಕೊಡುವುದು ಎಂದು ತೀರ್ಮಾನ ಮಾಡಿ ಪ್ರಕರಣವನ್ನು ಸುಖಾಂತ್ಯ ಮಾಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪತಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ವತಿಯಿಂದ 22 ಮನೆಗಳಲ್ಲಿ ಗೋಬರ್ ಗ್ಯಾಸ್ ಅಳವಡಿಕೆ ಹೊಗೆ ರಹಿತ ಶುದ್ಧ ಗ್ರಾಮಕ್ಕೆ ಚಾಲನೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಶೆಟ್ಟಿಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಗೋಬರ್ ಗ್ಯಾಸ್ ಮೂಲಕ ಹೊಗೆ ರಹಿತ ಶುದ್ಧ ಗ್ರಾಮಕ್ಕೆ ಚಾಲನೆ ನೀಡಲಾಗಿದೆ.ಮೊದಲೇ ತೈಲ ಬೇಲೆ ಏರಿಕೆ ಮತ್ತು ಇಂದನದ ಕೊರತೆ ನೀಗಿಸಲು ಇದು ಸುಲಭವಾದ ಉಪಾಯವಾಗಿದೆ ಮತ್ತು ಹಸು ಮತ್ತು ಎಮ್ಮೆಗಳ ತ್ಯಾಜ್ಯ ಸಗಣಿಯಿಂದ ಗ್ಯಾಸ್ ಜೊತೆಗೆ ಉತ್ತಮ ಜೈವಿಕ ಗೊಬ್ಬರವನ್ನು ಸಹ ಪಡೆಯಬಹುದಾಗಿದೆ.ಗ್ರಾಮದ ಶೇಕಡ ಐವತ್ತರಷ್ಟು ಮನೆಗಳಲ್ಲಿ ಹಸು ಎಮ್ಮೆಗಳ ಸಗಣಿಯಿಂದ ಜೈವಿಕ ಗೊಬ್ಬರ ಬಳಸಿ ಗ್ಯಾಸ್ ಉತ್ಪಾದನೆ ಮಾಡಿ ಮನೆಗಳಲ್ಲಿ ಅಡುಗೆ ಮಾಡಿಕೊಳ್ಳಲಾಗುತ್ತಿದೆ.
22 ಮನೆಗಳಲ್ಲಿ ಗೋಬರ್ ಗ್ಯಾಸ್ ಅಳವಡಿಕೆ ಮಾಡಲಾಗಿದೆ. ಮತ್ತು ಇನ್ನೂ ಉಳಿದ ಎಲ್ಲಾ ಮನೆಗಳಿಗೂ ಅಳವಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕೃಷಿ ಅಧಿಕಾರಿ ನಿಂಗಪ್ಪ ಅಗಸರ್ ಮತ್ತು ತಾಲ್ಲೂಕು ಸಂಯೋಜಕ ಸುಧೀರ್ ಜೈನ್ ಅವರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರು ಮತ್ತು ಸಂಘಸಂಸ್ಥೆಗಳ ಬೆಂಬಲ ನೀಡಿವೆ.
ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ.
ಕೆ.ಆರ್.ಪೇಟೆ : ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪಕ್ಷವು ಇಂದು ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳ ವತಿಯಿಂದ. ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ನೇತೃತ್ವದಲ್ಲಿ ಕೆ.ಆರ್.ಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ತಾಲ್ಲೂಕು ಪಂಚಾಯಿತಿ ವೃತ್ತದಿಂದ ಹೊರಟ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕರವೇ, ಜಯಕರ್ನಾಟಕ ಸಂಘಟನೆ, ಆಟೋ, ಟ್ಯಾಕ್ಸಿ ಚಾಲಕರ ಸಂಘದ ಪ್ರಮುಖ ಬೀದಿಗಳಲ್ಲಿ ಪಾದಾಯಾತ್ರೆ ಮೂಲಕ ತಾಲ್ಲೂಕು ಕಚೇರಿಯ ವರೆಗೆ ಮೆರವಣಿಗೆ ನಡೆಸಿದರು. ಪ್ರವಾಸಿ ಮಂದಿರ ವೃತ್ತ ದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರವಿರುದ್ದ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಕುರಿತು ಮಾತನಾಡಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರು ಈ ಹಿಂದೆ ಯುಪಿಎ ಸರ್ಕಾರ ವಿದ್ದಾಗ ಸ್ವಲ್ಪ ಬೆಲೆ ಹೆಚ್ಚಳ ಮಾಡಿದರೂ ಸಹ ಇದೇ ಬಿಜೆಪಿ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ದ ವಿರುದ್ದ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿತ್ತು. ಈಗ ತಮ್ಮದೇ ಸರಕಾರ ಇದ್ದರೂ ಸಹ ಬೆಲೆ ಏರಿಕೆ ತಡೆಯುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಫಲರಾಗಿದ್ದಾರೆ. ಆಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಉತ್ಪನ್ನ ಬೆಲೆಏರಿಕೆ ಹೆಚ್ಚಾಗಿತ್ತುಆದರೆ ಈಗ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಉತ್ಪನ್ನ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಡಿಸೇಲ್ ದರ ಗಗನಕ್ಕೆ ಏರಿಕೆ ಮಾಡಿದ್ದಾರೆ ಎಂದು ಆರೋಪಿಸಿದರು. ಇನ್ನಾದರೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಬೇಕು ಇಲ್ಲದಿದ್ದರೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ತಂತಾನೆ ಹೆಚ್ಚಾಗಲಿವೆ. ಹಾಗಾಗಿ ತಕ್ಷಣ ಡೀಸೆಲ್, ಪೆಟ್ರೋಲ್ ಬೆಲೆ ಇಳಿಕೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಕೆ.ಬಿ.ಚಂದ್ರಶೇಖರ್ ಎಚ್ಚರಿಕೆ ನೀಡಿದರು.ಪ್ರತಿಭಟನೆಯ ನಂತರ ತಾಲ್ಲೂಕು ತಹಸೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಕೆ.ಎಸ್.ಕುಮಾರ್, ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ ಎಸ್.ವಿ.ವಿನಯ್, ಪಿ.ಕೆ.ಜಿ.ಮಹೇಶ್, ಕರವೇ ಉಪಾಧ್ಯಕ್ಷ ಕೆ.ಟಿ.ಶ್ರೀನಿವಾಸ್, ತಾಲ್ಲೂಕು ಕಾರ್ಯದರ್ಶಿ ಟೆಂಪೋ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ವಿ.ಡಿ.ಹರೀಶ್, ಕಾಂಗ್ರೆಸ್ ಮುಖಂಡರಾದ ಕೆ.ಸಿ.ರಾಮಚಂದ್ರೇಗೌಡ, ಪುರಸಭಾ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಯರಂಗ, ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಉಪಾಧ್ಯಕ್ಷ ಎಸ್.ರವಿ, ಮಹಿಳಾ ಘಟಕದ ಅಧ್ಯಕ್ಷೆ ಮಧು, ಕಾರ್ಯಾಧ್ಯಕ್ಷೆ ಸರಸ್ವತಿ, ನಗರ ಘಟಕದ ಅಧ್ಯಕ್ಷೆ ಮಂಗಳಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.