ಇತ್ತೀಚಿಗಿನ ಸುದ್ದಿಗಳು

ಸುದ್ದಿಜಾಲ

ಸುದ್ದಿಜಾಲ

Rate this item
(0 votes)

ಮಳವಳ್ಳಿ ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಹೊಂಬೇಗೌಡ(65) ಮಂಜಮ್ಮ(55) ಸಾವಿನಲ್ಲೂ ಒಂದಾದ ದಂಪತಿಗಳು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಅಪರೂಪದ ಒಂದು ಘಟನೆ ನೆಡೆದಿದೆ. ಏನೆಂದರೆ ಪ್ರೀತಿಸುವ ಪ್ರೇಮಿಗಳ ಕೆಲವೊಮ್ಮೆ ಒಟ್ಟಾಗಿ ಮರಣಹೊಂದಿದ ಪ್ರಕರಣಗಳನ್ನು ನೊಡಿರುತ್ತೆವೆ .ಅದರೆ ಇಲ್ಲಿ ತಮ್ಮ ಜೀವನದಲ್ಲಿ ಕಷ್ಟ ಸುಖ ಗಳಲ್ಲಿ ಜೊತೆಯಾಗಿ ಬಾಳಿದ ಆದರ್ಶದಂಪತಿಗಳು ಸಾವಿನ್ನಲು ಸಹ ಜೊತೆಯಾಗಿದ್ದಾರೆ. 

 ಮಳವಳ್ಳಿ ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಹೊಂಬೇಗೌಡ(65) ಮಂಜಮ್ಮ(55) ಸಾವಿನಲ್ಲೂ ಒಂದಾದ ದಂಪತಿಗಳು

ಗ್ರಾಮದ ಹೊಂಬೇಗೌಡ(65) ಮಂಜಮ್ಮ(55) ಸಾವಿನಲ್ಲೂ ಒಂದಾದ ದಂಪತಿಗಳು.ಕಳೆದ ರಾತ್ರಿ 1 ಗಂಟೆ ಸಮಯದಲ್ಲಿ ಹೊಂಬೇಗೌಡ ರವರಿಗೆ ಹೊಟ್ಟೆನೋವು ಕಾಣಿಸಿಕೊಂಡು ತಕ್ಷಣ ಹೊಂಬೇಗೌಡರನ್ನ ಮಳವಳ್ಳಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಕುಟುಂಬದವರು, ಈ ವೇಳೆ ಬಾಯಾರಿಕೆಯಿಂದ ನೀರು ಕೇಳಿದ ಹೊಂಬೇಗೌಡರವರಿಗೆ ಪತ್ನಿಮಂಜಮ್ಮ ನೀರು ಕುಡಿಸಿದತಕ್ಷಣ ಪ್ರಾಣ ಪಕ್ಷಿ ಹಾರಿಹೋಗಿದ್ದು, , ಇದನ್ನು ನೋಡಿದ ಆತನ ಪತ್ನಿ ಮಂಜಮ್ಮ ಸಹ ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇಸಾವನ್ನಪ್ಪಿದಾಳೆ.

ಈ ವೇಳೆ ಮಾರ್ಗ ಮಧ್ಯದಲ್ಲೇ ಹೊಂಬೇಗೌಡ ಸಾವು. ಪತಿ ಸತ್ತ ಐದೇ ನಿಮಿಷದಲ್ಲಿ ಪತ್ನಿ ಮಂಜಮ್ಮನೂ ಸಾವು.ಆದರ್ಶ ದಂಪತಿಗಳ ಸಾವಿನಿಂದ ಕಣ್ಣೀರು ಹಾಕುತ್ತಿರುವ ಕುಟುಂಬ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ನಡೆದ ಘಟನೆ

ಮದುವೆ ಅನ್ನುವ ಋಣಾನುಬಂಧ ಎನ್ನುತ್ತಾರೆ ಅದು ಎಷ್ಟು ಸತ್ಯವೋ ಗೊತ್ತಿಲ್ಲ ಆದರೆ ಸಾವಿನಲ್ಲೂ  ಒಂದಾದ ದಂಪತಿಗಳ ಆತ್ಮಕ್ಕೆ ಶಾಂತಿಯನ್ನು ಅ ಭಗವಂತ ಕರುಣಿಸಲಿ .

Last modified on 04/08/2018

ಮೂಡ ನಂಬಿಕೆಯನ್ನು ತೂಲಗೀಸಬೇಕೆಂದು ವಿಚಿತ್ರವಾಗಿ ಹಬ್ಬ ಆಚರಣೆ

ನೀವು ಹುಟ್ಟು ಹಬ್ಬವನ್ನು ಹೊಟೇಲ್, ಪ್ಯಾಲೇಸ್, 5ಸ್ಟಾರ್ ಹೊಟೇಲ್ , ಇಲ್ಲವೇ ಮನೆಯಲ್ಲಿ ಅಥವಾ ದೇವಸ್ಥಾನದಲ್ಲಿ ಆಚರಣೆ ಮಾಡುವುದು ನೋಡಿರ್ತಿರಾ ಅದರೆ ಇಲ್ಲೊಬ್ಬರೂ ತಮ್ಮ ಹುಟ್ಟು ಹಬ್ಬವನ್ನು ವಿಚಿತ್ರವಾಗಿ ಸ್ಮಶಾನದಲ್ಲಿ ಸಮಾಧಿಗಳ ಮಧ್ಯೆ ಅಚರಿಸಿಕೊಂಡಿದ್ದಾರೆ

ವಿಜಯಪುರದ ಸಿಂದಗಿ ತಾಲೂಕೀನ ಮಲಘಾಣ ಗ್ರಾಮದ ಶರಣು ಬರಗಾಲ್ ಏಂಬ ವ್ಯಕ್ತಿ ಮೂಡನಂಬಿಕೆಯನ್ನೂ ತೊಲಗೀಸಲು ತನ್ನ ಹುಟ್ಟು ಹಬ್ಬವನ್ನ ಸುಡುಗಾಡು ( ಸ್ಮಶಾನ) ದಲ್ಲಿ ಆಚರಿಸಿಕೊಂಡಿದ್ದಾನೆ.ಈ ಕಾರ್ಯಕ್ರಮದಲ್ಲಿ ಸಿಂದಗಿ ತಾಲೂಕಿನ ದಲಿತ ಮುಖಂಡರು ಹಾಗೂ ಮಲಘಾಣ ತಾಲೂಕು ಪಂಚಾಯತ್ ಸದಸ್ಯರಾದ ಶಾಂತಗೌಡ ಬಾಗವಹಿಸಿದ್ದರು.

 ನಮ್ಮ ದೇಶದಲ್ಲಿ ಮೂಡ ನಂಬಿಕೆಯನ್ನು ತೂಲಗೀಸಬೇಕೆಂಬುದು ಸ್ಮಶಾನದಲ್ಲಿಯೆ ಅಡುಗೆ ಮಾಡಿ ಊಟ ಮಾಡಿದರು.

 

Rate this item
(0 votes)

ಕೃಷ್ಣರಾಜಪೇಟೆ ಪಟ್ಟಣದಲ್ಲಿ ನೇಕಾರ ತೊಗಟವೀರ ಕುಲಬಾಂಧವರಿಂದ 8ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವ.

 ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ವಿಜೃಂಭಣೆಯಿಂದ ತಾಯಿ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವ ನಡೆಯಿತು.ಶ್ರೀ ದೇವಿರಮ್ಮಣ್ಣಿ ಕೆರೆಯಿಂದ ಗಂಗಾಪೂಜೆ ಮಾಡಿ ನಂತರ ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಆರಂಭವಾದ ಕರಗ ಉತ್ಸವ. ಜಾನಪದ ಕಲಾ ಜನಪದ ವೈಭವ ದೊಂದಿಗೆ,ಡೊಳ್ಳು ಕುಣಿತ, ಪೂಜಾ ಮತ್ತು ಪಟ ಕುಣಿತ, ದೇವರಗುಡ್ಡರ ಆಕರ್ಷಕ ನೃತ್ಯದೊಂದಿಗೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ಸಾಗಿದ ಮೆರವಣಿಗೆಯು ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಪಕ್ಕದ ರಾಮಮಂದಿರದ ಬಳಿ ಅಂತ್ಯಗೊಂಡಿತು.

ನೇಕಾರ ತೊಗಟವೀರ ಸಮಾಜದ ಜಿಲ್ಲಾಧ್ಯಕ್ಷ ಹಂಸರಮೇಶ್, ರಾಜ್ಯ ತೊಗಟವೀರ ಸಂಘದ ನಿರ್ದೇಶಕ ಕೆ.ಜೆ.ರಾಜಶೇಖರ್, ರಾಜ್ಯ ಯುವಘಟಕದ ಅಧ್ಯಕ್ಷ ಗಜಪಡೆ ಶ್ರೀಧರ್, ಪುರಸಭೆ ಸದಸ್ಯ ಕೆ.ಆರ್.ಹೇಮಂತ್ ಕುಮಾರ್, ತಾ.ಪಂ ಸದಸ್ಯ ರಾಜಾಹುಲಿ ದಿನೇಶ್, ಮುಖಂಡರಾದ ಕೆ.ಆರ್.ಪುಟ್ಟಸ್ವಾಮಿ, ಎಸ್.ಜೆ.ಕುಮಾರಸ್ವಾಮಿ, ಹೊನ್ನಾವರ ಚಂದ್ರಶೇಖರ್, ಕೈಗೋನಹಳ್ಳಿ ಈರಪ್ಪ, ಮಾಸ್ಟರ್ ರಾಮಕೃಷ್ಣ, ಸೇರಿದಂತೆ ಸಾವಿರಾರು ಜನರು ಕರಗ ಮಹೋತ್ಸವದಲ್ಲಿ ಭಾಗವಹಿಸಿದ್ದರು.

Last modified on 04/08/2018
Rate this item
(0 votes)

ಕೆ.ಆರ್.ಪೇಟೆ ತಹಶೀಲ್ದಾರ್ ಮಹೇಶ್ಚಂದ್ರ ಅಪಹರಣ ಶಂಕೆ

ಮಂಡ್ಯ ಜಿಲ್ಲೆಯ, ಕೆಆರ್ ಪೇಟೆ ತಹಸಿಲ್ದಾರ್‌‌ ಮಹೇಶ್ ಚಂದ್ರ ಅಪಹರಣವಾಗಿರುವ ತಹಸಿಲ್ದಾರ್ . ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ಬಳಿ ಘಟನೆ‌. ನಿನ್ನೆ ಎಂದಿನಂತೆ ಕೆ ಆರ್ ಪೇಟೆಯಲ್ಲಿ ಕರ್ತವ್ಯ ಮುಗಿಸಿ ತಮ್ಮ ಗ್ರಾಮಕ್ಕೆ ತೆರಳುವಾಗ ನಿನ್ನೆ ರಾತ್ರಿ ನಡೆದಿರುವ ಘಟನೆ.ತಮ್ಮ ಸ್ವಂತ ಮಾರುತಿ ಓಮಿನಿ( ಕೆ ಎ 41 Ź 1581) ಕಾರಿನಲ್ಲಿ ಮನೆಗೆ ತೆರಳುತ್ತಿರುವಾಗ ಘಟನೆ‌ ,ಮಾರ್ಗ ಮದ್ಯದಲ್ಲಿ ಅವರ ಓಮಿನಿ ಕಾರ್ ಮತ್ತೆ ಷೂಗಳು ಪತ್ತೆಯಾಗಿವೆ.

ಒಂದು ವಾರದಿಂದಷ್ಟೇ ಕೆ.ಆರ್.ಪೇಟೆ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದರು ಈ ಹಿಂದೆ ಕೆ.ಆರ್.ನಗರದಲ್ಲಿ ತಹಸಿಲ್ದಾರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.ಕುಟುಂಬದವರು ಕೆ.ಆರ್.ನಗರದಲ್ಲೇ ನೆಲೆಸಿದ್ರು ಹೀಗಾಗಿ ನಿನ್ನೆ ಸಂಜೆ ಕೆ.ಆರ್.ನಗರಕ್ಕೆ ಹೊರಟಿದ್ರು.

 ಸ್ಥಳಕ್ಕೆ ವೃತ್ತ ನಿರೀಕ್ಷಕ ಕೆ,ರಘು, ಸಾಲಿಗ್ರಾಮ ಎಸ್ ಐ ಮಹೇಶ್ ಬೇಟಿ ನೀಡಿ ಸ್ಥಳ ಪರಿಶೀಲಿಸಿದರು.ಸಾಲಿಗ್ರಾಮ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Last modified on 04/08/2018
Rate this item
(0 votes)

ಇಂದು ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರೂ  ಕೆ.ಆರ್.ಪೇಟೆಯ ಗವಿಮಠದ ಕೇಂದ್ರ ರೇಷ್ಮೆ ಫಾರಂಗೆ ಬೇಟಿ. 

ಮಂಡ್ಯ ಜಿಲ್ಲೆಯ  ಕೃಷ್ಣರಾಜಪೇಟೆ ತಾಲ್ಲೂಕಿನ ಗವಿಮಠದ ಕೇಂದ್ರ ರೇಷ್ಮೆ ಫಾರಂಗೆ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಅವರು ಇಂದು ಬೇಟಿನೀಡಿದರು.ನಂತರ ಮಾತನಾಡಿ ರೇಷ್ಮೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭವನ್ನು ತಂದುಕೊಡುವ ಬಂಗಾರದ ಬೆಳೆಯಾಗಿದೆ. ರೈತರು ಕಬ್ಬು ಮತ್ತು ಭತ್ತ ಬೆಳೆಯುವುದನ್ನೇ ಬೇಸಾಯವೆನ್ನದೇ ರೇಷ್ಮೆ ಬೆಳೆ ಬೇಸಾಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಿ ಮುನ್ನಡೆಯಬೇಕು ಎಂದು ಮನವಿ ಮಾಡಿದರು.

ನಂತರ ರೇಷ್ಮೆ ಗೂಡಿನ ಬೆಲೆ ಕುಸಿತವು ರೈತರಿಗೆ ತಾತ್ಕಾಲಿಕ ತೊಂದರೆಯಷ್ಟೇ,ಸಧ್ಯದಲ್ಲಿಯೇ ರೇಷ್ಮೆ ಬೆಲೆಯು ಚೇತರಿಕೆಯಾಗುತ್ತಿದ್ದು ರೈತರಿಗೆ ಯಾವುದೇ ನಷ್ಠವಾಗುವುದಿಲ್ಲ.ರೇಷ್ಮೆ ಬೆಳೆಯ ಬೇಸಾಯಕ್ಕೆ ಮಂಡ್ಯ ಜಿಲ್ಲೆಯ ಹವಾಮಾನವು ಸೂಕ್ತವಾಗಿದೆ. ರೇಷ್ಮೆ ಬೇಸಾಯವು ಈಗ ಹೆಚ್ಚು ಸರಳವಾಗಿದ್ದು ಸರ್ಕಾರವು ನೀಡುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮುನ್ನಡೆಯಬೇಕು ಎಂದು ಹನುಮಂತರಾಯಪ್ಪ ಕರೆ ನೀಡಿದರು.

ಮೈಸೂರು ವಲಯದ ಜಂಟಿನಿರ್ದೇಶಕ ಡಾ.ನಾಯಕ್ ಹಾಗೂ ಮಂಡಳಿಯ ಸದಸ್ಯರು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು...

Last modified on 04/08/2018
Rate this item
(0 votes)

ಕೆ.ಆರ್.ಪೇಟೆ ತಾಲೂಕಿನ ಮಂಡಲಿಕ್ಕನಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಚಿರತೆ ದಾಳಿ ನಡೆದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೆರಿ ಹೋಬಳಿಯ ಮಂಡಲಿಕ್ಕನಹಳ್ಳಿಯಲ್ಳಿ ಘಟನೆ.ರಾಜೇಗೌಡ ಎಂಬುವರಿಗೇ ಸೇರಿದ ಎಮ್ಮೆ ಕರುವನ್ನು ತಿಂದು ಹಾಕಿದೆ.ಅವರ ಫಾರಂ ಹೌಸ್ ಗೇ ನುಗ್ಗಿ ಎಮ್ಮೆ ಕರುವನ್ನು ಎಳೆದೊಯದ್ದ ಚಿರತೆ ಎಮ್ಮೆ ಕರುವನ್ನು ತಿಂದು ಹಾಕಿದೆ.ಚಿರತೆ ದಾಳಿಯಿಂದ ಆತಂಕಕ್ಕೊಳಗಾದ ಗ್ರಾಮಸ್ಥರು,ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಇನ್ನೂ ಸ್ಥಳಕ್ಕೆ ಭೇಟಿ ನೀಡಿಲ್ಲಾ ಎಂದು ಗ್ರಾಮಸ್ಥರ ಅಕ್ರೊಸ‌..

 

 

Last modified on 04/08/2018
Rate this item
(0 votes)

ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಮಳವಳ್ಳಿ ಪಟ್ಟಣದ ಶಾಂಭವಿ ಗ್ಯಾಸ್ ಏಜೆನ್ಸಿ  ಬಳಿ ಇಂದು ಮುಂಜಾನೆ ನಡೆದಿದೆ. ಮೂಲತಃ ಮಳವಳ್ಳಿ ತಾಲ್ಲೂಕಿನ ಹೂವಿನಕೊಪ್ಪಲು ಗ್ರಾಮದ ರಾಚಯ್ಯರವರ ಪುತ್ರ ಪ್ರವೀಣ್ (21) ಮೃತಪಟ್ಟ ದುದೈವಿ .

 

 

ಮೃತ ಪ್ರವೀಣ್  ಮಳವಳ್ಳಿ ಪಟ್ಟಣದ ಅವರ ಅಜ್ಜಿ ಮನೆ ವಾಸವಾಗಿದ್ದನು ಎನ್ನಲಾಗಿದೆ. ಈತ ಇಂದು ಬೆಳಿಗ್ಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ  ಮಳವಳ್ಳಿಯಿಂದ ಕನಕಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ  ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ .ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ವತ್ರೆ ಗೆ ಸಾಗಿಸಲಾಗಿದೆ. 

 ಸ್ಥಳಕ್ಕೆ ಇನ್ಸ್ ಪೆಕ್ಟರ್ ಗಂಗಾಧರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ .

Last modified on 04/08/2018
Rate this item
(0 votes)

ಜಯಕರ್ನಾಟಕ ಸಂಘಟನೆ ವತಿಯಿಂದ ಮಳವಳ್ಳಿಯಲ್ಲಿ ಇಂದು ಗ್ರಾಮೀಣ ಕ್ರೀಡೆಯಾದ ರಾಗಿಮುದ್ದೆ ಸ್ವರ್ಧೆ ಆಯೋಜಿಸಿದ್ದರು.

 ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಇಂದು ಗ್ರಾಮೀಣ ಕ್ರೀಡೆಗಳಲ್ಲಿ ಒಂದಾದ ರಾಗಿಮುದ್ದೆ ಸ್ವರ್ಧೆಯನ್ನು ತಾಲ್ಲೂಕು ಜಯಕರ್ನಾಟಕ ಸಂಘಟನೆ ವತಿಯಿಂದ ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು   ಮುಂದೆ ಇರುವ ಮೈದಾನದಲ್ಲಿ ನಡೆಯಿತು .ಕಾರ್ಯಕ್ರಮವನ್ನು ಪುರಸಭೆ ಸದಸ್ಯ ರಾಜಣ್ಣ ಉದ್ಘಾಟಿಸಿದರು. ಚಿತ್ರದುರ್ಗದಿಂದಲೂ ಸ್ವರ್ಧಾಳು ಭಾಗವಹಿಸಿದ್ದು ವಿಶೇಷವಾಗಿತ್ತು.

ಈ ಸ್ವರ್ಧೆಯಲ್ಲಿ 21 ಮಂದಿ ಸ್ವರ್ಧಾಳುಗಳು ಭಾಗವಹಿಸಿದ್ದು.ಅರ್ಥ ಕೆಜಿ ಯ ರಾಗಿಮುದ್ದೆಯುಳ್ಳ ಒಂದು ಮುದ್ದೆ ಯಂತೆ,ಮುದ್ದೆಜೊತೆ ನಾಟಿಕೋಳಿ ಸಾಂಬಾರು ನೀಡಲಾಯಿತು. ಚಿಕ್ಕಅರಸಿಕೆರೆ ಗ್ರಾಮದ ಸುರೇಶ ಎಂಬುವರು ಎಂಟು ಮುದ್ದೆ ತಿನ್ನುವ ಮೂಲಕ  ನಾಲ್ಕು ಕೆಜಿ ಮುದ್ದೆ ತಿಂದು ಪ್ರಥಮ ಬಹುಮಾನ 5000 ರೂ ಪಡೆದುಕೊಂಡರೆ  ಇನ್ನೂ ಟಿ.ನರಸೀಪುರ ತಾಲ್ಲೂಕಿನ ಹುಣಸೂರು ಗ್ರಾಮದ ಶಂಕರ್ ರವರು ಏಳೂವರೆ ಮುದ್ದೆ  ತಿಂದು ದ್ವಿತೀಯ ಬಹುಮಾನ 3000 ರೂ  , ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮ ದ ಶಿವು ಎಂಬುವರು ಏಳು ಮುದ್ದೆ ತಿಂದು  2000 ರೂ ನಗದು ಪಡೆದಕೊಂಡರು.   

 ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರಾದ ಜಯಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ನಾಗೇಶ್ ಮಾತನಾಡಿ  ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಜಯಕರ್ನಾಟಕ ಸಂಘಟನೆ ಮುಂದಾಗಿದ್ದು  ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರೀಡೆಗಳನ್ನು ಮಾಡಲಿದ್ದೇವೆ ಎಂದರು.   ಕಾರ್ಯಕ್ರಮ ದಲ್ಲಿ ಜೆಡಿಎಸ್ ಮುಖಂಡರಾದ ಆನಂದ, ಸಿದ್ದರಾಜು, ಪ್ರಶಾಂತ್ ,ವೆಂಕಟೇಶ್, ಶ್ರೀರಂಗಪಟ್ಟಣದ ಜಯಕರ್ನಾಟಕ ಸಂಘಟನೆ ಜಿಲ್ಲಾ ಮಹಿಳಾ ಉಪಾಧ್ಯಕ್ಷ ಪ್ರಿಯಾರಮೇಶ್, ರಮೇಶ್ ಕಲ್ಲೇಶ್, ರಾಜಕುಮಾರ್ , ಶಿವಾನಂದ, ಕುಮಾರ್ ಸೇರಿದಂತೆ ಮತ್ತಿತ್ತರರು ಇದ್ದರು.

Last modified on 04/08/2018
Page 36 of 42

Visitors Counter

224664
Today
Yesterday
This Week
This Month
Last Month
All days
53
258
2009
1065
6704
224664

Your IP: 18.218.156.35
2024-05-04 12:06

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles