ಇತ್ತೀಚಿಗಿನ ಸುದ್ದಿಗಳು

ಸುದ್ದಿಜಾಲ

ಸುದ್ದಿಜಾಲ

Rate this item
(0 votes)

ಡೆಂಗ್ಯೂ ಜ್ವರಕ್ಕೆ ಅಗಸರಹಳ್ಳಿ ಗ್ರಾಮದ ಶಾಲಾ ಬಾಲಕಿ ಸಾವು, ಮತ್ತೊಬ್ಬ ಬಾಲಕಿ ತೀವ್ರ ಅಸ್ವಸ್ಥ... ಬಲಿ....ಅಗಸರಹಳ್ಳಿ ಗ್ರಾಮದ ರವಿಕುಮಾರ್ ರಾಣಿ ದಂಪತಿಗಳ ಪುತ್ರಿ ಕೆ.ಆರ್.ಪೇಟೆ ಪಟ್ಟಣದ ಪ್ರಿಯದರ್ಶಿನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಾವತಿ(7) ಮೃತ ದುರ್ದೈವಿಯಾಗಿದ್ದಾರೆ... ಈಕೆಯ ಸಹೋದರಿ ಪ್ರೇರಣ(5)ಕೂಡ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಎಸ್ ಎಸ್ ಆಸ್ಪತ್ರೆಯಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹೇಮಾವತಿ ಮತ್ತು ಪ್ರೇರಣಾ ಸಹೋದರಿಯರು ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯಲ್ಲಿ ಸ್ಥಳಾಂತರಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಹೇಮಾವತಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರೆ ಈಕೆಯ ಸಹೋದರಿ ತೀವ್ರವಾಗಿ ಅಸ್ವಸ್ಥರಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಅಗಸರಹಳ್ಳಿ ಗ್ರಾಮದಲ್ಲಿ ಆತಂಕವು ಮನೆ ಮಾಡಿದೆ..

Last modified on 10/08/2019
Rate this item
(0 votes)

ಸಾಲದ ಬಾಧೆ ತಾಳಲಾರದೆ ಕೆ.ಆರ್.ಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ಹೊರವಲಯದ ತೋಟಗಾರಿಕೆ ಫಾರಂ ಬಳಿ ಪ್ರಗತಿಪರ ರೈತ ಎಂ.ಆರ್.ಯೋಗೇಶ್ (45)ನೇಣಿಗೆ ಶರಣು... ಕೃಷ್ಣರಾಜಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ರಾಮೇಗೌಡರ ಪುತ್ರನಾದ ಯೋಗೇಶ್ ಕೃಷಿ ಚಟುವಟಿಕೆಗಳಿಗೆ ಹಾಗೂ ತಮ್ಮ ಮಗಳ ಮದುವೆಗೆ 10ಲಕ್ಷರೂಪಾಯಿಗಳಿಗೂ ಹೆಚ್ಚಿನ ಸಾಲ ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಮುಂಜಾನೆ ಎದ್ದು ಜಮೀನಿಗೆ ಹೋದಾಗ ಮನನೊಂದಿದ್ದ ಯೋಗೇಶ್ ಅಲ್ಲಿಯೇ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಗ್ರಾಮಾಂತರ ಠಾಣೆಯ ಪೋಲಿಸರಿಗೆ ಗ್ರಾಮದ ಮುಖಂಡ ಸುದ್ಧಿಯನ್ನು ಮುಟ್ಟಿಸಿದ್ದು ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಸ್ಥಳಕ್ಜೆ ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ... ಮೃತರ ಬಂಧುಗಳ ಆಕ್ರಂಧನವು ಮುಗಿಲು ಮುಟ್ಟಿದೆ....

Rate this item
(0 votes)

ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸಧ್ಯದಲ್ಲಿಯೇ ನಡೆಯಲಿರುವ ಉಪಚುನಾವಣೆಯಲ್ಲಿ ಬಿಎಸ್ ಪಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಹೋರಾಟ ನೀಡಲಾಗುವುದು... ದೇಶದ ಅತೀ ದೊಡ್ಡ 3ನೇ ಪಕ್ಷವಾಗಿರುವ ಬಿ.ಎಸ್.ಪಿ ಅಭ್ಯರ್ಥಿಯನ್ನು ತಾಲ್ಲೂಕಿನ ಪ್ರಜ್ಞಾವಂತ ಮತದಾರರು ಗೆಲ್ಲಿಸಿ ಆಶೀರ್ವದಿಸಬೇಕು ಎಂದು ರಾಜ್ಯ ಬಿಎಸ್ ಪಿ ಪ್ರಧಾನ ಕಾರ್ಯದರ್ಶಿ ಡಾ.ಕೃಷ್ಣಮೂರ್ತಿ ಮನವಿ ಮಾಡಿದರು...ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಪಿ ಪಕ್ಷವು ಜೆಡಿಎಸ್ ಪಕ್ಷದೊಂದಿಗೆ ಸ್ಥಾನ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್ ಪಕ್ಷಕ್ಕೆ ಅಕ್ಕ ಮಾಯಾವತಿ ಅವರು ಬೆಂಬಲಿಸಿದ್ದರು. ಬದಲಾಗಿರುವ ರಾಜಕಾರಣದಿಂದಾಗಿ ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ ಎಲ್ಲಾ 17ಸ್ಥಾನಗಳಲ್ಲಿಯೂ ಬಿಎಸ್ ಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಹೋರಾಟ ನೀಡಲಾಗುವುದು ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ನಡೆಯುವುದು ಶತಸಿದ್ಧವಾಗಿರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಸಂಘಟನೆಯ ಕಡೆಗೆ ಗಮನಹರಿಸಿ ಆನೆಯ ಗುರುತಿಗೆ ಭರ್ಜರಿ ಗೆಲುವು ತಂದುಕೊಡಬೇಕು ಎಂದು ಕೃಷ್ಣಮೂರ್ತಿ ಕರೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಬಿಎಸ್ ಪಿ ಮುಖಂಡರಾದ ಹರಿಹರಪುರ ಶಿವಕುಮಾರ್, ಚಿಕ್ಕಗಾಡಿಗನಹಳ್ಳಿ ಚೆಲುವರಾಜು, ಬಸ್ತಿ ಪ್ರದೀಪ ಮತ್ತಿತರರು ಉಪಸ್ಥಿತರಿದ್ದರು....

Rate this item
(0 votes)

ಕೃಷ್ಣರಾಜಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿರುವ ಗುಂಡೇಗೌಡ ಲಲಿತಮ್ಮ ದಂಪತಿಗಳ ಕೊಲೆ ಪ್ರಕರಣದಲ್ಲಿ ಪಕ್ಕದ ಮನೆಯವನಾದ ಒಬ್ಬರಾದ ಯೋಗೇಶ್ ಅವರಿಂದ ಮಾತ್ರ ಈ ಜೋಡಿಕೊಲೆ ನಡೆದಿಲ್ಲ ಯೋಗೇಶ್ ಅವರೊಂದಿಗೆ ಹಲವಾರು ಜನರು ಈ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ಶಂಕೆ ಹಾಗೂ ಅನುಮಾನವಿದ್ದು ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆಯನ್ನು ನಡೆಸಿ ತಪ್ಪಿತಸ್ಥರೆಲ್ಲರಿಗೂ ಶಿಕ್ಷೆಯನ್ನು ವಿಧಿಸಬೇಕು ಎಂದು ಇಂದು ಗ್ರಾಮಕ್ಕೆ ಭೇಟಿ ನೀಡಿದ್ದ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್ ಅವರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿ ಕೆಲಕಾಲ ದಿಗ್ಬಂಧನ ವಿಧಿಸಿ ಆಕ್ರೋಶ ವ್ಯಕ್ತಪಡಿಸಿದರು... ಯೋಗೇಶ್ ಒಬ್ಬ ಅಮಾಯಕನಾಗಿದ್ದು ಈತನೊಬ್ಬನೇ ವಯಕ್ತಿಕ ದ್ವೇಷದಿಂದ ಕೊಲೆ ಮಾಡಿದ್ದಾನೆ ಎಂದರೆ ನಂಬಲು ಸಾಧ್ಯವಿಲ್ಲ..ಕೊಲೆಯಾಗಿರುವ ದಂಪತಿಗಳ ಬಳಿಯಿದ್ದ ಒಡವೆಗಳು ಮತ್ತು ಹಣವೂ ಕಾಣುತ್ತಿಲ್ಲ. ಆದ್ದರಿಂದ ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಪ್ರತಿಭಟನೆ ನಡೆಸಲು ಮುಂದಾದಾಗ ಜಿಲ್ಲಾ ಪಂಚಾಯತಿ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು ಗ್ರಾಮಸ್ಥರನ್ನು ಸಮಾಧಾನಪಡಿಸಿ ಹದಿನೈದು ದಿನಗಳಲ್ಲಿ ಜೋಡಿಕೊಲೆ ಪ್ರಕರಣದ ಸಂಪೂರ್ಣ ವಿವರವನ್ನು ನೀಡುತ್ತಾರೆ, ಸಹಕರಿಸಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಗ್ರಾಮಸ್ಥರು ಕೈಬಿಟ್ಟರು...

Rate this item
(0 votes)

ರಾಯಸಮುದ್ರ ಗ್ರಾಮದಲ್ಲಿ ಗುಂಡೇಗೌಡ ಲಲಿತಮ್ಮ ದಂಪತಿಗಳ   ಜೋಡಿಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ...  ಕೃಷ್ಣರಾಜಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ಗುಂಡಣ್ಣ ಲಲಿತಮ್ಮ ದಂಪತಿಗಳನ್ನು ಹತ್ಯೆಮಾಡಿ ತಲೆಮರೆಸಿಕೊಂಡಿದ್ದ ಪಕ್ಕದ ಮನೆಯ ವಾಸಿಯೇ ಆದ ಬೋರೇಗೌಡರ ಮಗ ಯೋಗೇಶನನ್ನು ಕೆ.ಆರ್.ಪೇಟೆ ಪೋಲಿಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲೆಗೆ ಮತ್ತು ಮುಖಕ್ಕೆ ಹೊಡೆದು ಹತ್ಯೆಮಾಡಿರುವುದಾಗಿ ಯೋಗೇಶ ಒಪ್ಪಿಕೊಂಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದರು‌. ಜೋಡಿಕೊಲೆ ಹತ್ಯೆ ಆರೋಪಿಯನ್ನು ಎಎಸ್ ಪಿ ಬಲರಾಮೇಗೌಡ, ಡಿವೈಎಸ್ ಪಿ ವಿಶ್ವನಾಥ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್, ಅಪರಾಧ ಪತ್ತೆ ಸಿಬ್ಬಂಧಿಗಳಾದ ಹೆಚ್.ಪ್ರಕಾಶ್, ಬಿ.ಎಸ್.ಚಂದ್ರಶೇಖರ್, ಬಸವರಾಜು, ಪ್ರಶಾಂತಕುಮಾರ್, ರಘು, ಗುರುಪ್ರಸಾದ್, ಚಾಲಕರಾದ ಮಂಜುನಾಥ ಮತ್ತು ವಾಸು ಭಾಗವಹಿಸಿದ್ದರು. ಜೋಡಿಕೊಲೆ ಆರೋಪಿಯನ್ನು ಪತ್ತೆಹಚ್ಚಿದ ಕೆ.ಆರ್.ಪೇಟೆ ಪೋಲಿಸರ ತಂಡವನ್ನು ಎಸ್ ಪಿ ಶಿವಪ್ರಕಾಶ್ ದೇವರಾಜ್ ಅಭಿನಂದಿಸಿದ್ದಾರೆ...

ಸೆಲೆಬ್ರಿಟಿಗಳು ಸ್ತನ್ಯಪಾನ: ಸ್ಟೇಸಿ ಸೊಲೊಮನ್ ನಿಂದ ಆಮಿ ಶುಮರ್ ವರೆಗೆ, ಪ್ರಸಿದ್ಧ ತಾಯಂದಿರು ತಮ್ಮ ಮಕ್ಕಳನ್ನು ಮೊಲೆಹಾಲನ್ನು ಕೊಟ್ಟು ಪೋಷಿಸುತ್ತಿದ್ದಾರೆ

ಹಿಲರಿ ಡಫ್ (ಎಡ) ಮತ್ತು ಸ್ಟೇಸಿ ಸೊಲೊಮನ್ ಇಬ್ಬರೂ ಸ್ತನ್ಯಪಾನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ನಾವು ವಿಶ್ವ ಸ್ತನ್ಯಪಾನ ವಾರದ ಮಧ್ಯದಲ್ಲಿದ್ದೇವೆ, ಅದು ಈ ವರ್ಷ ಆಗಸ್ಟ್ 1-7 ರಿಂದ ಬರುತ್ತದೆ. ಸ್ತನ್ಯಪಾನವನ್ನು ಉತ್ತೇಜಿಸಲು ಮತ್ತು ಪ್ರಪಂಚದಾದ್ಯಂತದ ಶಿಶುಗಳ ಆರೋಗ್ಯವನ್ನು ಸುಧಾರಿಸಲು ಇದು ಜಾಗೃತಿ ವಾರವಾಗಿದೆ.

ವಿ.ಸೂ: ಸ್ತನ್ಯಪಾನವು ನಂತರದ ಜೀವನದಲ್ಲಿ ಮಕ್ಕಳಿಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂದು ಸಾಬೀತಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಆರು ತಿಂಗಳ ವಯಸ್ಸಿನ ಶಿಶುಗಳಿಗೆ ವಿಶೇಷ ಸ್ತನ್ಯಪಾನವನ್ನು ಶಿಫಾರಸು ಮಾಡಲಾಗಿದೆ - ಮತ್ತು“ಸೂಕ್ತವಾದ ಪೂರಕ ಆಹಾರಗಳೊಂದಿಗೆ ಶಿಶುಗಳಿಗೆ ಎರಡು ವರ್ಷ ತುಂಬುವವರೆಗೆ ಮೊಲೆ ಹಾಲನ್ನು ಕೊಡಬೇಕಾಗಿದೆ..

ಸೊಹ್ರಾಬುದ್ದೀನ್ ಪ್ರಕರಣ: ಎಲ್ಲಾ 38 ಆರೋಪಿ ಪೊಲೀಸರ ಖುಲಾಸೆ, ಆದೇಶವನ್ನು ಪ್ರಶ್ನಿಸಿ ‘ಸ್ಟೇಜ್’ ಎನ್‌ಕೌಂಟರ್ ಪ್ರಕರಣದ ಸಾಕ್ಷಿ ಮುಂಬೈ ಹೈಕೋರ್ಟ್‌ಗೆ ಮೊರೆ. ಎಚ್‌ಸಿ ಆದೇಶ ಮೀಸಲು.

ಮುಂಬೈ: ಗುಜರಾತ್ ಮತ್ತು ರಾಜಸ್ಥಾನದ ಎಲ್ಲಾ 38 ಆರೋಪಿ ಪೊಲೀಸರನ್ನು ಖುಲಾಸೆಗೊಳಿಸುವುದನ್ನು ಪ್ರಶ್ನಿಸಿ ಕೋರಿ ಸೊಹ್ರಾಬುದ್ದೀನ್ ಶೇಖ್, ಅವರ ಪತ್ನಿ ಕಸುವರ್ ಬಿ ಮತ್ತು ಸಹವರ್ತಿ ತುಳಸಿರಾಮ್ ಪ್ರಜಾಪತಿ ಅವರ ‘ಸ್ಟೇಜ್’ ಎನ್‌ಕೌಂಟರ್ ಪ್ರಕರಣದ ಸಾಕ್ಷಿ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಕೆಳ ನ್ಯಾಯಾಲಯದ ಅಂತಿಮ ತೀರ್ಪನ್ನು ಸಾಕ್ಷಿ ‘ನ್ಯಾಯದ ಅಪಹಾಸ್ಯ’ ಎಂದು ಹೆಸರಿಸಿದ್ದಾರೆ.

ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ಕೌಂಟರ್ನ ಎಲ್ಲಾ ಸ್ಮರಣೆಯನ್ನು ಮುಚ್ಚಿಹಾಕುವ ಪ್ರಯತ್ನಗಳ ಹೊರತಾಗಿಯೂ, ವಿಚಾರಣೆಗಳು ಮುಂದುವರೆದಿದ್ದರೂ, ಈ ಪ್ರಕರಣವು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಇತರರೊಂದಿಗೆ ಕಾಡುತ್ತಲೇ ಇರುತ್ತದೆ. ಮುಂಬೈನ ವಿಶೇಷ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ನ್ಯಾಯಾಲಯದ ಮುಂದೆ ಇತ್ತೀಚಿನ ನಿಕ್ಷೇಪಗಳು - ಅಮಿತ್ ಶಾ ಮತ್ತು ಸೊಹ್ರಾಬುದ್ದೀನ್ ನಕಲಿ ಎನ್ಕೌಂಟರ್ ನಡುವಿನ ಸಂಬಂಧವನ್ನು ಮತ್ತೊಮ್ಮೆ ಸ್ಥಾಪಿಸಿದೆ.

ಆಗಸ್ಟ್ 6 ರಿಂದ ಅಯೋಧ್ಯೆ ವಿಚಾರಣೆ: ಸಿಜೆಐ ಗೊಗೊಯ್ ನವೆಂಬರ್‌ನಲ್ಲಿ ನಿವೃತ್ತಿಯಾಗುವುದರೊಂದಿಗೆ, ವಿವಾದದ ಆರಂಭಿಕ ಪರಿಹಾರಕ್ಕೆ ಹೆಚ್ಚಿನ ಅವಕಾಶಗಳು

Page 6 of 42

Visitors Counter

220408
Today
Yesterday
This Week
This Month
Last Month
All days
126
274
2025
3513
4244
220408

Your IP: 18.224.30.118
2024-04-19 16:28

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles