ಇತ್ತೀಚಿಗಿನ ಸುದ್ದಿಗಳು

ಸುದ್ದಿಜಾಲ

ಸುದ್ದಿಜಾಲ

Rate this item
(0 votes)

ಕುಡಿದು ಕಬ್ಬಿನ ಲಾರಿಯನ್ನು ಚಾಲನೆ ಮಾಡಿ ಎಮ್ಮೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಎಮ್ಮೆ ಸಾವನ್ನಪ್ಪಿದ ಘಟನೆ ಕುಪ್ಪಳ್ಳಿಯಲ್ಲಿ ನಡೆದಿದೆ.

ಮಂಡ್ಯ:  ಕೃಷ್ಣರಾಜಪೇಟೆ ತಾಲೂಕಿನ ಕುಪ್ಪಳ್ಳಿ ಕೆರೆ ಬಳಿ ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ಕಬ್ಬನ್ನು ತುಂಬಿಕೊಂಡು ಹೋಗುತ್ತಿದ್ದು ,ಅತಿಯಾಗಿ ಕಬ್ಬನ್ನು ತುಂಬಿಕೊಂಡು ಮತ್ತು ಮದ್ಯಪಾನ ಮಾಡಿದ್ದರಿಂದ ಈ ಘಟನೆ ನಡೆದಿದೆ ಎಂದು ಅಕ್ಕಪಕ್ಕದ ಸಾರ್ವಜನಿಕರು ತಿಳಿಸಿದ್ದಾರೆ .ಮೂಡ್ನಲ್ಲಿ ಗ್ರಾಮದ ಚಾಲಕನಾದ ನಾಗೇಶ್ ಅಲಿಯಾಸ್ (ಬೆಂಕಿ ) ಎಂದು ತಿಳಿದು ಬಂದಿದೆ .
ಲಾರಿ ಮಾಲೀಕರಾದ ಕುರುಬಳ್ಳಿ ಪ್ರತಾಪ್ ಗೆ ಸೇರಿದ ಲಾರಿ ಎಂದು ಹೇಳಲಾಗುತ್ತಿದೆ .ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ .

ಜೂಜಾಟಕ್ಕೆ ಪತ್ನಿಯನ್ನೇ ಅಡವಿಟ್ಟು ಸೋತ ಪತಿರಾಯ!!  ನಂತರ ನೆಡೆದ ಘಟನೆ ಎನು ಗೊತ್ತಾ...???!!!

ಉತ್ತರ ಪ್ರದೇಶ : ಜೂಜಾಟ ಹಾಗೂ ಮದ್ಯಪಾನಕ್ಕೆ ದಾಸನಾಗಿದ್ದ ವ್ಯಕ್ತಿಯೊಬ್ಬ ಹಣವಿಲ್ಲದಿದ್ದ ಸಮಯದಲ್ಲಿ ಪತ್ನಿಯನ್ನು ಅಡವಿಟ್ಟು ಜೂಜಿನಲ್ಲಿ ಸೋತ ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ಜೌನ್​ಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯ ಬಳಿಕ ಪೊಲೀಸ್​ ಠಾಣೆಗೆ ಹೋಗಿ ದೂರು ನೀಡಿದರೂ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸರು ನಿರಾಕರಿಸಿದ್ದಕ್ಕೆ, ಸಂತ್ರಸ್ತೆ ಕೋರ್ಟ್​ ಮೆಟ್ಟಿಲೇರಿದ್ದಾರೆ. ಕೋರ್ಟ್​ ಖಡಕ್​ ಸೂಚನೆ ನೀಡಿದ ಬಳಿಕ ಜೌನ್​ಪುರ ಜಿಲ್ಲೆಯ ಜಫ್ಫರಾಬಾದ್​ ಠಾಣಾ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.
ಮದ್ಯಪಾನ ವ್ಯಸನಿಯಾಗಿರುವ ಪತಿ ನನ್ನನ್ನು ಜೂಜಾಟದಲ್ಲಿ ಅಡವಿಟ್ಟು ಸೋತು ಬೇರೆಯವರ ಪಾಲು ಮಾಡಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ. ಪತಿಯ ಸ್ನೇಹಿತ ಅರುಣ್​ ಮತ್ತು ಸಂಬಂಧಿ ಅನಿಲ್​ ಮದ್ಯಪಾನ ಮಾಡಲು ಮತ್ತು ಜೂಜಾಟ ಆಡಲು ಆಗಾಗ ಮನೆಗೆ ಬರುತ್ತಿದ್ದರು. ಜೂಜಾಟದಲ್ಲಿ ಸೋತಿದಕ್ಕೆ ಸಾಮೂಹಿಕ ಅತ್ಯಾಚಾರ ಮಾಡಲು ಪತಿಯೇ ಅವಕಾಶ ಮಾಡಿಕೊಟ್ಟಿದ್ದಾಗಿ ಸಂತ್ರಸ್ತೆ ದೂರಿದ್ದಾಳೆ.

ಘಟನೆ ನಡೆದ ಬಳಿಕ ಸಂತ್ರಸ್ತೆ ತನ್ನ ಸೋದರ ಮಾವನ ಮನೆಗೆ ತೆರಳಿದಾಗ ಆಕೆಯನ್ನು ಪತಿ ಹಿಂಬಾಲಿಸಿದ್ದಾನೆ. ನನ್ನದೊಂದು ತಪ್ಪಿನಿಂದ ಈ ರೀತಿಯಾಗಿದೆ. ನನ್ನನ್ನು ಕ್ಷಮಿಸು ಎಂದು ಬೇಡಿಕೊಂಡಿದ್ದಾನೆ. ಬಳಿಕ ಅವನನ್ನು ಕ್ಷಮಿಸಿ ಜತೆಯಲ್ಲಿಯೇ ಕಾರಿನಲ್ಲಿ ಮನೆಗೆ ಹಿಂದಿರುವಾಗ ಮಾರ್ಗ ಮಧ್ಯದಲ್ಲಿ ಕಾರನ್ನು ನಿಲ್ಲಿಸಿ ಮತ್ತೊಮ್ಮೆ ಆಕೆಯ ಮೇಲೆ ಅತ್ಯಾಚಾರ ಎಸಗಲು ಸ್ನೇಹಿತರಿಗೆ ಪತಿ ಅನುವು ಮಾಡಿಕೊಟ್ಟಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾಳೆ.

ಕೋರ್ಟ್​ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಜಫ್ಫರಬಾದ್​ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ..

Rate this item
(0 votes)

ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ದಿವಂಗತ ಹೆಚ್.ಎಲ್.ಹನುಮಂತೇಗೌಡರಿಗೆ ನುಡಿನಮನ, ಶ್ರದ್ಧಾಂಜಲಿ .

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ದಿವಂಗತ ಹೆಚ್.ಎಲ್.ಹನುಮಂತೇಗೌಡರಿಗೆ ನುಡಿನಮನ, ಶ್ರದ್ಧಾಂಜಲಿ ಸಮರ್ಪಣೆ.
ಹನುಮಂತೇಗೌಡರು ನಾಯಕತ್ವ ಗುಣಗಳನ್ನು ಹೊಂದಿದ್ದ ಹೃದಯವಂತ ವ್ಯಕ್ತಿಯಾಗಿ ಸದಾ ಸಮಾಜದ ಹಿತವನ್ನೇ ಬಯಸುತ್ತಿದ್ದರು..ಅವರ ಅಕಾಲಿಕ ನಿಧನವು ಇಡೀ ಸಮಾಜಕ್ಕೆ ತುಂಬಲಾರದ ನಷ್ಠವಾಗಿದೆ. ನಾನು ನನ್ನ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಅವರ ಕೊನೆಯಾಸೆಯಂತೆ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಭವನವನ್ನು ನಿರ್ಮಿಸುವ ದಿಕ್ಕಿನಲ್ಲಿ ಕ್ರಿಯಾಶೀಲರಾಗಿ ಹೆಜ್ಜೆ ಹಾಕಬೇಕು. ನಿವೃತ್ತ ನೌಕರರ ಭವನದ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮಾಜಿಸ್ಪೀಕರ್ ಕೃಷ್ಣ ತಿಳಿಸಿದರು...
ಅವರು ಇಂದು ತಾಲ್ಲೂಕಿನ ಗೋವಿಂದೇಗೌಡನಕೊಪ್ಪಲು ಗ್ರಾಮದಲ್ಲಿ ನಡೆದ ಹೆಚ್.ಎಲ್.ಹನುಮಂತೇಗೌಡರ 11ನೇ ದಿನದ ಪುಣ್ಯತಿಥಿಯ ಅಂಗವಾಗಿ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಹನುಮಂತೇಗೌಡರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಮಾತನಾಡಿದರು...ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಸದಾ ಸಮಾಜದ ಒಳಿತಿಗಾಗಿ ಚಿಂತಿಸುತ್ತಿದ್ದ ಹನುಮಂತೇಗೌಡರ ಪರಿಶ್ರಮದ ಫಲವಾಗಿ ಪಟ್ಟಣದಲ್ಲಿ ಶಿಕ್ಷಕರ ಭವನದ ನಿರ್ಮಾಣವಾಗಿದೆ. ಪ್ರಸ್ತುತ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿದ್ದ ಗೌಡರು ನಿವೃತ್ತ ನೌಕರರ ಸಮಸ್ಯೆಗಳ ನಿವಾರಣೆಗಾಗಿ ಸದಾ ಕೆಲಸ ಮಾಡುತ್ತಾ ನಿವೃತ್ತ ನೌಕರರ ಸಭಾ ಭವನದ ನಿರ್ಮಾಣಕ್ಕೆ ಹೆಜ್ಜೆಹಾಕಿ ಪುರಸಭೆಯ ವತಿಯಿಂದ ಸೂಕ್ತ ನಿವೇಶನವನ್ನೂ ಮಂಜೂರು ಮಾಡಿಸಿಕೊಂಡು ಅಡಿಪಾಯ ಕಾಮಗಾರಿಗೆ ಚಾಲನೆ ನೀಡಿದ್ದರು. ಸಂಘಟನಾ ಚತುರರಾಗಿ ರಾಜಕೀಯ ರಂಗದ ಅಜಾತ ಶತ್ರುವಿನಂತಿದ್ದ ಗೌಡರ ಆದರ್ಶ ಗುಣಗಳು, ಏನನ್ನಾದರೂ ಸಾಧಿಸಬೇಕೆಂಬ ಛಲವನ್ನು ಯುವಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದಲಾವಣೆಯ ದಿಕ್ಕಿನತ್ತ ಸಾಗಬೇಕು ಎಂದು ಕೃಷ್ಣ ಕರೆ ನೀಡಿದರು... ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ಸಂಘದ ಅಧ್ಯಕ್ಷ ಎನ್.ಕೆ.ನಂಜಪ್ಪಗೌಡ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಅಂ.ಚಿ.ಸಣ್ಣಸ್ವಾಮಿಗೌಡ, ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳಾದ ಎ.ಎಲ್.ನಂಜಪ್ಪ, ಶ್ರೀಕಂಠೇಗೌಡ, ನಜೀರ್ ಅಹಮದ್, ಎಸ್.ಎಲ್.ರಂಗಸ್ವಾಮಿ, ಶಿವರಾಮ್, ವೆಂಕಟರಮಣಶೆಟ್ಟಿ, ಲಕ್ಷ್ಮಣಗೌಡ, ಗಣೇಶ್ ಗೌಡ, ಚಂದ್ರೇಗೌಡ ಮತ್ತಿತರರು ಹನುಮಂತೇಗೌಡರ ಆದರ್ಶ ಗುಣಗಳು ಹಾಗೂ ಜನಪರವಾದ ಹೋರಾಟವನ್ನು ಕುರಿತು ಮಾತನಾಡಿ ನುಡಿನಮನ ಸಲ್ಲಿಸಿದರು...

 

ನೋ ಹೆಲ್ಮೆಟ್, ನೋ ಪೆಟ್ರೋಲ್- ಸಿಲಿಕಾನ್ ಸಿಟಿಯಲ್ಲಿ ಹೊಸ ರೂಲ್ಸ್..ಸೋಮವಾರದಿಂದಲೇ ಈ ಹೊಸ ನಿಯಮ ಜಾರಿ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೋ ಹೆಲ್ಮೆಟ್, ನೋ ಪೆಟ್ರೋಲ್ ಎಂಬ ಹೊಸ ರೂಲ್ಸ್ ಜಾರಿಗೆ ತರಲು ಸಿದ್ಧತೆ ನಡೆದಿದೆ.ಈ ವಿಚಾರವಾಗಿ ಟ್ರಾಫಿಕ್ ಪೊಲೀಸ್ ಕಮಿಷನರ್, ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಮಾತುಕತೆ ನಡೆಸಿದ್ದಾರೆ. ಶನಿವಾರ ಮತ್ತೊಮ್ಮೆ ಈ ವಿಚಾರವಾಗಿ ಮಾತುಕತೆ ನಡೆಸಿ ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ಸೋಮವಾರದಿಂದಲೇ ಈ ಹೊಸ ನಿಯಮ ಜಾರಿಯಾಗಲಿದೆ ಎಂಬ ಮಾಹಿತಿ  ಲಭ್ಯವಾಗಿದೆ.ಈ ನಿಯಮ ಈಗಾಗಲೇ ಕೇರಳ, ಆಂಧ್ರ ಸೇರಿದಂತೆ ದೇಶದ ವಿವಿಧೆಡೆ ಜಾರಿಯಾಗಿದೆ. ಇದರ ಪ್ರಕಾರ ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಬೇಕು ಎಂದರೆ ಹೆಲ್ಮೆಟ್ ಇರಲೇಬೇಕು. ಒಂದು ವೇಳೆ ನಿಮ್ಮ ಬಳಿ ಹೆಲ್ಮೆಟ್ ಇಲ್ಲ ಎಂದರೆ ಬಂಕ್‍ನವರು ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕುವುದಿಲ್ಲ. ಬೆಂಗಳೂರಲ್ಲಿ ಬೈಕ್ ಅಪಘಾತದಿಂದ ಹೆಚ್ಚುತ್ತಿರುವ ಸಾವು-ನೋವು ತಡೆಗೆ ಈ ಹೊಸ ನಿಯಮವನ್ನು ತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.ಕಳೆದ ವರ್ಷ ಬೈಕ್ ಅಪಘಾತಗಳಲ್ಲಿ ಸುಮಾರು 150 ಮಂದಿ ದುರ್ಮರಣಕ್ಕೀಡಾಗಿದ್ದರು. ದಂಡ ವಿಧಿಸುತ್ತಿದರೂ ಹೆಲ್ಮೆಟ್ ಬಳಸದೇ ವಾಹನ ಚಲಾಯಿಸುವವರ ಸಂಖ್ಯೆ ಕಡಿಮೆಯಾಗದಿದ್ದರಿಂದ, ಈ ನೂತನ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.

  ಗ್ಯಾಸ್ ಟ್ಯಾಂಕರ್ ಪಲ್ಟಿ.ಗ್ಯಾಸ್ ಸೋರಿಕೆ.ವಾಹನಗಳಿಗೆ ಬದಲಿ ರಸ್ತೆ ಮಾರ್ಗ.ಅಕ್ಕಪಕ್ಕದ ಮನೆಗಳಲ್ಲಿ ಬೆಂಕಿ ಉರಿಸದಂತೆ ಪೋಲೀಸರಿಂದ ಮನವಿ..

ಮಂಗಳೂರು: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ರೆಖ್ಯಾ ಗ್ರಾಮದ ಎಂಜಿರ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಗ್ಯಾಸ್ ಸೋರಿಕೆ ಯಾಗುತ್ತಿದ್ದು ವಾಹನ ಸವಾರರಿಗೆ ಬದಲಿ ರಸ್ತೆ ವ್ಯವಸ್ಥೆ ಮಾಡಲಾಗಿದೆ.ಮುಂಜಾಗ್ರತಾ ವಾಗಿ ಅಕ್ಕಪಕ್ಕದ ಮನೆಗಳಲ್ಲಿ ಬೆಂಕಿ ಉರಿಸದಂತೆ ಪೋಲೀಸರಿಂದ ಮನವಿ.ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆ ಬದಲಿ ರಸ್ತೆ ಬಳಸುವಂತೆ ಪೋಲೀಸರಿಂದ ಮನವಿ.

 

ಆಧಾರ್ ಕಾರ್ಡ್ ಮಾಡಿಸಲು ಸಾರ್ವಜನಿಕರು ಪರದಾಟ. ಸುಮ್ಮನೆ ಕೈ ಕಟ್ಟಿ ಕುಳಿತ ಜಿಲ್ಲಾಡಳಿತ.....

ಚನ್ನರಾಯಪಟ್ಟಣ:  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಆಧಾರ್ ಕಾರ್ಡ್ ಮಾಡಿಸಲು ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಇದೆ ದಿನ ನಿತ್ಯ ಸುತ್ತಮುತ್ತಲಿನ ಗ್ರಾಮಿಣ ಪ್ರದೇಶದ ರೈತರು ಶಾಲ ಮಕ್ಕಳು, ಗೃಹಿಣಿಯರು ಬಂದು ಸರತಿ ಸಾಲಿನಲ್ಲಿ ನಿಂತು ಕಾಯುವ ಕೆಲಸವೇ ನೆಡೆಯುತ್ತಿದೆ .

ಬೆಳಗ್ಗೆ 6 ಗಂಟೆಯಿಂದ ಕಾಯುವವರಿಗೆ ದಿನಕ್ಕೆ 25 ಜನಕ್ಕೆ ಮಾತ್ರ ಟೋಕನ್ ನೀಡುತ್ತಿದ್ದು, ಪ್ರತಿದಿನ250 ಜನ ಸಾಲಿನಲ್ಲಿ ನಿಂತು ನಂತರ ನಿರಾಸೆಯಿಂದ ಮನೆಗೆಹೊಗುವ ಪರಿಸ್ಥಿತಿ ಇದೆ .ಇತ್ತ ತಾಲೂಕು ಅಡಳಿತ ಗಮನ ಹರಿಸದೆ ಸುಮ್ಮನೆ ಕೈ ಕಟ್ಟಿ ಕುಳಿತಿದೆ . ಶಾಸಕರನ್ನು ಬೇಟಿ ಮಾಡಿದ ಜನರಿಗೆ ಶಾಸಕರು ಅದಕ್ಕೂ ನನಗೂ ಸಂಬಂಧವಿಲ್ಲ ಅದು ಸರ್ಕಾರಿ ಕಚೇರಿಯಲ್ಲಿ ಕೇಳಿ ಎಂದು ಉತ್ತರಿಸುತ್ತಿದ್ದಾರೆ ಎಂದು ಕೆಂಡಮಂಡಲವಾಗಿದ್ದಾರೆ.

ಇನ್ನೂ ಜಿಲ್ಲ ಅಡಳಿತ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅಧಾರ್ ಕೇಂದ್ರ ಗಳನ್ನು ತೆರೆಯಬೇಕು ಇಲ್ಲ ದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರ ಅಧಿಕಾರಿಗಳಿ ಎಚ್ಚರಿಕೆ ನೀಡಿದ್ದಾರೆ.

ಇನ್ನಾದರೂ ಜಿಲ್ಲಾಡಳಿತ ಕ್ರಮಕೈಗೊಳ್ಳುತ್ತಾ ಕಾದು ನೊಡಬೇಕಿದೆ ...     ಸುದ್ದಿಜಾಲ ನ್ಯೂಸ್ ಹಾಸನ

Rate this item
(1 Vote)

ದಿನಾಂಕ:22.07.19 ರಂದು  ರಾತ್ರಿ ಸಮಯದಲ್ಲಿ ಯಾರೋ ದುಷ್ಕರ್ಮಿಗಳು ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯ ಮಟ್ಟನವಿಲೆ NH 75 BM Road ಬಳಿ ಸುಮಾರು 25 ರಿಂದ 30 ವಯಸ್ಸಿನ ಅಪರಿಚಿತ ಹೆಂಗಸನ್ನು ವೇಲಿನಿಂದ ಕುತ್ತಿಗೆ ಹಿಸುಕಿ ಸಾಯಿಸಿ ಬಿಸಾಕಿ ಹೋಗಿದ್ದ ಪ್ರಕರಣವನ್ನು ಭೇಧಿಸಿದ್ದು, ಪ್ರಕರಣದ ಆರೋಪಿಯಾದ ಶ್ರೀನಿವಾಸ ಎಂಬಾತನು ಸಂಬಂಧಿಯಾದ  ಮೃತೆ ಕು.ಚಿತ್ರ, 23 ವರ್ಷ ಈಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆಕೆ ಗರ್ಭವತಿಯಾಗಿದ್ದು, ಮದುವೆಯಾಗುವಂತೆ ಒತ್ತಾಯಿಸಿದ್ದರಿಂದ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಬಂದು ಕೊಲೆ ಮಾಡಿ ಬಿಸಾಕಿ ಹೋಗಿರುವುದು ತನಿಖೆಯಿಂದ ಕಂಡುಬಂದಿರುತ್ತದೆ

. ಪ್ರಕರಣದಲ್ಲಿ ಆರೋಪಿ ಪತ್ತೆಗೆ ಮಾನ್ಯ ಪ್ರಭಾರ ಪೊಲೀಸ್  ಅಧೀಕ್ಷಕರಾದ ಶ್ರೀಮತಿ ನಂದಿನಿ B N ಹಾಗೂ ಹೊಳೆನರಸೀಪುರ ಡಿವೈಎಸ್ಪಿ ಶ್ರೀ ಲಕ್ಷ್ಮೇಗೌಡರವರ ಮಾರ್ಗದರ್ಶನದಲ್ಲಿ, ಚನ್ನರಾಯಪಟ್ಟಣ ವೃತ್ತ ನಿರೀಕ್ಷಕರಾದ ಶ್ರೀ ಕಾಂತರಾಜು ಹಾಗೂ ಹಿರೀಸಾವೆ ಪೊಲೀಸ್ ಉಪ ನಿರೀಕ್ಷಕರಾದ ಗಿರೀಶ್ ಹಾಗೂ ಸಿಬ್ಬಂದಿ ವರ್ಗದವರು ಆರೋಪಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಕಾರ್ಯಕ್ಕೆ ಮಾನ್ಯ ಪ್ರಭಾರ ಪೊಲೀಸ್ ಅಧೀಕ್ಷಕರು ಹಾಸನ ಜಿಲ್ಲೆ ರವರು ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿರುತ್ತಾರೆ.

Last modified on 01/08/2019
Rate this item
(0 votes)

ಈ‌ ದಿನ ದಿ. 01/08/2019 ರಂದು ಸಂಜೆ ಕಿಕ್ಕೇರಿ ಪೊಲೀಸ್ ಠಾಣೆ ಸರಹದ್ದಿನ ಮಂದಗೆರೆ ಗ್ರಾಮದ  ಹೇಮಾವತಿ ಹೊಳೆ ದಡದಲ್ಲಿ ಒಂದು‌ ಅಪರಿಚಿತ ಹುಡುಗಿ ಶವ ದೊರೆತಿದ್ದು ಹೆಸರು  ವಿಳಾಸ ದೊರೆತಿರುವುದಿಲ್ಲ. ನಂತರ ಅಪರಿಚಿತ ಹುಡುಗಿ ಹೆಸರು  ಮತ್ತು ವಿಳಾಸ ಪತ್ತೆ ಸಂಬಂಧ ಮಾಹಿತಿ ಸಂಗ್ರಹಿಸಲಾಗಿ ಸದರಿ‌ ಹುಡುಗಿಯ ಹೆಸರು ರಂಜಿತ ಡಾ/ಆಫ್ ನಾಗರಾಜು, 16 ವರ್ಷ, ಹೊಳೆ ನರಸೀಪುರ ಸರ್ಕಾರಿ ಬಾಲಕಿಯರ ಕಾಲೇಜು ಇಲ್ಲಿ ಪ್ರಥಮ ಪಿಯುಸಿ ವ್ಯಾಸಂಗ, ವಾಸಃ ನಾರಾಯಣ್ ರವರ ಬಾಡಿಗೆ ಮನೆ, ವಡ್ಡರಗುಡಿ ಗ್ರಾಮ, ಅಕ್ಕಿ ಹೆಬ್ಬಾಳು ಹೋಃ, ಕೆ.ಆರ್.ಪೇಟೆ ತಾಃ ಎಂದು‌ ತಿಳಿದು‌ ಬಂದಿರುತ್ತದೆ. ಸದರಿ ಹುಡುಗಿಗೆ ತಂದೆ ನಾಗರಾಜು, ತಾಯಿ ಜವರಮ್ಮ, ಮಾನಸ ಮತ್ತು ಕಾವೇರಿ ಎಂಬ ಇಬ್ಬರು ಅಕ್ಕಂದಿರು ಇರುತ್ತಾರೆ ಎಂದು ಮಾಹಿತಿ ತಿಳಿದು ಬಂದಿರುತ್ತದೆ.

ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಸಮೀಪದ ವಡ್ಡರಗುಡಿ ಗ್ರಾಮದ ಯುವತಿ  ಎಂದು ತಿಳಿದು ಬಂದಿದೆ ಆತ್ಮಹತ್ಯೆಗೆ ಯಾವ ಕಾರಣ ತಿಳಿದು ಬಂದಿರಿವುದಿಲ್ಲ

Last modified on 01/08/2019
Page 7 of 42

Visitors Counter

286284
Today
Yesterday
This Week
This Month
Last Month
All days
258
384
2657
5726
3051
286284

Your IP: 3.15.147.225
2025-05-11 13:46

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles