ಇತ್ತೀಚಿಗಿನ ಸುದ್ದಿಗಳು

ಸುದ್ದಿಜಾಲ

ಸುದ್ದಿಜಾಲ

Rate this item
(0 votes)

ಮಂಡ್ಯದಲ್ಲಿ  ಇವಾಗ ಚಪ್ಪಲಿ ರಾಜಕೀಯ..!! ಸಾಮಾಜಿಕ ಜಾಲತಾಣದಲ್ಲಿ ಚಪ್ಪಲಿ ವಿಡಿಯೋ ವೈರಲ್...

ವಿಡಿಯೋದಲ್ಲೇನಿದೆ..?
ಮನೆಯಿಂದ ಹೊರಬರುತ್ತಿದ್ದಂತೆಯೇ ಸುಮಲತಾ ತಮ್ಮ ಗನ್ ಮ್ಯಾನ್‍ಗೆ ಕೆಳಗೆ ಏನೋ ತೋರಿಸುವ ಮೂಲಕ ಸೂಚಿಸುತ್ತಾರೆ. ಆಗ ಗನ್ ಮ್ಯಾನ್ ಕೆಳಗೆ ಬಗ್ಗಿ ಸುಮಲತಾ ಕಾಲಿಗೆ ಚಪ್ಪಲಿ ತೊಡಿಸಿದ್ದಾರೆ. ಇತ್ತ ತನ್ನ ಕಾಲಿಗೆ ಚಪ್ಪಲಿ ತೊಡಿಸಲು ಬಂದ ಕಾರ್ಯಕರ್ತನನ್ನು ತಡೆದಿದ್ದಾರೆ.ಕಳೆದ ಮಾರ್ಚ್ 20ರಂದು ಸುಮಲತಾ ತಮ್ಮ ಬೆಂಬಲಿಗ ಸಚ್ಚಿದಾನಂದರ ಮನೆಗೆ ಹೋಗಿದ್ದಾರೆ. ಮಾತುಕತೆ ನಡೆಸಿ ಮನೆಯಿಂದ ಹೊರ ಬಂದ ಸಂದರ್ಭದಲ್ಲಿ ಸುಮಲತಾ ತನ್ನ ಗನ್ ಮ್ಯಾನ್ ಕೈಯಲ್ಲಿ ಚಪ್ಪಲಿ ತೊಡಿಸಿಕೊಂಡಿದ್ದಾರೆ. ಆದ್ರೆ ಚಪ್ಪಲಿ ತೊಡಿಸುವ ದೃಶ್ಯ ಸೆರೆಯಾಗಿಲ್ಲ. ಆದ್ರೆ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಟ್ರೋಲ್ ಆಗುತ್ತಿದ್ದು, ಸುಮಲತಾ ಅವರು ಚಪ್ಪಲಿಯನ್ನೇ ತೆಗೆಸಿ ಹಾಕಿಸಿಕೊಂಡಿದ್ದಾರೆ. ಇದು ಎಷ್ಟರಮಟ್ಟಿಗೆ ಸ್ವಾಭಿಮಾನ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನೊಂದೆಡೆ ಶನಿವಾರ ನಿಖಿಲ್ ಅವರು ಮದ್ದೂರು ಭಾಗದಲ್ಲಿ ಪ್ರಚಾರ ನಡೆಸಿದ ವೇಳೆ ನಡೆದುಕೊಂಡು ಬರುತ್ತಿದ್ದಾಗ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಹಾಕಲು ಬಂದಿದ್ದಾರೆ. ಆದ್ರೆ ನಿಖಿಲ್ ಅವರನ್ನು ತಡೆದು ತಾನೇ ಚಪ್ಪಲಿಕೊಂಡು ಅವರನ್ನು ಮುಟ್ಟಿ ಕೈ ಮುಗಿದಿದ್ದಾರೆ.

Media

Last modified on 03/04/2019
Rate this item
(0 votes)

ಮಂಡ್ಯ ಜಿಲ್ಲಾ ಬಿಜೆಪಿ ಘಟಕವು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ಜಿಲ್ಲಾಧ್ಯಕ್ಷರಾದ ನಾಗಣ್ಣನವರು ಮನವಿ ಮಾಡಿದರು .

ಮಂಡ್ಯ:   ಜಿಲ್ಲಾ ಜನರ ಸ್ವಾಭಿಮಾನವನ್ನು ಎತ್ತಿ ಹಿಡಿಯಲು ಸುಮಲತಾ ಅವರನ್ನು ಬೆಂಬಲಿಸಿ ವಿಜಯಮಾಲೆಯನ್ನು ತೊಡಿಸಿ ಹೊಸ ಇತಿಹಾಸವನ್ನು ನಿರ್ಮಾಣ ಮಾಡುವಂತೆ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು . ವಂಶಪಾರಂಪರ್ಯ ಆಡಳಿತವನ್ನು ಕೊನೆಗಾಣಿಸಿ ಮಂಡ್ಯ ಜಿಲ್ಲೆಯ ಜನರ ಸ್ವಾಭಿಮಾನವನ್ನು ಎತ್ತಿ ಹಿಡಿಯಲು ನಮ್ಮ ಮನೆ ಮಗಳಾದ ಸಮಲತಾ ಅಂಬರೀಶ್ ಅವರನ್ನು ಗೆಲ್ಲಿಸಿ ಜಿಲ್ಲೆಯಲ್ಲಿ ಹೊಸ ರಾಜಕೀಯ ಮನ್ವಂತರಕ್ಕೆ ನಾಂಧಿ ಹಾಡಬೇಕು ಎಂದು ನಾಗಣ್ಣಗೌಡ ಕರೆ ನೀಡಿದರು.

ಅಪ್ಪ ಮಕ್ಕಳು ಮೊಮ್ಮಕ್ಕಳು ಎಲ್ಲ ಸೇರಿ ದೇಶವನ್ನು ಆಡಬೇಕು ಎಂದು ಪಣ ತೊಟ್ಟಿದ್ದಾರೆ .ಬೇರೆಯವರಿಗೆ ನಮ್ಮ ಮಂಡ್ಯದಲ್ಲಿ ಟಿಕೆಟ್ ಕೊಟ್ಟಿದ್ದರೆ ನಮ್ಮ ಅಭ್ಯಂತರ ಆಗುತ್ತಿರಲಿಲ್ಲ .ಅಪ್ಪ ಪ್ರಧಾನಿ ಮಗ ಮುಖ್ಯಮಂತ್ರಿ ಮಕ್ಕಳು ಸಂಸದರು ಸೊಸೆಯರು ಸಂಸದರು ಆಗಬೇಕು ಎಂದು ಅವರ ಅನಿಸಿಕೆ ,ಹೀಗಾಗಿ ಅವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಕಿವಿಮಾತು ಹೇಳಿದರು .

ತಾಲೂಕು ಬಿಜೆಪಿ ಅಧ್ಯಕ್ಷ ಬೂಕಹಳ್ಳಿ ಮಂಜುನಾಥ್, ಮುಖಂಡರಾದ ವರದರಾಜೇಗೌಡ, ಬೂಕಹಳ್ಳಿ ಹರೀಶ್, ಭರತ್ ಕುಮಾರ್, ಮಧುಸೂದನ್ ಮತ್ತಿತರರು ಉಪಸ್ಥಿತರಿದ್ದರು..

Media

 ರಾತ್ರೊ ರಾತ್ರಿ ಲಾಯರ್ ಕೂಲೆ .! ಮಾಡಿದ್ದು ಯಾರು.??? ಆಸ್ತಿಗಾಗಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಶಂಕೆ...‌

ಕೆ.ಆರ್.ಪೇಟೆ :ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ನಾಗರಘಟ್ಟ ಗ್ರಾಮದ  ಸತೀಶ್ (೩೮) ಕೊಲೆಯಾಗಿರೊ ವಕೀಲ.ಚನ್ನರಾಯಪಟ್ಟಣ, ಮೈಸೂರು, ಬೆಂಗಳೂರು ಮತ್ತಿತರ ಕಡೆಗಳಲ್ಲಿ ವಕೀಲ ವೃತ್ತಿ ಮಾಡುತ್ತಿದ್ದ ವಕೀಲ ಸತೀಶ್ ಸೋಮವಾರ ರಾತ್ರಿ ನಾಗರಘಟ್ಟ ಗ್ರಾಮಕ್ಕಾಗಿ ಬಂದಿದ್ದಾಗ ನಡೆದಿರುವಂಥ ಘಟನೆ.  

ಘಟನೆ ವಿವರಣೆ: ನಾಗರಘಟ್ಟ ಗ್ರಾಮದ ಲೇ ರಾಜೇಗೌಡ್ ರ ಮಕ್ಕಳಾದ ಸತೀಶ್ ಮತ್ತು ಉಮೇಶ್ ಎಂಬ ಇಬ್ಬರೂ ಮಕ್ಕಳು ಮೂಲತಹ ಸತೀಶ್ ವಕೀಲ ಕೆಲಸಮಾಡತ್ತಿದ್ದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ವಾಸವಾಗಿದ್ದು. ಚನ್ನರಾಯಪಟ್ಟಣ, ಮೈಸೂರು, ಬೆಂಗಳೂರು ಮತ್ತಿತರ ಕಡೆಗಳಲ್ಲಿ ವಕೀಲ ವೃತ್ತಿ ಮಾಡುತ್ತಿದ್ದರು.ಗ್ರಾಮದಲ್ಲಿ ಹಬ್ಬವಿರುವ ಕಾರಣ ಸೋಮವಾರ ರಾತ್ರಿ ನಾಗರಘಟ್ಟ ಗ್ರಾಮಕ್ಕೆ ಬಂದಿದ್ದಾಗ ನಡೆದಿರುವಂಥ ಘಟನೆ .

ತಮ್ಮ ನ ಹೇಳಿಕೆ : ಮನೆಯಲ್ಲಿ ಅಣ್ಣ ಮತ್ತು ತಮ್ಮ ಇಬ್ಬರೆ ಇದ್ದು ನಾನು ಮೇಲಿನ ರೂಮಿನಲ್ಲಿ ಇದ್ದೆ. ಸುಮಾರು ರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ  ಯಾರೊ ನಾಲ್ಕು ಜನ ನಮ್ಮ ಅಣ್ಣ ಬಳಿ ಬಂದು ಹಣಕಾಸಿನ ವಿಚಾರವಾಗಿ ಗಲಾಟೆ ಮಾಡುತ್ತಿದ್ದರು ನಾನು ನಮ್ಮ ಅಣ್ಣ ಮಾತನಾಡತ್ತಿರಲ್ಲಿಲಾ ಅದ್ದರಿಂದ ನಾನು  ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ನಾನು ಹೊಗಲಿಲ್ಲಾ  ಬೆಳ್ಳಗೆ ನೊಡಿದ್ದಾಗ ನನ್ನ ಅಣ್ಣ ರಕ್ತ ದ ಮಡುವಿನಲ್ಲಿ ಬಿದ್ದಿದ್ದರು ನಂತರ ಗ್ರಾಮಸ್ಥರಿಗೆ ತಿಳಿಸಿದೆ ಎಂದು ಹೇಳಿಕೆ ನೀಡಿದ್ದು.

ಸಹೋದರನ ಹೇಳಿಕೆಯ ಮೇಲೆ ಸಂಶಯ ವ್ಯಕ್ತಪಡಿಸಿರುವ ಪೊಲೀಸರು ಮೃತ ವಕೀಲನ ಸಹೋದರನನ್ನು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.ಹತ್ಯೆಸ್ಥಳಕ್ಕೆ ಹಾಸನ ಜಿಲ್ಲಾ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಆಗಮಿಸಿ ಕೊಲೆ ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯಕೈಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡು .ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದೆ. ಪೋಲಿಸ್ ರ ತನಿಖೆ ಯಿಂದ ಅಪರಾಧಿಯಾರು ಎಂದು ತಿಳಿಯಬೇಕಿದೆ.ಕೃಷ್ಣರಾಜಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

 

Rate this item
(0 votes)

ಶ್ರೀ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವದ ಸಂಭ್ರಮ. ಸಾವಿರಾರು ಭಕ್ತಾಧಿಗಳು ರಥೋತ್ಸವದಲ್ಲಿ ಭಾಗಿ

ಕೃಷ್ಣರಾಜಪೇಟೆ  :ತಾಲ್ಲೂಕಿನ ಮಡುವಿನಕೋಡಿ ಗ್ರಾಮದಲ್ಲಿ ಗ್ರಾಮರಕ್ಷಕ ಶ್ರೀ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಸಂಭ್ರಮ ಸಡಗರದಿಂದ ಜರುಗಿತು.ಉಘೇ..ಆಂಜನೇಯ ಉಘೇ ಉಘೇ ಎಂದು ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು. ಶಾಸಕ ಡಾ.ನಾರಾಯಣಗೌಡ ರಥದಲ್ಲಿ ವಿರಾಜಮಾನವಾಗಿದ್ದ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಗೆ ಸಾಂಕೇತಿಕ ಪೂಜೆ ಸಲ್ಲಿಸಿ ಚಾಲನೆ ನೀಡಿದರು.   ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿ. ರಥದಲ್ಲಿ ವಿರಾಜಮಾನವಾಗಿದ್ದ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಗೆ ಸಾಂಕೇತಿಕ ಪೂಜೆ ಸಲ್ಲಿಸಿದರು.ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಅವರ ನೇತೃತ್ವದಲ್ಲಿ ಬಿಗಿಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Last modified on 21/03/2019

ಪ್ರಾಂಶುಪಾಲರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ ವಿದ್ಯಾರ್ಥಿಗಳನ್ನು ಅಮಾನುಷವಾಗಿ cರೊ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಹಾಸನ: ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿದ್ದಕ್ಕೆ ಕಾಲೇಜು ಪ್ರಾಧ್ಯಾಪಕ ವರ್ಗದವರಿಂದ ವಿದ್ಯಾರ್ಥಿಗಳ ದ್ವಿಚಕ್ರವಾಹನದ ಗಾಳಿ ಬಿಟ್ಟು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಘಟನೆ ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಆವರಣದಲ್ಲಿ ನಡೆದಿದೆ.ಇಂದು ಸರ್ಕಾರಿ ಕಲಾ ಕಾಲೇಜಿಗೆ ರಜೆ ಘೋಷಣೆ ಆಗಿದ್ದರೂ ಕೂಡಾ, ವಿದ್ಯಾರ್ಥಿಗಳು ಹೋಳಿ ಹಬ್ಬ ಆಚರಣೆ ಮಾಡಲೆಂದು ಕೆಲ ವಿದ್ಯಾರ್ಥಿಗಳು ಕಾಲೇಜು ಬಳಿ ಬಂದಿದ್ದರು. ಹೋಲಿ ಆಚರಣೆಗೆ ಬಂದ ವಿದ್ಯಾರ್ಥಿಗಳು ಎಂದಿನಂತೆ ತಮ್ಮ ಕಾಲೇಜು ಆವರಣದ ದ್ವಿಚಕ್ರ ವಾಹನ ನಿಲುಗಡೆ ಸ್ಥಳದಲ್ಲಿ ವಾಹನವನ್ನು ನಿಲ್ಲಿಸಿದ್ದಾರೆ.

ವಾಹನ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡ ಕೆಲ ಪ್ರಾಧ್ಯಾಪಕರು ಕಾಲೇಜು ಇಲ್ಲದಿದ್ದರೂ ಕಾಲೇಜು ಆವರಣದಲ್ಲಿ ಬೈಕ್ ನಿಲ್ಲಿಸಿದ್ದಾರೆ ಎಂಬ ಒಂದೇ ಕಾರಣಕ್ಕೆ ವಿದ್ಯಾರ್ಥಿಗಳ ಬೈಕ್ ನ ಟೈಯರ್ ನ ಗಾಳಿ ಬಿಟ್ಟಿದ್ದಾರೆ. ಹೋಳಿ ಮುಗಿಸಿಕೊಂಡು ವಾಹನವನ್ನು ತೆಗೆದುಕೊಳ್ಳಲು ಬಂದ ವಿದ್ಯಾರ್ಥಿಗಳಿಗೆ ದ್ವಿಚಕ್ರವಾಹನದ ಗಾಡಿ ಬಿಟ್ಟಿರುವ ಕಂಡು ಸಿಟ್ಟಾಗಿದ್ದಾರೆ. ಯಾರೋ ಕಿಡಿಗೇಡಿಗಳು ಇಂತಹ ಕೃತ್ಯವನ್ನು ಮಾಡಿದ್ದಾರೆ ಅಂತ ಸಿಟ್ಟಿನಲ್ಲಿ ಸ್ಥಳದಲ್ಲೇ ಕೆಲ ಅವ್ಯಾಚ ಶಬ್ದಗಳಿಂದ ಬೈಯ್ದಿದ್ದಾರೆ ಎನ್ನಲಾಗಿದೆ.

ಸ್ಥಳದಲ್ಲಿಯೇ ಇದ್ದ ಬರುವ ಪ್ರಾಧ್ಯಾಪಕ ತನ್ನ ಮಾತನ್ನು ಕೇಳಿಸಿಕೊಂಡ ಬಳಿಕ ಕುಪಿತಗೊಂಡು ಆತನಿಗೆ ಹಲ್ಲೆ ಮಾಡಿದ್ದಾನೆ. ಇದನ್ನ ಪ್ರಶ್ನೆ ಮಾಡಿದ ವಿದ್ಯಾರ್ಥಿ ಮೇಲೆ ಮತ್ತೆ ಅದೇ ಪ್ರಾಧ್ಯಾಪಕ ಮರು ಹಲ್ಲೆ ಮಾಡಿದ್ದಾನೆ. ಆದರೆ ಇದನ್ನು ಅಲ್ಲೇ ಸ್ಥಳದಲ್ಲಿದ್ದ ಮತ್ತು ಇಬ್ಬರು ವಿದ್ಯಾರ್ಥಿಗಳು ಪ್ರಶ್ನೆ ಮಾಡಿ ಸರ್ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಬೇಡಿ ಎಂದು ಹೇಳಿದ್ದಾರೆ ನಾವು ನಿಲ್ಲಿಸುತ್ತಿರಲಿಲ್ಲ ಆದರೆ ಈಗ ಗಾಳಿ ಇಲ್ಲದ ವಾಹನ ತಳ್ಳುವುದು ತುಂಬಾ ಕಷ್ಟ ಅಂತ ಪ್ರಶ್ನೆ ಮಾಡಿದ್ದಾರೆ.ಇದೆ ವೇಳೆ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲ ರಾಜಪ್ಪ ಮತ್ತು ದೈಹಿಕ ಶಿಕ್ಷಕ ಮಹೇಂದ್ರಪ್ಪ, ಸತ್ಯಮೂರ್ತಿ ಹಾಗೂ ಗಿರೀಶ್ ನಮ್ಮನ್ನೇ ಪ್ರಶ್ನೆ ಮಾಡುತ್ತೀಯ ಎಂದು ಆ ನಾಲ್ಕು ಮಂದಿ ಸೇರಿ ಚಂದ್ರಶೇಖರ್ ಎಂಬ ವಿದ್ಯಾರ್ಥಿಯ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾರೆ ಜೊತೆಗೆ ಕಾಲಿನಿಂದ ಒದೆಯೂವ ಮೂಲಕ ಗೂಂಡಾ ವರ್ತನೆ ತೋರಿದ್ದಾರೆ.

ಘಟನೆಯ ವಿಡಿಯೋವನ್ನ ಸ್ಥಳದಲ್ಲಿದ್ದ ಕೆಲ ವಿದ್ಯಾರ್ಥಿಗಳು ಮೊಬೈಲ್ ನಲ್ಲಿ ಚಿತ್ರಿಕರಿಸಿ ಕ್ಷಣ ಮಾತ್ರದಲ್ಲಿ ನೂರಾರು ವಿದ್ಯಾರ್ಥಿಗಳ ಮೊಬೈಲ್ ಗಳಿಗೆ ಹಾಗೂ ಜಾಲತಾಣಗಳ ಮೂಲಕ ಹರಿ ಬಿಟ್ಟಿದ್ದಾರೆ. ಜೊತೆಗೆ ಕಾಲೇಜು ಮತ್ತು ಪ್ರಾಧ್ಯಾಪಕ ವರ್ಗದವರ ವಿರುದ್ಧ ಕೂಡ ವಿದ್ಯಾರ್ಥಿಗಳು ದೂರು ದಾಖಲು ಮಾಡಲು ಸಾಧ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ ಆದರೆ ಅದನ್ನು ತಿದ್ದಿ ಹೇಳಬೇಕಾದರೆ ಗುರುಗಳೇ ರೌಡಿಗಳು ರೀತಿಯಲ್ಲಿ ವರ್ತನೆ ಮಾಡಿದ್ದು ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು. ಆದರೆ ಇಲ್ಲಿ ಪ್ರಾಧ್ಯಾಪಕರೊಂದಿಗೆ ಪ್ರಾಂಶುಪಾಲರು ಕೂಡ ಸೇರಿ ವಿದ್ಯಾರ್ಥಿಗೆ ಹಲ್ಲೆ ಮಾಡಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತೆ.

Rate this item
(1 Vote)

ಇಂದು ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿಯಾಗಿ ನಾಮಿನೇಷನ್ ಮಾಡಬೇಕಿತ್ತು. ಆದರೆ ದಿಢೀರ್ ಎಂದು ನಾಮಪತ್ರ ಸಲ್ಲಿಕೆಯನ್ನು ರದ್ದು ಮಾಡಿದ್ದಾರೆ.

ಮಂಡ್ಯ: ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಚುನಾವಣೆಗೆ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆಗೆ ನಿರ್ಧಾರವಾಗಿತ್ತು. ಇಂದಿನ ನಾಮಪತ್ರ ಸಲ್ಲಿಕೆ ರದ್ದು ಮಾಡಿ, ಒಟ್ಟಿಗೆ 25ರಂದು ನಾಮಪತ್ರ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್ ಮಾಹಿತಿ ನೀಡಿದ್ದಾರೆ.ಜ್ಯೋತಿಷಿಗಳ ಸಲಹೆಯಂತೆ ಸಮಯ ನಿಗದಿಪಡಿಸಲಾಗಿದ್ದು, ಗುರುವಾರ ನಾಮಪತ್ರ ಸಲ್ಲಿಸಿದರೆ ಗುರುಬಲ ಕೂಡಿಬರಲಿದೆ ಅನ್ನೋ ನಂಬಿಕೆಯಿಂದಾಗಿ ಇಂದು ನಾಮಿನೇಷನ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ 25 ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ ನಾಮಪತ್ರ ಸಲ್ಲಿಕೆಯನ್ನು ರದ್ದು ಮಾಡಿದ್ದಾರೆ.ಇತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾರ್ಚ್ 25ರಂದು ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ 80 ಸಾವಿರಕ್ಕೂ ಹೆಚ್ಚು ಜನರ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಿಎಂ, ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಜಿಲ್ಲೆಯ ಶಾಸಕರು, ಸಚಿವರು ಭಾಗಿಯಾಗಲಿದ್ದಾರೆ. ಅಷ್ಟೇ ಅಲ್ಲದೇ ಬುಧವಾರದ ಸುಮಲತಾ ನಾಮಪತ್ರ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆಯಲು ಜೆಡಿಎಸ್ ಚಿಂತನೆ ನಡೆಸಿದ್ದು, ಕಳೆದ ದಿನಕ್ಕಿಂತಲು ಹೆಚ್ಚಿನ ಜನ ಸೇರಿಸಲು ಪ್ಲಾನ್ ಮಾಡುತ್ತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಂಟು ವಿಧಾನಸಭಾ ಕ್ಷೇತ್ರದಿಂದಲೂ ಕನಿಷ್ಟ ಹತ್ತು ಸಾವಿರ ಜನ ಕರೆತರಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಾಸನದ ದಶಕದ ರಾಜಕೀಯ ದ್ವೇಷ ಕೊನೆಯಾಗುತ್ತಾ.!  ರೇವಣ್ಣ ವಿರುದ್ಧ ಕಾಂಗ್ರೆಸ್ಸಿಗರ ‘ಆಣೆ ಅಸ್ತ್ರ.

ಹಾಸನ : ಹಾಸನದ ರಾಜಕಾರಣದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ರಾಜಿ ಸಂಧಾನದ ಮಾತುಕತೆಗೆ ಕುಳಿತುಕೊಳ್ಳಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಸಂಧಾನ ನಡೆಯುತ್ತಿದ್ದು, ಹಳೆಯ ದ್ವೇಷ ಮರೆತು ಜೆಡಿಎಸ್ ಬೆಂಬಲಿಸುವಂತೆ ಮನವೊಲಿಸಲು ಮುಂದಾಗಿದ್ದಾರೆ.

ಸಚಿವ ಹೆಚ್.ಡಿ.ರೇವಣ್ಣರ ಸಮ್ಮುಖದಲ್ಲಿ ಜೆಡಿಎಸ್ ನಾಯಕರಿಂದ ಕಾಂಗ್ರೆಸ್ ಮುಖಂಡರುಗಳಿಗೆ, ಕಾರ್ಯಕರ್ತರಿಗೆ ಏನೆಲ್ಲಾ ಸಮಸ್ಯೆ ಆಗುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ. ಈ ವೇಳೆ ವಿಪರೀತ ದೇವರನ್ನು ನಂಬುವ ರೇವಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಂದೆ ಯಾವುದೇ ತೊಂದರೆ ಕೊಡಲ್ಲ ಅಂತ ಸಚಿವರು ಆಣೆ ಪ್ರಮಾಣ ಮಾಡಲಿ ಎಂದು ಒತ್ತಾಯಿಸಲು ಕೈ ಪಡೆ ಸಜ್ಜುಗೊಂಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇತ್ತ ದೋಸ್ತಿಗಳು ಕೈ ಕೊಟ್ಟರೆ ಮಗನ ಗೆಲುವು ಕಷ್ಟ ಎಂದು ಭಾವಿಸಿದ ರೇವಣ್ಣ ಸಿದ್ದರಾಮಯ್ಯ ನಿವಾಸದಲ್ಲಿ ಇಂದು ರಾಜೀ ಪಂಚಾಯ್ತಿಗೆ ಹಾಜರಾಗಲು ಒಪ್ಪಿದ್ದಾರೆ. ಕೇವಲ ಬಾಯಿ ಮಾತಿಗೆ ಹಾಸನದ ದಶಕದ ರಾಜಕೀಯ ದ್ವೇಷ ಕೊನೆಯಾಗುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Rate this item
(0 votes)

 ಚಲನಚಿತ್ರ ಮಂಡಳಿಯವರು ಗೌರವದಿಂದ ಮನೆಯಲಿರಬೇಕು, ಅದನ್ನ ಬಿಟ್ಟು ದೇವೇಗೌಡರು, ಕುಮಾರಣ್ಣನ ಬಗ್ಗೆ ಟೀಕೆ ಮಾಡಿದರೇ ನಿಮ್ಮ ಆಸ್ತಿ, ಅಂತಸ್ತು ಸೇರಿದಂತೆ ಎಲ್ಲವನ್ನೂ ತನಿಖೆ ಮಾಡಿಸುತ್ತೇವೆ ಎಂದು ಶಾಸಕ ನಾರಾಯಣಗೌಡ..ನಟ ದರ್ಶನ್, ಯಶ್ ಸೇರಿದಂತೆ ಸುಮಲತಾ ಅಂಬರೀಷ್ ಪರವಾಗಿ ನಿಲ್ಲುವ ಎಲ್ಲಾ ನಟ, ನಿಮರ್ಾಪಕರಿಗೆ ಎಚ್ಚರಿಕೆ ನೀಡಿದ್ದಾರೆ.

ಕೆ.ಆರ್.ಪೇಟೆ: ಪಟ್ಟಣದ ಶಾಸಕರ ನಿವಾಸದ ಬಳಿ ಮೈದಾನದಲ್ಲಿ ತಾಲೂಕು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಸುಮಲತಾ ಅಂಬರೀಷ್ ಪರವಾಗಿ ನಿಲ್ಲುವ ಎಲ್ಲಾ ಚಲನಚಿತ್ರಕ್ಕೆ ಸಂಬಂಧಿಸಿ ಎಲ್ಲಾ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದರು.ನಮ್ಮ ದೇವೇಗೌಡರು, ಕುಮಾರಣ್ಣನ ಬಗ್ಗೆ ಟೀಕಿಸುವ ಚಲನಚಿತ್ರ ನಟರಿಗೆ ತಕ್ಕ ಪಾಠ ಕಲಿಸುತ್ತೇವೆ, ಅದನ್ನು ಶೀಘ್ರದಲ್ಲಿ ತೋರಿಸುತ್ತೇವೆ. ಅವರಿಗೆ ರಾಜಕಾರಣ ಬಗ್ಗೆ ಮಾತನಾಡೋಕೆ ಏನು ಹಕ್ಕಿದೆ. ಅವರ ಕೊಡುಗೆ ಏನಿದೆ. ಅವರಿಗೂ ರಾಜಕರಣಕ್ಕೂ ಸಂಬಂಧವಿಲ್ಲ. ಗೌರವದಲ್ಲಿ ಮನೆಲ್ಲಿದ್ದು, ಸಿನಿಮಾ ತೆಗೆಯಿರಿ. ನಮ್ಮ ರಾಜಕಾರಣಕ್ಕೆ ಮಧ್ಯಪ್ರವೇಶಿಸಿಬೇಡಿ. ಅಂಬರೀಷ್ಣ್ಣನ ಬಗ್ಗೆ ಗೌರವವಿದೆ. ಅವರನ್ನು ನಮ್ಮ ಜಿಲ್ಲೆಯವರು ಹೇಗೆ ಬೆಳಸಬೇಕಿತ್ತು, ಹಾಗೆ ನಾವು ಬೆಳಿಸಿದ್ದೇವಿ. ನಿಮ್ಮಿಂದ ನಾವು ಕಲಿಯುವುದು ಏನಿಲ್ಲ ಎಂದು ಚಲನಚಿತ್ರ ಮಂಡಳಿಯವರಿಗೆ ಎಚ್ಚರಿಕೆ ನೀಡಿದರು.

ಮತ್ತೊಮ್ಮೆ ದೇಶದ ಪ್ರಧಾನಿಯಾಗೋ ಅವಕಾಶ ನಮ್ಮ ಮಣ್ಣಿನ ಮಗ ದೇವೇಗೌಡರಿಗೆ ಬಂದಿದೆ. ಹಾಗಾಗಿ ಈ ಬಾರಿ ಜಿಲ್ಲೆಯ ಲೋಕಸಭೆ ಅಭ್ಯತರ್ಿ ಅವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು. ಅದು ನಮ್ಮ ತಾಲೂಕಿನಲ್ಲಿಯೇ ಹೆಚ್ಚು ಅಂತರ ನೀಡಬೇಕು. ಜಿಲ್ಲೆಯ ಎಲ್ಲಾ ನಾಯಕರು ಸೇರಿ ನಿಖಿಲ್ ಕುಮಾರಸ್ವಾಮಿ ಅವರನ್ನು ಒತ್ತಾಯಿಸಿ ಅಭ್ಯಥರ್ಿ ಮಾಡಿದ್ದೇವೆ. ಇದು ಕುಮಾರಸ್ವಾಮಿಗೆ ಇಷ್ಟವಿರಲಿಲ್ಲ. ನಮ್ಮೆಲ್ಲರ ಒತ್ತಡದಿಂದ ಒಪ್ಪಿದ್ದಾರೆ ಎಂದು ತಿಳಿಸಿದರು.

ದೇವೇಗೌಡರ ಕುಟುಂಬದ ಬಳಿ ನಮ್ಮ ಬಗ್ಗೆ ಇಲ್ಲಸ್ಲಲದ ಆರೋಪವನ್ನು ನಮ್ಮ ಕ್ಷೇತ್ರದ ಮುಖಂಡರು ಮಾಡುತ್ತಾರೆ. ದೇವೇಗೌಡರು, ಅವರ ಕುಟುಂಬದ ಸದಸ್ಯರು ನನಗೆ ಹೊಡೆದರು ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ದೇವೇಗೌಡರ ಕುಟುಂಬದ ಸದಸ್ಯ, ದೇವೇಗೌಡರ ಮನೆ ಚಾಡಿ ಹೇಳುವವರ ಮನೆ, ದೇವೇಗೌಡರ ಫೋಟೋ ಕೂಡ ಇಲ್ಲ. ತಾಲುಕಿನಲ್ಲಿ ದೇವೇಗೌಡರನ್ನು ಪ್ರತಿದಿನ ಪೂಜಿಸುವವನು ನಾನು ಎಂದು ಶಾಸಕ ನಾರಾಯಣಗೌಡ ಹೇಳಿದರು.

ಬಿಡುತ್ತೇನೆ ಎಂದು ಸುಳ್ಳು ಸುದ್ದಿಯನ್ನು ಕ್ಷೇತ್ರದಲ್ಲಿ ಹಬ್ಬಿಸುತ್ತಿದ್ದಾರೆ. ನನ್ನ ಶರೀರದಲ್ಲಿ ರಕ್ತ ಇರುವರೆಗೂ ಪಕ್ಷವನ್ನು ಬಿಡುವ ಪ್ರಶ್ನೆಯಿಲ್ಲ. ಅವುಗಳಿಗೆ ಜನ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.ಕಾಂಗ್ರೆಸ್ ರಾಜ್ಯ ನಾಯಕರು ಮೈತ್ರಿ ಅಭ್ಯಥರ್ಿಯನ್ನು ಗೆಲ್ಲಿಸುವ ಸಲುವಾಗಿ ಜಿಲ್ಲೆಗೆ ಪ್ರಚಾರಕ್ಕೆ ಬರಲಿದ್ದಾರೆ. ಆದರೆ, ಸ್ಥಳೀಯ ನಾಯಕರು ಸ್ವತಂತ್ರ ಅಭ್ಯಥರ್ಿ ಸುಮಲತಾ ಪರ ನಿಲ್ಲುತ್ತಿದ್ದಾರೆ. ಅವರು ಇನ್ನೆರಡು ದಿನ ಹಾರಾಡತ್ತಾರೆ ಬಳಿಕ ಮೂಲೆ ಸೇರುತ್ತಾರೆ ಎಂದು ಕಾಂಗ್ರೆಸ್ ನಾಯಕರನ್ನು ಲೇವಡಿ ಮಾಡಿದರು.

ಸಬೆಯಲ್ಲಿ ತಾಲೂಕು ಅಧ್ಯಕ್ಷ ವೆಂಕಟಸುಬ್ಬೇಗೌಡ, ಜಿಪಂ ಸದಸ್ಯ ಎಚ್.ಟಿ.ಮಂಜು, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭಾಕರ್, ಮುಖಂಡ ಶ್ರೀನಿವಾಸ್, ತಾಪಂ ಮಾಜಿ ಉಪಾಧ್ಯಕ್ಷ ಜಾನಕೀರಾಮ್, ಸ್ಥಾಯಿಸಮಿತಿ ಅಧ್ಯಕ್ಷ ರಾಜು, ತಾಪಂ ಸದಸ್ಯ ವಿಜಯಕುಮಾರ್, ಮೋಹನ್, ಎಪಿಎಂಸಿ ಅಧ್ಯಕ್ಷ ನಾಗರಾಜು, ಪುರಸಭೆ ಸದಸ್ಯರಾದ ಸಂತೋಷ್, ಹೇ ಮಂತ್ಕುಂಆರ್, ದಿನೇಶ್, ನಾಗರಾಜು ಸೇರಿದಂತೆ ಹಲವರಿದ್ದರು.


 
Page 10 of 42

Visitors Counter

220248
Today
Yesterday
This Week
This Month
Last Month
All days
240
441
1865
3353
4244
220248

Your IP: 3.128.205.109
2024-04-18 17:49

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles